Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ
ತಾಜಾ ಸುದ್ದಿ

ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ

Dinamaana Kannada News
Last updated: July 13, 2024 5:26 pm
Dinamaana Kannada News
Share
Davangere District
ರಾಜ್ಯ ಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರ
SHARE

ದಾವಣಗೆರೆ.ಜು.13:  ಉತ್ತಮ ಸೇವೆ ಮತ್ತು ದೇಶದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಅಥವಾ ಅಧಿಕಾರ ವಿಕೇಂದ್ರೀಕರಣ ಮಾಡುವುದು ಉತ್ತಮ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ ಅಭಿಪ್ರಾಯಿಸಿದರು.

ಶನಿವಾರ ನಗರದ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ಸಹಕಾರ ಇಲಾಖೆ ವತಿಯಿಂದ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕುಗಳು ಮತ್ತು ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯ ಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಜವಾಬ್ದಾರಿಗಳು ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಬ್ಯಾಂಕುಗಳ ಖಾಸಗೀಕರಣ ಅಥವಾ ಅಧಿಕಾರ ವಿಕೇಂದ್ರೀಕರಣವಾದರೆ ಆ ಬ್ಯಾಂಕುಗಳ ಆಡಳಿತ ಮತ್ತು ಹಣಕಾಸು ಸ್ಥಿತಿ ಹತೋಟಿಯಲ್ಲಿರುತ್ತದೆ. ಆಗ ಸಾರ್ವಜನಿಕರ ವ್ಯವಹಾರಗಳು ಸುಗಮವಾಗಿರುತ್ತವೆ. ಸಿಬ್ಬಂದಿಗಳಿಗೆ ರಾಜ್ಯ ಹಾಗೂ ರಾಷ್ಟ್ರದ ಬಗ್ಗೆ ಚಿಂತನೆ, ಜನರ ಸೇವೆ ಮಾಡುವ ಮನಸ್ಥಿತಿ ಬೆಳೆಯುತ್ತದೆ ಎಂದರು.

ಕೆಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಣ್ಣ ಹಣಕಾಸಿನ ವ್ಯವಹಾರಕ್ಕೂ ಇಡೀ ದಿನ ಕಾಯಬೇಕಾದ ಸ್ಥಿತಿ ಇದೆ. ಅಲ್ಲದೇ ಗ್ರಾಹಕರ ಸಮಸ್ಯೆಗಳಿಗೆ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ಈ ರೀತಿಯ ಸಮಸ್ಯೆಗಳನ್ನು ದಾವಣಗೆರೆ ಸೇರಿದಂತೆ ದೇಶದ ಎಲ್ಲ ಕಡೆಗಳಲ್ಲಿ ಜನರು ನಿತ್ಯ ಅನುಭವಿಸುತ್ತಿದ್ದಾರೆ. ಅದೇ ಖಾಸಗಿ ಬ್ಯಾಂಕುಗಳಲ್ಲಿ ಸೌಹಾರ್ಧಯುತ ವಾತಾವರಣವಿದ್ದು, ಗ್ರಾಹಕರ ಕೆಲಸಗಳು ತ್ವರಿತವಾಗಿ ನಡೆಯುತ್ತವೆ ಎಂದರು.

ಪ್ರತಿಯೊಂದು ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಸರಿಯಾದ ತರಬೇತಿಯ ಅಗತ್ಯವಿದೆ. ಅದರಲ್ಲೂ ವಿಶೇಷವಾಗಿ ಬ್ಯಾಂಕ್ ಸಿಬ್ಬಂದಿಗಳಿಗೆ ಸರಿಯಾದ ತರಬೇತಿ ನೀಡಿದ್ದೇ ಆದಲ್ಲಿ ದೇಶದ ಆರ್ಥಿಕತೆ ಸಮೃದ್ಧಿಯಾಗಿ ಬೆಳೆಯಲಿದೆ. ಸಹಕಾರಿ ಕ್ಷೇತ್ರದಿಂದ ಮಾತ್ರವೇ ದೇಶದ ಪ್ರಗತಿ ಸಾಧ್ಯ ಎಂದು ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅಂದೇ ಮನಗಂಡಿದ್ದರು. ಅದರ ಪರಿಣಾಮವಾಗಿ ಇಂದು ಕೇಂದ್ರ ಸರ್ಕಾರ ಗ್ರಾಮ ಮಟ್ಟದಿಂದಲೂ ಸಹಕಾರಿ ಕ್ಷೇತ್ರವನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುತ್ತಿದೆ ಎಂದರು.

ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ರಾಮರೆಡ್ಡಿ ಮಾತನಾಡಿ, ಗ್ರಾಹಕರ ಜೊತೆಗಿನ ಉತ್ತಮ ವ್ಯವಹರಿಸುವಿಕೆ ಕೂಡ ಬ್ಯಾಂಕು ಮತ್ತು ಸಹಕಾರ ಸಂಘಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಂಥಹ ಮೂಲ ತತ್ವಗಳನ್ನು ಈ ರೀತಿಯ ತರಬೇತಿಗಳು ಕಲಿಸಿಕೊಡುತ್ತವೆ ಎಂದರು.

