Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ತಡೆಗೆ ಒತ್ತಾಯ
ತಾಜಾ ಸುದ್ದಿ

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ತಡೆಗೆ ಒತ್ತಾಯ

Dinamaana Kannada News
Last updated: January 22, 2026 4:38 pm
Dinamaana Kannada News
Share
Davanagere
SHARE

ಹರಿಹರ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವನ್ನು ತಡೆಯಬೇಕೆಂದು ನಗರದ ಗುರುಭವನದಲ್ಲಿ ಗುರುವಾರ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯಲ್ಲಿ ಸಮುದಾಯದ ಮುಖಂಡರು ಆಗ್ರಹಿಸಿದರು.

ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿದೆ. ಅಂಗಡಿ, ಹೋಟಲ್, ಮನೆಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಮಟ್ಕಾ ಜೂಜಾಟದ ಅರ್ಭಟವೂ ಇದೆ. ಮದ್ಯ ಮತ್ತು ಮಟ್ಕಾದ ವ್ಯಸನಕ್ಕೆ ಈಡಾಗಿರುವ ಪರಿಶಿಷ್ಟ ಹಾಗೂ ಇತರೆ ಸಮುದಾಯದ ಯುವಕರ ಬದುಕು ಬರಡಾಗುತ್ತಿದೆ, ಕುಟುಂಬದವರು ಉಪವಾಸಕ್ಕೆ ಈಡಾಗುತ್ತಿದ್ದಾರೆ. ಈ ಜ್ವಲಂತ ಸಮಸ್ಯೆ ನಿವಾರಣೆ ಮಾಡಬೇಕೆಂದು ಸಮುದಾದಯ ಹಲವು ಮುಖಂಡರು ಮಾತನಾಡಿ ಅಧಿಕಾರಿಗಳಿಗೆ ಆಗ್ರಹಿಸಿದರು.

ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಕಡ್ಲೆಗೊಂದಿ ಗ್ರಾಮದಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಗ್ರಾಮದ ನಿರ್ವಸತಿಕರಿಗೆ ವಸತಿ ಯೋಜನೆ ರೂಪಿಸಬೇಕು, ಕೊಕ್ಕನೂರು ಗ್ರಾಮದ ಡಾ.ಬಾಬು ಜಗಜೀವನರಾಮ್ ಭವನಕ್ಕೆ ವಿದ್ಯುತ್ ಸೌಲಭ್ಯ, ಬೆಳ್ಳೂಡಿಯಲ್ಲಿ ಅಪೂರ್ಣವಾಗಿರುವ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಬೇಕು, ಭಾನುವಳ್ಳಿಯಲ್ಲಿ ಶಿಥಿಲಗೊಂಡ ಅಂಬೇಡ್ಕರ್ ಭವನ ತೆರವುಗೊಳಿಸಿ ಹೊಸ ಭವನ ನಿರ್ಮಾಣ ಮಾಡಬೇಕಿದೆ ಎಂದರು.

ಮುಖಂಡ ವಿಶ್ವನಾಥ ಮೈಲಾಳ ಮಾತನಾಡಿ, ಈ ಸಭೆಯಲ್ಲಿ ಬಹುತೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದಾರೆ. ಈ ಸಭೆ ಕಾಟಾಚರಕ್ಕೆ ನಡೆಸಲಾಗುತ್ತಿದೆ, ಕಾನೂನಿನ ಬೆಂಬಲ ಇದ್ದರೂ ಅಸ್ಪøಷ್ಯರ ನಿರೀಕ್ಷಿತ ಅಭಿವೃದ್ಧಿ ಆಗುತ್ತಿಲ್ಲ ಎಂದ ಆರೋಪಿಸಿದರು.

Read also : ಶಿಕ್ಷಣ ಮನುಷ್ಯನಲ್ಲಿ ವಿವೇಕ ಮತ್ತು ಪ್ರಜ್ಞಾವಂತಿಕೆ ಬೆಳೆಸುವ ಶಕ್ತಿಯಾಗಿದೆ : ಇಮ್ಮಡಿ ಶ್ರೀಗಳು

