Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B
ಸಿನಿಮಾಸಿನಿಮಾ

Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B

Dinamaana Kannada News
Last updated: February 28, 2025 5:03 am
Dinamaana Kannada News
Share
Colors Kannada - Bhargavi LL. B
Colors Kannada - Bhargavi LL. B
SHARE
ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ “ ‘ಭಾರ್ಗವಿ LL. B.’  ಅನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹುನಿರೀಕ್ಷಿತ ಧಾರಾವಾಹಿ ಮಾರ್ಚ್ 3 ರಿಂದ ಸೋಮವಾರದಿಂದ – ಶುಕ್ರವಾರ ರಾತ್ರಿ 8.30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.
ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು ಬಲಿಷ್ಠ ವಕೀಲ ಜಯಪ್ರಕಾಶ್ ಪಾಟೀಲ್ ನಡುವಿನ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ಹೇಳುತ್ತದೆ. ಭಾರ್ಗವಿಯ ಲಾಯರ್ ತಂದೆಯನ್ನು ಕೋರ್ಟಿನಲ್ಲಿ ಹೀನಾಯವಾಗಿ ಅವಮಾನಿಸಿ ತಲೆ ತಗ್ಗಿಸುವ ಹಾಗೆ ಮಾಡಿ ವಕೀಲಿಕೆಯನ್ನೇ ತ್ಯಜಿಸುವಂತೆ ಮಾಡಿದವನು ಜೆ.ಪಿ. ಪಾಟೀಲ್. ತನ್ನ ವೃತ್ತಿಜೀವನದಲ್ಲಿ ಒಂದೇ ಒಂದು ಸೋಲು ಕಾಣದ, ಗೆಲ್ಲಲು ಯಾವುದೇ ಕಾನೂನನ್ನು ಮುರಿಯುವ ಅವನಿಗೆ ವಕೀಲಿಕೆ ಎಂದರೆ ಅಧಿಕಾರ, ಪ್ರಭಾವ ಮತ್ತು ನಿಯಂತ್ರಕ ಶಕ್ತಿ.
ಇದರ ತದ್ವಿರುದ್ಧ ಭಾರ್ಗವಿ. ನ್ಯಾಯ ದೊರಕಿಸಿ ಕೊಡಬೇಕಾದ ಸಂಧರ್ಭ ಬಂದಾಗ ಅವಳು ಯಾರನ್ನಾದರೂ ಎದುರಿಸಬಲ್ಲವಳು. ಅಧಿಕಾರ, ಹಣ, ಪ್ರಭಾವ ಇದ್ಯಾವುದಕ್ಕೂ ಕಿಂಚಿತ್ತೂ ಬೆಲೆ ಕೊಡದ ಅವಳು ನ್ಯಾಯಪರ, ಯಾರಿಗೂ ಹೆದರದ ದಿಟ್ಟ ಯುವತಿ. ತನ್ನ ಪ್ರೀತಿಯ ಅಪ್ಪ ಅಮ್ಮ ಮತ್ತು ತನ್ನ ಪುಟ್ಟ ಕುಟುಂಬವೇ ಅವಳ ಜೀವನ. ಭಾರ್ಗವಿಯ ಅಪ್ಪ ರವೀಂದ್ರ ಭಟ್ಕಳ್ ಕೂಡಾ ವಕೀಲನಾಗಿದ್ದು ವೃತ್ತಿಯಲ್ಲಿ ಯಶಸ್ಸು ಕಂಡಿರುವುದಿಲ್ಲ. ಮಗಳ ಕನಸಿಗೆ ತಂದೆ ಪೂರ್ತಿಯಾಗಿ ಬೆಂಬಲ ನೀಡಿದರೂ ಅಮ್ಮನಿಗೆ ಮಾತ್ರ ಲಾಯರ್ ವೃತ್ತಿ ಅನಗತ್ಯ ತೊಂದರೆಗಳನ್ನು ತರಬಹುದು ಎಂಬ ಆತಂಕ. ಮದುವೆಯಾಗಿ ಅವಳು ಸುಖವಾಗಿದ್ದರೆ ಸಾಕು ಅನ್ನುವುದು ಅಮ್ಮನ ಬಯಕೆ.
