Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ರಂಗಾಯಣದಿಂದ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ ರಂಗಾಯಣದಿಂದ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

Dinamaana Kannada News
Last updated: September 10, 2025 9:24 am
Dinamaana Kannada News
Share
Davangere Rangayana
SHARE

ದಾವಣಗೆರೆ, ಸೆ. 10, 2025: ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣವು ತನ್ನ ರಂಗಚಟುವಟಿಕೆಗಳನ್ನು ತೀವ್ರಗೊಳಿಸಲು 12 ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲಾಡಳಿತ ಭವನದಲ್ಲಿರುವ ರಂಗಾಯಣವು ನಾಟಕ ಸಿದ್ಧತೆ, ರಂಗತರಬೇತಿ, ರಂಗಪ್ರದರ್ಶನ ಮತ್ತು ರಂಗಶಿಬಿರಗಳಂತಹ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿದೆ.

ಆಯ್ಕೆಯ ನಿಬಂಧನೆಗಳು:
1. ಅರ್ಹತೆ: 20 ರಿಂದ 35 ವರ್ಷ ವಯಸ್ಸಿನ ಮಹಿಳೆಯರು ಸೇರಿದಂತೆ 12 ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.
2. ರಂಗ ಪರಿಣತಿ : ರಂಗಭೂಮಿ ಪರಿಣತಿಯೇ ಪ್ರಮುಖ ಅರ್ಹತೆ. ರಂಗಶಿಕ್ಷಣದ ಡಿಪ್ಲೋಮಾ/ಪ್ರಮಾಣಪತ್ರ ಅಪೇಕ್ಷಣೀಯವಾದರೂ ಕಡ್ಡಾಯವಲ್ಲ. ರಂಗಪ್ರಯೋಗಗಳಲ್ಲಿ ಭಾಗವಹಿಸಿದವರಿಗೆ ಆದ್ಯತೆ.
3. ಪಾರಂಪರಿಕ ಕಲೆ: ಪಾರಂಪರಿಕ ಕಲೆಯ ಕುಟುಂಬದಿಂದ ಬಂದವರಿಗೆ ಆದ್ಯತೆ.
4. ಸಂಭಾವನೆ : ಆಯ್ಕೆಯಾದ ಕಲಾವಿದರಿಗೆ ತಿಂಗಳಿಗೆ 15,000 ರೂ. ಗೌರವ ಸಂಭಾವನೆ.
5. ತಾತ್ಕಾಲಿಕ ಆಯ್ಕೆ : ಈ ಆಯ್ಕೆ ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಖಾಯಂ ಹುದ್ದೆಗಳಲ್ಲ.
6. ನಡವಳಿಕೆ : ತರಬೇತಿ ಅವಧಿಯಲ್ಲಿ ಅನಪೇಕ್ಷಿತ ನಡವಳಿಕೆ ಕಂಡುಬಂದರೆ ಕಲಾವಿದರನ್ನು ತೆಗೆದುಹಾಕುವ ಅಧಿಕಾರ ರಂಗಾಯಣ ಹಾಗೂ ರಂಗಸಮಾಜಕ್ಕೆ ಇದೆ.
7. ನಿಯಮಗಳಿಗೆ ಬದ್ಧತೆ : ಆಯ್ಕೆಯಾದ ಕಲಾವಿದರು ರಂಗಾಯಣದ ನಿಯಮಗಳಿಗೆ ಬದ್ಧರಾಗಿರಬೇಕು.
8. ಪಾರದರ್ಶಕ ಆಯ್ಕೆ : ರಂಗಾಯಣ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಂಗಸಮಾಜದ ಉಪಸಮಿತಿಯು ಪಾರದರ್ಶಕವಾಗಿ ಆಯ್ಕೆ ನಡೆಸಲಿದೆ.
9. ನಿರ್ದೇಶಕರ ನಿಯಂತ್ರಣ : ಆಯ್ಕೆಯಾದ ಕಲಾವಿದರು ರಂಗಾಯಣ ನಿರ್ದೇಶಕರ ಮತ್ತು ವಿಶೇಷಾಧಿಕಾರಿಗಳ ಆಡಳಿತಕ್ಕೆ ಒಳಪಟ್ಟಿರುತ್ತಾರೆ.
10. ತೀರ್ಮಾನ : ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಅರ್ಜಿ ಸಲ್ಲಿಕೆ:
ಆಸಕ್ತ ಕಲಾವಿದರು ತಮ್ಮ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 19.09.2025, ಸಂಜೆ 5:30 ಗಂಟೆಯೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು:

