Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > “ಜಾತಿ ಗಣತಿ” ಬಂದಾಗ ಲಿಂಗಾಯತರು ಎಚ್ಚರಗೊಳ್ಳಬೇಕು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ತಾಜಾ ಸುದ್ದಿ

“ಜಾತಿ ಗಣತಿ” ಬಂದಾಗ ಲಿಂಗಾಯತರು ಎಚ್ಚರಗೊಳ್ಳಬೇಕು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Dinamaana Kannada News
Last updated: April 20, 2025 12:12 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಜಾತಿ ಗಣತಿ ಅಂತ ಬಂದಾಗ ವೀರಶೈವ ಲಿಂಗಾಯತರು ಇನ್ನಾದರೂ ಜಾಗೃತರಾಗಿ ಒಗ್ಗಟ್ಟಿನಿಂದ ನಡೆಯುವುದು ಅವಶ್ಯವಾಗಿದೆ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಿವಿಮಾತು ಹೇಳಿದರು.

ಭಾನುವಾರ ನಗರದ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ದೇವಸ್ಥಾನದ 25ನೇ ವರ್ಷದ ರಜತ ಮಹೋತ್ಸವದ ಧರ್ಮ ಜಾಗೃತಿ ಸಮಾರಂಭದಲ್ಲಿ ಮಾತನಾಡಿದರು.

ವೀರಶೈವ ಲಿಂಗಾಯತ ಇದನ್ನು ಪ್ರಮುಖ ಕಾಲಂನಲ್ಲಿ ಮತ್ತು ಉಪಜಾತಿಗಳನ್ನು ನಂತರದ ಕಾಲಂಗಳಲ್ಲಿ ಬರೆಯಿಸಬೇಕು. ಸಮಾಜ ಒಗ್ಗಟ್ಟಿನಿಂದ ಮುನ್ನಡೆದಾಗ ಮಾತ್ರ ಭವಿಷ್ಯತ್ತಿನಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವೆಂದರು.

ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಸ್ವಾಮೀಜಿ ಮಾತನಾಡಿ, ಮನುಷ್ಯ ಯಾವಾಗಲೂ ಸುಖವನ್ನೇ ಬಯಸುತ್ತಾನೆ. ಸುಖ ಶಾಂತಿಯ ಮೂಲ ಧರ್ಮಾಚರಣೆಯಲ್ಲಿದೆ. ಭೌತಿಕ ಬದುಕಿಗೆ ಸಂಸ್ಕಾರ ಮತ್ತು ಸಮೃದ್ಧಿ ಎರಡರ ಅವಶ್ಯಕತೆ ಇದೆಯೆಂದು ಅಭಿಪ್ರಾಯಪಟ್ಟರು.

ಹೆತ್ತ ತಾಯ್ತಂದೆ ಋಣ ಮತ್ತೆ ಶ್ರೀ ಗುರುವಿನ ಋಣ ಎಷ್ಟು ತೀರಿಸಿದರೂ ಸಾಲದು : ಶ್ರೀ ರಂಭಾಪುರಿ 

ಸಾಮಾಜಿಕ ಸಂಪ್ರದಾಯಗಳು ಬದಲಾಗಬಹುದು. ಆದರೆ ನೈತಿಕ ನಿಯಮ ನಿಬಂಧನೆಗಳು ಬದಲಾಗುವುದಿಲ್ಲ. ನಾಗರೀಕತೆಯ ಹೆಸರಿನಲ್ಲಿ ಪರಂಪರೆ ಸಂಸ್ಕøತಿ ನಾಶವಾಗಬಾರದು. ಮನುಷ್ಯನಲ್ಲಿ ವಿಧೇಯತೆ ಕರ್ತವ್ಯಶೀಲತೆ ಮತ್ತು ಪ್ರಾಮಾಣಿಕತೆ ಬೆಳೆದು ಬರಬೇಕಾಗಿದೆ. ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಒಂದಿಷ್ಟಾದರೂ ಶಿವಜ್ಞಾನದ ಅರಿವು ಗುರು ಕಾರುಣ್ಯ ಬೇಕು. ಹೆತ್ತ ತಾಯ್ತಂದೆ ಋಣ ಮತ್ತೆ ಶ್ರೀ ಗುರುವಿನ ಋಣ ಎಷ್ಟು ತೀರಿಸಿದರೂ ಸಾಲದು. ವೀರಶೈವ ಧರ್ಮ ಸಂವಿಧಾನದಲ್ಲಿ ಮಾನವ ಜೀವನದ ಆದರ್ಶ ಮೌಲ್ಯಗಳನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿ ಉದ್ಧರಿಸಿದ್ದಾರೆ ಎಂದರು.

