Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime news | ಪೂಜೆ ಸೋಗಿನಲ್ಲಿ ಚಿನ್ನ ದೋಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

Crime news | ಪೂಜೆ ಸೋಗಿನಲ್ಲಿ ಚಿನ್ನ ದೋಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Dinamaana Kannada News
Last updated: February 17, 2025 6:07 am
Dinamaana Kannada News
Share
crime news
crime news
SHARE
ಹರಿಹರ (Harihara): ಮನೆಯಲ್ಲಿ ಆಗಾಗ ತಲೆದೋರುತ್ತಿರುವ ಆರ್ಥಿಕ ಸಮಸ್ಯೆಗೆ ಪೂಜೆಯ ಮೂಲಕ ಪರಿಹರಿಸುತ್ತೇವೆ ಎಂದು ಆರ್ಥಿಕ ಸಂಕಷ್ಟದಿಂದ ನರಳುತ್ತಿರುವವರ ಮನೆಗೆ ಪೂಜಾರ್ಥಿಗಳ ವೇಷದಲ್ಲಿ ಬಂದು ಮನೆಯಲ್ಲಿ ಪೂಜೆ ನಡೆಸುವ ನೆಪದಲ್ಲಿ ಪೂಜೆಗಿಟ್ಟಿದ್ದ ಚಿನ್ನದ ಆಭರಣಗಳನ್ನು ದೋಚಿದ್ದ ಕಳ್ಳರನ್ನು ಬಂಧಿಸಿಸುವಲ್ಲಿ ಇಲ್ಲಿನ ಗ್ರಾಮಾಂತರ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ.
ಇಸ್ಮಾಯಿಲ್ ಜಬಿವುಲ್ಲಾ(30), ಓಡಿಸ್ಸಾ ರಾಜ್ಯದ ಜಗತ್ ಸಿಂಗ್ ಪುರದ ನಿವಾಸಿ ಟೈಲರ್ ಕೆಲಸ ಮಾಡುವ ರುಕ್ಸಾನ ಬೇಗಂ (30)ಬಂಧಿತ ಆರೋಪಿಗಳು.
ಕಳೆದ ೪ ದಿನಗಳ ಹಿಂದೆ ಫೆ.11 ರಂದು ತಾಲೂಕಿನ ಬನ್ನಿಕೊಡು ಗ್ರಾಮದ ಶಶಿಕಲಾ ರಮೇಶ್ ಎಂಬುವವರ ಮನೆಗೆ ಸಂಜೆಯ ಸಮಯದಲ್ಲಿ ಈ ಇಬ್ಬರು ಆರೋಪಿಗಳು, ನಿಮ್ಮ ಮನೆಯಲ್ಲಿ ಪೂಜೆಗೆ ಸಿದ್ಧತೆ ಮಾಡಿಕೊಳ್ಳಿ, ನಿಮ್ಮ ಆರ್ಥಿಕ ಸಮಸ್ಯೆಗೆ ನಾವು ಪರಿಹಾರ ನೀಡುತ್ತೇವೆ. ನಿಮ್ಮ ಮನೆಯಲ್ಲಿರುವ ಬೆಳ್ಳಿ, ಚಿನ್ನಾಭರಣಗಳನ್ನು ಪೂಜೆಯಲ್ಲಿಡಬೇಕೆಂದು ಪೂಜಾರ್ಥಿಗಳ ಸೋಗಿನಲ್ಲಿ ಬಂದು ತಿಳಿಸಿದ್ದಾರೆ.
ಪೂಜೆಗಿಟ್ಟಿದ್ದ 1.44  ಲಕ್ಷ ರೂ. ಮೌಲ್ಯದ 2 ತೊಲ, 2 ಗ್ರಾಂ ಚಿನ್ನಾಭರಣ ದೋಚಿದ್ದಾರೆ ಎಂದು ಬನ್ನಿಕೋಡು ಗ್ರಾಮದ ಶಶಿಕಲಾ ರಮೇಶ್ ನೀಡಿದ ದೂರಿನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು, ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಸಂತೋಷ, ಬಿ.ಮಂಜುನಾಥ್, ಗ್ರಾಮಾಂತರ ಡಿಎಸ್ಪಿ ಬಿ.ಎಸ್.ಬಸವರಾಜ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ್ದರು.
ಗ್ರಾಮಾಂತರ ಸಿಪಿಐ ಸುರೇಶ ಸಗರಿ ನೇತೃತ್ವದಲ್ಲಿ ಪಿಎಸ್‌ಐ ಮಂಜುನಾಥ ಎಸ್.ಕುಪ್ಪೇಲೂರು, ತನಿಖಾಧಿಕಾರಿ ಮಹದೇವ ಸಿದ್ದಪ್ಪ ಭತ್ತೆ 5 ದಿನ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳನ್ನು ಒಡಿಸ್ಸಾ ರಾಜ್ಯದಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಹರಿಹರ ಗ್ರಾಮಾಂತರದಲ್ಲಿ 2  ಪ್ರಕರಣ, ದಾವಣಗೆರೆ ಅಜಾದ್ ನಗರದಲ್ಲಿ 1 ಪ್ರಕರಣದಲ್ಲಿ ಇವರ ಹೆಸರು ಪತ್ತೆ ಆಗಿದೆ.
ಬಂಧಿತರಿಂದ ಅಂದಾಜು 8.65  ಲಕ್ಷ ರೂ. ಮೌಲ್ದಯ  90 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ 750 ಗ್ರಾಂ ತೂಕದ ಬೆಳ್ಳಿ ಆಭರಣ ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಎಸ್‌ಐ ಎಚ್.ಸಿ.ತಿಪ್ಪೇಸ್ವಾಮಿ,  ಜಿ.ಎನ್.ರಮೇಶ, ನೀಲಮೂರ್ತಿ, ದಾದಾಪೀರ್, ಅನಿಲ್‌ಕುಮಾರ್, ಬಸವನಗೌಡ, ಲಿಂಗರಾಜ್, ಕರಿಯಪ್ಪ, ಸಿಪಿಐ ಟಿ.ವಿ.ಸತೀಶ, ರಿಜ್ವಾನ್ ನಾಸೂರ್, ಗಂಗಾಧರ, ಸುರೇಶ ಉಪ್ಪಾರ, ಪ್ರಸನ್ನಕಾಂತ, ಅನೀಲಕುಮಾರ ನಾಯ್ಕ, ಕಡೆಮನಿ ನಾಗಪ್ಪ, ಅರ್ಜುನ್ ನಂದ್ಯಾಲ, ಸಿ.ಎಂ.ಸುಶೀಲ, ನಾಜೀಮಾ, ಪವಿತ್ರಾ, ಚಾಲಕ ಸಿದ್ದಪ್ಪ ಅವರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Read also : ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?” ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Vinayakumara davanagere ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?” ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
Next Article Adarsh __Yoga Foundation (RI), Davangere ಸೂರ್ಯನಿಂದಲೇ ಆಮ್ಲಜನಕ ಉತ್ಪತ್ತಿ : ವೆ|| ಪಂ|| ಗೋಪಾಲಾಚಾರ್ ಮಣ್ಣೂರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಶೋಭಾಯಾತ್ರೆ : ʼಪೊಲೀಸ್ ಪಥ ಸಂಚಲನ’

