Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: July 30, 2025 1:20 pm
Dinamaana Kannada News
Share
Vinaykumara G B
SHARE
ದಾವಣಗೆರೆ: ದೇವಸ್ಥಾನ ಕಟ್ಟಲು ತೋರುವ ಒಗ್ಗಟ್ಟು ಸುಸಜ್ಜಿತ ಶಾಲೆ ನಿರ್ಮಾಣ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿದರೆ ರಾಜ್ಯದಲ್ಲಿ ಮಾದರಿ ಶಾಲೆಯನ್ನಾಗಿಸಲು ಸಾಧ್ಯ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರೂ ಆದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಅಭಿಮತ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಶ್ರೀಮದ್‌ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಶ್ರೀ ಬಸವೇಶ್ವರಸ್ವಾಮಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯ ಪ್ರತಿಯೊಂದು ಗ್ರಾಮಗಳಲ್ಲಿಯೂ ದೇವಸ್ಥಾನ ಕಟ್ಟಲು ವಿಶೇಷ ಆಸಕ್ತಿ, ಒಗ್ಗಟ್ಟು, ಶಕ್ತಿ, ಶ್ರಮ ವಹಿಸುತ್ತಾರೆ. ಜಾತಿ ಬೇಧ ಮರೆತು ಎಲ್ಲರೂ ಒಂದಾಗಿ ದೇವಸ್ಥಾನ ಕಟ್ಟಬೇಕು ಎಂಬ ಅಪೇಕ್ಷೆ ಒಳ್ಳೆಯದು. ದೇವಸ್ಥಾನ ಕಟ್ಟಿದ ಮೇಲೆ ಮುಂದಿನ ದಿನಗಳಲ್ಲಿಯೂ ಗ್ರಾಮದ ಜನರಲ್ಲಿ ಅದೇ ಉತ್ಸಾಹ, ಪ್ರೀತಿ, ಒಗ್ಗಟ್ಟು, ಶಕ್ತಿ ಇರಬೇಕು. ಅದೇ ರೀತಿಯಲ್ಲಿ ದೇಗುಲನ ನಿರ್ಮಾಣಕ್ಕೆ ತೋರುವ ಒಗ್ಗಟ್ಟು, ಪರಿಶ್ರಮ, ಆಸಕ್ತಿ ಸುಸಸ್ಜಿತ ಶಾಲೆ ಹಾಗೂ ಸರ್ಕಾರಿ ಶಾಲೆಗಳ ಗುಣಮಟ್ಟದತ್ತ ಯೋಚಿಸಬೇಕಾದ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.

ಸರ್ಕಾರಿ ಶಾಲೆಗಳಲ್ಲಿ ಓದಿ ಬರುವ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್ ಕಷ್ಟವಾಗುತ್ತಿದೆ. ಇದಕ್ಕೆ ಕಾರಣ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಗದಿರುವುದು ಹಾಗೂ ಅಸಮಾನತೆ ಇರುವುದೇ ಕಾರಣವಾಗಿದೆ. ಹಾಗಾಗಿ, ದೇವಸ್ಥಾನ ಕಟ್ಟುವಷ್ಟೇ ಆಸಕ್ತಿ ಉತ್ಸಾಹ ಶಾಲೆಗಳ ಅಭಿವೃದ್ಧಿಗೂ ಬೇಕು. ನಮ್ಮ ಸಂಸ್ಥೆಯಲ್ಲಿ ಓದಿದ ಬಡ ಮತ್ತು ಶ್ರೀಮಂತ ಮಕ್ಕಳು ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ನಗರ ಪ್ರದೇಶದ ಮಕ್ಕಳಂತೆ ಶಿಕ್ಷಣ ಸಿಕ್ಕರೆ ಸಾಧನೆ ಕಷ್ಟವಾಗದು. ದೇವಸ್ಥಾನ ನಿರ್ಮಾಣದಂತೆ ಶಾಲೆಗಳ ನಿರ್ಮಾಣವೂ ಆಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸಬೇಕಿದೆ. ಆದ್ರೆ, ಗಟ್ಟಿ ಮನಸ್ಸು ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಧರ್ಮ ಮತ್ತು ಸಂಸ್ಕೃತಿ ಉಳಿಯಬೇಕು. ಜೊತೆಗೆ ಶಿಕ್ಷಣಕ್ಕೂ ಹೆಚ್ಚಿನ ಮಹತ್ವ ನೀಡಬೇಕಿದೆ. ಶಿಕ್ಷಣದ ಮೂಲಕ ಧರ್ಮ ಮತ್ತು ಸಂಸ್ಕೃತಿ ಅರಿವು ಮಕ್ಕಳಲ್ಲಿ ಮೂಡಿಸಬೇಕಾದ ಅಗತ್ಯತೆ ಇದೆ. ಧರ್ಮದಂತೆ ನಡೆದರೆ ಸಂಸ್ಕೃತಿ ಬೆಳೆಸಿಕೊಂಡರೆ ಸಹಬಾಳ್ವೆ ಸಾಧ್ಯವಾಗುತ್ತದೆ. ಈ ಗ್ರಾಮದಲ್ಲಿನ ಮಕ್ಕಳು ಐಎಎಸ್, ಐಪಿಎಸ್ ಆಗುವಂತೆ ಭಗವಂತ ಶಕ್ತಿ ನೀಡಲಿ ಎಂದು ಹಾರೈಸಿದರು.

