Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

Dinamaana Kannada News
Last updated: October 28, 2025 4:01 pm
Dinamaana Kannada News
Share
Davanagere
SHARE

ದಾವಣಗೆರೆ  ಅ.28 : ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು, ಇದು ಸಂಸ್ಥೆಗಳ ಶಕ್ತಿಯನ್ನು ಕುಗ್ಗಿಸುವ ಜೊತೆಗೆ ಜನರ ವಿಶ್ವಾಸವನ್ನು ಹಾಳುಮಾಡುವುದು ಮತ್ತು ನ್ಯಾಯದ ತತ್ವವನ್ನ ದುರ್ಬಲಗೊಳಿಸುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ವೇಲಾ ಡಿ.ಕೆ ಹೇಳಿದರು.

ಜಿಲ್ಲಾಡಳಿತ, ಕಾನೂನು ಸೇವಾ ಪ್ರಾಧಿಕಾರ ಮತ್ತು ಲೋಕಯುಕ್ತಾ ಘಟಕ ದಾವಣಗೆರೆ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾಡಳಿತ ಕಚೇರಿಯ ತುಂಗಭದ್ರ ಸಭಾಂಗಣಲ್ಲಿ ಏರ್ಪಡಿಸಲಾದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಕೇವಲ ಭ್ರಷ್ಟಾಚಾರ ವಿರೋಧ ಕ್ರಮಗಳ ವಿಷಯವಲ್ಲ, ಅದು ಪ್ರತಿಯೊಬ್ಬ ಅಧಿಕಾರಿಯ ನೈತಿಕ ಬದ್ದತೆಯ ವಿಷಯವಾಗಿದೆ. ಗ್ರಾಮ ಪಂಚಾಯತಿ ಮಟ್ಟದಿಂದ ಆರಂಭವಾದ ಭ್ರಷ್ಟಾಚಾರ ತಹಶೀಲ್ದಾರ್ ಕಚೇರಿ, ಪೊಲೀಸ್ ಇಲಾಖೆ ಹೀಗೆ ವಿವಿಧ ಇಲಾಖೆಗಳ ಕಚೇರಿಗಳಿಂದ ಹಿಡಿದು ಉಪ ಆಯುಕ್ತರ ಕಚೇರಿವರೆಗೂ ತಲುಪಬಹುದು.

ಯಾವುದೇ ಒಬ್ಬ ಅಧಿಕಾರಿ ಒಂದು ಸಣ್ಣ ಪ್ರಮಾಣದ ಕರ್ತವ್ಯವನ್ನು ಸರಿಯಾದ ರೀತಿಯಲ್ಲಿ ಮಾಡದಿದ್ದಲ್ಲಿ, ಅಂತಹ ಕೃತ್ಯವು ಜನರ ಮನಸಲ್ಲಿ ಬಹುದೊಡ್ಡ ಪರಿಣಾಮ ಉಂಟು ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಪ್ರತಿ ನಾಗರಿಕನಿಗೂ ಸತ್ಯ, ನಿಷ್ಠೆ, ಪ್ರಾಮಾಣಿಕತೆಯಿಂದ ವಿಳಂಬ ಮಾಡದೇ, ಅಕ್ರಮವಾದ ಬೇಡಿಕೆಗಳಿಲ್ಲದೇ ಸೇವೆ ಪಡೆಯುವ ಹಕ್ಕಿದೆ. ಆದ್ದರಿಂದ ಅಧಿಕಾರಿಗಳು ತಮ್ಮ ಹಕ್ಕುಗಳನ್ನು ಮಾರಿಕೊಂಡು ಅವರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದರು.

ಸರ್ಕಾರಿ ಕಚೇರಿಗಳಲ್ಲಿ ವಿವಿಧ  ಕಾರಣಗಳಿಂದ ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯ, ಕೆಲಸಗಳು ಸಕಾಲದಲ್ಲಿ ದೊರೆಯದೇ ವಿಳಂಬವಾಗುತ್ತಿವೆ. ಅಧಿಕಾರಿಗಳು ಜನರ ವಿಶ್ವಾಸ, ಜನರನ್ನು ರಕ್ಷಿಸುವ ಕಾರ್ಯ ಮಾಡಬೇಕು. ಸಾರ್ವಜನಿಕರು ಕಚೇರಿಗಳಿಗೆ ಕಡತ, ದಾಖಲೆಗಳು ಇನ್ನಿತರೆ ಸೇವೆಗಾಗಿ ಅರಸಿ ಬಂದಾಗ ವಿಳಂಬ ಮಾಡದೇ ಜವಾಬ್ದಾರಿಯುತ ವ್ಯಕ್ತಿಗಳಾಗಿ ಸೇವೆ ನೀಡಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ನಾವೆಲ್ಲರೂ ಭ್ರಷ್ಟಾಚಾರ ಮುಕ್ತ ಜಿಲ್ಲೆಯನ್ನಾಗಿಸಲು ಪಣತೊಡೋಣ ಎಂದರು.

