Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಿಪಿಎಲ್ ಕಾರ್ಡ್ ರದ್ದು|ಸರ್ಕಾರದ ಜನವಿರೋಧಿ ಕ್ರಮ|ಪ್ರತಿಭಟನೆ
ತಾಜಾ ಸುದ್ದಿ

ಬಿಪಿಎಲ್ ಕಾರ್ಡ್ ರದ್ದು|ಸರ್ಕಾರದ ಜನವಿರೋಧಿ ಕ್ರಮ|ಪ್ರತಿಭಟನೆ

Dinamaana Kannada News
Last updated: October 17, 2025 4:29 am
Dinamaana Kannada News
Share
Davanagere
SHARE
ದಾವಣಗೆರೆ : ರಾಜ್ಯಾದ್ಯಂತ ಬಡವರ, ಕೂಲಿ ಕಾರ್ಮಿಕರ ಹಾಗೂ ಸ್ಲಂಜನರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಜನವಿರೋಧಿ ಕ್ರಮವನ್ನು ಖಂಡಿಸಿ ನಗರದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಮಿತಿಯ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ರದ್ದುಗೊಳಿಸಿರುವ ಬಿಪಿಎಲ್ ಕಾರ್ಡ್ಗಳನ್ನು ಮರಳಿ ನೀಡುವಂತೆ ಒತ್ತಾಯಿಸಿ ಆಹಾರ ಇಲಾಖೆಯ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಸಮಿತಿಯ ಗೌರವಾಧ್ಯಕ್ಷ ಎಸ್.ಎಲ್.ಆನಂದಪ್ಪ ಮಾತನಾಡಿ, ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ಬಡವರ ಬಿಪಿಎಲ್ ಪಡಿತರ ಕಾರ್ಡುಗಳನ್ನು ಏಕಾಏಕಿಯಾಗಿ ರದ್ದುಗೊಳಿಸಿದ್ದರಿಂದ ಲಕ್ಷಾಂತರ ಬಡ ಕುಟುಂಬಗಳು ಬೀದಿಗೆ ಬಂದಿದ್ದಾರೆ ಎಂದರು.
ರಾಜ್ಯ ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡ ಕುಟುಂಬಗಳಿಗೆ, ಮಧ್ಯಮ ವರ್ಗದ ಕುಟುಂಬಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅನುಕೂಲ ಮಾಡಲಾಗುವುದೆಂದು ಭರವಸೆಯನ್ನು ನೀಡಲಾಗಿತ್ತು. ಅದರಂತೆ 2023 ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಪಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯಯೋಜನೆ, ಹಾಗೂ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಡ ಕುಟುಂಬದ ಯಾರೂ ಉಪವಾಸ ಇರಬಾರದೆಂದು ಹಸಿವು ಮುಕ್ತ ಘೋಷಣೆಯೊಂದಿಗೆ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದು ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗಿದ್ದು. ಆದರೆ ಈಗ ರಾಜ್ಯ ಸರ್ಕಾರ 8 ಲಕ್ಷಕ್ಕೂ ಅಧಿಕ ಬಡವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಲಕ್ಷಾಂತರ ಕೂಲಿ ಕಾರ್ಮಿಕರು ಹಾಗೂ ಸ್ಲಂ ಪ್ರದೇಶದ ಕುಟುಂಬಗಳಿಗೆ ಆಹಾರ ಸಿಗದೆ ಬೀದಿಗೆ ಬಂದಿದ್ದಾರೆ ಎಂದು ಹೇಳಿದರು.
Read also : ವೃದ್ಧೆಯ ಸರಗಳ್ಳತನ : ವೃದ್ದೆಯ ಸಂಬಂಧಿಕರ ಬಂಧನ
ಕೇಂದ್ರ ಸರ್ಕಾರದ ಸೂಚನೆಯಂತೆ ಅನರ್ಹ ಪಡಿತರ ಚೀಟಿಗಳನ್ನು ಮಾತ್ರ ರದ್ದು ಗೊಳಿಸಲಾಗುತ್ತದೆ ಎಂದು ಹೇಳಿ ಈಗ 8 ಲಕ್ಷ ಕಾರ್ಡ್ಗಳನ್ನು ರದ್ದು ಮಾಡಿರುವುದನ್ನು ನಾವು ಖಂಡಿಸುತ್ತೇವೆ. ರಾಜ್ಯ ಸರ್ಕಾರ ಲಕ್ಷಾಂತರ ಕುಟುಂಬಗಳನ್ನು ಪಂಚ ಗ್ಯಾರಂಟಿ ಯೋಜನೆಯಿಂದ ವಂಚಿಸುವ ಹುನ್ನಾರ ಮಾಡುತ್ತಿದೆ ಎಂದು ದೂರಿದರು.
ರಾಜ್ಯ ಸರ್ಕಾರದಿಂದ ಬಡವರಿಗೆ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಕೆಲಸ ನಡೆಯುತ್ತಿದೆ. ಆದ್ದರಿಂದ ಕೂಡಲೇ ರದ್ದಾಗಿರುವ ಬಿಪಿಎಲ್ ಕಾರ್ಡುಗಳನ್ನು ಪುನರ್ ಪರಿಶೀಲಿಸಿ ವಾಪಾಸ್ಸು ನೀಡಬೇಕು ಇಲ್ಲವಾದರೆ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡು ಉಗ್ರ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ವೇಳೆ ಸಮಿತಿಯ ಸುಹಿಲ್ ಭಾಷ, ಹೆಚ್.ಗಣೇಶ್, ಸಾದಿಕ್, ಸುನೇರಾ ಬಾನು, ಬಿಬಿಜಾನ್, ಸೀಮಾ, ಶಂಕ್ರಮ್ಮ, ಕೌಸರ್, ರಜೀಯಾ ಬಾನು ಇತರರು ಇದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವೃದ್ಧೆಯ ಸರಗಳ್ಳತನ : ವೃದ್ದೆಯ ಸಂಬಂಧಿಕರ ಬಂಧನ
Next Article a kannada article about india present situation ಈ ಕಾಲದ ಚದುರಿದ ಚಿತ್ರಗಳು | ಬಿ.ಶ್ರೀನಿವಾಸ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Anagodu jana Spandana : “ಐದು ಗ್ಯಾರಂಟಿ” ಯೋಜನೆಗಳು ನಿಲ್ಲಲ್ಲ

