Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ವ್ಯತ್ಯಾಸ : ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯ
ತಾಜಾ ಸುದ್ದಿ

Davanagere news | ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ವ್ಯತ್ಯಾಸ : ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯ

Dinamaana Kannada News
Last updated: August 23, 2024 12:26 pm
Dinamaana Kannada News
Share
davanagere
ತಾಲ್ಲೂಕು ಡಿಎಸ್‌ಎಸ್ ಸಂಘ ಹಾಗೂ ರೈತ ಸಂಘಟನೆಗಳ ಮುಖಂಡರಿಂದ ಸುದ್ದಿಗೋಷ್ಠಿ
SHARE

ಹರಿಹರ  (Davanagere ):  “ಮಹಾತ್ಮ ಗಾಂಧಿ ನರೇಗಾ ಯೋಜನೆ” ಯಡಿ ಹರಿಹರ ತಾಲ್ಲೂಕಿನ ಜಿಗಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಲುವೆ ಹೂಳು ತೆಗೆಯುವ ಕಾಮಗಾರಿಗಳ ಅನುಷ್ಠಾನದಲ್ಲಿ ಅಳತೆ ಪುಸ್ತಕದಲ್ಲಿ ದಾಖಲಾಗಿರುವ ಅಳತೆ ಹಾಗೂ ವಾಸ್ತವ ಅಳತೆಯಲ್ಲಿ ಬಹಳ ವ್ಯತ್ಯಾಸಗಳು ಗ್ರಾಮ ಸಭೆಯ ವರದಿಯಲ್ಲಿ ಕಂಡುಬಂದಿದ್ದು ಈ ಸಂಬಂಧ ಹರಿಹರ ತಾಪಂ ಇಒ ಎಸ್.ಪಿ.ಸುಮಲತಾ, ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು ಸುನಿಲ್ ಕುಮಾರ್, ತಾಂತ್ರಿಕ ಇಂಜಿನಿಯರ್ ವಿಶ್ವನಾಥ (ಸಿವಿಲ್), ತಾಂತ್ರಿಕ ಸಂಯೋಜಕ ರಂಗನಾಥ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಸಂಚಾಲಕ ಆರ್ ಶ್ರೀ ನಿವಾಸ್ ಮಾತನಾಡಿ, ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಜಿಪಂ ಸಿಇಓ ಅವರಿಂದ ರಚಿಸಿದ ತಂಡದ ವರದಿಯ ಪ್ರಕಾರ ಒಟ್ಟು ಎಂಟು ಕಾಲುವೆ ಹೂಳು ತೆಗೆಯುವ ಕಾಮಗಾರಿಗಳನ್ನು ಪರಿಶೀಲಿನೆ ಮಾಡಿದ್ದು, ಪ್ರತಿ ಕಾಮಗಾರಿಯ ಅನುಷ್ಠಾನದಲ್ಲಿ ಅಳತೆ ಪುಸ್ತಕದಲ್ಲಿ ದಾಖಲಾಗಿರುವ ಪರಿಮಾಣದ ಅಳತೆ ಹಾಗೂ ಭೌತಿಕವಾಗಿ ಕಾಮಗಾರಿ ಸ್ಥಳದಲ್ಲಿ ಲಭ್ಯವಿರುವ ಹೂಳು ಪ್ರಮಾಣದಲ್ಲಿ ವ್ಯತ್ಯಾಸವಿದೆ. ಎಲ್ಲಾ ಎಂಟು ಕಾಮಗಾರಿಗಳಲ್ಲಿ ಕಂಡು ಬಂದ ವ್ಯತ್ಯಾಸದ ಪರಿಮಾಣ 2716.48 ಕ್ಯೂ ಮೀಗಳಿಗೆ ಪ್ರತಿಯೊಂದು ಕ್ಯೂಬಿಕ್ ಮೀಟರ್ ಹೂಳು ತೆಗೆಯಲು ಅಳತೆ ಪುಸ್ತಕದಲ್ಲಿ ದಾಖಲಿಸಿರುವ ದರ ರೂ 339.56 ರಂತೆ ಒಟ್ಟು ರೂ 9,63,941-00 ರೂಗಳನ್ನು ಹೆಚ್ಚುವರಿಯಾಗಿ ಕೂಲಿ ಪಾವತಿ ಮಾಡಿರುವುದು ಕಂಡುಬಂದಿದೆ ಎಂದು ದೂರಿದರು.

ಈ ಹಿನ್ನಲೆಯಲ್ಲಿ ರೂ 9,63,941 ರೂಗಳನ್ನು ಸಂಬಂಧಪಟ್ಟವರಿಂದ ಇಂಜಿನಿಯರ್ ಶ್ರೀ ವಿಶ್ವನಾಥ್ (ಸಿವಿಲ್) ಶೇ.70 ರೂ (674759-00) ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ಹಾಗೂ ಚೆಕ್ ಮೆಸರ್ ಮೆಂಟ್ ಮಾಡಿದವರು ಶೇ.30 ರೂ, 2,89,182-00) ಇವರಿಂದ ವಸೂಲಿ ಮಾಡಲು ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ದಿನಾಂಕ : 9.05.2024ರಂದು ಸೂಚಿಸಿದ್ದಾರೆ ಎಂದು ಅಪಾದಿಸಿದರು.

