Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಾಲೆಗಳ ಅಭಿವೃದ್ಧಿಗೆ ಗಮನ ಅಗತ್ಯ: ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಶಾಲೆಗಳ ಅಭಿವೃದ್ಧಿಗೆ ಗಮನ ಅಗತ್ಯ: ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: May 3, 2025 3:59 am
Dinamaana Kannada News
Share
honnalli
ಜಿ. ಬಿ. ವಿನಯ್ ಕುಮಾರ್
SHARE

ಹೊನ್ನಾಳಿ (honnalli)  : ದೇವಸ್ಥಾನ ನಿರ್ಮಾಣ ಮಾಡಲು ನಾವು ಎಷ್ಟು ಕಾಳಜಿ ತೋರಿಸುತ್ತೇವೆಯೋ ಅಷ್ಟೇ ಕಾಳಜಿ, ಗಮನವನ್ನು ಶಾಲೆಗಳ ಅಭಿವೃದ್ಧಿಗೆ ನೀಡಬೇಕಾದ ಅವಶ್ಯಕತೆ ಇದೆ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಪ್ರತಿಪಾದಿಸಿದರು.

 

ಜಿಲ್ಲೆಯ ಹೊನ್ನಾಳಿ ತಾಲೂಕಿನ ಯರಲಬನ್ನಿಕೋಡು ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ಕರಿಯಮ್ಮದೇವಿ ಮತ್ತು ಶ್ರೀ ಮಾತಂಗಮ್ಮ ದೇವಾಲಯದ ನೂತನ ಶಿಲಾಮೂರ್ತಿ ಪ್ರತಿಷ್ಠಾಪನೆ, ಕರಿಗಲ್ಲು ಸ್ಥಾಪನೆ ಮತ್ತು ನೂತನ ಗೋಪುರ ಕಳಸಾರೋಹಣ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಅವರು ಮಾತನಾಡಿದರು.

 

ಗ್ರಾಮೀಣ ಪ್ರದೇಶದ ಮಕ್ಕಳು ಐಎಎಸ್, ಐಪಿಎಸ್ ಆಗಬೇಕಾದರೆ ನಮ್ಮೂರಿನ ಶಾಲೆಗಳು ಅಭಿವೃದ್ಧಿ ಆಗಬೇಕು ನನ್ನ ಬಲವಾದ ನಂಬಿಕೆ. ದೇವಸ್ಥಾನ ಕಟ್ಟಲು ಆರಂಭದಿಂದ ಹಿಡಿದು ಕೊನೆಯವರೆಗೂ ಎಚ್ಚರ ವಹಿಸುತ್ತೇವೆ. ಅನುದಾನ ಪಡೆಯುತ್ತೇವೆ. ಕಾಳಜಿ ವಹಿಸಿ ಶ್ರದ್ಧಾ ಭಕ್ತಿಯಿಂದ ಕೆಲಸ ಮಾಡುತ್ತೇವೆ. ಅದೇ ರೀತಿಯಲ್ಲಿ ಗ್ರಾಮದ ಶಾಲೆಗಳ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತರೆ ಸುಸಜ್ಜಿತ, ಸುಂದರ ಶಾಲೆ ನಿರ್ಮಾಣ ಅಸಾಧ್ಯವೇನಲ್ಲ ಎಂದು ಅಭಿಪ್ರಾಯಪಟ್ಟರು.

 

ಯಾವುದೇ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಎಂದರೆ ಶಕ್ತಿಯನುಸಾರ ದುಡ್ಡು ಕೊಡುತ್ತೇವೆ. ಅದೇ ರೀತಿಯಲ್ಲಿ ಶಾಲೆಗಳ ಅಭಿವೃದ್ಧಿಗೆ ಗ್ರಾಮದ ಹಿರಿಯರು, ಮುಖಂಡರು, ಜನರು ಸಹಕಾರ ನೀಡಬೇಕು. ದೇವಸ್ಥಾನ ನಿರ್ಮಾಣ ಆಗುವುದು ಖುಷಿಯ ವಿಚಾರ. ಗ್ರಾಮದ ಜನರಲ್ಲಿ ಒಗ್ಗಟ್ಟು, ಕಳಕಳಿ, ಸಾಮರಸ್ಯಕ್ಕಾಗಿ ದೇವಸ್ಥಾನದ ಅಗತ್ಯತೆ ಇದೆ. ಜೊತೆಗೆ ಸುಸಜ್ಜಿತ, ಸುಂದರ ಶಾಲೆ ಮತ್ತು ಗ್ರಂಥಾಲಯ ಇದ್ದರೆ ಗ್ರಾಮ ಪರಿಪೂರ್ಣವಾಗುತ್ತದೆ ಎಂಬುದು ನನ್ನ ಭಾವನೆ ಎಂದು ಹೇಳಿದರು.