ದಾವಣಗೆರೆ (Davanagere) : ನಗರದಲ್ಲಿ ವಿಶ್ವ ಹಿಂದೂ ಪರಿಷತ್ತು ಸಾರ್ವಜನಿಕ ವಿಜದಶಮಿ ಮಹೋತ್ಸವ ಸಮಿತಿ ವತಿಯಿಂದ ನಗರದ ವೆಂಕಟೇಶ್ವರ ವೃತ್ತದಿಂದ…

By Dinamaana Kannada News

ದಮನಿತ ವರ್ಗಗಳಿಗೆ ಧ್ವನಿಯಾದವರು ಬಾಬಾ ಸಾಹೇಬ್ ಅಂಬೇಡ್ಕರ್  

ದಾವಣಗೆರೆ, ಡಿ.06  (Davanagere) :  ಜ್ಞಾನವಂತರು, ಸಮಾಜ ಸುಧಾರಕರು, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರು ನಿರಂತರ ಅಧ್ಯಯನದಿಂದ…

By Dinamaana Kannada News

Davangere | ನೊಂದವರಿಗೆ ನ್ಯಾಯ ಒದಗಿಸಲು ಸಮನ್ವಯತೆ ಅಗತ್ಯ : ನ್ಯಾ.ರಾಜೇಶ್ವರಿ ಎನ್ ಹೆಗ್ಡೆ

ದಾವಣಗೆರೆ (Davangere District)  :  ಪ್ರಕರಣಗಳ ಶೀಘ್ರ ವಿಲೇವಾರಿ, ಪ್ರಕರಣಗಳ ತನಿಖೆಯಲ್ಲಿ ತನಿಖಾಧಿಕಾರಿಗಳಿಂದ ಆಗುವ ಲೋಪಗಳನ್ನು ಸರಿಪಡಿಸಿಕೊಳ್ಳಲು, ನೊಂದವರಿಗೆ ನ್ಯಾಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?