Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಲಜೀವನ ಮಿಷನ್ ಯೋಜನೆ: ಕೇಂದ್ರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಜಲಜೀವನ ಮಿಷನ್ ಯೋಜನೆ: ಕೇಂದ್ರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: March 21, 2025 11:31 am
Dinamaana Kannada News
Share
Davangere MP Dr. Prabha Mallikarjun
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
SHARE

ದಾವಣಗೆರೆ.ಮಾ.21 (Davanagere); ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್‌ನಡಿಯಲ್ಲಿ 80% ಮನೆಗಳಿಗೆ ನಳದ ಮೂಲಕ ನೀರಿನ ಸಂಪರ್ಕವಿದೆ ಎಂದು ಹೇಳುತ್ತದೆ. ಆದರೆ ಇದರಲ್ಲಿ ಕೇವಲ 62% ನಳ ಸಂಪರ್ಕಗಳು ಮಾತ್ರ ಸಂಪೂರ್ಣ ಕಾರ್ಯನಿರ್ವಹಿಸುತ್ತಿದ್ದು, ದಿನಕ್ಕೆ 55 ಲೀಟರ್ ನೀರಿನ ಗುರಿಯನ್ನು ಪೂರೈಸುತ್ತಿವೆ. ಈ ನಡುವೆಯೇ 2024-25ರಲ್ಲಿ ಜಲ ಜೀವನ್ ಮಿಷನ್‌ಗೆ 67.7% ಬಜೆಟ್ ಕಡಿತವಾಯಿತು. ಇದು ನಿಧಿಗಳ ಅಳವಡಿಕೆಯಲ್ಲಿ ವೈಫಲ್ಯವನ್ನು ತೋರುತ್ತಿದೆ ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸದನದ ಗಮನಸೆಳೆದರು.

 

ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ‌ ಕೇಂದ್ರ ಸರ್ಕಾರದ ಯೋಜನೆಯಾದ ಜಲಜೀವನ ಮಿಷನ್ ಬಗ್ಗೆ ಜಲಶಕ್ತಿ ಸಚಿವಾಲಯ ನೀಡಿರುವ ಅನುದಾನದ ಕುರಿತು ಮಾತನಾಡಿದ ಸಂಸದರು, ಅಟಲ್ ಭೂಜಲ್ ಯೋಜನೆಯಡಿಯಲ್ಲಿ, 8000 ಜಲಹೀನ ಪಂಚಾಯತ್‌ಗಳಲ್ಲಿ ನೀರಿನ ಪರಿಸ್ಥಿತಿ ಸುಧಾರಣೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ಆದರೆ ವಾಸ್ತವವಾಗಿ ಕೇವಲ 37% ಜಲ ಹೀನ ಪ್ರದೇಶಗಳನ್ನು ಮಾತ್ರ ತಲುಪಲಾಗಿದೆ. ಈ ಯೋಜನೆಯಡಿ  ಬಜೆಟ್‌ನ ಕೇವಲ 57% ಮಾತ್ರ ಬಳಸಿದೆ. ಜಲಶಕ್ತಿ ನಿಧಿಗಳಿದ್ದರೂ ಅವು ಬಳಸಲಾಗುತ್ತಿಲ್ಲ ಎಂದು ವಿವರಿಸಿದರು.

 

ಕೇಂದ್ರ ಸರ್ಕಾರ ತನ್ನದೇ ಆದ ಬಜೆಟ್‌ನಲ್ಲಿ ಘೋಷಿಸಿದ ಜಲ ಶಕ್ತಿ ನಿಧಿಗಳನ್ನು ಬಿಡುಗಡೆ ಮಾಡಲು ವಿಫಲವಾಗಿದೆ. ಕರ್ನಾಟಕವು ಕೇಂದ್ರ ಸರ್ಕಾರದ ಖಜಾನೆಗೆ ಕೊಡುಗೆಯಾಗಿ ಪ್ರತಿ 100 ರೂಗಳಿಗೆ ಕೇವಲ 13 ರೂ ಮಾತ್ರ ಮರಳಿ ಪಡೆಯುತ್ತಿದೆ.ಕರ್ನಾಟಕ ಜಲ ಜೀವನ್ ಮಿಷನ್‌ನಲ್ಲಿ 34 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ 22ನೇ ಸ್ಥಾನದಲ್ಲಿದೆ. ಇದು ಆಡಳಿತ ವೈಫಲ್ಯದಿಂದ ಮಾತ್ರವಲ್ಲ, ಕೇಂದ್ರವು ₹26,119 ಕೋಟಿ ಘೋಷಿಸಿದಾಗಲೂ ಕೇವಲ ₹11,760 ಕೋಟಿ ಬಿಡುಗಡೆ ಮಾಡಿದೆ ಅದರಲ್ಲಿಯೂ ಕೇವಲ 45%.ಮಾತ್ರ‌ ಇದು ಮಲತಾಯಿ ಧೋರಣೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ?

