Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ, ಜ.3 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ, ಜ.3 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Dinamaana Kannada News
Last updated: December 25, 2025 9:18 am
Dinamaana Kannada News
Share
Davanagere
SHARE
ದಾವಣಗೆರೆ ಡಿ.25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜ. 03ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳೊಂದಿಗೆ ಉಪಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2026 ಜನವರಿ 1 ಕ್ಕೆ ಸಂಬಂಧಿಸಿದಂತೆ 2026ರ ಜ. 3 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು-ಆಕ್ಷೇಪಣೆಗಳಿದ್ದಲ್ಲಿ ಜ. 24 ರೊಳಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು 2026 ರ ಫೆ. 14 ರಂದು ಪ್ರಕಟಿಸಲಾಗುವುದು ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಾ.ಶಾಮನೂರು ಶಿವಶಂಕರಪ್ಪನವರ ನಿಧನದಿಂದ ಕ್ಷೇತ್ರ ತೆರವಾಗಿರುತ್ತದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 113538 ಪುರುಷ, 117479 ಮಹಿಳಾ ಮತದಾರರು ಹಾಗೂ 47 ಇತರೆ ಮತದಾರರು ಸೇರಿದಂತೆ ಒಟ್ಟು 2,31,062 ಮತದಾರಿದ್ದು, ಒಟ್ಟು 217 ಮತಗಟ್ಟಿಗಳನ್ನೊಳಗೊಂಡಿದೆ.
4857 ಯುವ ಮತದಾರರು:  ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2497 ಪುರುಷ ಮತ್ತು 2360 ಮಹಿಳಾ ಯುವ ಮತದಾರರಿದ್ದಾರೆ. ಹಾಗೆಯೇ 1395 ಪುರುಷ, 1146 ಮಹಿಳಾ ವಿಶೇಷಚೇತನ ಮತದಾರರು ಸೇರಿದಂತೆ ಒಟ್ಟು 2541 ವಿಶೇಷಚೇತನ ಮತದಾರರಿದ್ದಾರೆ ಎಂದು ತಿಳಿಸಿದರು.
ರಾಷನಲೈಸೇಷನ್ (ಯುಕ್ತೀಕರಣ) ಪ್ರಕ್ರಿಯೆ: ಈ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ ಭೌತಿಕ ಪರಿಶೀಲನೆ ನಂತರ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು  300ಕ್ಕಿಂತ ಕಡಿಮೆ ಮತದಾರರಿರುವ ಮತ್ತು 1200 ಕ್ಕೂ ಹೆಚ್ಚು ಮತದಾರರಿರುವ  ಮತಗಟ್ಟೆಗಳನ್ನು ಯುಕ್ತೀಕರಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ 67 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಕಟ್ಟಡ ಬದಲಾವಣೆ ಕಾರಣದಿಂದ 24 ಮತಗಟ್ಟೆ ಸ್ಥಳಾಂತರ ಹಾಗೂ 2 ಮತಗಟ್ಟೆಗಳ ಹೆಸರು ಬದಲಾವಣೆ ಸೇರಿದಂತೆ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು ಒಟ್ಟು 284 ಮತಗಟ್ಟೆಗಳನ್ನು ಸ್ಥಾಪನೆ ಮಾಡುವ ಅಗತ್ಯತೆಯ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.
ಕ್ಷೇತ್ರದ ಮತದಾರರು ತಮ್ಮ ಮತಪಟ್ಟಿ ವಿವರಗಳನ್ನು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ಪರಿಶೀಲಿಸಕೊಳ್ಳಬಹುದಾಗಿದೆ. ಮತದಾರರು ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಫೋಟೊ ಬದಲಾವಣೆ ಹಾಗೂ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ-8ರ ಅರ್ಜಿಯನ್ನು ವೋಟರ್ ಹೆಲ್ಪ್ ಲೈನ್  ಮುಖಾಂತರ ಸಲ್ಲಿಸಬಹುದು ಎಂದು ತಿಳಿಸಿದರು.
Read also : ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ
ಯುವ ಮತದಾರರು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ನಮೂನೆ-6ರ ಅರ್ಜಿಯನ್ನು ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ಆನ್‌ಲೈನ್ https://voters.eci.gov.in/ ಮುಖಾಂತರ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಾವಣಗೆರೆ ದಕ್ಷಿಣ ಉಪಚುನಾವಣೆ
Share This Article
Twitter Email Copy Link Print
Previous Article Davanagere ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಾಳೆಯಿಂದ 3 ದಿನಗಳು ನಗರದಲ್ಲಿ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ

ದಾವಣಗೆರೆ ಡಿ.16   : ಕೆಯುಐಡಿಎಫ್‍ಸಿ ಇಲಾಖೆಯ ವತಿಯಿಂದ ದಾವಣಗೆರೆ ನಗರದಲ್ಲಿ 24/7 ಜಲಸಿರಿ ಯೋಜನೆಯನ್ನು ಕೈಗೊಳ್ಳಲಾಗಿದ್ದು ಅದರಂತೆ ರಾಜನಹಳ್ಳಿ ಜಾಕ್‍ವೆಲ್ ನಿಂದ…

By Dinamaana Kannada News

ಸ್ವಚ್ಚ ಭಾರತ್ ಮಿಷನ್ ಜಾಗೃತಿ ಕಾರ್ಯಚಟುವಟಿಕೆಗಳ ಆಯೋಜನೆಗೆ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.03 : ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್‌ಹೆಚ್‌ಜಿ,…

By Dinamaana Kannada News

Davanagere | ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ 75ನೇ ವರ್ಷದ ಧ್ವಜಾ ಚೀಟಿ ಬಿಡುಗಡೆ

ದಾವಣಗೆರೆ ನ.8 (Davanagere): ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ 75 ನೇ ವರ್ಷದ ಭಾರತ್ ಸ್ಕೌಟ್ಸ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ

By Dinamaana Kannada News
Davanagere
ತಾಜಾ ಸುದ್ದಿ

ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
accident news
ತಾಜಾ ಸುದ್ದಿಅಪರಾಧ ಸುದ್ದಿ

ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?