Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಕಾಣಿಯಾದ ಮಕ್ಕಳ ಶೀಘ್ರವಾಗಿ ಪತ್ತೆಗೆ ಎಸ್ಪಿ ಸೂಚನೆ
ತಾಜಾ ಸುದ್ದಿ

ದಾವಣಗೆರೆ : ಕಾಣಿಯಾದ ಮಕ್ಕಳ ಶೀಘ್ರವಾಗಿ ಪತ್ತೆಗೆ ಎಸ್ಪಿ ಸೂಚನೆ

Dinamaana Kannada News
Last updated: September 23, 2025 4:04 pm
Dinamaana Kannada News
Share
Davanagere
SHARE

ದಾವಣಗೆರೆ ಸೆ.23 : ಮಕ್ಕಳು ಆರೋಗ್ಯವಂತರಾಗಿರುವುದರ ಜೊತೆಗೆ ಸುರಕ್ಷಿತವಾಗಿರಬೇಕು, ಸಣ್ಣ ವಯಸ್ಸಿನಲ್ಲಿ ತಂದೆ, ತಾಯಿ ಹಾಗೂ ಪೋಷಕರ ಅಗತ್ಯವಿರುವ ಕಾರಣ ಕಾಣೆಯಾದ ಮಕ್ಕಳನ್ನು ಶೀಘ್ರವಾಗಿ ಪತ್ತೆಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ ಉಮಾ ಪ್ರಶಾಂತ್ ಸೂಚಿಸಿದರು.

ಮಂಗಳವಾರ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಣೆಯಾದ ಮಕ್ಕಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 2021 ರಿಂದ 2025 ರವರೆಗೆ 497 ಪ್ರಕರಣಗಳು ವರದಿಯಾಗಿದ್ದು, 478 ಪ್ರಕರಣಗಳು ಪತ್ತೆಯಾಗಿರುತ್ತದೆ. ಇನ್ನೂ 19 ಪ್ರಕರಣಗಳು ಬಾಕಿ ಉಳಿದಿರುತ್ತದೆ. ಪೋಕ್ಸೊ ಕಾಯ್ದೆಗೆ ಭಯಬೀತರಾಗಿ ಸಾರ್ವಜನಿಕರು ಪೊಲೀಸರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ, ನಾವು ಯಾವುದೇ ಕಾರಣಕ್ಕೂ ತೊಂದರೆಯಾಗದAತೆ ಸಮಸ್ಯೆ ಬಗೆಹರಿಸುತ್ತೇವೆ ಎಂಬ ಭರವಸೆಯನ್ನು ನೀಡಿದರು.

ಚನ್ನಗಿರಿ, ಹೊನ್ನಾಳಿಯಲ್ಲಿ ಅತೀ ಹೆಚ್ಚು ಕಾಣೆಯಾದ ಪ್ರಕರಣಗಳು ಬಾಕಿ ಇರುವುದರಿಂದ ಅವರಿಗೆ ನೋಟೀಸ್ ನೀಡುವಂತೆ ತಿಳಿಸಿದರು.

ಮಕ್ಕಳು ದೇಶದ ಆಸ್ತಿ, ಮಕ್ಕಳ ಸಮಸ್ಯೆ ನ್ಯೂನ್ಯತೆಗಳನ್ನು ಪರಿಹರಿಸುವ ಮೂಲಕ ಎಲ್ಲ ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿ, ಮಕ್ಕಳಿಗೆ ಅನ್ಯಾಯವಾಗುತ್ತಿದ್ದಲ್ಲಿ ನ್ಯಾಯ ಕೊಡಿಸುವ ಪ್ರವೃತ್ತಿಯನ್ನು ಎಲ್ಲರೂ ತಿಳಿದುಕೊಳ್ಳಬೇಕು. ಕಾಣೆಯಾದ ಮಕ್ಕಳ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಯಾರು ಮಾಡಬಾರದು.

ಪ್ರತಿ ತಿಂಗಳು ಸಭೆ ಕರೆದು ಜಿಲ್ಲೆಯಲ್ಲಿ ದಾಖಲಾದ ಮಕ್ಕಳ ಅಪಹರಣ ಮತ್ತು ಕಾಣೆಯಾದ ಮಕ್ಕಳ ಪೋಷಕರನ್ನು ಕರೆದು ನೀಡಲಾದ ದೂರಿಗೆ ಹೆಚ್ಚಿನ ಮಾಹಿತಿ ನೀಡುವಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಪತ್ತೆ ಹಚ್ಚಲು ಸಾಧ್ಯವಾಗದ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಬೇಕು ಎಂದರು.

