Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ
ತಾಜಾ ಸುದ್ದಿ

New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ

Dinamaana Kannada News
Last updated: January 26, 2025 6:31 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere): ಕಲರ್ಸ್‌ ಕನ್ನಡ ಚಾನೆಲ್‌ನಲ್ಲಿ ‘ವಧು’ ಮತ್ತು ‘ಯಜಮಾನ’ ಹೊಸ ಎರಡು ಧಾರಾವಾಹಿಗಳು  ದೈನಿಕ ಜ. 27 ರಿಂದ ಪ್ರಾರಂಭವಾಗಲಿವೆ. ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ.

ವಧು : ‘ವಧು’ ಒಬ್ಬ ಅವಿವಾಹಿತೆ,  ವೃತ್ತಿಯಲ್ಲಿ ಡಿವೋರ್ಸ್ ಲಾಯರ್.  ಗಂಡ- ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು ಮಾಡುತ್ತದೆ.

ಮೋಸ್ಟ್  ಸಕ್ಸಸ್ ಫುಲ್  ಬ್ಯುಸಿನೆಸ್ ಮ್ಯಾನ್  ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು (ಟರ್ನ್) ಪಡೆಯುತ್ತದೆ.   ಈ ಕೇಸನ್ನು ವಧು ಸರಿಯಾಗಿ ನಿಭಾಯಿಸುತ್ತಾಳಾ? ಪ್ರೀತಿ ಮತ್ತು ಬದ್ಧತೆಗಳ ಬಗೆಗಿನ ಅವಳ ನಿಲುವುಗಳನ್ನು ಈ ಕೇಸ್ ಬದಲಾಯಿಸುತ್ತಾ ಅನ್ನುವುದೇ ಕತೆಯನ್ನು ಮುನ್ನೆಡೆಸುವ ಎಳೆ. ವಿನಯಾ ಪ್ರಸಾದ್, ಸುಧಾ ಬೆಳವಾಡಿ, ರವಿ ಭಟ್, ರವಿ ಕುಮಾರ್ ಮತ್ತು ರೇಖಾ ಸಾಗರ್ ಅವರು ಅಭಿನಹಿಸಿದ್ದಾರೆ. ಸಾರ್ಥಕ್ ಪಾತ್ರದಲ್ಲಿ ಲಕ್ಷಣ ಧಾರಾವಾಹಿಯ ಅಭಿಷೇಕ್‌ ಶ್ರೀಕಾಂತ್, ವಧು ಪಾತ್ರದಲ್ಲಿ ದುರ್ಗಾಶ್ರೀ ಮತ್ತು ಪ್ರಿಯಾಂಕಾ  ಪಾತ್ರದಲ್ಲಿ  ಸೋನಿ ಮುಲೇವಾ ನಟಿಸಲಿದ್ದಾರೆ.