 

2024-25ರಲ್ಲಿ ಕರ್ನಾಟಕಕ್ಕೆ ₹3,804 ಕೋಟಿ ಮೀಸಲಾಗಿದ್ದರೂ, ಕೇವಲ ₹570 ಕೋಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಸರ್ಕಾರ ತನ್ನ ಬಜೆಟ್‌ನಿಂದ ₹4,977 ಕೋಟಿ ಖರ್ಚು ಮಾಡಿದೆ, ಇದು ಕೇಂದ್ರ-ರಾಜ್ಯ 60:40 ಅನುಪಾತಕ್ಕೂ ಹೆಚ್ಚು. ಅನೇಕ ಪತ್ರಗಳು, ಮನವಿಗಳು, ಪ್ರತಿಭಟನೆಗಳ ಬಳಿಕವೂ ಕೇಂದ್ರ ಸರ್ಕಾರ ಹೆಚ್ಚು ನಿಧಿ ಬಿಡುಗಡೆ ಮಾಡಿಲ್ಲ ಆದರೆ ಕರ್ನಾಟಕ ನಿಷ್ಠೆಯಿಂದ ತನ್ನ ತೆರಿಗೆ ಪಾಲು ನೀಡುತ್ತಿದೆ ಎಂದರು.

 

Read also : ಜಿಲ್ಲಾಸ್ಪತ್ರೆ ಪುನರ್ ನಿರ್ಮಿಸಿ, ವೆಂಟಿಲೇಟರ್ ಸಂಖ್ಯೆ ಹೆಚ್ಚಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

 

ಈ ಯೋಜನೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿನ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿನೀರಾವರಿ ಮತ್ತು 367 ಸಣ್ಣ ನೀರಾವರಿ ಟ್ಯಾಂಕ್ ಗಳನ್ನು ತುಂಬಿಸಲು ಈ ಯೋಜನೆ ಅತ್ಯಗತ್ಯ. ಕೇಂದ್ರವು ₹5,300 ಕೋಟಿ ಘೋಷಿಸಿದರೂ ಕರ್ನಾಟಕದವರಾದ ನಾವು ಖಾಲಿ ಚೆಂಬು ಮಾತ್ರ ಪಡೆದಿದ್ದೇವೆ. ಕರ್ನಾಟಕ ತನ್ನ ಪಾಲಿನ ₹10,121.75 ಕೋಟಿಯನ್ನು ಯೋಜನೆಗೆ ನೀಡಿದೆ ಎಂದರು.

 

ಕೇಂದ್ರ ಸರ್ಕಾರ ಮೊದಲನೆಯದಾಗಿ, ಕರ್ನಾಟಕದ ಬಾಕಿ ಉಳಿದಿರುವ ನಿಧಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕರ್ನಾಟಕ ನೀಡುವ ಪ್ರತಿ ರೂಪಾಯಿಗೂ ಎರಡುಪಟ್ಟು ಮರಳಿ ನೀಡಬೇಕು.ಎರಡನೆಯದಾಗಿ ಬಜೆಟ್ ನಿಯೋಜನೆಗಳನ್ನು ಗುರಿಗಳಿಗೆ ಅನುಗುಣವಾಗಿ ಹೆಚ್ಚಿಸಬೇಕು. ನೀರಿನ ಭದ್ರತೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ. ಬಜೆಟ್‌ನಲ್ಲಿ ಘೋಷಿಸಿದ ನಿಧಿಗಳನ್ನು ಕನಿಷ್ಠವಾದರೂ ಬಳಕೆ ಮಾಡಬೇಕು ಎಂದರು.

