Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದವರು ಇಂದಿರಾಗಾಂಧಿ : ಡಿ. ಬಸವರಾಜ್
ತಾಜಾ ಸುದ್ದಿ

Davanagere | ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದವರು ಇಂದಿರಾಗಾಂಧಿ : ಡಿ. ಬಸವರಾಜ್

Dinamaana Kannada News
Last updated: October 31, 2024 2:12 pm
Dinamaana Kannada News
Share
Davangere District Congress Intech Division
Davangere District Congress Intech Division
SHARE

ದಾವಣಗೆರೆ  (Davanagere)  :  ರಾಷ್ಟ್ರೀಯ ಖಾಸಗಿ ಬ್ಯಾಂಕ್‍ಗಳನ್ನು ರಾಷ್ಟ್ರೀಕರಣ ಮಾಡುವ ಮೂಲಕ ಭಾರತ ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದ ಪ್ರಧಾನಮಂತ್ರಿ ಭಾರತ ರತ್ನ ಶ್ರೀಮತಿ ಇಂದಿರಾಗಾಂಧಿಯವರು ಜನಸಾಮಾನ್ಯರು ಬ್ಯಾಂಕ್‍ಗಳಲ್ಲಿ ಆರ್ಥಿಕ ನೆರವು ಪಡೆದುಕೊಳ್ಳಲು ಶಕ್ತಿ ತುಂಬಿದರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಹೇಳಿದರು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಇನ್‍ಟೆಕ್ ವಿಭಾಗವು ದಾವಣಗೆರೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿ ಏರ್ಪಡಿಸಿದ್ದ ದಿ|| ಶ್ರೀಮತಿ ಇಂದಿರಾಗಾಂಧಿಯವರ 40ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶ್ರೀಮತಿ ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ, ಮಾತನಾಡಿದರು.

ದೇಶದ ಏಕತೆ ಸಮಗ್ರತೆಗಾಗಿ ತ್ಯಾಗ ಬಲಿದಾನ ಮಾಡಿದ ಇಂದಿರಾಗಾಂಧಿಯವರ ದೇಶ ಸೇವೆ ಅನನ್ಯವಾಗಿದ್ದು, ವಿಶ್ವದಲ್ಲೇ ಉಕ್ಕಿನ ಮಹಿಳೆ ಎಂದು ಪ್ರಸಿದ್ಧರಾಗಿದ್ದ ಇಂದಿರಾಗಾಂಧಿಯವರು ತಮ್ಮ ಆಡಳಿತದಲ್ಲಿ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಬಡವರ ಪಾಲಿನ ತಾಯಿಯಾಗಿದ್ದರು ಎಂದು ಇಂದಿರಾ ಗಾಂಧಿಯವರ ಸೇವೆಯನ್ನು ಸ್ಮರಿಸಿದರು.

ಕೃಷಿ ಆಧುನೀಕರಣಕ್ಕೆ ಒತ್ತು ನೀಡಿ. ದೇಶ ಆಹಾರ ಸ್ವಾವಲಂಬನೆ ಹೊಂದಲು ಶ್ರಮಿಸಿದ್ದಲ್ಲದೇ ಊಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಕ ಭೂ ಸುಧಾರಣೆ ಕಾಯ್ದೆ ಜಾರಿ ಮಾಡಿ ಅನಿಷ್ಟ ಜೀತ ಪದ್ಧತಿಗೆ ಮುಕ್ತಿ ನೀಡಿ ಬಡವರ ಉದ್ದಾರಕ್ಕಾಗಿ 20 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಿದ್ದಲ್ಲದೇ ಬಡತನ ತೊಲಗಿಸಲು ಗರೀಬಿ ಹಠಾವೋ ಕಾರ್ಯಕ್ರಮವನ್ನು ದೇಶಕ್ಕೆ ನೀಡಿದ್ದಲ್ಲದೇ ಅಲ್ಪಸಂಖ್ಯಾತರಿಗಾಗಿ 15 ಅಂಶಗಳ ಕಾರ್ಯಕ್ರಮ ಘೋಷಣೆ ಮಾಡಿದರು. ನೆರೆಯ ರಾಷ್ಟ್ರ ಪಾಕಿಸ್ತಾನದ ಉಪಟಳ ಜಾಸ್ತಿ ಆದಾಗ ಯುದ್ಧ ಭೂಮಿಗೆ ತೆರಳಿ ಭಾರತೀಯ ಸೈನಿಕರನ್ನು ಹುರಿದುಂಬಿಸಿ ಭಾರತಕ್ಕೆ ಜಯವನ್ನು ತಂದು ಕೊಟ್ಟಂತಹ ಉಕ್ಕಿನ  ಮಹಿಳೆ ಇಂದಿರಾಗಾಂಧಿ ಎಂದು ಅವರು ಸ್ಮರಿಸಿದರು.

