Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೇಸಿಗೆ ರಜೆಯಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ
ತಾಜಾ ಸುದ್ದಿ

ಬೇಸಿಗೆ ರಜೆಯಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ

Dinamaana Kannada News
Last updated: April 7, 2024 5:20 am
Dinamaana Kannada News
Share
CEO Suresh Itnala
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
SHARE

 ದಾವಣಗೆರೆ :  ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏ. 11 ರಿಂದ ಮೇ 28 ರ ವರೆಗೆ ಭಾನುವಾರಗಳಂದು ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಸಿದ್ದತೆ ನಡೆಸಿಕೊಳ್ಳುವಂತೆ ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಸಿಯೂಟವನ್ನು ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಂದರೆ ಪ್ರಸ್ತುತ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಳಗೊಂಡಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 12 ರಿಂದ 2 ಗಂಟೆಯ ಅವಧಿಯಲ್ಲಿ ಊಟ ನೀಡಲಾಗುತ್ತದೆ. ಶಾಲೆಗಳ ಬೇಸಿಗೆ ರಜೆ ಏಪ್ರಿಲ್ 11 ರಿಂದ ಆರಂಭವಾಗಲಿದ್ದು ಅಂದಿನಿಂದಲೇ ರಜೆ ಬಿಸಿಯೂಟ ಆರಂಭವಾಗಬೇಕೆಂದರು.

ಶಾಲೆ ಆಯ್ಕೆ

ಗ್ರಾಮ, ಕೇಂದ್ರಸ್ಥಾನದಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದಲ್ಲಿ ಅವುಗಳಲ್ಲಿ ಹೆಚ್ಚು ಮಕ್ಕಳಿರುವ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆ ಶಾಲೆಗೆ ಇತರೆ ಶಾಲೆ ಮಕ್ಕಳು ಬಂದು ಊಟ ಮಾಡಿ ಹೋಗಬಹುದಾಗಿದೆ. ಪ್ರತಿ ಎರಡು ಕಿ.ಮೀ ವ್ಯಾಪ್ತಿಯ ಒಳಗೆ ಈ ಕೇಂದ್ರಗಳನ್ನು ಗುರುತಿಸುವ ಕೆಲಸ ಮಾಡಬೇಕಾಗಿದೆ. 250 ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ನಿರ್ವಹಣೆಗೆ ಹೆಚ್ಚುವರಿಯಾಗಿ ಶಿಕ್ಷಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬಹುದಾಗಿದೆ ಎಂದರು.

ಬಿಸಿಯೂಟ ನಿರ್ವಹಣೆ, ವಿತರಣೆ ನೋಡಿಕೊಳ್ಳುವ ಜವಾಬ್ದಾರಿ ಆಯಾ ಶಾಲೆ ಮುಖ್ಯ ಶಿಕ್ಷಕರ ಮೇಲಿದ್ದು ಅಗತ್ಯವಿದ್ದಲ್ಲಿ ನೋಡಲ್ ಶಿಕ್ಷಕರನ್ನು ನೇಮಕ ಮಾಡಬಹುದಾಗಿದೆ. ಮಕ್ಕಳ ಸಂಖ್ಯೆ ಹೆಚ್ಚಿದ್ದಲ್ಲಿ ಪಕ್ಕದ ಶಾಲೆಯಲ್ಲಿನ ಅಡುಗೆ ಸಿಬ್ಬಂದಿಗಳ ಸೇವೆ ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಪೋಷಕರಿಂದ ಒಪ್ಪಿಗೆ ಪತ್ರ

ಬೇಸಿಗೆ ರಜೆಯಲ್ಲಿ ಶಾಲೆಗೆ ಬಂದು ಊಟ ಮಾಡುವ ವಿದ್ಯಾರ್ಥಿಗಳ ವಿವರವನ್ನು ಸಂಗ್ರಹಿಸಲು ತಿಳಿಸಿ ಯಾರು ಬಿಸಿಯೂಟ ಮಾಡಲು ತಮ್ಮ ಮಕ್ಕಳನ್ನು ಕಳುಹಿಸಲು ಒಪ್ಪಿಗೆ ನೀಡುವ ಪೋಷಕರಿಂದ ಒಪ್ಪಿಗೆ ಪತ್ರ ಸಂಗ್ರಹಿಸಬೇಕು. ಆ ಮಕ್ಕಳಿಗೆ ಮಾತ್ರ ಈ ಹಿಂದಿನ ಮೆನುವಿನಂತೆ ಊಟ ತಯಾರು ಮಾಡಿ ರಜಾ ದಿನ ಭಾನುವಾರ ಹೊರತುಪಡಿಸಿ ಉಳಿದದ ದಿನಗಳಲ್ಲಿ ಮಧ್ಯಾಹ್ನದ ಬಿಸಿಯೂಟ ವಿತರಣೆ ಮಾಡಬೇಕಾಗಿದೆ ಎಂದರು.