ದಾವಣಗೆರೆ ನಗರದ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ಪ್ರಾರಂಭಗೊಂಡು 25 ವರುಷ ಪೂರ್ಣಗೊಂಡ ಸಂದರ್ಭದಲ್ಲಿ ರಜತ ಮಹೋತ್ಸವ ಸಮಾರಂಭ ಏರ್ಪಡಿಸಿರುವುದು ತಮಗೆ ಅಪಾರ ಸಂತೋಷ ತಂದಿದೆ. ಸರ್ವ ಕಾರ್ಯಗಳಿಗೂ ಮೊದಲು ಪೂಜೆಗೊಳ್ಳುವ ಮಹಾಗಣಪತಿ ದುಷ್ಟರ ದುರಹಂಕಾರ ನಾಶಗೊಳಿಸಿ ಶಿವ ಸಂಸ್ಕøತಿ ಉಳಿಸಿದ ಕೀರ್ತಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ಸಲ್ಲುತ್ತದೆ. ಅಂಥ ಶ್ರೀ ವೀರಭದ್ರಸ್ವಾಮಿ ರಂಭಾಪುರಿ ಪೀಠದ ಕ್ಷೇತ್ರನಾಥನಾಗಿ ಮತ್ತು ಗೋತ್ರ ಪುರುಷನಾಗಿ ಎಲ್ಲೆಡೆ ಪೂಜೆಗೊಳ್ಳುತ್ತಿದ್ದಾನೆ. ಬದುಕಿನಲ್ಲಿ ಆತ್ಮಬಲ ಸ್ಥೈರ್ಯ ತುಂಬುವ ಉಭಯ ದೈವಗಳ ಸ್ಮರಣೆ ಪೂಜೆ ಅವಶ್ಯಕವೆಂದರು.

ದಾವಣಗೆರೆ ಹರಿಹರ ಅರ್ಬನ್ ಬ್ಯಾಂಕ ಅಧ್ಯಕ್ಷ ಎನ್.ಎ.ಮುರುಗೇಶ್ ಮಾತನಾಡಿ, ಸಮಾಜದಲ್ಲಿ ಸಂಘಟನೆಗಳು ನಡೆಯಬೇಕಲ್ಲದೇ ಸಂಘರ್ಷಗಳು ನಡೆಯಬಾರದು. ವ್ಯಕ್ತಿ ಹಿತಕ್ಕಿಂತ ಸಾಮಾಜಿಕ ಹಿತ ದೊಡ್ಡದು. ನಮ್ಮ ಬದುಕು ಇನ್ನೊಬ್ಬರಿಗೆ ಮಾದರಿಬಾಗಬೇಕಲ್ಲದೇ ಮಾರಕವಾಗಬಾರದು. ಶ್ರೀ ವೀರಭದ್ರಸ್ವಾಮಿ ಲೀಲಾ ಪವಾಡಗಳು ಅನಂತ. ನಂಬಿದವರ ಬಾಳಿನಲ್ಲಿ ಬೆಳಕು ಮೂಡಿಸುವ ಮಹಾದೈವ ಎಂದರು.

ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಜೀ ಮಾತನಾಡಿ, ಸಂತೃಪ್ತಿ ಸಮೃದ್ಧಿಗಾಗಿ ಧರ್ಮಾಚರಣೆ ಬೇಕು. ಮಾನವ ಜೀವನದಲ್ಲಿ ಬುದ್ಧಿ ಬೆಳೆದಂತೆ ಭಾವನೆಗಳು ಬೆಳೆಯುತ್ತಿಲ್ಲ. ಅರಿವುಳ್ಳ ಮಾನವ ಜನ್ಮದಲ್ಲಿ ಅರಿತು ನಡೆದರೆ ಬಾಳಿಗೆ ಬಲ ಪ್ರಾಪ್ತವಾಗುವುದು. ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ಸೇವಾ ಟ್ರಸ್ಟ್(ರಿ)ನವರು ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದರು.

Read also : ಅತ್ಯಾಚಾರ ಪ್ರಕರಣ | ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ದೇವಸ್ಥಾನದ ಪ್ರಧಾನ ಅರ್ಚಕ ಎಂ.ಆರ್.ವೀರಯ್ಯಸ್ವಾಮಿ, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಹರಿಹರ ಕಾಲಜ್ಞಾನ ಮಠದ ಸಿದ್ಧಲಿಂಗ ಸ್ವಾಮಿಗಳು ಪಾಲ್ಗೊಂಡಿದ್ದರು.

ಉಳವಯ್ಯ, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ ಪಾಲ್ಗೊಂಡಿದ್ದರು. ಸವಣೂರಿನ ಡಾ|| ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.

ಇದೇ ಸಂದರ್ಭದಲ್ಲಿ 8 ಜನ ವೀರಮಾಹೇಶ್ವರ ವಟುಗಳಿಗೆ ಶಿವದೀಕ್ಷೆ ಹಾಗೂ ಒಂದು ಜೋಡಿ ಸಾಮೂಹಿಕ ವಿವಾಹ ಜರುಗಿತು. ಸಮಾರಂಭಕ್ಕೂ ಮುನ್ನ ಗುಗ್ಗಳ ಕಾರ್ಯ ನೆರವೇರಿತು. ಸಹಸ್ರಾರು ಭಕ್ತರು ಪಾಲ್ಗೊಂಡು ಪುನೀತರಾದರು.

TAGGED:Caste Censusdavanageres.s.mallikarajunaಜಾತಿ ಗಣತಿಶ್ರೀ ರಂಭಾಪುರಿಸಚಿವ ಎಸ್.ಎಸ್. ಮಲ್ಲಿಕಾರ್ಜುನ್
Share This Article
Twitter Email Copy Link Print
Previous Article Davanagere ಅತ್ಯಾಚಾರ ಪ್ರಕರಣ | ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
Next Article Davanagere police ಕಳುವಾದ ಸ್ವತ್ತು ವಾರಸುದಾರರಿಗೆ ಹಸ್ತಾಂತರ : ಉತ್ತಮ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಬಹುಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere University | ಮುಂದೂಡಿದ್ದ ಪರೀಕ್ಷೆ ಆ.24 ರಂದು : ಕುಲಸಚಿವ ಪ್ರೊ.ಸಿ.ಕೆ.ರಮೇಶ್

ದಾವಣಗೆರೆ (DAVANAGERE)  : ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದ ಸ್ನಾತಕ ಬಿ.ಕಾಂ (ಎನ್‌ಇಪಿ) ಪದವಿಯ ಇ-ಕಾಮರ್ಸ್ ವಿಷಯದ ಪರೀಕ್ಷೆಯನ್ನು ಆಗಸ್ಟ್  24…

By Dinamaana Kannada News

ಮನುಷ್ಯನಿಗೆ ‘ಹಣ-ಆಸ್ತಿಗಿಂತ’ ನೆಮ್ಮದಿ-ಮನಃಶಾಂತಿ ಮುಖ್ಯ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ‘ಹಣ-ಆಸ್ತಿ ಎಷ್ಟಿದ್ದರೇನು, ಮನುಷ್ಯನಿಗೆ ಅಗತ್ಯವಿರುವುದು ನೆಮ್ಮದಿ ಮತ್ತು ಮನಃಶಾಂತಿ. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮನುಷ್ಯನಲ್ಲಿ ಮನಃಶಾಂತಿ…

By Dinamaana Kannada News

ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷ ಕಾಂಗ್ರೆಸ್ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ :  ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದ್ದು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?