ಕೊಟ್ಟೂರು ಚಾನೂಕೊಟಿ ಮಠದ ಷ.ಬ್ರ. ಶ್ರೀ ಡಾ. ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಜಗಳೂರು ಶಾಸಕ ಬಿ. ದೇವೇಂದ್ರಪ್ಪ ರವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರಪ್ಪ, ಹೆಚ್. ಪಿ. ರಾಜೇಶ್, ಕೆ. ತಿಪ್ಪೇಸ್ವಾಮಿ. ಹೊಸಪೇಟೆ  ಅಜ್ಜಯ್ಯ ನಾಡಗೇರ, ಹೆಚ್. ನಾಗರಾಜ, ಬಿಸ್ತುವಳ್ಳಿ ಬಾಬಣ್ಣ, ಗ್ರಾ. ಸದಸ್ಯರಾದ ಬೋರಮ್ಮ, ಜೆ. ಎಂ. ತಿಪ್ಪೇಸ್ವಾಮಿ, ಕೆ. ಪಿ. ಪಾಲಯ್ಯ, ಎಸ್.ಕೆ. ಮಂಜುನಾಥ, ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಪಲ್ಲಗಟ್ಟೆ ಮಹೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸೊಕ್ಕೆ ನಾಗರಾಜ್ ಹಲವರು ಮುಖಂಡರು ಉಪಸ್ಥಿತರಿದ್ದರು.

ವೈಮನಸ್ಸು ದೂರವಾಗಿಸುವ ತಾಣ: ಜಿಬಿವಿ

ದೇವಸ್ಥಾನ ಸಾಂಸ್ಕೃತಿಕ ಹಾಗೂ ಶಕ್ತಿ ಕೇಂದ್ರ. ಊರಲ್ಲಿರುವ ವೈಮನಸ್ಸು, ಬಿರುಕು ದೂರ ಮಾಡಿ ಒಂದು ಮಾಡುವ ಶಕ್ತಿ ಈ ಪವಿತ್ರ ತಾಣಕ್ಕಿದೆ. ನಮ್ಮೆಲ್ಲರ ಭಿನ್ನಾಭಿಪ್ರಾಯ ತೊಲಗಿಸಿ ಒಂದಾಗಿಸುವ ಶ್ರದ್ಧಾ ಭಕ್ತಿಯ ಸ್ಥಳ. ನಾನು ಕಳೆದ ಲೋಕಸಭೆ ಚುನಾವಣೆ ವೇಳೆ ಈ ಗ್ರಾಮಕ್ಕೆ ಬಂದಿದ್ದೆ. ಎಷ್ಟೇ ಕಾರ್ಯಕ್ರಮಗಳಿದ್ದರೂ ಜನರ ಪ್ರೀತಿಗೆ ಮಣಿದು ಬಂದಿರುವೆ. ರಾಜ್ಯದ ಸುತ್ತ ಪ್ರಯಾಣ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಆರೈಕೆ, ಆಶೀರ್ವಾದ ನಮ್ಮಂಥವರ ಮೇಲೆ ಇರಲಿ ಎಂದು ಮನವಿ ಮಾಡಿದರು.

TAGGED:Davanagere NewsDinamana.comG. B. Vinay KumarKannada Newsಕನ್ನಡ ಸುದ್ದಿಜಿ.ಬಿ.ವಿನಯ್ ಕುಮಾರ್ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article MP Dr. Prabha Mallikarjun ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 
Next Article job news ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದು ರೈತರನ್ನೇ ಮರೆತರೆ ಹೇಗೆ? : ಸಾಣೇಹಳ್ಳಿ ಶ್ರೀ

ದಾವಣಗೆರೆ (Davangere District) : ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ರಾಜಕಾರಣಿಗಳು ರೈತರ ಪರವಾಗಿ ರೈತ ಬೆಳೆಗಳಿಗೆ ಕನಿಷ್ಠ ಬೆಂಬಲ…

By Dinamaana Kannada News

ಕೋರ್ಟಿನ ಗಾಂಧಿ

ಯಾರ ಜಪ್ತಿಗೂ ಸಿಗದ ಸೂರ್ಯ ಚಂದ್ರರೇ ಪುಣ್ಯವಂತರು ಸುಟ್ಟ ಗಾಯ ಸುಳ್ಳೆಂದು ಇನ್ನಷ್ಟೇ ಸಾಬೀತಾಗಿ ಘಮಘಮಿಸಲೇಬೇಕೆಂದೇನಿಲ್ಲ ಅರಳಿದರೂ ಸಾಕು ನ್ಯಾಯ…

By Dinamaana Kannada News

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.06  ಪ್ರಸಕ್ತ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ವರೆಗೆ ರಾಜ್ಯದಲ್ಲಿರುವ ಹಾಗೂ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?