Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಬಾಬೂಜಿ ದೇಶದ ‘ಆಹಾರ’ ಕೊರತೆ ನೀಗಿಸಿದ ಮಹಾನ್ ಕ್ರಾಂತಿಕಾರಿ ನಾಯಕ : ಶಾಸಕ ಕೆ.ಎಸ್.ಬಸವಂತಪ್ಪ ಬಣ್ಣನೆ
ತಾಜಾ ಸುದ್ದಿ

ದಾವಣಗೆರೆ | ಬಾಬೂಜಿ ದೇಶದ ‘ಆಹಾರ’ ಕೊರತೆ ನೀಗಿಸಿದ ಮಹಾನ್ ಕ್ರಾಂತಿಕಾರಿ ನಾಯಕ : ಶಾಸಕ ಕೆ.ಎಸ್.ಬಸವಂತಪ್ಪ ಬಣ್ಣನೆ

Dinamaana Kannada News
Last updated: July 6, 2025 11:51 am
Dinamaana Kannada News
Share
Basavanatappa
SHARE
ದಾವಣಗೆರೆ : ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ತಾಲೂಕಿನ ಅಣಜಿ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ಅವರ ೩೮ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು ಎಂದರು.
ದೇಶದ ಜನರು ಆಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ‘ಜೈಜವಾನ್ ಜೈ ಕಿಸಾನ್’ ಎಂಬ ಸಂದೇಶದೊಂದಿಗೆ ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದ ಪರಿಣಾಮ ಇವತ್ತು ಇವತ್ತು ದೇಶದ ಎಲ್ಲಾ ಗೋದಾಮುಗಳಲ್ಲಿ ದವಸ ಧಾನ್ಯಗಳು ಸಂಗ್ರಹವಾಗಿ ಆಹಾರದ ಕೊರತೆ ನೀಗಿಸಿದೆ. ಇದು  ಡಾ.ಬಾಬು ಜಗಜೀವನ ರಾಂ ಮತ್ತು ಲಾಲ್ ಬಹದ್ದೂರು ಶಾಸ್ತಿç ಅವರು ಕೊಟ್ಟ ಕೊಡುಗೆಯಾಗಿದೆ. ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶಗಳನ್ನು ಮಕ್ಕಳು, ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಬೇರೆ ದೇಶಗಳಲ್ಲಿ ಆಹಾರಕ್ಕಾಗಿ ಪರದಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಆದರೆ ನಮ್ಮ ದೇಶದಲ್ಲಿ ಇನ್ನು ಹತ್ತು ವರ್ಷ ಆಹಾರದ ಕೊರತೆಯಾದರೆ ಅದನ್ನು ನಿಭಾಯಿಸುವಷ್ಟು ಶಕ್ತಿ ನಮಗೆ ಇದೆ. ಅದು ಡಾ.ಬಾಬು ಜಗಜೀವನರಾಂ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಅವರು ಕೊಟ್ಟ ಕೊಡುಗೆಯಾಗಿದೆ. ಇವರನ್ನು ಸದಾ ಕಾಲ ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.
Read also : ಅಕ್ರಮ ಮದ್ಯ ಮಾರಾಟ ವಿರುದ್ಧ ದ್ವನಿ ಎತ್ತಿದ್ದ ಮಹಿಳೆಗೆ ನಿಂದನೆ : ಬೇಸೆತ್ತು ನೇಣಿಗೆ ಶರಣಾದ ಮಹಿಳೆ
ನಾವೇನಾದರೂ ಒಂದು ಸಾಧನೆ ಮಾಡಿದರೆ, ನಮ್ಮ ದೇಶ, ನಮ್ಮ ರಾಜ್ಯ, ನಮ್ಮ ಹಳ್ಳಿ ನೆನಸಿಕೊಳ್ಳುತ್ತದೆ. ನಾವು ರಾಷ್ಟ್ರ ಮಟ್ಟಕ್ಕೂ ಆಗದಿದ್ದರೂ, ನಮ್ಮ ಪಕ್ಕದ ಮನೆಯವರಿಗಾದರೂ ಒಳ್ಳೆಯದನ್ನು ಮಾಡಬೇಕು. ನಮ್ಮ ಪಕ್ಕದ ಮನೆಯವರು ಒಳ್ಳೆಯ ವ್ಯಕ್ತಿ ಎಂದು ಕರೆಯಬೇಕು. ಹೀಗೆ ನಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ರಾಷ್ಟ್ರ ನಾಯಕರ ಆದರ್ಶ, ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿದ್ದು, ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸುವ ಕೆಲಸ ಶಿಕ್ಷಕರು ಮಾಡಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ದಿಶಾ ಸಮಿತಿ ಸದಸ್ಯರಾದ ಎಸ್.ಕೆ.ಚಂದ್ರಣ್ಣ, ಆಲೂರು ಸೋಮಣ್ಣ, ಗಿರಿಯಾಪುರ ಕೃಷ್ಣಮೂರ್ತಿ, ಬಸಣ್ಣ, ಅಣಜಿ ರಾಜಪ್ಪ, ಪ್ರಾಂಶುಪಾಲ ಮುದೋಬ ನಾಯಕ್, ಶಾಲಾ ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article suicide ಅಕ್ರಮ ಮದ್ಯ ಮಾರಾಟ ವಿರುದ್ಧ ದ್ವನಿ ಎತ್ತಿದ್ದ ಮಹಿಳೆಗೆ ನಿಂದನೆ : ಬೇಸೆತ್ತು ನೇಣಿಗೆ ಶರಣಾದ ಮಹಿಳೆ
Next Article Davangere Crime, PSI Suicide, Davangere News, Davangere, ದಾವಣಗೆರೆ ಕೆಟೆಜೆ ನಗರ ಪಿಎಸ್‌ಐ ಆತ್ಮಹತ್ಯೆ; ಕುಟುಂಬಸ್ಥರು ಹೇಳಿದ್ದೇನು?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಸೂಚನೆ

ದಾವಣಗೆರೆ:  ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳ್ಳಿ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ…

By Dinamaana Kannada News

Davanagere news | ಸೊಳ್ಳೆಗಳಿಂದ ಹರಡುವ ಕಾಯಿಲೆ ಬಗ್ಗೆ ಎಚ್ಚರ ವಹಿಸಿ : ಡಾ. ಅಬ್ದುಲ್ ಖಾದರ್

ಮಲೆಬೆನ್ನೂರು (Davanagere)  : ಸೊಳ್ಳೆಗಳಿಂದ  ಅನೇಕ ಕಾಯಿಲೆಗಳು ಹರಡುತ್ತಿದ್ದು ಈ ಬಗ್ಗೆ ಜಾಗೃತಿ ವಹಿಸುವಂತೆ  ತಾಲೂಕು ಆರೋಗ್ಯ ಅಧಿಕಾರಿ ಡಾ.…

By Dinamaana Kannada News

ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಕೆ.ಎಸ್.ಬಸವಂತಪ್ಪ ಅಭಿನಂದನೆ

ದಾವಣಗೆರೆ: ವಿಧಾನಸಭೆಯಲ್ಲಿ ಬುಧವಾರ ದಲಿತ ಸಮುದಾಯಕ್ಕೆ ಒಳಮೀಸಲಾತಿ ಘೋಷಿಸುವ ಮೂಲಕ ದಶಕಗಳ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಯಕೊಂಡ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?