Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳ ಪುರಪ್ರವೇಶ: ಆರ್ಯವೈಶ್ಯ ಸಮಾಜ ಬಾಂಧವರಿಂದ ಬೈಕ್ ರ‍್ಯಾಲಿ
ತಾಜಾ ಸುದ್ದಿ

ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳ ಪುರಪ್ರವೇಶ: ಆರ್ಯವೈಶ್ಯ ಸಮಾಜ ಬಾಂಧವರಿಂದ ಬೈಕ್ ರ‍್ಯಾಲಿ

Dinamaana Kannada News
Last updated: July 9, 2025 1:19 pm
Dinamaana Kannada News
Share
Arya Vaishya Samaj
SHARE

ದಾವಣಗೆರೆ: ವಿಶ್ವ ವಾಸವಿ ಜಗದ್ಗುರು ಮಹಾಸಂಸ್ಥಾನ, ಶ್ರೀ ವಾಸವಿ ಪೀಠಂನ ಪೀಠಾಧಿಪತಿಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಯವರ 4ನೇ ಪೀಠಾರೋಹಣದ ಹಿನ್ನಲೆಯಲ್ಲಿ ಬುಧವಾರ ಪುರಪ್ರವೇಶ ಮಾಡಿದರು.
ಸಮಾಜದ ಗುರುಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳನ್ನು ಮುಖಂಡರು, ಸಮಾಜ ಬಾಂಧವರು, ಬೈಕ್ ರ‍್ಯಾಲಿ ಮೂಲಕ ಭಕ್ತಿಯಿಂದ ಸ್ವಾಗತಿಸಿದರು.

ಪರಮಪೂಜ್ಯ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರನ್ನು, ಬಾಡಾ ಕ್ರಾಸ್ ಬಳಿ ಸಮಾಜದ ಮಹಿಳೆಯರು ಪೂರ್ಣಕುಂಭದೊಂದಿಗೆ ಎದುರುಗೊಂಡು, ಸ್ವಾಗತಿಸಿದರು. ನಂತರ ರ‍್ಯಾಲಿ ಮೂಲಕ ಅವರಗೆರೆಯ ಗೋಶಾಲೆ ತಲುಪಿತು. ಶ್ರೀಗಳು ಕಾಮಧೇನು ಎಂದೇ ಕರೆಯುವ ಗೋಮಾತೆಗೆ ವಸ್ತ್ರ ಸಮರ್ಪಿಸಿ, ಗೋಪೂಜೆ ನೆರವೇರಿಸಿದರು. ನಂತರ ಗೋವುಗಳಿಗೆ ಗೋಗ್ರಾಸ ನೀಡಲಾಯಿತು. ಇದೇ ವೇಳೆ ಗೋಶಾಲೆಯ ಆವರಣದಲ್ಲಿ ಶ್ರೀಗಳಿಗೆ ಪಾದಪೂಜೆ ನೆರವೇರಿಸಲಾಯಿತು.

Arya Vaishya Samaj ಸುಮಾರು 250 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ 20ಕ್ಕೂ ಹೆಚ್ಚು ಕಾರುಗಳು ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದು, ‘ಕೇಸರಿ ಪೇಟ’ ತೊಟ್ಟು, ವಾಹನಗಳಿಗೆ ‘ವೈಶ್ಯ ಪತಾಕೆ’ ಕಟ್ಟಿಕೊಂಡು, ‘ಜೈ ವಾಸವಿ ಮಾತಾ’, ‘ಜೈ ಕನ್ಯಕಾಂಬಾ’ ಎಂದು ಆರ್ಯವೈಶ್ಯ ಕುಲದೇವತೆ ಶ್ರೀ ಕನ್ಯಕಾಪರಮೇಶ್ವರಿ ಮಾತೆಯನ್ನು ಸ್ತುತಿಸುತ್ತಾ ಶಿಸ್ತಿನಿಂದ ಮುಂದೆ ಸಾಗಿದರು.

ರ‍್ಯಾಲಿಯು ಅವರಗೆರೆ, ಪಿ.ಬಿ. ರಸ್ತೆ ಮೂಲಕ ಸಾಗಿ ಎ.ವಿ.ಕೆ. ಕಾಲೇಜು ರಸ್ತೆ, ರಾಂ ಅಂಡ್ ಕೋ ವೃತ್ತ, ಚರ್ಚ್ ರಸ್ತೆ ಮೂಲಕ ನೇರ ರಿಂಗ್ ರಸ್ತೆ, ಗಡಿಯಾರ ವೃತ್ತ, ಶ್ರೀ ಶಾರದಾಂಬ ದೇವಸ್ಥಾನ ರಸ್ತೆಯ ಮೂಲಕ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣ ರಸ್ತೆಯಲ್ಲಿ ಸಾಗಿ, ಶ್ರೀಗಳು ತಂಗುವ ಆರ್.ಜಿ. ಶ್ರೀನಿವಾಸಮೂರ್ತಿ ಅವರ ನಿವಾಸದ ಬಳಿ ರ‍್ಯಾಲಿ ಮುಕ್ತಾಯವಾಯಿತು.

