Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಂತ್ರಜ್ಞಾನ > ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು  
ತಂತ್ರಜ್ಞಾನ

ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು  

Dinamaana Kannada News
Last updated: March 11, 2024 5:09 am
Dinamaana Kannada News
Share
cm siddaramaya
ಸಿಎಂ ಸಿದ್ದರಾಮಯ್ಯ
SHARE

ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು” ಎಂದು ಸಂಸದ ಅನಂತ್‍ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ.

ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ. ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. “ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ” ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟ.

ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದೆ ಇದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತುಹಾಕಬೇಕು. ಅವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ.

ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯ ಇಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು.

 

TAGGED:CM SiddaramaiahDavangere NewsDinamana.comದಾವಣಗೆರೆ ಸುದ್ದಿದಿನಮಾನ.ಕಾಂಸಿಎಂ ಸಿದ್ದರಾಮಯ್ಯ
Share This Article
Twitter Email Copy Link Print
Previous Article cm siddaramaya ದೇವೇಗೌಡರು ಮೋದಿ ಹೊಗಳುತ್ತಿರುವುದು ಆಶ್ಚರ್ಯ : ಸಿಎಂ
Next Article siddaramaya ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಗ್ಯಾರಂಟಿ ಯೋಜನೆಗಳ ಹಕ್ಕುದಾರರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌

ದಾವಣಗೆರೆ (Davanagere) : ಹಳೇಬೇರು, ಹೊಸಚಿಗರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

By Dinamaana Kannada News

ಸೊಂಡೂರಿನ  ಮಳೆ!

ಊರಿನ ರಮ್ಯ , ಆಹ್ಲಾದಕರ ನಿಸರ್ಗವನ್ನು ಕಂಡು "ಸುಂದರಪುರ"ಎಂದು ವರ್ಣಿಸಿದ್ದಕ್ಕೆ ಸೊಂಡೂರು ಎಂದು ಹೆಸರಾಯಿತೆಂದು ಹೇಳುವವರು ಇದ್ದಾರೆ. ರಾಜಮಹಾರಾಜರನ್ನು ಮೆಚ್ಚಿಸಲಿಕ್ಕೆ…

By Dinamaana Kannada News

Political analysis | ಸಿದ್ಧು ಗೂಢಚಾರರ ರಹಸ್ಯ ಸಂದೇಶ

Kannada News | Dinamaana.com | 30-09-2024 ಕಳೆದ ಗುರುವಾರ ಬಿಜೆಪಿಯ ಹಿರಿಯ ನಾಯಕ ಕಟ್ಟಾಸುಬ್ರಮಣ್ಯ ನಾಯ್ಡು ಅವರ ಸದಾಶಿವನಗರ …

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?