Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ
ತಾಜಾ ಸುದ್ದಿ

Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

Dinamaana Kannada News
Last updated: September 10, 2024 12:28 pm
Dinamaana Kannada News
Share
davanagere
ದಾವಣಗೆರೆ ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ
SHARE
ದಾವಣಗೆರೆ (Davanagere):  ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪೇನಿಲ್ಲ ಎಂದಿರುವ ಮಾಜಿ ಡಿಸಿಎಂ, ಹಾಲಿ ಸಂಸದ ಗೋವಿಂದ ಕಾರಜೋಳ ನಿಲುವು ಖಂಡನೀಯ. ಮಕ್ಕಳನ್ನು ಇಂಥ ಕೆಲಸಕ್ಕೆ ನಿಯೋಜಿಸಿದರೆ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಹೇಳಿಕೆ ವಾಪಸ್ ಪಡೆಯಬೇಕು. ಇನ್ನು ಮುಂದೆ ಈ ರೀತಿಯ ಬೇಜವಾಬ್ದಾರಿ ಮಾತು ಆಡಬಾರದು ಎಂದು ದಾವಣಗೆರೆ ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಶೌಚಾಲಯ ತೊಳೆಸಿದ ಶಿಕ್ಷಕರಿಗೆ ತಕ್ಕ ಶಿಕ್ಷೆಯಾಗಿದೆ. ಮಕ್ಕಳಿಂದ ಈ ಕೆಲಸ ಮಾಡಿಸಿದ್ದಕ್ಕೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಮಕ್ಕಳಿಂದ ಇಂಥ ಕೆಲಸ ಮಾಡಿಸಿದರೆ ಕಠಿಣ ಕ್ರಮ ಜರುಗಿಸುವುದಾಗಿ ಸರ್ಕಾರ ಹೇಳಿದೆ. ಆದ್ರೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ಗೋವಿಂದ ಕಾರಜೋಳ ಅವರು ಮತ್ತೆ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿರುವುದು ಗೊತ್ತಾಗುತ್ತದೆ. ಯಾಕೆಂದರೆ ಮಕ್ಕಳ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವುದು ನಾಚಿಕೆಗೇಡಿತನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read also : Davanagere | ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಪಿ.ಎಂ.ಅನುರಾಧ
ಗೋವಿಂದ ಕಾರಜೋಳ ಅವರು ದಲಿತ ಸಮುದಾಯದ ನಾಯಕ. ಇಂಥ ನಾಯಕನ ಹೇಳಿಕೆ ಆಘಾತ ತಂದಿದೆ. ಮಾತ್ರವಲ್ಲ, ಅವರದ್ದೇ ಆದ ಸಮುದಾಯದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಶೌಚಾಲಯ ತೊಳೆಯಲು ದಲಿತ ಮಕ್ಕಳನ್ನೇ ಬಳಸಲಾಗುತ್ತದೆ ಎಂದು ದಲಿತ ಸಮುದಾಯದ ಮುಖಂಡರೇ ಹೇಳುತ್ತಿದ್ದಾರೆ. ಶಾಲಾ ಕಾಲೇಜು, ವಿದ್ಯಾರ್ಥಿಗಳ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಶಾಲೆಗಳಲ್ಲಿ ನಡೆಯುತ್ತಿದ್ದ ಅನಿಷ್ಟ ಪದ್ಧತಿಗಳಿಗೆ ಬ್ರೇಕ್ ಹಾಕಲಾಗುತ್ತಿದೆ. ಶೌಚಾಲಯ ತೊಳೆಯಲು ಬಳಕೆ ಮಾಡಿದ್ದು ಹಿಂದುಳಿದ, ದಲಿತ ಸಮುದಾಯದ ವಿದ್ಯಾರ್ಥಿಗಳು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಮಕ್ಕಳ ಮೇಲೆ ಒತ್ತಡ ಈಗಲೇ ಹೆಚ್ಚಾಗುತ್ತಿದೆ. ಇಂಥ ಕೆಲಸ ಮಾಡಿಸಲು ಮುಂದಾದರೆ ಮಕ್ಕಳು ಓದುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರು ಬೇಕಾದರೆ ಹೋಗಿ ಶೌಚಾಲಯ ಸ್ವಚ್ಛ ಮಾಡಿ ಬರಲಿ. ಯಾರ ಅಭ್ಯಂತರವಿಲ್ಲ. ಆದ್ರೆ,. ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಬೇಕೆಂಬ ಮಾತು ಬಂದಿರುವುದನ್ನು ನೋಡಿದರೆ ಅಧಿಕಾರ ಕಳೆದುಕೊಂಡ ಬಳಿಕ ಮನಃಸ್ಥಿತಿ ಬಿಜೆಪಿಯವರದ್ದು ಏನಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿರುವ ಮೊಹಮ್ಮದ್ ಜಿಕ್ರಿಯಾ ಅವರು, ಕೂಡಲೇ ಕ್ಷಮೆಯಾಚಿಸಬೇಕು. ಮುಂಬರುವ ದಿನಗಳಲ್ಲಿ ಇಂಥ ಹೇಳಿಕೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.
TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಪಿ.ಎಂ.ಅನುರಾಧ
Next Article davanagere Davanagere | ಲಾರಿ, ಚಾಲಕರು, ಮಾಲಿಕರ ಸಂಘದ ಗಣೇಶೋತ್ಸವ : ಹಿಂದೂ, ಮುಸ್ಲಿಂ ಸಾಮರಸ್ಯಕ್ಕೆ ನಾಂದಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನೀಟ್ ಫಲಿತಾಂಶದ ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

ದಾವಣಗೆರೆ:   ಜೂನ್ 4 ರಂದು ಪ್ರಕಟಗೊಂಡ ನೀಟ್ ಫಲಿತಾಂಶವನ್ನು ಗಮನಿಸಿದರೆ ಅನೇಕ ಪ್ರಶ್ನೆಗಳು ಮೂಡುತ್ತಿದ್ದು, ಫಲಿತಾಂಶ ಗೊಂದಲದ ಗೂಡಾಗಿದೆ ಎಂದು…

By Dinamaana Kannada News

ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ

ದಾವಣಗೆರೆ (Davanagere): ಮಕ್ಕಳು ಹಾಗೂ ಮಹಿಳೆಯರ ಪರವಾಗಿ ಕಾಯ್ದೆಗಳಿದ್ದರೂ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ…

By Dinamaana Kannada News

ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಜು.22  :  ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ,…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?