Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ‘ದೇಶದಲ್ಲಿ ಸಮಾನತೆ ತರುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ’
ತಾಜಾ ಸುದ್ದಿ

‘ದೇಶದಲ್ಲಿ ಸಮಾನತೆ ತರುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ’

Dinamaana Kannada News
Last updated: December 6, 2024 1:13 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere):  ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತೀಯತೆ ತೊಲಗಿಸಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮಾನತೆಯನ್ನು ಸಂವಿಧಾನದ ಮೂಲಕ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದರು ಎಂದು ಸಮಾಜ ಕಾರ್ಯವಿಭಾಗದ ಅಧ್ಯಕ್ಷ ಪ್ರೋ. ಎಂ.ಯು.ಲೋಕೇಶ್ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 68ನೇ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿವಸ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಬುದ್ಧ, ಬಸವಣ್ಣನವರ ನಂತರ ಸಮಾನತೆ, ಸಮಸಮುಧಾಯ ಅಭಿವೃದ್ಧಿಯ ತತ್ವ ಆದರ್ಶಗಳನ್ನು ಜಾರಿಗೊಳಿಸಿ ನವ ಸಮಾಜದ ಪರಿಕಲ್ಪನೆಯನ್ನು ಪ್ರತಿಷ್ಠಾಪಿಸಲು ಡಾ.ಅಂಬೇಡ್ಕರ್ ಯತ್ನಿಸಿದರು. ದೇಶದಲ್ಲಿ ಅಸ್ಪøಶ್ಯತೆ, ಅಸಮಾನತೆ, ಅನಕ್ಷರತೆ, ಮೂಢನಂಬಿಕೆಯಂತಹ ಅಂದಕಾರದಿಂದ ಕೂಡಿದ ಸಮಾಜವನ್ನು ಪರಿವರ್ತಿಸಿ ಅಭಿವೃದ್ಧಿಯ ಮುಖ್ಯವಾಹಿನಿಯಲ್ಲಿ ಕೈಜೋಡಿಸುವಂತೆ ಮಾಡುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದುದು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಬದಲಾವಣೆಯ ಮಾತುಗಳಾಡಿ ದೇಶದಲ್ಲಿ ಶಾಂತಿ ಕದಡುವ ಕೆಲಸ ನಡೆಯುತ್ತಿದೆ, ವಿದ್ಯಾರ್ಥಿಗಳು ಅದಕ್ಕೆ ಅವಕಾಶ ನೀಡದೆ ಅಂಬೇಡ್ಕರ್ ಅವರ ಆಶಯವನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಬೇಕು, ಪಟ್ಟಬದ್ಧ ಹಿತಾಸಕ್ತಿಗಳಿಗೆ ಅವಕಾಶ ನೀಡದೆ ಜಾಗೃತರಾಗಿ, ಮತದಾನದ ಮೂಲಕ ನಮ್ಮ ಹಕ್ಕುಗಳನ್ನು ರಕ್ಷಿಸುವ ಸರ್ಕಾರವನ್ನು ರೂಪಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕುಲಸಚಿವ ಡಾ.ಯು.ಎಸ್.ಮಹಾಬಲೇಶ್ವರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸತ್ಯ ನಿಷ್ಠೆ ಪ್ರಮಾಣಿಕತೆಯನ್ನು ಮೈಗೂಡಿಸಿಕೊಂಡು ದೇಶದಲ್ಲಿ ಉತ್ತಮವಾದ ಪ್ರಜೆಗಳಾಗಿ ಬಾಳಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಮೌಲ್ಯ, ಸಂದೇಶಗಳನ್ನು ಪ್ರೇರಣೆಯಾಗಿ, ಮಾರ್ಗದರ್ಶಕ ಸೂತ್ರವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಎಸ್‍ಸಿ, ಎಸ್‍ಟಿ ವಿದ್ಯಾರ್ಥಿ ಅಭಿವೃದ್ಧಿ ಘಟಕದ ಸಂಚಾಲಕ ಡಾ.ನಿರಂಜನ್.ಎಂ.ಹೆಚ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೀನ್ ಪ್ರೊ.ಆರ್.ಶಶಿಧರ್, ಐಕ್ಯೂಎಸಿ ನಿರ್ದೇಶಕ ಪ್ರೊ.ಗೋವಿಂದಪ್ಪ ಉಪಸ್ಥಿತರಿದ್ದರು.

Read also : ಮಹಿಳೆಯರ ದುಡಿಮೆಯಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆ : ನ್ಯಾ.ನಿವೇದಿತಾ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಹಿಳೆಯರ ದುಡಿಮೆಯಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆ : ನ್ಯಾ.ನಿವೇದಿತಾ
Next Article Davanagere ದಮನಿತ ವರ್ಗಗಳಿಗೆ ಧ್ವನಿಯಾದವರು ಬಾಬಾ ಸಾಹೇಬ್ ಅಂಬೇಡ್ಕರ್  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : ಸಿದ್ಧರಾಮಯ್ಯ ದುರ್ಬಲಗೊಳಿಸುವ ಕುತಂತ್ರ ನಿಲ್ಲಿಸಿ : ನಿಟ್ಟುವಳ್ಳಿ ಪ್ರವೀಣ್ ಕುಮಾರ್

ದಾವಣಗೆರೆ (Davangere District) : ಶೋಷಿತ ಸಮುದಾಯಗಳ ಜನನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಶಾಶ್ವತವಾಗಿ ಹಿಂದುಳಿದ ವರ್ಗದವರನ್ನು…

By Dinamaana Kannada News

Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

ಹರಿಹರ (Davangere District) :  ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ…

By Dinamaana Kannada News

ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ,ಪರಿಶೀಲನೆ

ದಾವಣಗೆರೆ  ಡಿ.04:  ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನಗಿರಿ ತಾಲ್ಲೂಕು ಆಸ್ಪತ್ರೆ ಹಾಗೂ ಕುಂದುವಾಡ ರಸ್ತೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?