ದಾವಣಗೆರೆ (Davanagere): ದಾವಣಗೆರೆಯಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಜನಾಕ್ರೋಶ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷವು ಸಹ ಬಿಜೆಪಿ ವಿರುದ್ಧ ದಾವಣಗೆರೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಡಾ.ಬಿ.ಅರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಎಸ್ ಮಲ್ಲಿಕಾರ್ಜುನ್, ಎ. ನಾಗರಾಜ್, ಶುಭಮಂಗಳ, ಮೈನುದ್ದೀನ್, ವರುಣ್ ನಾಯಕ್ ಅವರುಗಳು ಬಿಜೆಪಿಯು ಯಾವ ಪುರುಷಾರ್ಥಕ್ಕಾಗಿ ಜನಾಕ್ರೋಶ ಯಾತ್ರೆ ಕೈಗೊಂಡಿದೆ ಎಂದು ಪ್ರಶ್ನಿಸಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತದಿಂದ ಬಡಜನರ ಹೊಟ್ಟೆ ತುಂಬಿಸುವ ಕೆಲಸ ಮಾಡಲಾಗುತ್ತಿದ್ದು, ಆದರೆ ಬಿಜೆಪಿಗರು ಅದಕ್ಕೆ ಕಲ್ಲು ಹಾಕುವ ಕೆಲಸಕ್ಕೆ ಮುಂದಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದರು.
ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ರೀತಿಯ ಗೃಹಪೋಯೋಗಿ ವಸ್ತುಗಳು ಗಗನಕ್ಕೆ ಏರಿವೆ. ಆದರೆ ಇದನ್ನು ಪ್ರಶ್ನಿಸಬೇಕಾದ ರಾಜ್ಯ ಬಿಜೆಪಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಬಡವರಿಗಾಗಿ ತಂದಿರುವ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಪಾಲಿಕೆಯ ಮಾಜಿ ಉಪಮಾಪೌರರಾದ ಅಬ್ದುಲ್ ಲತೀಫ್ ಸೋಗಿ ಶಾಂತಕುಮಾರ್,ಮಾಜಿ ಸದಸ್ಯ ಎಲ್.ಡಿ.ಗೋಣೆಪ್ಪ, ಮಹಿಳಾ ಕಾಂಗ್ರೆಸ್ ದ್ರಾಕ್ಷಾಯಣಮ್ಮ, ರಾಜೇಶ್ವರಿ, ಕಾವ್ಯ, ಮಂಗಳಮ್ಮ, ಅಲ್ಲಿ ರೆಹಮತ್, ನವೀನ್ ನಲ್ವಡಿ, ಮುಜಾಹಿದ್ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಎಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.