Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಗತ್ಯ ಮೀರಿದ ಸಂಗ್ರಹವೂ ಪರಿಸರಕ್ಕೆ ಹಾನಿ: ಡಾ. ಲಕ್ಷ್ಮಿಕಾಂತ
ತಾಜಾ ಸುದ್ದಿ

ಅಗತ್ಯ ಮೀರಿದ ಸಂಗ್ರಹವೂ ಪರಿಸರಕ್ಕೆ ಹಾನಿ: ಡಾ. ಲಕ್ಷ್ಮಿಕಾಂತ

Dinamaana Kannada News
Last updated: June 12, 2024 3:54 pm
Dinamaana Kannada News
Share
Davangere
ವಿಶ್ವ ಪರಿಸರ ದಿನಾಚರಣೆ ಮತ್ತು ಘನ ತ್ಯಾಜ್ಯ ನಿರ್ವಹಣೆ ಕುರಿತ ಒಂದು ದಿನದ ಕಾರ್ಯಾಗಾರ
SHARE

ದಾವಣಗೆರೆ:  ಸುಲಭದ ಉತ್ಪಾದನೆ, ಕಡಿಮೆ ದರ ಅಥವಾ ರಿಯಾಯಿತಿ ದರದ ಮಾರಾಟದ ಹೆಸರಿನಲ್ಲಿ ನಡೆಯುವ ಮಾರುಕಟ್ಟೆ ಪ್ರಭಾವವೂ ಸಹ ಮನುಷ್ಯನ ಅಗತ್ಯಕ್ಕೆ ಮೀರಿದ ಖರೀದಿಗೆ ಪ್ರಚೋದನೆ ನೀಡಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ. ಅಗತ್ಯಕ್ಕೆ ಮೀರಿದ ಸಂಗ್ರಹವೂ ಪರಿಸರಕ್ಕೆ ಅಪಾಯಕಾರಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಪರಿಸರ ಅಧಿಕಾರಿ ಡಾ.ಎಚ್. ಲಕ್ಷ್ಮಿಕಾಂತ ಆತಂಕ ವ್ಯಕ್ತಪಡಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಎನ್‌ಎಸ್‌ಎಸ್ ೧ ಮತ್ತು ೨ನೇ ಘಟಕಗಳು, ಪರಿಸರ ವಿಜ್ಞಾನ ವಿಭಾಗ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ಘನ ತ್ಯಾಜ್ಯ ನಿರ್ವಹಣೆ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

‘ಹೋಟೆಲ್‌ನಿಂದ ತರುವ ಪ್ಯಾಕೇಜ್ ಆಹಾರದ ಜೊತೆಗೆ ನಾವು ಕಸವನ್ನೂ ತರುತ್ತಿದ್ದೇವೆ. ಆಹಾರವನ್ನು ಪ್ಯಾಕ್ ಮಾಡುವ ಪ್ಲಾಸ್ಟಿಕ್, ಕಾಗದ ಹಾಗೂ ಇನ್ನಿತರ ವಸ್ತುಗಳ ಉತ್ಪಾದನೆಯು ಮಾಲಿನ್ಯದ ಅಡಿಪಾಯ. ಅನಗತ್ಯ ಉತ್ಪಾದನೆಗೆ ನಿಯಂತ್ರಣ ಹೇರಿದರೆ ಪರಿಸರದ ಮೇಲಿನ ದುಷ್ಪರಿಣಾಮಗಳೂ ಕಡಿಮೆಯಾಗುತ್ತವೆ’ ಎಂದು ಸಲಹೆ ನೀಡಿದರು.

ಪರಿಸರ ಜಾಗೃತಿಯ ಎಲ್ಲಿಂದ ಬಂದರೂ ಅದನ್ನು ಸ್ವೀಕರಿಸಿ ಪಾಲಿಸುವ ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಪರಿಸರ ಜಾಗೃತಿ ಬಗ್ಗೆ ಪ್ರತಿದಿನವೂ ಬೋಧನೆ ಮಾಡಲು, ಪಾಠ ಹೇಳಲು ಅಥವಾ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿಯೇ ಪರಿಸರ ಜಾಗೃತಿಗಾಗಿ ಒಂದು ದಿನವನ್ನು ನಿಗದಿಪಡಿಸಿ, ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲರೂ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜೊತೆಗೆ ಗಿಡ ನೆಟ್ಟು, ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನೂ ಕರ್ತವ್ಯವೆಂದು ಪಾಲಿಸಬೇಕು ಎಂದು ಹೇಳಿದರು.

ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಎ.ಎಂ.ರೇಣುಕಾರಾಧ್ಯ ಮಾತನಾಡಿ, ಮಣ್ಣು, ನೀರು, ಗಾಳಿಯ ಮಾಲಿನ್ಯದಂತೆ ಇತ್ತೀಚೆಗೆ ಹೊಸ ಹೊಸ ಮಾಲಿನ್ಯಗಳು ಸೃಷ್ಟಿಯಾಗುತ್ತಿವೆ. ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯಗಳೂ ಪರಿಸರವನ್ನು ನಾಶ ಮಾಡುವ ಜೊತೆಗೆ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಈ ಬಗ್ಗೆ ಮುಂಜಾಗೃತೆ ವಹಿಸಿ ನಿಯಂತ್ರಿಸದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ತಿಳಿಸಿದರು.

