Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > DAVANAGERE CRIME NEWS : ಅಕ್ರಮವಾಗಿ ಮಾರಾಟ:10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಬಂಧನ
ಅಪರಾಧ ಸುದ್ದಿ

DAVANAGERE CRIME NEWS : ಅಕ್ರಮವಾಗಿ ಮಾರಾಟ:10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಬಂಧನ

Dinamaana Kannada News
Last updated: August 9, 2024 4:25 pm
Dinamaana Kannada News
Share
DAVANAGERE CRIME NEWS
DAVANAGERE CRIME NEWS
SHARE

ದಾವಣಗೆರೆ (DAVANAGERE) :  ಅಕ್ರಮವಾಗಿ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 10 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಓಡಿಸಾ ರಾಜ್ಯದ ಗಂಜಾಮ್ ಜಿಲ್ಲೆಯ ಖಾಲಿಕೋಟೆ ತಾಲೂಕಿನ ಕಂಚನ್ ಗ್ರಾಮದ ಕಾಂಕ್ರಿಟ್ ಕೆಲಸ ಮಾಡುವ ಕೇಸಬಾ ಮೊಹಂತಿ (24), ಸುಮಂತ ಸಾಹು ( 25), ಸೈಯದ್ ಸಾಧಿಕ್ (27) ಬಂಧಿತ ಆರೋಪಿಗಳು.

ಸಾಮಾಜಿಕ ದೊಡ್ಡ ಪಿಡುಗಾದ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಎಸ್ಪಿ ಉಮಾ ಪ್ರಶಾಂತ್ , ದಾವಣಗೆರೆ ಜಿಲ್ಲೆಯಲ್ಲಿ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಮಾಡುವವರ ಮೇಲೆ ನಿಗಾ ವಹಿಸಿ ಮಾಹಿತಿ ತೆಗೆದು ದಾಳಿ ಮಾಡಿ ಪ್ರಕರಣ ದಾಖಲಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ರಚಿಸಿ, ಪ್ರತಿದಿನ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದರು.

ಅದರಂತೆ ಹರಿಹರ ನಗರದಲ್ಲಿ ಮಾದಕ ವಸ್ತುಗಳ ಸೇವನೆ ಮಾಡುವವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಿದ್ದು, ಈ ಸಂದರ್ಭದಲ್ಲಿ ಮಾದಕ ವ್ಯಸನಿಗಳಿಗೆ ಸಿಗುತ್ತಿದ್ದ ಗಾಂಜಾದ ಮೂಲವನ್ನು ಬೆನ್ನೆತ್ತಿದಾಗ, ಪೊಲೀಸರಿಗೆ ಹರಿಹರ ನಗರದಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು.

ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ.ಸಂತೋಷ, ಜಿ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿಯೊಂದಿಗೆ ಬೆನ್ನೆತ್ತಿದ್ದ ಪೊಲೀಸರು, ಶುಕ್ರವಾರ ಹರಿಹರ ನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಗಾಂಜಾವನ್ನು ಸಂಗ್ರಹಿಸಿದ ಸ್ಥಳದ ಮೇಲೆ ದಾಳಿ ನಡೆಸಿ 10 ಲಕ್ಷ ರೂ. ಮೌಲ್ಯದ 10 ಕೆ.ಜಿ. ಗಾಂಜಾ, ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.

Read also ; DAVANAGERE NEWS : ಬಸವ ಪಂಚಮಿ : ಹಾಲು ಮತ್ತು ಬ್ರೆಡ್ ವಿತರಣೆ

ಗಾಂಜಾ ಮಾರಾಟ ಮಾಡುವ ಆರೋಪಿಗಳ ದಿನಚರಿ:
ಓಡಿಸಾ ಮೂಲದ ಈ ಮೂವರು ಆರೋಪಿಗಳು, ಹರಿಹರದಲ್ಲಿ ಬಂದು ವಾಸಿಸುತ್ತಿದ್ದರು. ಎ1 ಮತ್ತು ಎ2 ಆರೋಪಿಗಳು ಹಾಲಿ ಹರಿಹರ ವ್ಯಾಪ್ತಿಯಲ್ಲಿ ರೈಲ್ವೆ ಹಳಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಿ ಕಾಂಕ್ರಿಟ್ ಕೆಲಸ ಮಾಡಲು ಬಂದಿದ್ದು, ಗಾಂಜಾವನ್ನು ಓಡಿಶಾ ರಾಜ್ಯದಿಂದ ತೆಗೆದುಕೊಂಡು ಬಂದು ಹರಿಹರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ತನಿಖೆ ವೇಳೆ ಬಹಿರಂಗಗೊಂಡಿದೆ.

