Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ
ತಾಜಾ ಸುದ್ದಿ

ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ

Dinamaana Kannada News
Last updated: February 22, 2025 4:16 am
Dinamaana Kannada News
Share
Davanagere District Collector GM Gangadharaswamy
Davanagere District Collector GM Gangadharaswamy
SHARE

ದಾವಣಗೆರೆ (Davanagere): ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ ಮಾಡಿ, ಆದರೆ ಸಾಲಕಟ್ಟಿಸಿಕೊಳ್ಳುವಾಗ ಬಲವಂತದ ಕ್ರಮಕ್ಕೆ ಮುಂದಾಗದೇ ನಿಯಮಬದ್ದವಾಗಿ ವ್ಯವಹರಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ ಹಾಗೂ ಗಿರಿವಿದಾರರೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಫೈನಾನ್ಸ್ ಮತ್ತು ಎನ್ ಬಿಎಫ್‍ಸಿ ಹಣಕಾಸು ಸಂಸ್ಥೆಯವರು ಗ್ರಾಮಾಂತರ ಪ್ರದೇಶ ಸೇರಿದಂತೆ ನಗರ ಪ್ರದೇಶದಲ್ಲಿ ಸಾಲವನ್ನು ನೀಡಿವೆ. ಆದರೆ ಸಾಲ ವಸೂಲಾತಿಯಲ್ಲಿ ನಿಯಮ ಮೀರಿ ಘಾಸಿಯಾಗುವಂತೆ ವಸೂಲಾತಿ ಮಾಡಿದ್ದರಿಂದ ಮನಃನೊಂದು ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಕಂಡು ಬಂದಿದ್ದರಿಂದ ಅಮಾನವೀಯ ಕ್ರಮಗಳ ನಿಯಂತ್ರಣಕ್ಕಾಗಿ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ.

ಕಾಯ್ದೆಯನ್ವಯ ಎಲ್ಲಾ ಹಣಕಾಸು ಸಂಸ್ಥೆಯವರು ಮಾರ್ಚ್ 12 ರೊಳಗಾಗಿ ಆಯಾ ಜಿಲ್ಲಾಧಿಕಾರಿಗಳಿಂದ ನೊಂದಣಿ ಮಾಡಿಸಿಕೊಂಡು ನಿಯಮಬದ್ದವಾಗಿ ವ್ಯವಹಾರ ಮಾಡಲು ಆದೇಶ ಮಾಡಲಾಗಿದೆ. ಈ ಸುಗ್ರೀವಾಜ್ಞೆ ಎಲ್ಲಾ ಫೈನಾನ್ಸ್ ಸಂಸ್ಥೆಯವರಿಗೆ ಮಾಹಿತಿ ಇದ್ದು ನೊಂದಣಿಗೆ ಮುಂದಾಗಬೇಕೆಂದು ಸೂಚನೆ ನೀಡಿದರು.

ಹೊಸ ಕಾಯ್ದೆಯಡಿ ಸಾಲ ನೀಡಿಕೆಯ ಎಲ್ಲಾ ಒಡಂಬಡಿಕೆ ಪತ್ರಗಳನ್ನು ಸ್ಥಳೀಯ ಭಾಷೆ ಕನ್ನಡದಲ್ಲಿ ಮುದ್ರಣ ಮಾಡಿ ಎಲ್ಲಾ ಷರತ್ತುಗಳ ಸಂಪೂರ್ಣ ವಿವರ ಸಾಲ ಪಡೆಯುವವರಿಗೆ ಮಾಹಿತಿ ನೀಡಬೇಕು. ಸಾಮರ್ಥ್ಯ ಆಧಾರಿಸಿ ಸಾಲ ನೀಡಬೇಕು, ಫೈನಾನ್ಸ್ ನವರು ಯಾವುದೇ ಅಡಮಾನಗಳನ್ನು ಪಡೆಯದೇ ಸಾಲ ನೀಡಬೇಕು, ಸಾಲ ಪಡೆಯುವಾಗ ಅನೇಕ ಸಹಿಯನ್ನು ಪಡೆಯುವುದು, ಸಾಲ ತೀರಿಸಿದ್ದರೂ ಇನ್ನೂ ಕಂತುಗಳು ಬಾಕಿ ಇವೆ, ಸಾಲ ಕಟ್ಟದಿದ್ದಾಗ ಅವರ ಮನೆ ಬಾಗಿಲಿಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಕಾನೂನಿನಲ್ಲಿ ಅವಕಾಶ ಇಲ್ಲ ಎಂದರು.

ನಾನ್ ಬ್ಯಾಂಕಿಂಗ್ ಹಣಕಾಸು ಸಂಸ್ಥೆಯವರು ವಾಹನಗಳ ಮೇಲೆ ಸಾಲ ನೀಡಿ ಅವರು ಒಂದು ಕಂತು ಕಟ್ಟಲು ವಿಫಲವಾದರೂ ವಾಹನ ವಶಕ್ಕೆ ಪಡೆದು ಬೇರೆಯವರಿಗೆ ಮಾರಾಟ ಮಾಡಿರುವ ಅನೇಕ ಪ್ರಕರಣಗಳಿವೆ. ಆದರೆ ಯಾವುದೇ ಸಂಸ್ಥೆಗಳಿಗೆ ಸೀಜ್ ಮಾಡುವ ಅಧಿಕಾರ ಇಲ್ಲ, ನ್ಯಾಯಾಲಯದ ಮೂಲಕ ಮುಟ್ಟುಗೋಲಿಗೆ ಆದೇಶ ಪಡೆದ ನಂತರವೇ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿ ಹರಾಜು ಮೂಲಕ ವಿಲೆ ಮಾಡಬಹುದು.