ಕುಲಪತಿ ಪ್ರೊ.ಬಿ.ಡಿ.ಕುಂಬಾರ ಮಾತನಾಡಿ, ಪ್ಲಾಸ್ಟಿಕ್ ಮಾರಾಟ ನಿರಾತಂಕವಾಗಿ ನಡೆಯುತ್ತಿದೆ. ಆದರೆ ಉತ್ಪಾದನೆಯನ್ನೇ ನಿಲ್ಲಿಸಲು ಸರ್ಕಾರಗಳಿಂದಾಗಲಿ, ಸಂಬAಧಿಸಿದ ೧೮ ಇಲಾಖೆಗಳಿಂದಲೂ ಸಾಧ್ಯವಾಗಿಲ್ಲ. ಸಮಸ್ಯೆಯ ಮೂಲದ ಬಗ್ಗೆ ಗೊತ್ತಿದ್ದೂ ನಿಯಂತ್ರಣ ಕ್ರಮ ಇಲ್ಲದ ಕಾರಣ ಸಮಸ್ಯೆ ಬೃಹದಾಕಾರವಾಗಿ ಬೆಳೆದಿದೆ. ಪ್ಲಾಸ್ಟಿಕ್‌ನಿಂದಾಗಿ ಇಡೀ ಜಗತ್ತು ಪರಿಸರದ ಅಸಮತೋಲನ ಎದುರಿಸುತ್ತಿದೆ. ಪ್ರಕೃತಿ ವಿಕೋಪಕ್ಕೆ ಮನುಷ್ಯನೇ ಬಲಿಯಾಗುತ್ತಿದ್ದಾನೆ ಎಂದು ಆತಂಕ ವ್ಯಕ್ತಪಡಿಸಿದರು.

ಮಾಲಿನ್ಯ ಸೇರಿದಂತೆ ಇನ್ನಿತರ ಯಾವುದೇ ರೀತಿಯಲ್ಲಿ ಪರಿಸರವನ್ನು ಹಾನಿಗೀಡು ಮಾಡುವವರ ವಿರುದ್ಧ ಸರ್ಕಾರ ಮತ್ತು ಪರಿಸರ ಇಲಾಖೆಗಳು ಕಠಿಣ ಕಾನೂನು ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದು ಅಗತ್ಯ. ಇಲ್ಲವಾದರೆ ಪರಿಸರ ಸಂಪೂರ್ಣ ನಾಶವಾಗಿ ಮನುಕುಲವು ಸಂಕಷ್ಟಕ್ಕೀಡಾಗುವುದನ್ನು ಯಾರಿದಂಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಕುಲಸಚಿವ ಪ್ರೊ.ಯು.ಎಸ್.ಮಹಾಬಲೇಶ್ವರ, ಹಣಕಾಸು ಅಧಿಕಾರಿ ಮುದ್ದನಗೌಡ ದ್ಯಾಮನಗೌಡ್ರ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಪಾಳೇದ, ಪರಿಸರ ವಿಜ್ಞಾನ ವಿಭಾಗದ ಸಂಯೋಜನಾಧಿಕಾರಿ ಪ್ರೊ.ಎನ್.ಎಸ್.ಪ್ರಮೋದ ಉಪಸ್ಥಿತರಿದ್ದರು. ಪರಿಸರ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಜೆ.ವೀರೇಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಸೌಮ್ಯ ಎಸ್.ಬುಳ್ಳಾ ಸ್ವಾಗತಿಸಿದರು.

ಡಾ.ಸಿದ್ದಪ್ಪ ಕಕ್ಕಳಮೇಲಿ ಕಾರ್ಯಕ್ರಮ ನಿರೂಪಿಸಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 52 : ಪಾಪ ಅವರು ಹಸಿದಿದ್ದರು…
Next Article Davanagere ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಕೋಟಾದಡಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಡಾ.ಶೈಲೇಶ್ ಕುಮಾರ್ ಗೆ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

ಹರಿಹರ: ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ನಿವಾಸಿ ನರರೋಗ ಶಸ್ತ್ರಚಿಕಿತ್ಸಾ ವೈದ್ಯರಾದ ಶ್ರೀ ಸತ್ಯಸಾಯಿ ನಾರಾಯಣ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಿ.ಎಸ್.ಶೈಲೇಶ್ ಕುಮಾರ್…

By Dinamaana Kannada News

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಆರ್ಯವೈಶ್ಯ ಸಮುದಾಯ  ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

ಲಿಂಗನಮಕ್ಕಿ ಡ್ಯಾಂ : ಶೇ 50 ರಷ್ಟು ಭರ್ತಿ

ಶಿವಮೊಗ್ಗ, ಜು. 19 :   ಪಶ್ಚಿಮಘಟ್ಟ ವ್ಯಾಪ್ತಿಯ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಿಸುತ್ತಿದೆ. ಇದರಿಂದ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?