Read also : ದಾವಣಗೆರೆ : ಒಡವೆಗಳನ್ನು ಮರಳಿ ಕೊಡಿಸುವಲ್ಲಿ 112 ಸಿಬ್ಬಂದಿ ಯಶಸ್ವಿ

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣನವರ ಮಾತನಾಡಿ, ಪೊಲೀಸ್ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿರುವ ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಸಹಾಯ ಪಡೆದರೆ ಕಾಣೆಯಾದ ಮಕ್ಕಳ ಬಗ್ಗೆ ಮಾಹಿತಿ ಪಡೆಯಬಹುದು.

ಸಾರ್ವಜನಿಕರು ತಮ್ಮ ಮಕ್ಕಳು ಎಲ್ಲಿ ಹೋಗಿರಬಹುದೆಂಬ ಸ್ವಲ್ಪ ಅನುಮಾನದ ಮಾಹಿತಿಯನ್ನು ತಾವು ನಮಗೆ ತಿಳಿಸಿದರೆ ಸಾಕು, ನಾವು ಅವರು ಹೊರ ರಾಜ್ಯದಲ್ಲಿದ್ದರೂ ಕೂಡ ನಾವು ಪತ್ತೆ ಹಚ್ಚುವ ಕೆಲಸ ಮಾಡುತ್ತೇವೆ. ಪೊಲೀಸ್ ಇಲಾಖೆಯು ಮಕ್ಕಳ ಪತ್ತೆಗಾಗಿ ತಂಡಗಳನ್ನು ರಚಿಸಿ ಶೀಘ್ರವಾಗಿ ಪತ್ತೆ ಮಾಡಿ ಪೋಷಕರ  ವಶಕ್ಕೆ ನೀಡಬೇಕು ಎಂದರು.

ಎಎಸ್ಪಿ ಪರಮೇಶ್ವರ್.ಹೆಚ್ ಹೆಗಡೆ, ಡಿವೈಎಸ್‌ಪಿ ಶರಣಬಸಪ್ಪ, ಮಕ್ಕಳ ರಕ್ಷಣಾಧಿಕಾರಿ ಕವಿತಾ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ : ಒಡವೆಗಳನ್ನು ಮರಳಿ ಕೊಡಿಸುವಲ್ಲಿ 112 ಸಿಬ್ಬಂದಿ ಯಶಸ್ವಿ
Next Article Davanagere ದಾವಣಗೆರೆ : ಹೊಲಿಗೆಯಂತ್ರ ತರಬೇತಿ ಪಡೆಯಲು ಅಪರಿಚಿತ ವ್ಯಕ್ತಿಗಳಿಗೆ ಹಣ ನೀಡಬೇಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಳಮೀಸಲಾತಿ ಜಾರಿಗೆ ವಿಳಂಬ : ಸಿಎಂ ವಿರುದ್ದ ಅ.15 ರಂದು ಕಪ್ಪುಬಟ್ಟೆ ಪ್ರದರ್ಶನ

ದಾವಣಗೆರೆ : ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರ ವಿಳಂಬ ನೀತಿ ಅನುಸರಿಸುವುದನ್ನು ಖಂಡಿಸಿ ಮುಖ್ಯಮಂತ್ರಿಗಳ ವಿರುದ್ದ ಅ.15 ರಂದು ಕಪ್ಪು…

By Dinamaana Kannada News

Crime News | ಸಾಲಬಾಧೆ : ರೈತ ಆತ್ಮಹತ್ಯೆ

ದಾವಣಗೆರೆ (Davanagere): ಸಾಲಬಾಧೆ ತಾಳಲಾರದೆ ಜೋಳಕ್ಕಿಡುವ ಗುಳಿಗೆ ನುಂಗಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗುಮ್ಮನೂರು ಗ್ರಾಮದಲ್ಲಿ ಗುರುವಾರ…

By Dinamaana Kannada News

ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಕೆ.ಎಸ್.ಬಸವಂತಪ್ಪ  

ದಾವಣಗೆರೆ (Davanagere): ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳು ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?