Read also : ಬಸವ ಸಂಸ್ಕøತಿ ಅಭಿಯಾನ : ಮೂಢನಂಬಿಕೆಗಳಿಗೂ ಧರ್ಮದ ವಸ್ತ್ರ

ವಿಳಾಸ : ವಿಶೇಷಾಧಿಕಾರಿಗಳು, ವೃತ್ತಿ ರಂಗಭೂಮಿ ರಂಗಾಯಣ, ಕೊಠಡಿ ಸಂಖ್ಯೆ: 38ಎ, ಜಿಲ್ಲಾಡಳಿತ ಭವನ, ದಾವಣಗೆರೆ-577006
ಇ-ಮೇಲ್ : dvgrangayana@gmail.com

ಸಂದರ್ಶನ:
ಸಂದರ್ಶನವು ದಿನಾಂಕ 20.09.2025 ರಂದು ಬೆಳಗ್ಗೆ 10:30 ಗಂಟೆಗೆ ವೃತ್ತಿ ರಂಗಭೂಮಿ ರಂಗಾಯಣ, ಕೊಠಡಿ ಸಂಖ್ಯೆ: 38ಎ, ಮೊದಲನೆ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ನಡೆಯಲಿದೆ.

ಸಂದರ್ಶನಕ್ಕೆ ತರಬೇಕಾದ ದಾಖಲೆಗಳು:
1. ಜನ್ಮ ದಿನಾಂಕ ದೃಢೀಕರಣ ಪತ್ರ
2. ಎನ್.ಎಸ್.ಡಿ/ಡಿಪ್ಲೋಮಾ ಪ್ರಮಾಣಪತ್ರ (ತರಬೇತಿ ಹೊಂದಿದವರು)
3. ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣಪತ್ರ (ತರಬೇತಿ ಹೊಂದಿದ್ದರೆ)
4. ರಂಗಭೂಮಿ ಅನುಭವ ಕುರಿತ ಸ್ವವಿವರ ಪತ್ರ

ರಂಗಾಯಣದ ಕರೆ:
ರಂಗಾಯಣದ ನಿಯಮಗಳಿಗೆ ಬದ್ಧರಾಗಿ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ವಿನಂತಿಸಿದ್ದಾರೆ.

ಸಂಪರ್ಕಕ್ಕಾಗಿ :
ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ  
ಇ-ಮೇಲ್: dvgrangayana@gmail.com
Mob : 9341010712

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಬಸವ ಸಂಸ್ಕøತಿ ಅಭಿಯಾನ : ಮೂಢನಂಬಿಕೆಗಳಿಗೂ ಧರ್ಮದ ವಸ್ತ್ರ
Next Article District Collector G.M. Gangadharaswamy ನಾಯಿ ಕಡಿತದ ಲಸಿಕೆಗೆ ಸಹಾಯವಾಣಿ ಸ್ಥಾಪನೆಗೆ ಡಿಸಿ ಸೂಚನೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

“ಜಾತಿ ಗಣತಿ” ಬಂದಾಗ ಲಿಂಗಾಯತರು ಎಚ್ಚರಗೊಳ್ಳಬೇಕು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಜಾತಿ ಗಣತಿ ಅಂತ ಬಂದಾಗ ವೀರಶೈವ ಲಿಂಗಾಯತರು ಇನ್ನಾದರೂ ಜಾಗೃತರಾಗಿ ಒಗ್ಗಟ್ಟಿನಿಂದ ನಡೆಯುವುದು ಅವಶ್ಯವಾಗಿದೆ ಎಂದು…

By Dinamaana Kannada News

L G HAVANUR | ಅರಸು ಕಣ್ಣಿಗೆ ಬಿದ್ದ ಹಾವನೂರು

Kannada News | Dinamaana.com | 25-08-2024 ಕರ್ನಾಟಕದಲ್ಲಿ , ಎಪ್ಪತ್ತರ ದಶಕದಲ್ಲಿ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಕಾಲವದು.  ದಾವಣಗೆರೆಯ…

By Dinamaana Kannada News

Davanagere | ಕಳಪೆ ಗುಣಮಟ್ಟದ ಟಾರ್ಪಲ್ ಮಾರಾಟ : ತಯಾರಿಕಾ ಸಂಸ್ಥೆಗೆ ಪರಿಹಾರ ನೀಡಲು ಆದೇಶ

ದಾವಣಗೆರೆ ನ.16 (Davanagere) : ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದ ರೈತ ನಟರಾಜ್ ಬಿನ್ ಜಯಪ್ಪ ಇವರು ಮುಂಬೈ ಮೂಲದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?