Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: January 19, 2025 12:38 pm
Dinamaana Kannada News
Share
Davabagere
Davabagere
SHARE
ದಾವಣಗೆರೆ/ಲಕ್ಷ್ಮೀಶ್ವರ  ಜ. 19 (Davanagere) ; ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.
ಗದಗ ಜಿಲ್ಲೆಯ ಲಕ್ಷ್ಮೀಶ್ವರದಲ್ಲಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ ಹಾಗೂ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಮಕ್ಕಳಿಗೆ ಮೌಲ್ಯಗಳ‌ ಬಗ್ಗೆ ತಿಳಿಸಬೇಕು.ಮೊದಲು ಅವಿಭಕ್ತ ಕುಟುಂಬಗಳಿಂದ ಮಕ್ಕಳು ಚಿಕ್ಕಂದಿನಿಂದಲೇ ಮೌಲ್ಯಗಳನ್ನು ತಿಳಿದುಕೊಳ್ಳುತ್ತಿದ್ದರು ಆದರಿಂದು ವಿಭಕ್ತ‌ ಕುಟುಂಬಗಳೇ ಹೆಚ್ಚಾಗಿದ್ದು ಜೀವನದ ಮೌಲ್ಯಗಳು ಮರೆಯಾಗುತ್ತಿವೆ ಎಂದರು.
ಮಹಿಳೆಯರ ಶಿಕ್ಷಣದ ಬಗ್ಗೆ ಸ್ವಾತಂತ್ರ್ಯ ಪೂರ್ವದಲ್ಲೇ ಸಾವಿತ್ರಿಬಾಯಿಪುಲೆ ಅವರು ದೊಡ್ಡ ಚಳುವಳಿಯನ್ನೇ ಮಾಡಿದ್ದರು ಅದೇ ರೀತಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದವರು ಮಹಿಳೆಯರೇ ಸೇರಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವುದು ಹಾಗೂ ಶಿಕ್ಷಣ ದಾಸೋಹವನ್ನು ಮೂರು ತಲೆಮಾರಿನಿಂದ ಮಾಡುತ್ತಿರುವುದು ಶ್ಲಾಘನೀಯ ಎಂದರು.ಪ್ರಸ್ತುತ ಸಮಯದಲ್ಲಿ ಯುವಸಮೂಹಕ್ಕೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವುದು ಅಗತ್ಯ. ಸಂವಿಧಾನ ನಮಗೆ ಮೂಲಭೂತ ಹಕ್ಕುಗಳನ್ನು ನೀಡಿದೆ.ಜವಾಬ್ದಾರಿ ನೀಡಿದೆ.ನಮ್ಮ ದೇಶ ಹಾಗೂ ಸಮಾಜಕ್ಕೆ ನಮ್ಮ ಜವಾಬ್ದಾರಿ ಮುಖ್ಯ ಎನ್ನುವುದನ್ನು ತಿಳಿಸಿದೆ.
ಬೆಳೆಯವ ಸಿರಿ ಮೊಳಕೆಯಲ್ಲಿ ಎಂಬಂದತೆ ಮಕ್ಕಳಲ್ಲಿ ಶಾಲಾ ಹಂತದಲ್ಲೇ ಸಂವಿಧಾನ ಹಾಗೂ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು ಇದರಿಂದ ದೇಶ ಕಟ್ಟುವ ಕೆಲಸ ಯುವಜನರು ಮಾಡಬಹುದು.ಸಂವಿಧಾನದ ಅರಿವು ಮೂಡಿಸುವ ಕೆವೈಸಿ ಅಭಿಯಾನವನ್ನು ದಾವಣಗೆರೆ ಜಿಲ್ಲೆಯಲ್ಲಿ ಮುಂಬರುವ ದಿನದಲ್ಲಿ ಕೈಗೊಳ್ಳಲಿದ್ದೇವೆ. ನಮ್ಮಸಂವಿಧಾನದಲ್ಲಿ  ಎಲ್ಲಾ ರೀತಿಯ ಹಕ್ಕುಗಳನ್ನು ನೀಡಲಾಗಿದೆ ಅದರಲ್ಲೂ ಮಹಿಳೆಯರಿಗೆ ಮತಚಲಾಯಿಸುವ ಹಕ್ಕು ನೀಡಿದೆ. ಮಹಿಳೆಯರ ಪರವಾಗಿ ದಿಟ್ಟವಾಗಿ ಕೆಲಸ ಮಾಡಲು ನನ್ನ ದಾವಣಗೆರೆ ಕ್ಷೇತ್ರದ ಜನತೆ ಆಶೀರ್ವಾದ ಮಾಡಿದ್ದಾರೆ.ದಾವಣಗೆರೆಯ ಪ್ರಥಮ ಮಹಿಳಾ ಸಂಸದೆಯಾಗಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಕೆಲ‌ಸ ಮಾಡಲು ಹೆಮ್ಮೆಯಾಗುತ್ತದೆ ಎಂದರು.
ಜನಾಶೀರ್ವಾದ ದಿಂದ ರಾಜಕಾರಣಕ್ಕೆ ಬಂದಿದ್ದೇನೆ ಹಾಗೂ ಜನರ ಸೇವೆಗೆ ಸದಾ ಸಿದ್ದ.ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದ ಜನಕಲ್ಯಾಣ ಟ್ರಸ್ಟ್‌ ಸ್ಥಾಪಿಸಿ ಈ ಮೂಲಕ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.ಇದರೊಂದಿಗೆ ಎಸ್ ಎಸ್ ಕೇರ್ ಟ್ರಸ್ಟ್‌ ಮೂಲಕ ಆರೋಗ್ಯ ದಾಸೋಹ ಕೂಡ ಮಾಡುತ್ತಿದ್ದೇವೆ.ಬಡ ಜನರಿಗೆ ಉಚಿತ ಡಯಾಲಿಸಿಸ್ ಮಾಡಲಾಗುತ್ತಿದೆ ಇಲ್ಲಿಯವರೆಗೆ ಸುಮಾರು 20 ಸಾವಿರಕ್ಕೂ ಅಧಿಕ ಉಚಿತ ಡಯಾಲಿಸಿಸ್ ಮಾಡಲಾಗಿದೆ.ಮಹಿಳೆಯರು ಅದರಲ್ಲೂ ನಲವತ್ತು ವರ್ಷ ದಾಟಿದವರು ಸ್ತನ ಹಾಗೂ ಗರ್ಭ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ ಆದ್ದರಿಂದ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಸಾನಿಧ್ಯ ವಹಿಸಿದ್ದರು.ಶ್ರೀ ತಾಯಿ ಪಾ.ಮ.ಬಳಗದ ಅಧ್ಯಕ್ಷೆ ಸುವರ್ಣಬಾಯಿ ಬಿ. ಬಹದ್ದೂರದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಂ.ಮಹಾAತಶೆಟ್ಟರ, ಜಿ.ಎಸ್.ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ಪುರಸಭೆ ಅಧ್ಯಕ್ಷರಾದ ಯಲ್ಲಮ್ಮ ದುರಗಣ್ಣವರ ಭಾಗವಹಿಸಿದ್ದರು.
Read also : ಅಲ್ಪಸಂಖ್ಯಾತರ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ “ನುಡಿದಂತೆ ನಡೆದಿಲ್ಲ” : ಅಪ್ಸರ್ ಕೊಡ್ಲಿಪೇಟೆ  
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davabagere ಅಲ್ಪಸಂಖ್ಯಾತರ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ “ನುಡಿದಂತೆ ನಡೆದಿಲ್ಲ” : ಅಪ್ಸರ್ ಕೊಡ್ಲಿಪೇಟೆ  
Next Article ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿ : ಬಿ.ವಾಮದೇವಪ್ಪ

