Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಶಿಕ್ಷಣದಲ್ಲಿ ವಿಮರ್ಶಾತ್ಮಕ ಚಿಂತನೆಗೆ ಒತ್ತು ನೀಡಬೇಕು: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಭಿಮತ
ತಾಜಾ ಸುದ್ದಿ

ದಾವಣಗೆರೆ | ಶಿಕ್ಷಣದಲ್ಲಿ ವಿಮರ್ಶಾತ್ಮಕ ಚಿಂತನೆಗೆ ಒತ್ತು ನೀಡಬೇಕು: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಭಿಮತ

Dinamaana Kannada News
Last updated: July 11, 2025 4:31 pm
Dinamaana Kannada News
Share
Sri Vasavi Peetham
SHARE
ದಾವಣಗೆರೆ: ನಮ್ಮ ದೇಶದ ಶಿಕ್ಷಣದಲ್ಲಿ ಸ್ಮರಣೆ (ಮೆಮೋರಿ) ಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆಯೇ ವಿನಹ,  ವಿಮರ್ಶಾತ್ಮಕ ಚಿಂತನೆಗೆ ಒತ್ತು ನೀಡುತ್ತಿಲ್ಲ ಎಂದು ಶ್ರೀ ವಾಸವಿ ಪೀಠಂ, ವಿಶ್ವ ವಾಸವಿ ಜಗದ್ಗುರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳು ಅಭಿಪ್ರಾಯಪಟ್ಟರು.
ಶುಕ್ರವಾರ, ನಗರದ ಪಿ.ಜೆ. ಬಡಾವಣೆಯಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಡೈಮಂಡ್ ಜ್ಯೂಬಿಲಿ ವಿದ್ಯಾಪೀಠದ ನೂತನ ಕಂಪ್ಯೂಟರ್ ಲ್ಯಾಬ್ ಹಾಗೂ ಕೊಠಡಿಗಳನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.
ವಿದೇಶದಲ್ಲಿ ಸ್ಮರಣೆಗೆ ಪ್ರಾಧಾನ್ಯತೆ ಇಲ್ಲ. ಅಲ್ಲಿಯ ಶಿಕ್ಷಣ ಮಕ್ಕಳನ್ನು ವಿಮರ್ಶಾತ್ಮಕ ಚಿಂತನೆಗೆ ಹಚ್ಚುವಂತಹದ್ದಾಗಿದೆ. ಪ್ರಸ್ತುತ ಜಗತ್ತಿನಲ್ಲಿ ಒಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಯಶಸ್ಸು ಸಾಧಿಸಲು ಅಂಕಗಳಿಗಿಂತ ವಿಮರ್ಶಾತ್ಮಕ ಚಿಂತನಾ ಶಕ್ತಿಯ ಅಗತ್ಯವಿದೆ. ಅದನ್ನು ನಮ್ಮ ಶಿಕ್ಷಣದ ಪಠ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಅಳವಡಿಸಿಕೊಳ್ಳಬೇಕಿದೆ ಎಂದರು.
ಇತ್ತೀಚಿನ ವರ್ಷಗಳಲ್ಲಿ ಪದವಿ ಆಧಾರದ ಮೇಲೆ ಉದ್ಯೋಗ ದೊರಕುತ್ತಿಲ್ಲ. ಆತನಲ್ಲಿರುವ ಕೌಶಲ್ಯ (ಸ್ಕಿಲ್) ಮೇಲೆ ಉದ್ಯೋಗಗಳು ಲಭಿಸುತ್ತಿವೆ. ಜೊತೆಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಂದು ಎಲ್ಲ ಕ್ಷೇತ್ರಗಳಲ್ಲೂ ಉದ್ಯೋಗ ಅಭದ್ರತೆ ಕಾಡುತ್ತಿದೆ.  ಹಾಗಾಗಿ ನಮ್ಮ ಶಿಕ್ಷಣದಲ್ಲಿ ಕೌಶಲ್ಯ ಕಲಿಕೆಗೆ ಒತ್ತು ನೀಡಬೇಕು ಎಂದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಾರು, ಚಿಂತನಾ ಶಕ್ತಿಯ, ಶೀಘ್ರ ನಿರ್ಧಾರ, ಬದಲಾದ ಜಗತ್ತಿಗೆ ಹೊಂದಿಕೊಳ್ಳುವ ಗುಣ ಹೊಂದಿರುತ್ತಾರೆಯೋ, ಅವರೇ ಜೀವನದಲ್ಲಿ ಯಶಸ್ಸು ಕಾಣುತ್ತಾರೆ. ಅದು ಐಟಿ ಆಗಿರಬಹುದು ಅಥವಾ ಫಾಸ್ಟ್ ಫುಡ್ ಸೆಂಟರ್ ಆಗಿರಬಹುದು ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದೇ ವೇಳೆ ವಿದ್ಯಾರ್ಥಿ ಹಾಗೂ ಶಿಕ್ಷಕವರ್ಗದವರೊಂದಿಗೆ ಶ್ರೀಗಳು ಸಂವಾದ ನಡೆಸಿಕೊಟ್ಟರು. ವಿದ್ಯಾಪೀಠದ ವತಿಯಿಂದ ಶ್ರೀಗಳಿಗೆ ಪಾದಪೂಜೆ ನೆರವೇರಿಸಲಾಯಿತು.