ಭಾರ್ಗವಿಯ ಜೀವನ ಅನಿರೀಕ್ಷಿತ ತಿರುವು ಪಡೆಯುವುದು ಅವಳು, ಜೆಪಿ ಪಾಟೀಲ್ ನ ಮಗ ಅರ್ಜುನ್ ಪಾಟೀಲ್ ನನ್ನು ಭೇಟಿ ಮಾಡಿದಾಗ. ಶ್ರೀಮಂತ ಕುಟುಂಬದಲ್ಲಿ  ಬೆಳೆದರೂ ಸಹೃದಯಿಯಾಗಿರುವ ಅರ್ಜುನ್ ಭಾರ್ಗವಿಯನ್ನು ಮೊದಲ ನೋಟದಲ್ಲೇ ಪ್ರೀತಿಸುತ್ತಾನೆ. ತನ್ನ ತಂದೆ ವಿರುದ್ಧ ಹೋರಾಟ ಮಾಡುತ್ತಿರುವ ವಕೀಲೆ ಎಂಬ ಅರಿವಿರದ ಅರ್ಜುನ್ ಭಾರ್ಗವಿಗೆ ಹತ್ತಿರವಾಗುತ್ತಾನೆ.
ಇಂಥ ಸನ್ನಿವೇಶದಲ್ಲಿ ತನ್ನ ತಂದೆಯ ಗೌರವವನ್ನು ಮರಳಿ ಗಳಿಸಲು ಮತ್ತು ಅನ್ಯಾಯದ ವಿರುದ್ಧ ಹೋರಾಡಿ ಗೆಲ್ಲಲು ಭಾರ್ಗವಿ ಯಶಸ್ವಿಯಾಗುತ್ತಾಳಾ ಎನ್ನುವುದು ‘ಭಾರ್ಗವಿ LL.B.’ಯ ಮುಖ್ಯ ಕಥಾಹಂದರವಾಗಿದೆ.
‘ಭಾರ್ಗವಿ LL. B.’ -ಸಾಮಾಜಿಕ ಸಂಘರ್ಷ ಮತ್ತು ಕೌಟುಂಬಿಕ ಕಥನ ಹೊಂದಿರುವ ಅತ್ಯಂತ ಶಕ್ತಿಶಾಲಿಯಾಗಿ ನಿರೂಪಿತವಾಗಿರುವ ಎಲ್ಲರೂ ನೋಡಲೇಬೇಕಾದ ಧಾರಾವಾಹಿಯಾಗಿದೆ.
ದಿಟ್ಟ ಭಾರ್ಗವಿ ಪಾತ್ರದಲ್ಲಿ ರಾಧಾ ಭಗವತಿ, ಅರ್ಜುನ್ ಪಾಟೀಲ್ ಪಾತ್ರದಲ್ಲಿ ಮನೋಜ್ ಕುಮಾರ್ ಕನ್ನಡ ಟೆಲಿವಿಶನ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.  ಜೆಪಿ ಪಾಟೀಲ್ ಪಾತ್ರದಲ್ಲಿ ರಂಗಭೂಮಿಯ ಪ್ರಸಿದ್ಧ ಕಲಾವಿದ ಕೀರ್ತಿ ಭಾನು, ಹಾಗೂ ಕನ್ನಡದ ಖ್ಯಾತ ಕಲಾವಿದರಾದ ಅರುಣಾ ಬಾಲರಾಜ್,  ಹನುಮಂತೇ ಗೌಡ,  ಸುಜಾತಾ ಅಕ್ಷಯ, ‘ಮಾಯಾಬಜಾರ್’ ಖಾತಿಯ ಚೈತ್ರಾ ರಾವ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
‘ಅಂತರಪಟ’ ಧಾರಾವಾಹಿ ಮೂಲಕ ಶಕ್ತಿಶಾಲಿ ಮಹಿಳಾ ಪಾತ್ರ ಗಳನ್ನು ತೆರೆಗೆ ತಂದವರು ನಿರ್ಮಾಪಕಿ ಸ್ವಪ್ನ ಕೃಷ್ಣ,   ‘ಭಾರ್ಗವಿ LL.B.’ ಮೂಲಕ ಮತ್ತೊಂದು ಮಹಿಳಾ ಪ್ರಧಾನ ಧಾರಾವಾಹಿಯನ್ನು ಮುಂದಿಡುತ್ತಿದ್ದಾರೆ.