ದಾವಣಗೆರೆ: ' ಐದು ಗ್ಯಾರಂಟಿ' ಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮಹಿಳೆಯರು ಪ್ರತಿಪಕ್ಷಗಳು ಹಬ್ಬಿಸುವ ವದಂತಿಗಳಿಗೆ ಕಿವಿಗೊಡಬೇಡಿ. ನಮ್ಮ…

By Dinamaana Kannada News

ಭದ್ರಾ ಭರ್ತಿಗೆ 8 ಅಡಿ ಬಾಕಿ : ಗರಿಷ್ಠ ಮಟ್ಟಕ್ಕೆ ಜಲಾಶಯ..!

ಶಿವಮೊಗ್ಗ, ಜು. 27:   ಮಧ್ಯ ಕರ್ನಾಟಕದ  ಜನರ ಜೀವನಾಡಿ  ಭದ್ರಾ ಜಲಾಶಯವಾದ  ಭರ್ತಿಗೆ ಕೇವಲ 8 ಅಡಿ ನೀರು ಮಾತ್ರ…

By Dinamaana Kannada News

ನೆಲದ ಚದುರಿದ ಚಿತ್ರಗಳು

ಸಂವಿಧಾನವನ್ನು ಅಪಾರ್ಥ ಮಾಡಿಕೊಳ್ಳುವವರಿಗಿಂತ,ಅರ್ಥಮಾಡಿಕೊಂಡು ಅಸಹನೆಯನ್ನು ಆಸ್ಫೋಟಿಸುವವರ ಸಂಖ್ಯೆ ಹೆಚ್ಚಾಗ್ತಿರೋದು ಈ ಹೊತ್ತಿನ ದುರಂತ.  ಜಾತ್ಯತೀತತೆ ಧರ್ಮವನ್ನು ರಾಜಕಾರಣದಿಂದ,  ಸಾಹಿತ್ಯದಿಂದ,ಸಾರ್ವಜನಿಕ ಕ್ಷೇತ್ರಗಳಿಂದ …

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?