ಸಂಗೀತ ಕಲಾವಿದ ಅಣ್ಣಪ್ಪ ಅಜ್ಜೇರ್ ಮಾತನಾಡಿ, ಗುತ್ತೂರು ಗ್ರಾಮದಲ್ಲಿ ಪರಿಶಿಷ್ಟರಿಗೆ ರುದ್ರಭೂಮಿ ಇಲ್ಲ, ಮಳೆಗಾದಲ್ಲಿ ನದಿಯಲ್ಲಿ ಪ್ರವಾಹ ಬಂದಾಗ ಮೃತರ ಅಂತ್ಯ ಸಂಸ್ಕಾರ ಮಾಡುವುದು ದುಸ್ತರವಾಗುತ್ತಿದೆ. ತಾಲ್ಲೂಕು ಮತ್ತು ಜಿಲ್ಲಾಡಳಿತ ರುದ್ರಭೂಮಿಗೆ ಜಮೀನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ಗ್ರಾಮಾಂತರ ಡಿವೈಎಸ್ ಪಿ ಬಸವರಾಜ್ ಬಿ.ಎಸ್. ಮಾತನಾಡಿ, ಸಭೆಯಲ್ಲಿ ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಕ್ರೂಢೀಕರಿಸಿ ಸಂಬಂಧಿತ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಸೂಚಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದೆಂದು ಹೇಳಿದರು.

ಇನ್ ಸ್ಪೆಕ್ಟರ್ ಗಳಾದ ಆರ್.ಎಫ್ ದೇಸಾಯಿ, ಸುರೇಶ್ ಸಗರಿ, ಬಿಇಒ ಡಿ.ದುರುಗಪ್ಪ, ಸಿಡಿಪಿಒ ಪ್ರಿಯದರ್ಶಿನಿ ದಲಿತ ಸಮುದಾಯದ ಮುಖಂಡರಾದ ರಾಜನಹಳ್ಳಿ ನಾಗೇಂದ್ರಪ್ಪ, ಕೆ.ಬಿ.ಮಂಜುನಾಥ್, ಕೊಟ್ರೇಶ್, ಹರಳಹಳ್ಳಿ ಹನುಮಂತಪ್ಪ, ಎ.ಕೆ ಭೂಮೇಶ್, ಎಚ್.ಸುಧಾಕರ, ಕೊತ್ವಾಲ್ ಹನುಮಂತಪ್ಪ, ಬೇವಿನಹಳ್ಳಿ ಶಿವರಾಂ, ಧೂಳೆಹೊಳೆ ಪರಶುರಾಮ್, ತಿಪ್ಪೇಶ್, ಬೆಳ್ಳೂಡಿ ಹಾಲೇಶ್, ಆರ್.ವಿಜಯಕುಮಾರ್, ವೈ.ಬಿ.ಪ್ರಭಾಕರ್, ಸಂತೋಷ ನೋಟದವರ, ಜಿ.ಕೆ.ಪಂಚಾಕ್ಷರಿ ಹಾಗೂ ಇತರರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Immadi Shri ಶಿಕ್ಷಣ ಮನುಷ್ಯನಲ್ಲಿ ವಿವೇಕ ಮತ್ತು ಪ್ರಜ್ಞಾವಂತಿಕೆ ಬೆಳೆಸುವ ಶಕ್ತಿಯಾಗಿದೆ : ಇಮ್ಮಡಿ ಶ್ರೀಗಳು
Next Article Davanagere ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಮ ಸಮಾಜದ ಪಿತಾಮಹಾ ವಿಶ್ವಗುರು ಬಸವಣ್ಣ : ಶ್ರೀ ಬಸವಪ್ರಭು ಸ್ವಾಮೀಜಿ

ದಾವಣಗೆರೆ :  ಬಸವಣ್ಣ ಬರೀ ಲಿಂಗಾಯತರ, ಕನ್ನಡಿಗರ ಸ್ವತ್ತು ಅಲ್ಲ, ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ ವಿಶ್ವಗುರು. ಎಲ್ಲರ ಪರವಾಗಿ…

By Dinamaana Kannada News

ಮೆಕ್ಕೆಜೋಳ ಖರೀದಿ ವ್ಯತ್ಯಾಸದ ಮೊತ್ತ ಪಾವತಿಸಲು ಕ್ರಮ: ಡಿಸಿ

ದಾವಣಗೆರೆ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ ಮೆಕ್ಕಜೋಳ ಉತ್ಪನ್ನದ ವಹಿವಾಟಿನ ಆಧಾರದ ಮೇಲೆ ರೈತರಿಗೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಸಂಬಂಧಪಟ್ಟ ಅಧಿಕಾರಿಗಳು…

By Dinamaana Kannada News

ಜಿಲ್ಲೆಯಲ್ಲಿ 32 ಚೆಕ್ ಪೋಸ್ಟ್‌ಗಳ ಸ್ಥಾಪನೆ

ದಾವಣಗೆರೆ, ಮಾ.18: ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲೆಯ ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?