“ಮುಂಗಾರು ಮಳೆ” ಕೃಷ್ಣ ಈ ಶೋಗೆ ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಸಂಗೀತ ರಚನೆ ಮತ್ತು ಗಾಯನ ಶಶಾಂಕ್ ಶೇಷಗಿರಿ ಅವರದು, ಹಾಗೂ ಪ್ರಮೋದ ಮರವಂತೆ ಮನಸಿಗೆ ಮುಟ್ಟುವಂತಹ ಸಾಹಿತ್ಯ ರಚಿಸಿದ್ದಾರೆ. ಯಾರಿಗೂ ಹೆದರದ, ಅನ್ಯಾಯಕ್ಕೆ ತಲೆ ಬಾಗದ, ನ್ಯಾಯದ ಹಾದಿಯಲ್ಲಿ ತನ್ನ ತಂದೆಯ ಗೌರವ ಮರಳಿಗಳಿಸಲು ತನ್ನದೇ ಛಾಪು ಮೂಡಿಸಬೇಕು ಅನ್ನುವ  ಭಾರ್ಗವಿ LL.B.’ ಯು
ಅತ್ಯಂತ ಬಿಗಿಯಾದ ನಿರೂಪಣೆ ಮತ್ತು ಪ್ರಬಲ ತಾರಾಗಣದಿಂದ ಜನರಿಗೆ ಅತ್ಯಂತ ಆಪ್ತವಾಗುವ ಧಾರಾವಾಹಿ.
ಮಾರ್ಚ್ 3 ರಿಂದ ಸೋಮವಾರ-ಶುಕ್ರವಾರ ರಾತ್ರಿ 8:30ಕ್ಕೆ  ಕಲರ್ಸ್ ಕನ್ನಡದಲ್ಲಿ  ನ್ಯಾಯಕ್ಕಾಗಿ ಹೋರಾಡುವ ದಿಟ್ಟ  ‘ಭಾರ್ಗವಿ ‘LL.B.’ಯ ಸ್ವಾಭಿಮಾನದ ಸಂಘರ್ಷದ ಕತೆ  ತಪ್ಪದೆ ನೋಡಿ!
Read also : Davanagere | ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article ಜಿಲ್ಲಾ ಉಸ್ತುವಾರಿ ಎಸ್.ಎಸ್ ಮಲ್ಲಿಕಾರ್ಜುನ್ Davanagere | ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
Next Article dr.prabha mallikarajuan davanagere Davanagere | ನೊಂದವರ ನೆಚ್ಚಿನ ಅಧಿಕಾರಿಗಳಾಗಿ : ಸಂಸದರ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

ದಾವಣಗೆರೆ (Davanagere):  ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪೇನಿಲ್ಲ ಎಂದಿರುವ ಮಾಜಿ ಡಿಸಿಎಂ, ಹಾಲಿ ಸಂಸದ ಗೋವಿಂದ ಕಾರಜೋಳ ನಿಲುವು…

By Dinamaana Kannada News

ಫೋಟೋಗ್ರಫಿ ವಿಡಿಯೋಗ್ರಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜು.26:   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ…

By Dinamaana Kannada News

ಅಂಕು, ಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರ

ಹರಿಹರ: ಲೇಖನಿಯು ಖಡ್ಗಕ್ಕಿಂತ ಹರಿತ ಎಂಬ ಗಾದೆ ಮಾತಿನಂತೆ ಚುಕುಟು ಕವನಗಳು ಸಾಹಿತ್ಯ ಕ್ಷೇತ್ರದ ಪ್ರಭಾವಿ ಪ್ರಕಾರವಾಗಿದೆ ಎಂದು ಸಾಹಿತಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?