ಈ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ 23-5-2024 ರಂದು ಜಿಪಂ ಸಿಇಒ ಅವರಿಗೆ ಪತ್ರ ಬರೆದಿದ್ದರೂ ಯಾವುದೇ ಕ್ರಮವಾಗಿಲ್ಲ. ಹರಿಹರ ತಾಲೂಕಿನಲ್ಲಿ ಕೂಲಿ ಕಾರ್ಮಿಕರನ್ನು ಕೇವಲ ಫೋಟೋಕ್ಕಾಗಿ ಮಾತ್ರ ಸೀಮಿತ ಮಾಡಿ ಯಂತ್ರೋಪಕರಣಗಳನ್ನು (ಜೆಸಿಬಿ) ಉಪಯೋಗಿಸಿಕೊಂಡು ಕಾಮಗಾರಿ ನಡೆಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಅಧಿಕಾರಿಗಳು ಸಹ ಶ್ಯಾಮಿಲು ಅಗಿರುವುದು ಕಂಡುಬಂದಿದೆ ಎಂದು ಹರಿಹರ  ತಾಲ್ಲೂಕು ಡಿಎಸ್‌ಎಸ್ ಸಂಘ ಹಾಗೂ ರೈತ ಸಂಘಟನೆಗಳ ಮುಖಂಡರು ಆರೋಪಿಸಿದರು.

Read also : Davanagere news | ಪ್ರಾರ್ಚಾಯ ವಿರೂಪಾಕ್ಷಪ್ಪ ಅವರಿಗೆ ಸನ್ಮಾನ

ಈ ಕೂಡಲೇ ಆಕ್ರಮ ಎಸಗಿ ಸರಕಾರಕ್ಕೆ ನಷ್ಟ ಉಂಟು ಮಾಡಿದ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕು, ನಷ್ಟವನ್ನು ಮರುಪಾವತಿ ಮಾಡಿಕೊಂಡು ಕ್ರಿಮಿನಲ್ ಮೊಕದ್ದಮೆ ಪ್ರಕರಣ ದಾಖಲು ಮಾಡಬೇಕು ಎಂದು  ಒತ್ತಾಯಿಸಿದರು.

ಪದಾಧಿಕಾರಿಗಳಾದ ತಿಪ್ಪೇಶ್ ದೇವರೆಡ್ಡಿ, ಸಂತೋಷ್, ರಘು, ರೈತ ಮುಖಂಡ ಪರಮೇಶ್ವರಪ್ಪ, ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere news | ಪ್ರಾರ್ಚಾಯ ವಿರೂಪಾಕ್ಷಪ್ಪ ಅವರಿಗೆ ಸನ್ಮಾನ
Next Article davanagere Davanagere | 5 ಕೋಟಿ ರೂ.ವೆಚ್ಚದಲ್ಲಿ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ : ಪರಿಶೀಲನೆ ನಡೆಸಿದ ಶಾಸಕ ಬಸವಂತಪ್ಪ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಾವಣಗೆರೆಯಲ್ಲಿ ಮೈಸೂರಿನ ವಿದ್ವಾನ್ ಪುಟ್ಟಣ್ಣಯ್ಯ ಅವರ ರಂಗಸಂಗೀತ ಸಂಜೆ

ಮೈಸೂರು ನಿವಾಸಿ ವಿದ್ವಾನ್ ವೈ.ಎಂ. ಪುಟ್ಟಣ್ಣಯ್ಯ (ವಿದ್ವಾನ್ ಪುಟ್ಟಣ್ಣಯ್ಯ ) ಅವರ ಹುಟ್ಟೂರು ಹಾಸನ ಜಿಲ್ಲೆ ಅರಸೀಕೆರೆ ಬಳಿಯ ಯರಿಗೇನಹಳ್ಳಿ.…

By ಮಲ್ಲಿಕಾರ್ಜುನ ಕಡಕೋಳ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

ಚನ್ನಗಿರಿ : ಕಳೆದ ಸಾಲಿನ ಆ. 1ರಂದು ಒಳಮೀಸಲಾತಿ ಆಯಾ ರಾಜ್ಯಗಳು ಜಾರಿಗೊಳಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಆದರೆ…

By Dinamaana Kannada News

ನಿರ್ಲಕ್ಷ್ಯವು ಇನ್ನೋಬ್ಬರ ಜೀವಕ್ಕೆ ಕಂಟಕವಾಗದಿರಲಿ

ಹರಿಹರ:  ಕಲಬೆರಕೆ, ಆಸುರಕ್ಷಿತ ಮತ್ತು ಗುಣಮಟ್ಟವಿಲ್ಲದ ಆಹಾರ ತಯಾರಿಕೆ ಹಾಗೂ ವಿತರಣೆ ಮಾಡುವುದು ದಂಡ ಮತ್ತು ಶಿಕ್ಷೆ ವಿಧಿಸಬಹುದಾದ ಆಪರಾಧವಾಗಿರುತ್ತದೆ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?