ಓರ್ವ ಸಂಸ್ಥೆ ಟ್ರ್ಯಾಕ್ಟರ್‍ಗೆ ಸಾಲ ನೀಡಿದ್ದು ರೈತ 7 ಲಕ್ಷದಲ್ಲಿ 5 ಲಕ್ಷ ಸಾಲವನ್ನು ಮರುಪಾವತಿಸಿದ್ದರೂ ಅದನ್ನು ವಶಕ್ಕೆ ಪಡೆದು ಬೇರೆಯವರಿಗೆ ಮಾರಾಟ ಮಾಡಿದ ಪ್ರಕರಣ ದಾವಣಗೆರೆಯಲ್ಲಿ ಕಂಡುಬಂದಿದೆ. ಆ ಸಂಸ್ಥೆಯಿಂದಲೇ ರೈತನಿಗೆ ಟ್ರ್ಯಾಕ್ಟರ್ ಕೊಡಿಸುವ ಕೆಲಸವನ್ನು ಮಾಡಲಾಗುತ್ತದೆ ಎಂದ ಅವರು ಯಾವುದೇ ಹಣಕಾಸು ಸಂಸ್ಥೆಯಾಗಿರಲಿ, ಈ ಜಿಲ್ಲೆಯಲ್ಲಿ ವ್ಯವಹರಿಸುತ್ತಿದ್ದಲ್ಲಿ ಪ್ರಾದೇಶಿಕ ಕಚೇರಿ ಹೊಂದುವುದು ಕಡ್ಡಾಯವಾಗಿದೆ ಎಂದರು.

ಸಾಲಗಾರರಿಗೆ ಕಿರುಕುಳ, ಮಾನಸಿಕ ಒತ್ತಡ ನೀಡಿದಲ್ಲಿ ಪೊಲೀಸ್ ಉಪ ಅಧೀಕ್ಷಕರ ಮೂಲಕ ಸುಮೋಟೋ ಪ್ರಕರಣ ದಾಖಲಿಸುವ ಅಧಿಕಾರ ಕಾಯಿದೆಯಲ್ಲಿದೆ. ತಪ್ಪಿತಸ್ಥರೆಂದು ಕಂಡುಬಂದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡವಿರುತ್ತದೆ. ಒಂದು ವೇಳೆ ಸಾಲ ವಸೂಲಾತಿಯಾಗುತ್ತಿಲ್ಲವೆಂದರೆ ಅದನ್ನು ಸಂಸ್ಥೆಯ ಕಾನೂನು ಚೌಕಟ್ಟಿನಲ್ಲಿ ವಸೂಲಾತಿಗೆ ಕ್ರಮ ವಹಿಸಬೇಕು, ಮಾನಸಿಕ, ದೈಹಿಕ ಹಿಂಸೆಗೆ ಅವಕಾಶವಿಲ್ಲ ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ , ಸುಗ್ರೀವಾಜ್ಞೆಯಲ್ಲಿ ಬಹಳ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ನಿಯಮಬದ್ದ ಹಾಗೂ ಪಾರದರ್ಶಕವಾಗಿ ವ್ಯವಹಾರ ಮಾಡಲು ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ನಿಯಮ ಮೀರಿ ವಸೂಲಾತಿ ಕ್ರಮ ಕೈಗೊಳ್ಳುವಂತಿಲ್ಲ, ಹೊಸ ಕಾನೂನಿನ ಅವಕಾಶಗಳ ದುರ್ಬಳಕೆ ಮಾಡಿಕೊಂಡಲ್ಲಿ ಫೈನಾನ್ಸ್ ಸಂಸ್ಥೆಯವರು ಸಹ ಹತ್ತಿರದ ಠಾಣೆಗೆ ಮಾಹಿತಿ ನೀಡಬಹುದಾಗಿದೆ ಎಂದರು.

ಸಭೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಮಧು ಶ್ರೀನಿವಾಸ್ ಲೇವಾದೇವಿ, ಗಿರಿವಿದಾರರ ಮತ್ತು ಚಿಟ್ಸ್ ಫಂಡ್‍ಗಳ ವ್ಯವಹಾರದ ಬಗ್ಗೆ ಮತ್ತು ನಿಯಮಗಳ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ್ ಹಾಗೂ ಫೈನಾನ್ಸ್ ಸಂಸ್ಥೆಯವರು ಉಪಸ್ಥಿತರಿದ್ದರು.

Read also : ಗ್ರಾಮದೇವತೆ (ಊರಮ್ಮ) ಉತ್ಸವ ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihar ಗ್ರಾಮದೇವತೆ (ಊರಮ್ಮ) ಉತ್ಸವ ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಿ
Next Article CEN Police Station Davanagere ಮ್ಯಾಂಗೋ ಹೋಟೇಲ್‌ ನಲ್ಲಿ ಜೂಜಾಟ : ಸಿಇಎನ್‌ ಪೊಲೀಸ್ ರ ದಾಳಿ, ರೂ 24 ಲಕ್ಷ ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 62 :  ಪಯಣದಲಿ….

Kannada News | Sanduru Stories | Dinamaana.com | 22-06-2024 ದುಷ್ಟತನ ಗಳಿಗೆ ಬಲಿಯಾದ ಸಮಾಜ  (Sanduru Stories)…

By Dinamaana Kannada News

Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere):  ವಿನಾಕಾರಣ ಜಗಳ ತೆಗೆದು ಕಬ್ಬಿಣದ ಪೈಪ್ ನಿಂದ ಹೊಡೆದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ…

By Dinamaana Kannada News

DAVANAGERE : ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ಪ್ರೋತ್ಸಾಹ, ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು, ಆ.4 (DAVANAGERE) :  ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?