READ ALSO : Davanagere | ಅಭಿವೃದ್ಧಿ ಕೆಲಸಗಳು ಮಾತನಾಡಲಿ : ಶಾಸಕ ಕೆ.ಎಸ್.ಬಸವಂತಪ್ಪ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಇಂದಿನ ಯುವ ಪೀಳಿಗೆಗೆ ಕಾಂಗ್ರೆಸ್ ಪಕ್ಷ ನೆಹರು ಕುಟುಂಬದ ತ್ಯಾಗ ಬಲಿದಾನಗಳ ಬಗ್ಗೆ ಮನವರಿಕೆ ಮಾಡಬೇಕೆಂದು ಕೋರಿದರಲ್ಲದೆ ಇಂದಿರಾಜಿಯವರ ಆದರ್ಶಗಳನ್ನು ನಾವು ಪಾಲಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಇನ್‍ಟೆಕ್‍ವಿಭಾಗದ ಅಧ್ಯಕ್ಷ  ಕೆ.ಎಂ. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ  ಕೊಡಪಾನ ದಾದಾಪೀರ್, ಬಿ.ಹೆಚ್. ಉದಯಕುಮಾರ್, ಡಿ. ಶಿವಕುಮಾರ್, ಸುರೇಶ್ ಬಿ.ಎಸ್., ನವೀನ್ ಕುಮಾರ್, ಕರಿಬಸಪ್ಪ, ರಮೇಶ್ ಚಲುವಾದಿ, ರಿಯಾಜ್, ತಿಪ್ಪೇಸ್ವಾಮಿ, ಮುಬಾರಕ್, ಮೌನೇಶ್, ಈಶ್ವರಪ್ಪ, ಲಕ್ಷ್ಮಣ್, ನಯಾಜ್, ಇಬ್ರಾಹಿಂ, ರವಿ, ಕೆ.ಜಿ. ರಹಮತ್ತುಲ್ಲಾ ಸೇರಿದಂತೆ ಇತರರು ಹಾಜರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಅಭಿವೃದ್ಧಿ ಕೆಲಸಗಳು ಮಾತನಾಡಲಿ : ಶಾಸಕ ಕೆ.ಎಸ್.ಬಸವಂತಪ್ಪ
Next Article Harihara Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ   ಎಸ್ ಎಸ್ ಗಿರೀಶ್  ನೇಮಕ

ದಾವಣಗೆರೆ : ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ  ದಾವಣಗೆರೆ ಜಿಲ್ಲೆಗೆ ಸದಸ್ಯರನ್ನಾಗಿ ರಾಜ್ಯ ಸರ್ಕಾರ ಎಸ್ .ಎಸ್  ಗಿರೀಶ…

By Dinamaana Kannada News

ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

ದಾವಣಗೆರೆ ಡಿ.30 (Davanagere) : ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ…

By Dinamaana Kannada News

ಭಗಂದರ (Fistula in ano) ಸಮಸ್ಯೆ: ಆಯುರ್ವೇದದಲ್ಲಿ ಉತ್ತಮ ಚಿಕಿತ್ಸೆ  

ಭಗಂದರ (Fistula) ವನ್ನು ಆಚಾರ್ಯ ಸುಶ್ರುತರು ಅಷ್ಟ ಮಹಾರೋಗಗಳಲ್ಲಿ (ಎಂಟು ಪ್ರಮುಖ ರೋಗಗಳು) ಒಂದು ಎಂದು ವಿವರಿಸಿದ್ದಾರೆ.  ಇದು ಗುಣಪಡಿಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?