ದಾವಣಗೆರೆ : ನಾಗರೀಕ ಸೇವೆ ಮತ್ತು ಹೊಣೆಗಾರಿಕೆಯನ್ನು ಸುಧಾರಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ಜಂಟಿ ಸಹಯೋಗದೊಂದಿಗೆ ದಾವಣಗೆರೆ ಸ್ಮಾರ್ಟ್ ಸಿಟಿಯು ಅಪ್ಲಿಕೇಷನ್ ಎಂಬ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ”ಗಾಗಿ “ದಾವಣಗೆರೆ ಸ್ಮಾರ್ಟ್ ಹೆಲ್ಪ್” ಅಪ್ಲಿಕೇಶನ್ನ್ನು ಜಿಲ್ಲಾ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಬಿಡುಗಡೆಗೊಳಿಸಿದರು.
ಸಾರ್ವಜನಿಕರು ಮಹಾನಗರ ಪಾಲಿಕೆಯ ಆರೋಗ್ಯ ಮತ್ತು ಪರಿಸರ ವಿಭಾಗಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಕಸವಿಲೇವಾರಿ ಸಮಸ್ಯೆ ಕುರಿತು ಛಾಯಾಚಿತ್ರಗಳೊಂದಿಗೆ ಮೊಬೈಲ್ ಅಪ್ಲಿಕೇಷನ್ ಮೂಲಕ ದೂರು ಸಲ್ಲಿಸಿ, ಸ್ವೀಕೃತಿ ಪಡೆಯಲು ಮತ್ತು ನಿಗಧಿತ ಸಮಯದಲ್ಲಿ ದೂರು ಪರಿಹಾರವಾಗುವ ಬಗ್ಗೆ ಪರಿಶೀಲಿಸಲು ಅವಕಾಶವಿರುತ್ತದೆ. ಸಾರ್ವಜನಿಕರು ಮೊದಲ ಬಾರಿಗೆ ಮೊಬೈಲ್ ಅಪ್ಲಿಕೇಷನ್ನಲ್ಲಿ ತಮ್ಮ ಮೊಬೈಲ್ ನಂಬರ್, ಇ-ಮೇಲ್ ಐಡಿ ನೀಡುವ ಮೂಲಕ ಒಂದು ಬಾರಿ ನೊಂದಾಯಿಸಿಕೊಳ್ಳಬೇಕು.
ದೂರು ಸಲ್ಲಿಸುವ ವಿಧಾನ :
ಕಸ ವಿಲೇವಾರಿ ಕುರಿತ ಪುರಾವೆಗಳ ಛಾಯಾಚಿತ್ರಗಳನ್ನು ಮೊಬೈಲ್ ಅಪ್ಲಿಕೇಶನ್ ಮುಖಾಂತರ ಅಪ್ಲೋಡ್ ಮಾಡುವುದರೊಂದಿಗೆ ಸರಳ ನೊಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ನಾಗರಿಕರು ತಮ್ಮ ಆದ್ಯತೆಯ ಭಾಷೆ – ಕನ್ನಡ ಅಥವಾ ಇಂಗ್ಲಿಷ್ನಲ್ಲಿ ದೂರು ಸಲ್ಲಿಸಬಹುದು. ಹಾಗೆಯೇ ಸಮಯ-ಬದ್ಧ ಪರಿಹಾರ ಕಾರ್ಯವಿಧಾನಕ್ಕೆ ಸಹ ಅವಕಾಶ ಕಲ್ಪಿಸಲಾಗಿದೆ. ನಾಗರಿಕರ ಪಾರದರ್ಶಕತೆಗಾಗಿ ತಮ್ಮ ದೂರನ್ನು ಯಾರು ನಿರ್ವಹಿಸುತ್ತಿದ್ದಾರೆ ಮತ್ತು ಯಾವ ಹಂತದಲ್ಲಿದೆ ಎಂಬುದನ್ನು ಸುಲಭವಾಗಿ ವೀಕ್ಷಿಸಬಹುದು. ನಗರದ ನಾಗರೀಕರ ಅಗತ್ಯತೆ ಮತ್ತು ಪ್ರತಿಕ್ರಿಯೆಗಳನ್ನು ಆಧರಿಸಿ ಈ ಕುಂದು ಕೊರತೆ ಅಪ್ಲಿಕೇಷನ್ನ್ನು ಸುಧಾರಣೆ ಮಾಡಲಾಗುತ್ತದೆ.
