Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಾಲಾ ಸಬಲೀಕರಣ ಸಮಿತಿಯ ವರದಿ ಯಥಾವತ್ತಾಗಿ ಜಾರಿಗೆ ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯ
ತಾಜಾ ಸುದ್ದಿ

ಶಾಲಾ ಸಬಲೀಕರಣ ಸಮಿತಿಯ ವರದಿ ಯಥಾವತ್ತಾಗಿ ಜಾರಿಗೆ ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯ

Dinamaana Kannada News
Last updated: January 3, 2025 5:00 pm
Dinamaana Kannada News
Share
Davangere
Davangere
SHARE

ದಾವಣಗೆರೆ (Davangere):  ಪ್ರೊ. ಎಸ್ ಜಿ ಸಿದ್ಧರಾಮಯ್ಯ ನೇತೃತ್ವದ ಶಾಲಾ ಸಬಲೀಕರಣ ಸಮಿತಿಯ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ  ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಎ.ಡಿ.ಈಶ್ವರಪ್ಪ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  “2016ರಲ್ಲಿ ಸರ್ಕಾರ ಸ್ಥಾಪಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ. ಎಸ್‌ಜಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರಿ ಶಾಲಾ ಸಬಲೀಕರಣ ಸಮಿತಿಯು ರಾಜ್ಯದ ಹಲವಾರು ಕಡೆ ಶಿಕ್ಷಣದ ಅಧ್ಯಯನ ಮಾಡಿ, ಕ್ಷೇತ್ರಾಧ್ಯಯನ ಮಾಡುತ್ತಿರುವ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉಸ್ತುವಾರಿ ನಡೆಸುತ್ತಿರುವ ಅಧಿಕಾರಿಗಳಿಂದ ಅಂಕಿ ಅಂಶಗಳನ್ನು ಸಂಗ್ರಹಿಸಿ ಸರ್ಕಾರಿ ಶಾಲೆಗಳ ಸಮಗ್ರ ಮಾಹಿತಿ ಕಲೆ ಹಾಕಿದೆ. ಎಲ್ಲ ಮಕ್ಕಳು ತಮ್ಮ ಪರಿಸರದಲ್ಲಿಯೇ ಗುಣಾತ್ಮಕ, ನೈತಿಕ, ಉತ್ತಮ ಶಿಕ್ಷಣ ಪಡೆಯಲು ಈ ಸಮಿತಿ ಹೊಸ ಶೈಕ್ಷಣಿಕ ವ್ಯವಸ್ಥೆಯನ್ನು ವರದಿಯಲ್ಲಿ ಶಿಫಾರಸು ಮಾಡಿದೆ. ಆದರೆ ಎರಡು ಸರ್ಕಾರಗಳು ಬದಲಾದರೂ ಇದುವರೆಗೂ ಶಾಲಾ ಸಬಲೀಕರಣ ಸಮಿತಿಯ ವರದಿ ಜಾರಿಯಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಾಗಾಗಿ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತಮ್ಮ ಹಿಂದಿನ ಅವಧಿಯಲ್ಲಿ ರಚಿಸಲಾಗಿದ್ದ ಪ್ರೊ. ಎಸ್ ಜಿ ಸಿದ್ದರಾಮಯ್ಯನವರ ನೇತೃತ್ವದ ಶಾಲಾ ಸಬಲೀಕರಣ ಸಮಿತಿಯ ವರದಿಯನ್ನು ಜಾರಿಗೊಳಿಸಬೇಕು.  ಶಾಲಾ-ಕಾಲೇಜುಗಳ ಹತ್ತಿರ ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿದ್ದು, ಈ ತಂಬಾಕು ಮಾರಾಟ ಮತ್ತು ಉತ್ಪನ್ನವನ್ನು ಕಡ್ಡಾಯವಾಗಿ ತಡೆಗಟ್ಟಲು ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದರು.