ಯಜಮಾನ :  ಸರಳ ವ್ಯಕ್ತಿ ರಘುಗೆ ತನ್ನ ಕುಟುಂಬದ ಪ್ರೀತಿ ಗಳಿಸುವ ಮಹದಾಸೆ. ಝಾನ್ಸಿ ಹಾಗಲ್ಲ. ತಾತನ ಮಡಿಲಲ್ಲಿ ಬೆಳೆದ ಈಕೆ ಗಂಡಸರನ್ನು ದ್ವೇಷಿಸುವ ಹಠಮಾರಿ ಹುಡುಗಿ. ವಿಧಿ ಇವರಿಬ್ಬರನ್ನೂ ಒಂದು ಮದುವೆಯ ರೂಪದಲ್ಲಿ ಹತ್ತಿರ ತರುತ್ತದೆ. ತನ್ನ ಕಷ್ಟದಲ್ಲಿರುವ ಕುಟುಂಬದ ಒಳಿತಿಗೆ ಈ ಮದುವೆ ದಾರಿಯಾದೀತೆಂದು ರಘು ಮದುವೆಗೆ ಒಪ್ಪುತ್ತಾನೆ. ಮದುವೆಯ ನಂತರ ಅನೇಕ ತಿರುವುಗಳು ಬಂದು ಕತೆಯನ್ನು ಮತ್ತೆಲ್ಲಿಗೋ ಸೆಳೆದೊಯ್ಯುತ್ತವೆ. ರಘು ಮತ್ತು ಝಾನ್ಸಿ ತಮ್ಮ ವ್ಯಕ್ತಿತ್ವದಲ್ಲಿರುವ ಭಿನ್ನತೆಯನ್ನು ಎದುರಿಸಬೇಕಾಗುತ್ತದೆ. ಅನುಕೂಲಕ್ಕೆಂದು ಆರಂಭವಾದ ಅವರಿಬ್ಬರ ಸಂಬಂಧ ಈಗ ಗಾಢವಾಗುತ್ತಾ ಬೆಳೆದರೂ ಯಾವುದೇ ಕ್ಷಣದಲ್ಲೂ ಒಡೆದುಹೋಗುವ ಭಯ ಹುಟ್ಟಿಸುತ್ತದೆ.

ಪ್ರೀತಿ, ಮಹತ್ವಾಕಾಂಕ್ಷೆ ಮತ್ತು ಸ್ವಾರ್ಥದ ಆಟ ‘ಯಜಮಾನ’ದ ಕತೆಯನ್ನು ಬೆಳೆಸುತ್ತಾ ಹೋಗುವ ತಂತು. ರಘು ಮತ್ತು ಝಾನ್ಸಿ ಎಂದಾದರೂ ಬದುಕು ತಮಗೆ ಒಡ್ಡುವ ಸವಾಲುಗಳನ್ನು ಗೆಲ್ಲುತ್ತಾರಾ? ಅಥವಾ ಅವರ ವ್ಯಕ್ತಿತ್ವದಲ್ಲಿರುವ ಭಿನ್ನತೆಯೇ ಅವರನ್ನು ದೂರಾಗಿಸುತ್ತದೆಯಾ? ಉತ್ತರಕ್ಕೆ ಸಂಚಿಕೆಗಳನ್ನು ಕಾದು ನೋಡಬೇಕು.

ಹೊಸ ಮುಖಗಳಾದ ಹರ್ಷ ಬಿ. ಎಸ್. ಮತ್ತು ಮಧುಶ್ರೀ ಭೈರಪ್ಪ ‘ಯಜಮಾನ’ದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಅವರಿಗೆ ಬೆಂಬಲವಾಗಿ ರಮೇಶ್ ಭಟ್, ನಾಗಾಭರಣ, ಮಂಜುಳ, ಅಂಕಿತಾ ಜೈರಾಮ್, ತಿಲಕ್, ಸ್ಪೂರ್ತಿ, ಪ್ರದೀಪ್ ಮತ್ತು ವಿಶ್ವ ಇಲ್ಲಿದ್ದಾರೆ.

New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere SC -ST ಅಭ್ಯರ್ಥಿಗಗಳಿಂದ ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Next Article Benagalore ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

ದಾವಣಗೆರೆ (Davangere district )  : ತತ್ವ - ಸತ್ವ ಮಹತ್ವಗಳ ಸಂಗಮವೇ ವಚನ ಶಾಸ್ತ್ರ ಸಾರ ಎಂದು ಭೋವಿ…

By Dinamaana Kannada News

ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   

ಮೈಸೂರು ಮಾ 15:   ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ…

By Dinamaana Kannada News

Davanagere | ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ಅತೀ ಹೆಚ್ಚು ಯುವ ಸೇನಾನಿಗಳನ್ನು ದೇಶದ ಗಡಿ ಕಾಯಲು ಕಳುಹಿಸಿರುವ ಗ್ರಾಮದಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡುತ್ತಿರುವುದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?