Read also : ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಈ ವೇಳೆ ಜಿಲ್ಲಾ ಸಮಿತಿ ಹಾಗೂ ಭಕ್ತಿ ಸಿಂಚನ ಸಮಿತಿಯ ಅಧ್ಯಕ್ಷ ಆರ್.ಎಲ್. ಪ್ರಭಾಕರ್, ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್, ಕಾರ್ಯದರ್ಶಿ ಎಂ. ನಾಗರಾಜ ಗುಪ್ತ, ಆರ್ಯವೈಶ್ಯ ಮುಖಂಡ ಎಸ್.ಟಿ. ಕುಸುಮ ಶ್ರೇಷ್ಠಿ, ಡಾ. ಬಿ.ಎಸ್. ನಾಗಪ್ರಕಾಶ್, ಕೆ.ಎಸ್. ರುದ್ರಶ್ರೇಷ್ಠಿ, ಆರ್.ಜಿ. ಶ್ರೀನಿವಾಸ್ ಮೂರ್ತಿ, ಕೆ.ಎನ್. ಅನಂತರಾಮ ಶೆಟ್ಟಿ, ಹೆಚ್.ಟಿ. ಶ್ರೀನಿವಾಸ್, ಬಿ.ಹೆಚ್. ಅಶೋಕ್, ಎಸ್. ಸುನೀಲ್, ಟಿ.ಎಸ್. ಕಿರಣ್ ಕುಮಾರ್, ಕೆ.ಎಸ್. ದರ್ಶನ್, ಜೆ. ರವೀಂದ್ರ ಗುಪ್ತ, ಹೆಚ್. ವೆಂಕಟೇಶ್, ಡಿ.ಹೆಚ್. ಅಂಬಿಕಾಪತಿ ಶೆಟ್ಟಿ, ಸಾಯಿಪ್ರಸಾದ್, ಎನ್.ವಿ.ಬದರಿನಾಥ್, ಟಿ. ಸುರೇಶ್ ಉಪಸಮಿತಿಗಳ ಚೇರ್ಮನ್ನರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಗುರುವಾರ ಶೋಭಾಯಾತ್ರೆ, ‘ಭಕ್ತಿ ಸಿಂಚನ’ ಕಾರ್ಯಕ್ರಮ
ಗುರುವಾರ ಬೆಳಗ್ಗೆ ದಾವಣಗೆರೆ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ‘ಭಕ್ತಿ ಸಿಂಚನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 7.30 ಕ್ಕೆ ಶ್ರೀ ಸದ್ಯೋಜಾತ ಸ್ವಾಮಿ ಹಿರೇಮಠದಿಂದ ಶ್ರೀಗಳನ್ನು ಸುವರ್ಣ ರಥದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ವಿವಿಧ ಕಲಾತಂಡಗಳನ್ನು ಒಳಗೊಂಡ ಶೋಭಾಯಾತ್ರೆ ಮೂಲಕ ಸಮಾಜ ಬಾಂಧವರು ಕರೆತರಲಿದ್ದಾರೆ. ನಂತರ ಕಾರ್ಯಕ್ರಮದ ಉದ್ಘಾಟನೆ, ಶ್ರೀಗಳಿಂದ ಆಶೀರ್ವಚನ ಸೇರಿದಂತೆ ದಿನಪೂರ್ತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ.

TAGGED:Arya Vaishya SamajBike rallyDinamana.comಆರ್ಯವೈಶ್ಯ ಸಮಾಜದಿನಮಾನ.ಕಾಂಬೈಕ್ ರ‍್ಯಾಲಿ
Share This Article
Twitter Email Copy Link Print
Previous Article Applications invited ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
Next Article protest davanagere ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾಲಿಕೆ ನೌಕರರಿಂದ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ…

By Dinamaana Kannada News

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಸಿದ್ದರಾಮಯ್ಯ

ಚಳ್ಳಕೆರೆ, ಅ. 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು…

By Dinamaana Kannada News

ಭದ್ರಾ ಜಲಾಶಯದಲ್ಲಿ 175.6 ಅಡಿ ನೀರು  

Bhadra dam water level today : ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?