Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ತಾಜಾ ಸುದ್ದಿ

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Dinamaana Kannada News
Last updated: August 1, 2025 11:40 am
Dinamaana Kannada News
Share
reservation for Scheduled Castes
SHARE

ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಶುಕ್ರವಾರ ನಡೆಯಿತು.

ಅಂಬೇಡ್ಕರ ವೃತ್ತದಿಂದ ಮೆರವಣೆಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ.ಜಾತಿಗಳ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 35 ವರುಷಗಳಿಂದ ನನೆಗುದಿಗೆ ಬಿದ್ದಿದೆ. ಈ ಅಸಮಾನತೆಯನ್ನು ಸರಿಪಡಿಸಲು, ದಿನಾಂಕ 01-08-2024 ರ ಸರ್ವೋಚ್ಛ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ಪ.ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶವನ್ನು ನೀಡಿದೆ. ಆದರೆ, ಕರ್ನಾಟಕ ಸರ್ಕಾರವು ಈ ಸರ್ವೋಚ್ಛ ನ್ಯಾಯಾಲಯದ ತೀರ್ಪುನ್ನು ಜಾರಿಗೊಳಿಸಲು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದು ನಮ್ಮ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾವಹಿಸಿ ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ಆಗಿದ್ದಾರೆ. ಆದರೆ ಕರ್ನಾಟಕ ಸರ್ಕಾರ ತೀವ್ರವಾದ ವಿಳಂಬ ನೀತಿ ಅನುಸರಿಸುತ್ತಿದ್ದು ಪ.ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು 29 ಉಪಜಾತಿಗಳಲ್ಲಿ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ ಎಂದು ಕಿಡಿಕಾರಿದರು.

Read also : ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

ನಾಗಮೋಹನ್ ದಾಸ್ ಆಯೋಗಕ್ಕೆ ಸರ್ಕಾರ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿಲ್ಲ.ಪ.ಜಾತಿಗಳ ನಡುವೆ ಮೀಸಲಾತಿಯ ಹಂಚಿಕೆಯಲ್ಲಿ ಉಂಟಾಗಿರುವ ಅಸಮಾನತೆ ಮತ್ತು ಸಮುದಾಯಗಳ ನಡುವಿನ ಹಿಂದುಳಿದಿರುವಿಕೆಯನ್ನು ಸಮಗ್ರವಾಗಿ ಅಧ್ಯಯನ ಮಾಡಲು ಆಯೋಗ ಎಲ್ಲ ಇಲಾಖೆಗಳಿಗೆ ಅಗತ್ಯ ಮಾಹಿತಿಯನ್ನು ಜನವರಿಯಲ್ಲಿ ಕೇಳಿತ್ತು. ಆದರೆ ರಾಜ್ಯ ಸರ್ಕಾರದ ನಿರ್ಲಕ್ಷದಿಂದಾಗಿ ಆರು ತಿಂಗಳಾದರು ಸರಿಯಾದ ಮಾಹಿತಿಗಳು ಆಯೋಗಕ್ಕೆ ಬಂದಿಲ್ಲ. ಕೆಲವು ಇಲಾಖೆಗಳ ಮಾಹಿತಿ ಅಪೂರ್ಣವಾಗಿದೆ. ಆಯೋಗ ನೆಡಸಿದ ಸಮೀಕ್ಷೆ , ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆಗಳು ಗೊಂದಲ ಹುಟ್ಟುಹಾಕಿ ನಗೆಪಾಟಲಿಗೆ ಈಡಾಯಿತು. ಮೂರುವಾರದಲ್ಲಿ ಸಮೀಕ್ಷೆ ಮುಗಿಸಿ ವರದಿ ಸಿದ್ಧಪಡಿಸಲಾಗುವುದು ಎಂಬ ಸರ್ಕಾರದ ಹೇಳಿಕೆ ಕಿಮ್ಮತ್ತು ಕಳೆದುಕೊಂಡಿದೆ. ಕಾಂತರಾಜ್ ಆಯೋಗದ ಜಾತಿಗಣತಿಯ ವರದಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ನಿರ್ಲಕ್ಷ್ಯದಿಂದ ಕೊನೆಗೆ ಕಸದ ಬುಟ್ಟಿ ಸೇರಿತು. ನಾಗಮೋಹನ್ ದಾಸ್ ವರದಿಯ ಬಗೆಗಿನ ಗೊಂದಲಗಳು, ಸರ್ಕಾರದ ನಿರ್ಲಕ್ಷದ ಧೋರಣೆಯ ಬಗ್ಗೆ ಎಚ್ಚರಿಕೆಯ ಘಂಟೆ ಬಾರಿಸುತ್ತಿದ್ದೇವೆ. ಸರ್ಕಾರ ಸರಿದಾರಿಗೆ ಬರಬೇಕು. ತಕ್ಷಣ ಒಳಮೀಸಲಾತಿ ಜಾರಿಮಾಡಬೇಕೆಂಬುದು ನಮ್ಮ ಅಗ್ರಹ. ಆ. 11ರಿಂದ ಪ್ರಾರಂಭವಾಗುವ ವಿಧಾನ ಮಂಡಲಗಳ ಅಧಿವೇಶನ ಆರಂಭವಾಗುತ್ತಿದ್ದು ಸರ್ಕಾರದ ನಿರ್ಲಕ್ಷ, ವಿಳಂಬ ಧೋರಣೆಯ ಬಗ್ಗೆ ಜನಾಕ್ರೋಶ ಉಗ್ರಸ್ವರೂಪ ತಾಳುವುದು ನಿಶ್ಚಿತ ಎಂದರು.

ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಸಂಪೂರ್ಣವಾಗಿ ಪ.ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು. ಒಂದು ವೇಳೆ ಸರ್ಕಾರವು ಈ ಗಡುವಿನೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ ಇರುವ ಪ.ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜು,ಜಿಲ್ಲಾಧ್ಯಕ್ಷ ರಾಜು ಶಾಮನೂರು,ಎಂ.ಹಾಲೇಶ್   ಗಾಂಧಿನಗರ, ಮಂಜುನಾಥ್ ಕುಂದವಾಡ,ಅಂಜಿನಪ್ಪಶಾಮನೂರು, ಡಿ.ಹನುಮಂತಪ್ಪ,ಉಚ್ಚಂಗಿ ಪ್ರಸಾದ್, ಬಸವರಾಜ್ ಡಿ.  ಆಲೂರು, ಕೆ.ಹೆಚ್. ಅವಿನಾಶ್, ಕರಿಯಪ್ಪಆವರಗೆರೆ, ಹರೀಶ್ ಹೊನ್ನೂರು, ದುರುಗೇಶ್ ಎಂ. ನಿಟುವಳ್ಳಿ, ಆನಂದ ಎಂ.ಜಾಲಿಹಾಳ್, ಅತ್ತಿಗೆರೆಸಿದ್ಧಪ್ಪ, ಬೇತೂರು ಹನುಮಂತಪ್ಪ ಸೇರಿದಂತೆ ಇತರರು ಇದ್ದರು.

TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere police ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ
Next Article Power outage ದಾವಣಗೆರೆ|ಆ.2 ರಂದು ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಭರ್ಜರಿ ರೋಡ್ ಷೋ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಗುರುವಾರ ಭರ್ಜರಿ ರೋಡ್ ಷೋ ನಡೆಸಿದರು.…

By Dinamaana Kannada News

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ (Davanagere) :  ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 19 ರಂದು…

By Dinamaana Kannada News

Political analysis|ಅರಸು, ಕೃಷ್ಣ,ಯಡಿಯೂರಪ್ಪ ಅವರಿಗೆ ನಸೀಬು ಇತ್ತು

ಇದು 1999 ರಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ಕೆಪಿಸಿಸಿ  ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ನಾಯಕ ರಾಜಶೇಖರ ಮೂರ್ತಿ ಅವರನ್ನು…

By Dinamaana Kannada News

You Might Also Like

madubanagarappa
ತಾಜಾ ಸುದ್ದಿ

ಶೀಘ್ರವೇ ಶಿಕ್ಷಕರ ನೇಮಕಾತಿ : ಸಚಿವ ಎಸ್.ಮಧು ಬಂಗಾರಪ್ಪ

By Dinamaana Kannada News
suicide
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

By Dinamaana Kannada News
Harihara
ತಾಜಾ ಸುದ್ದಿ

ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು

By Dinamaana Kannada News
baby girl
ತಾಜಾ ಸುದ್ದಿ

ದಾವಣಗೆರೆ|ಹೆಣ್ಣು ಮಗುವಿಗೆ ಜನ್ಮ ನೀಡಿ ಬಕೆಟ್‌ನಲ್ಲಿಟ್ಟು ಪರಾರಿಯಾದ ತಾಯಿ!

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?