 

ಜಾತಿ ಬೇಧ ಮರೆತು ಎಲ್ಲರೂ ಜೊತೆಗೆ ಬಂದಿದ್ದೇವೆ. ಊರಿನ ಸಂಸ್ಕೃತಿ, ಒಗ್ಗಟ್ಟು, ನಮ್ಮಲ್ಲಿರುವ ಸಾಮರಸ್ಯ ಕಾಪಾಡಲು ದೇವಸ್ಥಾನ ಬೇಕೇ ಬೇಕು. ಅದೇ ರೀತಿ ಶಾಲೆಗಳೂ ಬೇಕು. ಬನ್ನಿಕೋಡು ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣ ಆಗಬೇಕು. ಪುಸ್ತಕ, ಪೇಪರ್ ಓದುವ ಸಂಸ್ಕೃತಿ ಯುವಕರಲ್ಲಿ ಬರುವಂತಾಗಬೇಕು. ಈ ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ನನ್ನ ಕಡೆಯಿಂದ 20 ಸಾವಿರ ಪುಸ್ತಕಗಳನ್ನು ನೀಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನೂ ನೀಡುತ್ತೇನೆ ಎಂದು ಆಶ್ವಾಸನೆ ನೀಡಿದರು.

 

ಸಮಾಜ, ವೈಯಕ್ತಿಕ, ಕುಟುಂಬದ ಅಭಿವೃದ್ಧಿ ಆಗುವುದು ಶಿಕ್ಷಣದ ಜ್ಞಾನದಿಂದ ಹೊರತು ಇನ್ಯಾವುದರಿಂದ ಅಲ್ಲ. ನಾನು ಶಿಕ್ಷಣ ಕ್ಷೇತ್ರದಿಂದ ಬಂದಿದ್ದೇನೆ. ಸಾವಿರಾರು ಐಎಎಸ್, ಐಪಿಎಸ್ ಅಧಿಕಾರಿಗಳು ಪಾಸ್ ಆಗಿ ದೇಶದ ಮೂಲೆಮೂಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದ ಐಎಎಸ್ ಟಾಪರ್ ರಂಗಮಂಜು ನನ್ನ ಸಂಸ್ಥೆಯ ವಿದ್ಯಾರ್ಥಿ. ನನ್ನ ಹಾಗೂ ಸಂಸ್ಥೆ ಮಾರ್ಗದರ್ಶನದಲ್ಲಿ ಐಎಎಸ್ ಆಗಿದ್ದು ಸಂತಸ ತಂದಿದೆ ಎಂದು ಜಿ. ಬಿ. ವಿನಯ್ ಕುಮಾರ್ ಹೇಳಿದರು.

 

ಕಕ್ಕರಗೊಳ್ಳ ಗ್ರಾಮದಲ್ಲಿ ಹೊಸ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದೆ.  ಸಾಣೇಹಳ್ಳಿಯ ಪಂಡಿತಾರಾಧ್ಯ ಶ್ರೀಗಳೂ ಬಂದಿದ್ದರು. ನಾನು ದೇವಸ್ಥಾನದ ನಿರ್ಮಾಣಕ್ಕೆ ದೇಣಿಗೆ ಕೊಟ್ಟಿದ್ದೇನೆ ಎಂದು ಹೇಳಿದೆ. ಆಗ ಶ್ರೀಗಳು, ಮುಂದಿನ ದಿನಗಳಲ್ಲಿ ಯಾರೇ ಬಂದು ದೇವಸ್ಥಾನಕ್ಕೆ ದೇಣಿಗೆ ನೀಡಿ ಎಂದು ಕೇಳಿದರೆ ನೀಡಬೇಡ ಎಂದು ಸಲಹೆ ನೀಡಿದರು. ಬನ್ನಿಕೋಡು ಗ್ರಾಮದಲ್ಲಿ ಸುಸಜ್ಜಿತ ದೇವಸ್ಥಾನ ನಿರ್ಮಾಣ ಆಗಬೇಕೆಂಬ ಕನಸು ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿಯೂ ಇತ್ತು. ಅದು ಇಂದು ನೆರವೇರಿದೆ. ಎಲ್ಲರಿಗೂ ಒಳಿತಾಗಲಿ ಎಂದು ಹೇಳಿದರು.