“ಸರ್ಕಾರದಿಂದ ಪ. ಜಾತಿ, ಪ.ಪಂಗಡದ ಜನರಿಗೆ ನೀಡಲಾಗುವ ಜಮೀನುಗಳನ್ನು ಸಮುದಾಯ ಅನಕ್ಷರತೆ ಮತ್ತು ಬಡತನವನ್ನು ದುರುಪಯೋಗಪಡಿಸಿಕೊಂಡು ಇವರಿಂದ ಭೂಮಿಯನ್ನು ಖರೀದಿಸಿದ್ದು, ಬಾಧೆಗೆ ಒಳಗಾದ ಸಮುದಾಯಗಳಿಗೆ ಪಿ.ಟಿ.ಸಿ.ಎಲ್. ಕಾಯ್ದೆಯಡಿ ಮಾರಾಟ ಮಾಡಿದ ಜಮೀನನ್ನು ಸರ್ಕಾರ ಸ್ವಾಧೀನಪಡಿಸಿಕೊಂಡು ಮೂಲ ಮಂಜೂರಿದಾರರು ಅಥವಾ ಅವರ ವಾರಸುದಾರರಿಗೆ ಭೂಮಿಯ ಹಕ್ಕನ್ನು  ಮರುಸ್ಥಾಪಿಸುವ ಕುರಿತು ಪಿ.ಟಿ.ಸಿ.ಎಲ್.ಕಾಯ್ದೆಗೆ ಸೂಕ್ತ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.

“ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಬಹುತೇಕ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಲು ಕ್ರಮವನ್ನು ವಹಿಸಬೇಕು” ಎಂದು ಮನವಿ ಮಾಡಿದರು.

ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಎಂ.ಲಿಂಗರಾಜು ಗಾಂಧಿನಗರ ಮಾತನಾಡಿ “ಎಸ್ ಜಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರಿ ಶಾಲಾಸಬಲೀಕರಣ ಸಮಿತಿಯ ಎಲ್ಲಾ 21 ಅಂಶಗಳನ್ನು ಜಾರಿಗೊಳಿಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂದು ಒತ್ತಾಯಿಸಿ ಇದೇ 5ರಂದು ದಾವಣಗೆರೆಗೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಗುವುದು” ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್.ಕೆ.ಕೃಷ್ಣಪ್ಪ ಅರಕೆರೆ, ಶಿವಮೂರ್ತಿ ರಾಂಪುರ, ಧನಿಕ ತಿಮ್ಮೇನಹಳ್ಳಿ, ರಾಕೇಶ್ ಕಕ್ಕರಗೊಳ್ಳ, ತಿಪ್ಪೇಶ, ಸಿದ್ದಪ್ಪ,  ಕೆ.ಮಹಮ್ಮದ್ ಹನೀಫ್, ಎ.ಹಾಲೇಶ್ ಕಕ್ಕರಗೊಳ್ಳ, ಕೆ.ಹೆಚ್.ರಾಜು, ರಮೇಶ್ ನಾಯ್ಕ ಇತರರು ಇದ್ದರು.

Read also : ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ
Next Article Karnataka Dalit Sangharsa Samiti Harihar ಮಣ್ಣು ಗಣಿಗಾರಿಕೆ : ಪ್ರಾಣ ಹಾನಿಯಾದರೆ ಅಧಿಕಾರಿಗಳೇ ಹೊಣೆಗಾರರನ್ನಾಗಿಸಿ : ಡಿಎಸ್‌ಎಸ್‌

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ : ಡಿಸಿ

ದಾವಣಗೆರೆ ಡಿ.23  (Davanagere):  ಪ.ಜಾತಿ ಮತ್ತು ಪ.ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ತ್ವರಿತ ಕ್ರಮದ ಜೊತೆಗೆ ಸರ್ಕಾರದಿಂದ…

By Dinamaana Kannada News

Davanagere | ಅ.26, 27 ರಂದು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ  (Davanagere):  ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅ. 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ…

By Dinamaana Kannada News

Davanagere news | ಪಾದಯಾತ್ರೆ ಕೂಡಾ ಯೋಗದ ಒಂದು ಭಾಗ: ಬಸವಪ್ರಭು ಶ್ರೀ

ದಾವಣಗೆರೆ, ಸೆ. 1, (Davangere District)  : ನಡಿಗೆ, ಯೋಗ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ, ಇದರೊಂದಿಗೆ ನಿತ್ಯ ನಡಿಗೆ, ಪಾದಯಾತ್ರೆ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?