ಮೇಲ್ಕಂಡ ಪ್ರಕರಣದಲ್ಲಿ ಆರೋಪಿಗಳ ಪತ್ತೆ ಹಾಗೂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಅಧಿಕಾರಿಗಳಾದ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಎಸ್. ಬಸವರಾಜ್, ಹರಿಹರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ದೇವಾನಂದ, ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ, ಹರಿಹರ ನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಪತಿ ಗಿನ್ನಿ, ಜಿ.ಎಸ್.ವಿಜಯ್, ಮಂಜುನಾಥ ಕುಪ್ಪೇಲೂರ, ಸಿಬ್ಬಂದಿ ನಾಗರಾಜ್ ಸುಣಗಾರ, ಲಿಂಗರಾಜ್, ಸಿದ್ದೇಶ, ಹೇಮಾನಾಯ್ಕ್, ರವಿ.ಆರ್, ರುದ್ರಸ್ವಾಮಿ.ಕೆ.ಸಿ, ಹನುಮಂತ ಗೋಪನಾಳ, ಮಂಜುನಾಥ ಕ್ಯಾತಮ್ಮನವರ್, ರವಿನಾಯ್ಕ್, ಕರಿಯಪ್ಪ, ತಿಪ್ಪೆಸ್ವಾಮಿ, ಸಿದ್ದರಾಜು.ಎಸ್.ಬಿ, ರಾಜಾಸಾಬ್, ರವಿನಾಯ್ಕ, ಸತೀಶ, ತಿಪ್ಪೇಸ್ವಾಮಿ ಅವರಿಗೆ ಎಸ್ಪಿ ಉಮಾ ಪ್ರಶಾಂತ್ ಅಭಿನಂದಿಸಿದ್ದಾರೆ.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article davanagere DAVANAGERE NEWS : ಬಸವ ಪಂಚಮಿ : ಹಾಲು ಮತ್ತು ಬ್ರೆಡ್ ವಿತರಣೆ
Next Article harihara DAVANAGERE NEWS : ವಯನಾಡಿಗಾಗಿ ಮಿಡಿದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತಪೋವನದಲ್ಲಿ ಯೋಗ ದಿನಾಚರಣೆ

ದಾವಣಗೆರೆ : ತಪೋವನ ಸಮೂಹ ಸಂಸ್ಥೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಚಾರಣೆ ಆಚರಣೆ ಮಾಡಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ಡಾ. ಶಶಿಕುಮಾರ್…

By Dinamaana Kannada News

13 ನೇ ಕಸಾಪ ಸಮ್ಮೇಳನ ಯಶಸ್ಸು ಪದಾಧಿಕಾರಿಗಳಿಗೆ ಸನ್ಮಾನ

ಹರಿಹರ : ಹರಿಹರ ನಗರದಲ್ಲಿ ನಡೆದ 13 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ರಾಜಕೀಯ ಧುರೀಣರು ಮತ್ತು ವಿವಿಧ…

By Dinamaana Kannada News

Job fair | ಏ.5 ರಂದು ಉದ್ಯೋಗ ಮೇಳ 2025

ದಾವಣಗೆರೆ (Davanagere): ಜೀತೋ ಸಂಸ್ಥೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳನ್ನು ಒದಗಿಸುವ ಸಲುವಾಗಿ 'ಉದ್ಯೋಗ ಮೇಳ-2025'ನ್ನು ಏ. 5 ರಂದು ಬೆಳಿಗ್ಗೆ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?