ಶುದ್ದ ಕುಡಿಯುವ ನೀರು ಮತ್ತು ಕಲಬೆರೆಕೆ ಆಹಾರ ತಡೆ

ಬಿಸಿಯೂಟ ಮಾಡುವ ಕೇಂದ್ರಗಳಿಗೆ ಆಯಾ ಗ್ರಾಮ ಪಂಚಾಯಿತಿಗಳು ಮತ್ತು ತಾಲ್ಲೂಕು ಕೇಂದ್ರವಾಗಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಶುದ್ದ ಕುಡಿಯುವ ನೀರು ಪೂರೈಕೆ ಮಾಡಬೇಕು. ಬೇಸಿಗೆ ಕಾಲವಾಗಿದ್ದಲಿಂದ ಶುದ್ದ ನೀರಿನ ಪೂರೈಕೆ ಬಹಳ ಮುಖ್ಯವಾಗಿರುತ್ತದೆ. ಮತ್ತು ಊಟದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಕಲಬೆರೆಕೆಯಾಗಬಾರದು. ಆಗಿಂದಾಗ್ಗೆ ಆಹಾರವನ್ನು ಸುರಕ್ಷತಾ ವಿಭಾಗದ ಅಧಿಕಾರಿಗಳು ಪರೀಕ್ಷೆ ನಡೆಸಬೇಕೆಂದು ತಿಳಿಸಿದರು.

ಅಡುಗೆ ಕೇಂದ್ರ ಗುರುತಿಸಿ ಮಾಹಿತಿ ನೀಡಲು ಸೂಚನೆ

ಬೇಸಿಗೆ ರಜೆಯಲ್ಲಿ ಬಿಸಿಯೂಟ ನೀಡಲಾಗುತ್ತಿರುವ ಶಾಲೆಗಳ ವಿವರ, ಅಂದರೆ ಯಾವ ಶಾಲೆಯ ವಿದ್ಯಾರ್ಥಿಗಳಿಗೆ ಯಾವ ಶಾಲೆ ಕೇಂದ್ರಕ್ಕೆ ಟ್ಯಾಗ್ ಮಾಡಲಾಗಿದೆ ಎಂದು ಆಯಾ ಶಾಲಾ ಸೂಚನಾ ಫಲಕದಲ್ಲಿ ಬೇಸಿಗೆ ರಜೆಗೂ ಮೊದಲೇ ಪ್ರಚುರಪಡಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ದುರುಗಪ್ಪ, ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

 

TAGGED:Afternoon summer vacation.Dinamana.comDinamana.com. Davangere Newsದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಬೇಸಿಗೆ ರಜೆಯಲ್ಲಿ ಮಧ್ಯಾಹ್ನ ಬಿಸಿಯೂಟ.
Share This Article
Twitter Email Copy Link Print
Previous Article Ballary Politics ಕಾಲಕ್ಷಯದ ಬಂಧನದಲ್ಲಿ “ಬಳ್ಳಾರಿ ರಿಪಬ್ಲಿಕ್” ರಾಜಕಾರಣ
Next Article ಎಸ್ ಎಸ್ ಹಿರೇಮಠ ಎಸ್ ಎಸ್ ಹಿರೇಮಠ ಎಂಬ ಕ್ರಾಂತಿಕಾರಿ ಮೇಷ್ಟ್ರು ನೆನೆಯುತ್ತಾ……

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Viraktamatha : ಬಸವಣ್ಣನವರು ಇಂದಿಗೂ ನಮ್ಮ ನಡುವೆ ಜೀವಂತ :   ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davanagere) :  ಕಲ್ಯಾಣ ಎಂದರೆ ಒಳಿತು ಎಂದರ್ಥ. ಬದುಕಿನಲ್ಲಿ ಒಳಿತನ್ನು ಸಾಧನೆ ಮಾಡುವುದೇ ನಿಜವಾದ ಕಲ್ಯಾಣವಾಗಿದೆ. ಸರ್ವರಿಗೂ ಒಳಿತನ್ನು ಬಯಸಿ…

By Dinamaana Kannada News

ತ್ಯಾಗ, ಬಲಿದಾನಗಳು ನಮ್ಮ ಜೀವನಕ್ಕೆ ಮಾದರಿ

ಹರಿಹರ: ಭಗವಾನ್ ಯೇಸು ಕ್ರಿಸ್ತನ ಸ್ಮರಣೆಯ ಶುಭ ಶುಕ್ರವಾರದ ಆಚರಣೆಯನ್ನು ನಗರದ ಆರೋಗ್ಯಮಾತೆ ಬಸಿಲಿಕ ಪುಣ್ಯಕ್ಷೇತ್ರ ಚರ್ಚ್‌ನಲ್ಲಿ ಭಕ್ತಿ ಹಾಗೂ…

By Dinamaana Kannada News

ರೂ.1,41 ಕೋಟಿ ಮೌಲ್ಯದಷ್ಟು ನಗದು, ವಿವಿಧ ವಸ್ತುಗಳು ವಶಕ್ಕೆ

ದಾವಣಗೆರೆ,ಏಪ್ರಿಲ್.03 : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮಾರ್ಚ್ 16 ರಿಂದ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾರ್ಚ್ 16 ರಿಂದ ಏಪ್ರಿಲ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?