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಎಷ್ಟೇ ತರಬೇತಿ ಪಡೆದರೂ ಸಾಲದು. ಬ್ಯಾಂಕ್ ಮತ್ತು ಸಹಕಾರಿ ಕ್ಷೇತ್ರದಲ್ಲಿ ನಿತ್ಯ ಆಗುತ್ತಿರುವ ಹೊಸ ಬದಲಾವಣೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ಸಿಬ್ಬಂದಿ ಸದಾ ಉತ್ಸುಕರಾಗಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿರಿಗೆರೆ ರಾಜಣ್ಣ ಮಾತನಾಡಿ, ಇಂದು ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಅವುಗಳ ತಡೆ ಮತ್ತು ಸಹಕಾರ ನೀಡದೇ ಇರುವುದು ಎಲ್ಲ ಬ್ಯಾಂಕ್ ಮತ್ತು ಸಹಕಾರ ಸಂಘಗಳ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿದ್ದು, ಈ ರೀತಿಯ ತರಬೇತಿಗಳಿಂದ ವಂಚನೆಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಿಸಿದರು.

ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಆರ್.ಜಿ.ಶ್ರೀನಿವಾಸ ಮೂರ್ತಿ ಮಾತನಾಡಿ, ಕನಿಷ್ಟ 500 ಕೋಟಿ ರೂ ಠೇವಣಿ ಹೊಂದಿಲ್ಲದ ಬ್ಯಾಂಕುಗಳನ್ನು ವಿಲೀನಮಾಡುವ ಚಿಂತನೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎನ್ನುವ ಮಾತುಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ 500 ಕೋಟಿ ರೂ ಠೇವಣಿ ಹೊಂದಲು ಬ್ಯಾಂಕುಗಳು ಪ್ರಯತ್ನ ಮಾಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಸಹಕಾರ ಯೂನಿಯನ್ ಉಪಾಧ್ಯಕ್ಷ ಬೇತೂರು ರಾಜಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ್ ಕುಮಾರ್, ಡಿ.ಎಂ.ಮುರುಗೇಂದ್ರಯ್ಯ ಇತರರು ಉಪಸ್ಥಿತರಿದ್ದರು. ಧಾರವಾಡದ ಸಂಪನ್ಮೂಲ ವ್ಯಕ್ತಿ ಮಹೇಶ್ ಮಾಶಾಳ ಅವರು ಜೀವನ ಕೌಶಲ್ಯ ಮತ್ತು ವೃತ್ತಿ ನಿರ್ವಹಣೆ ಪ್ರೇರಣೆ ಕುರಿತು ನೀಡಿದ ತರಬೇತಿ ಗಮನ ಸೆಳೆಯಿತು. ಸೈಬರ್ ಸೆಕ್ಯೂರಿಟಿ ಕುರಿತು ಕೆ.ಎಸ್.ಮಹಾದೇವಸ್ವಾಮಿ ವಿಶೇಷ ಉಪನ್ಯಾಸ ನೀಡಿದರು. ಸಹಕಾರ ಒಕ್ಕೂಟದ ಸಿಬ್ಬಂದಿಗಳಾದ ಕೆ.ಎಚ್.ಸಂತೋಷ್ ಕುಮಾರ್, ಕೆ.ಎಂ.ಜಗದೀಶ್, ಹಾಲಪ್ಪ ಕೋಡಿಹಳ್ಳಿ ಭಾಗವಹಿಸಿದ್ದರು.

 

TAGGED:Davangere Newsdinamaana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಾಷ್ಟ್ರೀಯ ಲೋಕ ಅದಾಲತ್ : ರಾಜಿ, ಸಂಧಾನದಲ್ಲಿ ಒಂದಾದ 15 ಕ್ಕೂ ಹೆಚ್ಚಿನ ಜೋಡಿಗಳು
Next Article davangere ಜುಲೈ 19 ರಂದು”ಕಡಲೂರ ಕಣ್ಮಣಿ” ಚಿತ್ರ ತೆರೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davanagere ):  ವಿಶ್ವಗುರು ಬಸವಣ್ಣನವರ ಹೆಸರು ಇಡೀ ಕರ್ನಾಟಕ, ಭಾರತಕ್ಕೆ ಅಲ್ಲ. ಇಡೀ ವಿಶ್ವಕ್ಕೇ ಮುಟ್ಟಿದೆ ಅದಕ್ಕೆ ಕಾರಣ…

By Dinamaana Kannada News

Davanagere | ಅ.25 ರಂದು ವಾಕ್ ಇನ್ ಇಂಟರ್ ವ್ಹೀವ್

ದಾವಣಗೆರೆ ಅ 23  (Davanagere) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ…

By Dinamaana Kannada News

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

ದಾವಣಗೆರೆ, ಜೂ.12 (Davanagere)  :  ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ದತಿ ವಿರುದ್ದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?