Read also : 1500 ಐಎಎಸ್ ಅಧಿಕಾರಿಗಳ ಕೊಟ್ಟ ನನ್ನ ಸಣ್ಣ ಸಾಧನೆಗೆ ಕಕ್ಕರಗೊಳ್ಳದ ಜನರು, ಶಿಕ್ಷಕರು ಕಾರಣ: ಜಿ. ಬಿ. ವಿನಯ್ ಕುಮಾರ್

 

ಹೊನ್ನಾಳಿ ಹಿರೇಕಲ್ಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ, ರಾಮಘಟ್ಟದ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮವನ್ನು ಶಾಸಕ ಡಿ. ಜಿ. ಶಾಂತನಗೌಡರು ಉದ್ಘಾಟಿಸಿದರು. ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ, ಜಿ. ಪಂ. ಮಾಜಿ ಸದಸ್ಯರಾದ ಕೆ. ಹೆಚ್. ಗುರುಮೂರ್ತಿ, ಶೀಲಾ ಗದ್ದಿಗೇಶ್, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಕೆ. ಹೆಚ್. ಷಣ್ಮುಖಪ್ಪ, ತಾ. ಪಂ. ಮಾಜಿ ಸದಸ್ಯರಾದ ಅಂಬುಜಾ ಮರುಳಸಿದ್ದಪ್ಪ, ರತ್ನಮ್ಮ ಮಲ್ಲಪ್ಪ, ಹೊನ್ನಾಳಿ ಎಪಿಎಂಸಿ ಮಾಜಿ ನಿರ್ದೇಶಕಿ ರೂಪಾ ಡಿ. ದೇವರಾಜ್, ಜಗದೀಶ್, ಮರುಳಸಿದ್ದಪ್ಪ, ಮೋಹನ್, ಸಿದ್ದೇಶ್, ಮಂಜು ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article G. B. Vinay Kumar 1500 ಐಎಎಸ್ ಅಧಿಕಾರಿಗಳ ಕೊಟ್ಟ ನನ್ನ ಸಣ್ಣ ಸಾಧನೆಗೆ ಕಕ್ಕರಗೊಳ್ಳದ ಜನರು, ಶಿಕ್ಷಕರು ಕಾರಣ: ಜಿ. ಬಿ. ವಿನಯ್ ಕುಮಾರ್
Next Article Davanagere ಮೇ 6 ರಂದು ಚಂದನವಾಹಿನಿಯಲ್ಲಿ ಡಾ. ರಾಘವೇಂದ್ರ ಗುರೂಜಿ ನೇರ ಸಂದರ್ಶನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮ : ಜನರಿಂದ ಉತ್ತಮ ಸ್ಪಂದನೆ

ಹರಿಹರ:  ಜಮಾತೆ ಇಸ್ಲಾಂ ಹಿಂದ್ ಹರಿಹರ ಘಟಕದಿಂದ ಶುಕ್ರವಾರ ನಗರದ ಪ್ರಶಾಂತನಗರದ ಮಸ್ಜಿದ್-ಎ-ಅಲಿ ಮಸೀದಿಯಲ್ಲಿ ಆಯೋಜಿಸಿದ್ದ ‘ನಮ್ಮೂರ ಮಸೀದಿ ನೋಡಬನ್ನಿ’…

By Dinamaana Kannada News

SC-ST ಜನಾಂಗದವರ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) :  ಪ್ರಸಕ್ತ ಸಾಲಿನಲ್ಲಿ ಡಾ.ಬಾಬು ಜಗಜೀವನರಾಂರವರ 118 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ…

By Dinamaana Kannada News

Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ದಾವಣಗೆರೆ (Davangere Distric) : ಛತ್ತಿಸಗಡ್‌  ರಾಜ್ಯದ, ರಾಯ್ ಪುರ್ ನಗರದಲ್ಲಿ ನಡೆದ 46ನೇ ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆಯಲ್ಲಿ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?