Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: January 6, 2025 3:20 pm
Dinamaana Kannada News
Share
ಯುವಜನೋತ್ಸವ
ಯುವಜನೋತ್ಸವ
SHARE

ದಾವಣಗೆರೆ (Davanagere) ಜ.6: ಯುವ ಜನತೆ ದೇಶದ ಶಕ್ತಿ, ದೇಶದ ಭವಿಷ್ಯ ಯುವಕರ ಕೈಯಲಿದೆ. ಚುನಾವಣೆಯಲ್ಲಿ ಒಮ್ಮೆ ಓಟು ಮಾಡಿದರೆ ಸಾಲದು, ಐದು ವರ್ಷ ಸರ್ಕಾರ ರೂಪಿಸುವ ನೀತಿ ನಿರೂಪಣೆ ಹಾಗೂ ಜನಪ್ರತಿನಿಧಿಗಳ ಕಾರ್ಯಗಳನ್ನು ವಿಮರ್ಶಾತ್ಮಕವಾಗಿ ಅವಲೋಕಿಸುವ ದೃಷ್ಟಿಕೋನ ಬೆಳಸಿಕೊಳ್ಳಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆ ಬಿ.ಐ.ಇ.ಟಿ ಕಾಲೇಜಿನ ಎಸ್.ಎಸ್.ಎಂ ಸಾಂಸ್ಕøತಿಕ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ರಾಜ್ಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂವಿಧಾನ ನಮಗೆ ಹಕ್ಕು ನೀಡಿದೆ. ಬರೀ ಹಕ್ಕುಗಳ ಬಗ್ಗೆ ತಿಳಿದುಕೊಂಡರೆ ಸಾಲದು, ಕರ್ತವ್ಯಗಳನ್ನು ಸಹ ಯುವಕರು ತಿಳಿದುಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿ ನಿರೂಪಣೆಯನ್ನು ವಿಮರ್ಶಾತ್ಮಕವಾಗಿ ನೋಡಬೇಕು. ಈ ಹಿನ್ನಲೆಯಲ್ಲಿ ದೇಶದ ಸಂವಿಧಾನವನ್ನು ಪರಿಚಯಿಸುವ ದೃಷ್ಟಿಯಿಂದ  KYC (Know your constitution) ಎನ್ನುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಗಿದೆ ಎಂದರು.

ಯುವಜನತೆ ವೈಯಕ್ತಿಕ, ಕೌಟುಂಬಿಕ ಹಾಗೂ ಸಾಮಾಜಿಕ ಜವಾಬ್ದಾರಿ ಅರಿತು ನಡೆಯಬೇಕು. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.

ಯುವಜನೋತ್ಸವದ ಯಶಸ್ವಿಗಾಗಿ ಶ್ರಮಿಸಿದ ಅಧಿಕಾರಿಗಳು ಹಾಗೂ ಸ್ವಯಂ ಸೇವಕರಿಗೆ ಸಂಸದರು  ಧನ್ಯವಾದ ತಿಳಿಸಿದರು.

ಮಾಯಕೊಂಡ ಶಾಸಕ ಬಸವಂತಪ್ಪ ಮಾತನಾಡಿ, ಯುವಜನೋತ್ಸವದಲ್ಲಿ ವಿಜೇತರಾದ ಕಲಾ ತಂಡಗಳಿಗೆ ರೂ. 1 ಲಕ್ಷ ಬಹುಮಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಈ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಹರಿಹರ ಶಾಸಕ ಬಿ.ಪಿ.ಹರೀಶ್, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್ ಮಾತನಾಡಿದರು.

ಯುವಜನೋತ್ಸವದಲ್ಲಿ ಪಾಲ್ಗೊಂಡ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.

ಯುವ ಪುರಸ್ಕøತರಿಗೆ  ಸಮಾರೋಪ  ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯಮಟ್ಟದ ಯುವಜನೋತ್ಸವದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಲಾಯಿತು.

ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷ ಕೆ.ನಾಗನಗೌಡ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿ.ಪಂ.ಸಿಇಓ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜನಪದ ಗೀತಗಾಯಕ ಅಪ್ಪಿಗೆರೆ ತಿಮ್ಮರಾಜು ಉಪಸ್ಥಿತಿದ್ದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೇಣುಕಾ ಸ್ವಾಗತಿಸಿದರು.

ಕಾರ್ಯಕ್ರಮಕ್ಕೂ ಮುನ್ನ ತಾಂಜಾವೂರಿನ ದಕ್ಷಿಣ ಸಾಂಸ್ಕøತಿಕ ಕೇಂದ್ರದಿಂದ ಆಗಮಿಸಿದ ಕಲಾವಿದರು ದಕ್ಷಿಣ ಭಾಗದ ಕೇರಳದ ಮಾರಿಥೈಯಂ ನೃತ್ಯ ಪ್ರದರ್ಶಿಸಿದರು.

ಪಂಜಾಬ್ ರಾಜ್ಯದಿಂದ ಆಗಮಿಸಿದ ತಂಡ ಪ್ರಸಿದ್ದ ಬಾಂಗ್ಡ ಹಾಗೂ ಮಹಾರಾಷ್ಟ್ರದ ಮುಂಬೈನಿಂದ ಆಗಮಸಿದ ಮರಾಠಿ ತಂಡ ಲಾವಣಿ ನೃತ್ಯದ ಮೂಲಕ ಜನಮನ ಸೂರೆಗೊಳಿಸಿದರು. ಮಧ್ಯಪ್ರದೇಶದ ಬದಾಯಿ ಹಾಗೂ ದಾವಣಗೆರೆ ಕಲಾ ತಂಡ ಕಂಸಾಳೆ ನೃತ್ಯ ಪ್ರದರ್ಶಿಸಿದರು.

Read also : ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿ : ಬಿ.ವಾಮದೇವಪ್ಪ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿ : ಬಿ.ವಾಮದೇವಪ್ಪ
Next Article Davanagere ಕೊಂಡಜ್ಜಿ ಕೆರೆಯಲ್ಲಿ  ಜಲ ಸಾಹಸ ಕ್ರೀಡೆ : ಡಿಸಿ, ಸಿಇಓ ಭಾಗಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

ದಾವಣಗೆರೆ (Davanagere): ಬಾಬಾಸಾಹೇಬ ಅಂಬೇಡ್ಕರ್ ಬರಹಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಅರಿವೇ ಅಂಬೇಡ್ಕರ್’ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.…

By Dinamaana Kannada News

ಪ್ರಕರಣ ದಾಖಲಾಗಿ 48 ಗಂಟೆಯಲ್ಲಿ ಆರೋಪಿ ಬಂಧನ : 5.50 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ದಾವಣಗೆರೆ (Davanagere): ಪ್ರಕರಣ ದಾಖಲಾಗಿ 48 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿ 5.50 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.…

By Dinamaana Kannada News

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?