Read also : ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

ಜಿಲ್ಲಾಧಿಕಾರಿ ಜಿ‌.ಎಂ ಗಂಗಾಧರವಾಸ್ವಾಮಿ ಮಾತನಾಡಿ, ಯಾವುದೇ ಇಲಾಖೆ ಅಧಿಕಾರಿಗಳು ಅವತ್ತಿನ ಕೆಲಸ ಅವತ್ತೇ ಮುಗಿಸುವ ಪ್ರಯತ್ನ ಮಾಡಬೇಕು. ಇದಕ್ಕೆ ಸರ್ಕಾರದ ಅಧೀನದಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬರೂ ಕಟಿ ಬದ್ಧರಾಗಿರಬೇಕು. ಇದರಿಂದ ಕೆಲಸಗಳು ತಂತಾನೆ ಪ್ರಗತಿಯಾಗುತ್ತವೆ. ಸಾರ್ವಜನಿಕರು ಕಚೇರಿಗಳಿಗೆ ಬಂದಾಗ ಆರಿಕೆಯ ಉತ್ತರ ನೀಡುವ ಮೂಲಕ ಸರ್ವಾಧಿಕಾರಿಗಳಂತೆ ವರ್ತಿಸಬಾರದು.

ಅವರೊಂದಿಗೆ ಸೌಮ್ಯಯು ತ ಹಾಗೂ ಸೌಜನ್ಯದಿಂದ ವರ್ತಿಸಬೇಕು. ಇಲ್ಲಿ ಜನಪ್ರತಿನಿಧೀಗಳು, ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಹೀಗೆ ಎಲ್ಲರನ್ನೂ ಒಳಗೊಂಡ ಪ್ರಜಾಪ್ರಭುತ್ವವೇ ಆಡಳಿತ. ಎಲ್ಲರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಯಾವುದೇ ತಪ್ಪುಗಳು ಆಗುವುದಿಲ್ಲ. ಈ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಕಾರ್ಯಕ್ರಮಕ್ಕೆ ಅರ್ಥ ಸಿಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್  ಅಧೀಕ್ಷಕ ಎಂ.ಎಸ್.ಕೌಲಾಪುರೆ ಪ್ರತಿಜ್ಞಾವಿಧಿ ಬೋಧಿಸಿದರು.  ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ.ಪಂ. ಸಿಇಓ ಗಿತ್ತೆ ಮಾಧವ ವಿಠಲ ರಾವ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಲಯ ಮಹಾವೀರ ಮ.ಕರೆಣ್ಣವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere News. Dinamana.com. Kannada News. ಕನ್ನಡ ಸುದ್ದಿ. ದಾವಣಗೆರೆ ಜಿಲ್ಲೆ . ದಿನಮಾನ.ಕಾಂ.
Share This Article
Twitter Email Copy Link Print
Previous Article Davanagere crime ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ
Next Article vinaykumara G B ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಡ ಸಾಹಿತಿಗಳ ಬದುಕು ಬವಣೆ:ಅಕ್ಷರ ಲೋಕದ ಆರ್ತನಾದ|ಲೇಖನ : ವಸುಪ್ರಿಯ

ಇಂದಿನ ಎಲ್ಲಾ ಪತ್ರಿಕೆಯಲ್ಲಿ ಒಂದೇ ಸುದ್ದಿ ಹಿರಿಯ ಸಾಹಿತಿ ಹರಿಹರ ಪ್ರಿಯ ಇವರು ತಮಗೆ ದೊರೆತ ಸುಮಾರು 150ಕ್ಕೂ ಹೆಚ್ಚು…

By Dinamaana Kannada News

ಗುರಿ ಸಾಧಿಸಲು ಕ್ರಿಯಾಶೀಲ ಪ್ರಯತ್ನಗಳ ಅವಶ್ಯ

ದಾವಣಗೆರೆ : ಅಭಿವೃದ್ದಿ ಹೊಂದಿದ ಹಾಗೂ ಏಕ ರಾಷ್ಟ್ರ ಮತ್ತು ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಗುರಿಯನ್ನು…

By Dinamaana Kannada News

Davanagere | 8 ತಿಂಗಳಲ್ಲಿ ಒಳ ಮೀಸಲಾತಿ : ಮಾಜಿ ಸಚಿವ ಎಚ್. ಆಂಜನೇಯ

ದಾವಣಗೆರೆ (Davanagere): ಒಳ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಯಾವ ಜಾತಿಯವರು ಎಷ್ಟು ಜನ ಇದ್ದಾರೆ? ಅನ್ನೋ ಬಗ್ಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?