 

ದಾವಣಗೆರೆಯ ಭದ್ರಾ ಕಾಲುವೆಯ ಟೇಲ್-ಎಂಡ್ ಗ್ರಾಮೀಣ ಪ್ರದೇಶಗಳಾದ ಹರಿಹರ, ಮಲೆಬೆನ್ನೂರು, ದಾವಣಗೆರೆ, ಹರಪನಹಳ್ಳಿ ಸೇರಿದಂತೆ ಸುಮಾರು 5,700 ಹೆಕ್ಟೇರ್ ಕೃಷಿ ಭೂಮಿಯನ್ನು ಹೊಂದಿದ್ದು, ನೂರಾರು ಗ್ರಾಮೀಣ ಪ್ರದೇಶಗಳಿಗೆ ನೀರು ಒದಗಿಸುತ್ತಿದೆ.

ಈ ಕಾಲುವೆಗಳಲ್ಲಿ ಭಾರಿ ಹೂಳು ಶೇಖರಣೆಯಾಗಿರುವುದರಿಂದ ರೈತರು ವಾರ್ಷಿಕ ಒಂದೇ ಬೆಳೆಯುತ್ತಿದ್ದು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಭದ್ರಾ ಕಾಲುವೆಯ ಹೂಳೆತ್ತಲು ಮತ್ತು ನೀರಿನ ಹರಿವನ್ನು ಸುಗಮಗೊಳಿಸಲು ಮತ್ತು ಆಧುನಿಕರಣಗೊಳಿಸಲು ಅಂದಾಜು ರೂ. 150 ಕೋಟಿಯ ವಿಶೇಷ ಅನುದಾನವನ್ನು ಕಾಲುವೆಗಳ ಕೊನೆ ಭಾಗದ ರೈತರ ಅನುಕೂಲಕ್ಕಾಗಿ ಬಿಡುಗಡೆ ಮಾಡಬೇಕು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿಜಲ ಜೀವನ್ ಮಿಷನ್‌ದಿನಮಾನ.ಕಾಂ
Share This Article
Twitter Email Copy Link Print
Previous Article Davangere District Chigateri Hospital ಜಿಲ್ಲಾಸ್ಪತ್ರೆ ಪುನರ್ ನಿರ್ಮಿಸಿ, ವೆಂಟಿಲೇಟರ್ ಸಂಖ್ಯೆ ಹೆಚ್ಚಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ
Next Article Davanagere ರಾಷ್ಟ್ರೀಯ, ಅಂತರಾಷ್ಟ್ರೀಯ ಯೋಗ ಪ್ರಶಸ್ತಿ : ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಕ್ರಮ ಗಣಿಗಾರಿಕೆ, ಕ್ರಷರ್ ನಡೆಯುತ್ತಿದ್ದರೂ ಮೌನ ಸರಿಯಲ್ಲ : ಜಿ. ಬಿ. ವಿನಯ್ ಕುಮಾರ್ ಆಕ್ರೋಶ

ದಾವಣಗೆರೆ (Davanagere): ಹೊನ್ನಾಳಿ - ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಶಾಶ್ವತ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಆರುಂಡಿ ಗ್ರಾಮಸ್ಥರು…

By Dinamaana Kannada News

Davanagere | ಈಜು ಸ್ಪರ್ಧೆ: ಈಶ್ವರಮ್ಮ ಶಾಲೆಯ ಎನ್.ಎಂ.ಛವಿ ರಾಜ್ಯ ಮಟ್ಟಕ್ಕೆ ಆಯ್ಕೆ

ದಾವಣಗೆರೆ (Davanagere ): ಜಿಲ್ಲಾ ಮಟ್ಟದ ಕ್ರೀಡಾಕೂಟ ವಿಭಾಗದಲ್ಲಿ ಈಜು ಸ್ಪರ್ಧೆಯಲ್ಲಿ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

By Dinamaana Kannada News

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ(Davanagere): ದಾವಣಗೆರೆ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?