Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ಜಲಾಶಯ : ಒಳಹರಿವಿನಲ್ಲಿ ಮತ್ತೆ ಹೆಚ್ಚಳ
ತಾಜಾ ಸುದ್ದಿ

ಭದ್ರಾ ಜಲಾಶಯ : ಒಳಹರಿವಿನಲ್ಲಿ ಮತ್ತೆ ಹೆಚ್ಚಳ

Dinamaana Kannada News
Last updated: July 25, 2024 4:33 am
Dinamaana Kannada News
Share
Badhra dam Shivamogga
Badhra dam Shivamogga
SHARE

ಶಿವಮೊಗ್ಗ, ಜು. 25:  ಮಲೆನಾಡಿನಲ್ಲಿ ಇಳಿಕೆಯಾಗಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಾರಂಭಿಸಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ ಭದ್ರಾ ಜಲಾಶಯದ ಒಳಹರಿವಿನಲ್ಲಿ ಮತ್ತೆ ಹೆಚ್ಚಳ ಕಂಡುಬಂದಿದೆ.

ಗುರುವಾರ ಬೆಳಿಗ್ಗಯ ಮಾಹಿತಿಯಂತೆ, ಭದ್ರಾ ಜಲಾಶಯ ಒಳಹರಿವು 26,044 ಕ್ಯೂಸೆಕ್ ಗೆ ಏರಿಕೆಯಾಗಿದೆ. ಬುಧವಾರ ಈ ಪ್ರಮಾಣ 15,383 ಕ್ಯೂಸೆಕ್ ನಷ್ಟಿತ್ತು. ಕಳೆದ ಮೂರು ದಿನಗಳಿಂದ ಡ್ಯಾಂ ಒಳಹರಿವಿನಲ್ಲಿ ನಿರಂತರ ಇಳಿಕೆ ಕಂಡುಬಂದಿತ್ತು.

ಉಳಿದಂತೆ ಡ್ಯಾಂನ ನೀರಿನ ಮಟ್ಟ 171 ಅಡಿ 6 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂನಲ್ಲಿ ಸರಿಸುಮಾರು ಎರಡೂವರೆ ಅಡಿಯಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 152. 9 ಅಡಿ ನೀರು ಶೇಖರಣೆಯಾಗಿತ್ತು.

ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಲು ಇನ್ನೂ ಹದಿನಾಲ್ಕುವರೆ ಅಡಿಯಷ್ಟು ನೀರು ಹರಿದುಬರಬೇಕಾಗಿದೆ. ಪ್ರಸ್ತುತ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಇದರಿಂದ ಪ್ರಸ್ತುತ ವರ್ಷ ಡ್ಯಾಂ ಗರಿಷ್ಠ ಮಟ್ಟ ತಲುಪುವ ನಿರೀಕ್ಷೆಗಳು ಕಂಡುಬರುತ್ತಿವೆ.

ಕಳೆದ ವರ್ಷ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲ ಸ್ಥಿತಿ ತಲೆದೋರಿತ್ತು. ಕುಡಿಯುವ ನೀರಿಗೂ ಹಾಹಾಕಾರ ತಲೆದೋರಿತ್ತು. ಆದರೆ ಪ್ರಸ್ತುತ ವರ್ಷ ಉತ್ತಮ ಮುಂಗಾರು ಮಳೆಯಿಂದ ಮಲೆನಾಡಿನ ಕೆರೆಕಟ್ಟೆ, ಹಳ್ಳಕೊಳ್ಳ, ನದಿಗಳು ಮೈದುಂಬಿ ಹರಿಯಲಾರಂಭಿಸಿವೆ.

TAGGED:Dinamana.comKannada NewsShimoga districtಕನ್ನಡ ಸುದ್ದಿದಿನಮಾನ.ಕಾಂಶಿವಮೊಗ್ಗ ಜಿಲ್ಲೆ
Share This Article
Twitter Email Copy Link Print
Previous Article Harihara ಹದಗೆಟ್ಟ ರಸ್ತೆ : ಪ್ರತಿಭಟನೆ
Next Article davanagere ಬಂಡವಾಳಶಾಹಿಗಳ ವಿರುದ್ಧ ತುರ್ತು ಪರಿಸ್ಥಿತಿ ಅನಿವಾರ್ಯವಾಗಿತ್ತು : ಡಿ. ತಿಪ್ಪಣ್ಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ. ಫೆ.11 (Davanagere); ರಾಷ್ಟ್ರೀಯ ಹೆದ್ದಾರಿ-173  ಮೂಡಿಗೆರೆಯಿಂದ ಹೊಳಲ್ಕೆರೆವರೆಗೆ ಇದ್ದು NH 369 ಬಳಿ ಮುಕ್ತಾಯಗೊಂಡಿದೆ.ಇದೇ ಹೆದ್ದಾರಿಯನ್ನು ಹೊಳಲ್ಕೆರೆಯಿಂದ  ಚಿಕ್ಕಜಾಜೂರಿನ…

By Dinamaana Kannada News

Davanagere | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅವಧಿ ವಿಸ್ತರಣೆ

ದಾವಣಗೆರೆ  (Davanagere) :  ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ…

By Dinamaana Kannada News

ದಾವಣಗೆರೆ ಮಹಾನಗರ ಪಾಲಿಕೆ | ನ.27 ರಿಂದ 30 ರವರೆಗೆ 69 ನೇ ಕನ್ನಡ ರಾಜ್ಯೋತ್ಸವ : ಮೇಯರ್ ಚಮನಸಾಬ್

ದಾವಣಗೆರೆ (Davanagere) : ದಾವಣಗೆರೆ ಮಹಾನಗರ ಪಾಲಿಕೆ, ಕನ್ನಡ ಪರ ಸಂಘಟನೆಗಳು ಹಾಗೂ ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಮಹಾನಗರ ಪಾಲಿಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dr. Veena P.
ತಾಜಾ ಸುದ್ದಿ

ದಾವಣಗೆರೆ|ಡಾ. ವೀಣಾ ಪಿ.ಅವರ “ಜೀವದಾಯಿ”ನಾಟಕ ಆಯ್ಕೆ

By Dinamaana Kannada News
Bhadra Achukattu
ತಾಜಾ ಸುದ್ದಿ

ಮುಂಗಾರು ಬೆಳೆಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು : ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರಿಗೆ ನಿಷೇಧ

By Dinamaana Kannada News
MP Dr. Prabha
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಂಸದೆ ಡಾ.ಪ್ರಭಾ ಮನವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?