ದಾವಣಗೆರೆ (Davanagere): ಸೃಜನಶೀಲ ಸಾಹಿತ್ಯ ಕೃಷಿಯ ಮೂಲಕ ಸಾಹಿತ್ಯಾಸಕ್ತರ ಮನ ಗೆದ್ದಿದ್ದ ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿಯಾಗಿದ್ದರು.…

By Dinamaana Kannada News

SC-ST ಜನಾಂಗದವರ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) :  ಪ್ರಸಕ್ತ ಸಾಲಿನಲ್ಲಿ ಡಾ.ಬಾಬು ಜಗಜೀವನರಾಂರವರ 118 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ…

By Dinamaana Kannada News

ಭದ್ರಾ ಜಲಾಶಯ | ತುಂಬಲು 7.7 ಅಡಿ  ಬಾಕಿ

Bhadra dam water level today : ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dr. Veena P.
ತಾಜಾ ಸುದ್ದಿ

ದಾವಣಗೆರೆ|ಡಾ. ವೀಣಾ ಪಿ.ಅವರ “ಜೀವದಾಯಿ”ನಾಟಕ ಆಯ್ಕೆ

By Dinamaana Kannada News
Bhadra Achukattu
ತಾಜಾ ಸುದ್ದಿ

ಮುಂಗಾರು ಬೆಳೆಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು : ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರಿಗೆ ನಿಷೇಧ

By Dinamaana Kannada News
MP Dr. Prabha
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಂಸದೆ ಡಾ.ಪ್ರಭಾ ಮನವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?