Read also : ದಾವಣಗೆರೆ | ಒಗ್ಗಟ್ಟಿನ ಪ್ರತಿಫಲವೇ ಆವೋಪ ಭವನ: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ
ಎಸ್.ಕೆ.ಪಿ. ವಿದ್ಯಾಪೀಠದ ಅಧ್ಯಕ್ಷರಾದ ಆರ್. ಎಸ್. ನಾರಾಯಣಸ್ವಾಮಿ, ಉಪಾಧ್ಯಕ್ಷ  ಆರ್. ಎಲ್. ಪ್ರಭಾಕ‌ರ್, ಕಾರ್ಯದರ್ಶಿ  ಕೆ.ಎನ್. ಅನಂತರಾಮ ಶೆಟ್ಟಿ,ಜಂಟಿ ಕಾರ್ಯದರ್ಶಿ  ಆರ್. ಜಿ. ಶ್ರೀನಿವಾಸ ಮೂರ್ತಿ, ಯೋಜನಾ ಕಾರ್ಯದರ್ಶಿ,  ಕಾಸಲ್ ವಿ. ನಾಗರಾಜ, ಖಜಾಂಚಿ  ಕಾಸಲ್ ಎಸ್. ಸತೀಶ್,
ಟ್ರಸ್ಟಿಗಳಾದ ಕೆ.ಕೆ. ಪ್ರಕಾಶ್, ಆರ್. ಜಿ. ನಾಗೇಂದ್ರ ಪ್ರಕಾಶ್, ಸುಂಕು ಶ್ರೀನಿವಾಸ ಮೂರ್ತಿ, ಬಿ. ವಿಶ್ವನಾಥ್, ಎ. ಜಿ. ಸೂರ್ಯಪ್ರಕಾಶ್, ಬಿ.ಎನ್. ಮಂಜುನಾಥ್, ಆಡಳಿತಾಧಿಕಾರಿ ಕುಮಾರ್, ಮ್ಯಾನೇಜರ್ ಹಾಲಪ್ಪ ಶೆಟ್ಟಿ  ಹಾಗೂ  ಸಮಾಜದ ಮುಖಂಡರು  ಉಪಸ್ಥಿತರಿದ್ದರು.
ವಿದ್ಯಾರ್ಥಿಗಳನ್ನು ಹೇಗೆ ನಮ್ಮ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದು ಎಂಬ ಉಪನ್ಯಾಸಕರೊಬ್ಬರ ಪ್ರಶ್ನೆಗೆ, ‘ನೀವು ಗುರುವಿನಂತೆ ಕಟ್ಟುನಿಟ್ಟಾಗಿರಿ, ತಾಯಿಯಂತೆ ಮೃದುವಾಗಿರಿ’ ಎಂದು ಕಿವಿಮಾತು ಹೇಳಿದರು.
ಜಗತ್ತಿನ ಅತ್ಯಂತ ಶ್ರೇಷ್ಠ ವೃತ್ತಿ ಎಂದರೇ ಅದು ಶಿಕ್ಷಕ ವೃತ್ತಿ. ನೀವು ವ್ಯಕ್ತಿ-ವ್ಯಕ್ತಿತ್ವವನ್ನು ರೂಪಿಸುವಂತಹ ಕೆಲಸವನ್ನು ಮಾಡುತ್ತಿದ್ದೀರಿ. ಸಮಾಜದ ಉತ್ತಮ ಕೆಲಸವಾಗಿದೆಯಲ್ಲದೆ, ಎಲ್ಲದಕ್ಕಿಂತ ಕಷ್ಟದ ವೃತ್ತಿ ಶಿಕ್ಷಕ ವೃತ್ತಿಯಾಗಿದೆ. ಆದರೆ ಶಿಕ್ಷಕರಿಗೆ ಸಿಗಬೇಕಾದ ಗೌರವ ಸಿಗುತ್ತಿಲ್ಲ ಎನ್ನುವುದು ಬೇಸರದ ಸಂಗತಿ ಎಂದು ಶ್ರೀಗಳು ಹೇಳಿದರು.
TAGGED:Dinamana.comSri Kanyakaparameshwari Templeದಿನಮಾನ.ಕಾಂಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ
Share This Article
Twitter Email Copy Link Print
Previous Article Sri Vasavi Peetham ದಾವಣಗೆರೆ | ಒಗ್ಗಟ್ಟಿನ ಪ್ರತಿಫಲವೇ ಆವೋಪ ಭವನ: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ
Next Article BHADRA DAM ಭದ್ರಾ ಜಲಾಶಯದಲ್ಲಿ 175 ಅಡಿ ನೀರು : ಭರ್ತಿಗೆ 11 ಅಡಿ ಬಾಕಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

ದಾವಣಗೆರೆ  (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ವತಿಯಿಂದ ಡಿಸೆಂಬರ್ : 07-12-2024 ಶನಿವಾರ…

By Dinamaana Kannada News

Davanagere | ಐಟಿಐ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ; 23 (Davanagere)  :  ಪ್ರಸಕ್ತ ಸಾಲಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಜಗಳೂರು ಇಲ್ಲಿ ಐಟಿಐ ಕೋರ್ಸ್ ಗಳಲ್ಲಿ…

By Dinamaana Kannada News

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಗೆ ಡಾ.ನಾಗಲಕ್ಷ್ಮೀ ಚೌಧರಿ ಆಗಮನ

ಹರಿಹರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?