ಕಸ ವಿಲೇವಾರಿ ಕುರಿತ ಪುರಾವೆಗಳ ಛಾಯಾಚಿತ್ರಗಳನ್ನು ಮೊಬೈಲ್ ಅಪ್ಲಿಕೇಶನ್ ಮುಖಾಂತರ ಅಪ್ಲೋಡ್ ಮಾಡುವುದರೊಂದಿಗೆ ಸರಳ ನೊಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ನಾಗರಿಕರು ತಮ್ಮ ಆದ್ಯತೆಯ ಭಾಷೆ – ಕನ್ನಡ ಅಥವಾ ಇಂಗ್ಲಿಷ್ನಲ್ಲಿ ದೂರು ಸಲ್ಲಿಸಬಹುದು. ಹಾಗೆಯೇ ಸಮಯ-ಬದ್ಧ ಪರಿಹಾರ ಕಾರ್ಯವಿಧಾನಕ್ಕೆ ಸಹ ಅವಕಾಶ ಕಲ್ಪಿಸಲಾಗಿದೆ. ನಾಗರಿಕರ ಪಾರದರ್ಶಕತೆಗಾಗಿ ತಮ್ಮ ದೂರನ್ನು ಯಾರು ನಿರ್ವಹಿಸುತ್ತಿದ್ದಾರೆ ಮತ್ತು ಯಾವ ಹಂತದಲ್ಲಿದೆ ಎಂಬುದನ್ನು ಸುಲಭವಾಗಿ ವೀಕ್ಷಿಸಬಹುದು. ನಗರದ ನಾಗರೀಕರ ಅಗತ್ಯತೆ ಮತ್ತು ಪ್ರತಿಕ್ರಿಯೆಗಳನ್ನು ಆಧರಿಸಿ ಈ ಕುಂದು ಕೊರತೆ ಅಪ್ಲಿಕೇಷನ್ನ್ನು ಸುಧಾರಣೆ ಮಾಡಲಾಗುತ್ತದೆ.
ಸಾರ್ವಜನಿಕರು ಸತ್ತ ಪ್ರಾಣಿಗಳನ್ನು ತೆರವುಗೊಳಿಸದೇ ಇರುವುದು. ಕಸದ ರಾಶಿ, ಕಸದ ಬುಟ್ಟಿಗಳನ್ನು ಸ್ವಚ್ಛಗೊಳಿಸದಿರುವುದು. ಕಸದ ವಾಹನಗಳು ಬಾರದಿರುವುದು. ರಸ್ತೆಯಲ್ಲಿನ ಕಸವನ್ನು ಗುಡಿಸದಿರು ವುದು. ತೆರೆದ ಜಾಗದಲ್ಲಿ ಕಸವನ್ನು ಸುಡುವುದು. ಕಟ್ಟಡದ ನಿರ್ಮಾಣದ ಸಾಮಗ್ರಿ, ಅವಶೇಷಗಳನ್ನು ಹಾಗೆ ಬಿಟ್ಟಿರುವ ಕಸ ವಿಲೇವಾರಿ ಕುರಿತು ದೂರನ್ನು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು ಪ್ಲೇ-ಸ್ಟೋರ್ನಲ್ಲಿ https://play.google.com/store/ apps/details?id=com.dvgsmart. help ಜಾಲತಾಣದಲ್ಲಿ ಡೌನ್ಲೋಡ್ ಮಾಡಿಕೊಳ್ಳಲಾಗುವುದು.
ಪ್ರಸ್ತುತ ಕಸ ವಿಲೇವಾರಿ (SWM) ಸಂಬಂಧಿಸಿದಂತೆ ದೂರುಗಳನ್ನು ಮೊಬೈಲ್ ಅಪ್ಲಿಕೇಷನ್ನ ಡ್ರಾಪ್ಡೌನ್ನಲ್ಲಿ ನಮೂದಾಗಿದ್ದು, ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆಗೆ ಸಂಬಂಧಿಸಿದ ಇತರೆ ದೂರುಗಳನ್ನು ಸಹ ನೊಂದಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾಹಿತಿ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಪಾಲಿಕೆ ಆಯುಕ್ತೆ ರೇಣುಕಾ, ಡಿಯುಡಿಸಿ ಯೋಜನಾ ನಿರ್ದೇಶಕ ಮಹಾಂತೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
