Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ವೃದ್ದರ ರಕ್ಷಣೆ ಸರ್ಕಾರ, ಸಾಮಾಜಿಕ ಸಂಘಟನೆಗಳ ಜವಾವ್ದಾರಿ : ನ್ಯಾ.ಮಹಾವೀರ ಮಾ.ಕರೆಣ್ಣವರ್
ತಾಜಾ ಸುದ್ದಿ

Davanagere | ವೃದ್ದರ ರಕ್ಷಣೆ ಸರ್ಕಾರ, ಸಾಮಾಜಿಕ ಸಂಘಟನೆಗಳ ಜವಾವ್ದಾರಿ : ನ್ಯಾ.ಮಹಾವೀರ ಮಾ.ಕರೆಣ್ಣವರ್

Dinamaana Kannada News
Last updated: September 8, 2024 1:23 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere) :  ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮದಡಿ ಬಡ ಕುಟುಂಬದಲ್ಲಿನ ವೃದ್ದರ ಜೀವನ ಅಧಾರಕ್ಕಾಗಿ ರಾಷ್ಟ್ರೀಯ ವೃದ್ದಾಪ್ಯ ಪಿಂಚಣಿ ಯೋಜನೆ, ರಾಷ್ಟ್ರೀಯ ಕುಟುಂಬ ಸೌಲಭ್ಯ, ರಾಷ್ಟ್ರೀಯ ಮಾತೃತ್ವ ಸೌಲಭ್ಯಗಳ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮಾ.ಕರೆಣ್ಣವರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ದಾವಣಗೆರೆ ಜಿಲ್ಲಾ ಹಿರಿಯ ನಾಗರೀಕರ ಸಂಘ ಹಾಗೂ ಹಿರಿಯ ನಾಗರೀಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಗರದ ಎಂಸಿಸಿ ಬಿ ಬ್ಲಾಕಿನಲ್ಲಿರುವ ಬಾಪೂಜಿ ಶಾಲೆಯ ಮೈದಾನದಲ್ಲಿ ಭಾನುವಾರ ವಿಶ್ವ ಹಿರಿಯ ನಾಗರೀಕರ ದಿನಾಚಣೆ 2024ರ ಪ್ರಯುಕ್ತ ನಡೆದ ಹಿರಿಯ ನಾಗರೀಕರಿಗಾರಿ ಕ್ರೀಡಾ ಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಉದ್ಘಾಟನೆ ನರವೇರಿಸಿ ಮಾತನಾಡಿದರು.

ದೇಶದಲ್ಲಿ ವೃದ್ದರ ಸಂಖ್ಯೆ ಹೆಚ್ಚುತ್ತಿದೆ. ಅವರ ರಕ್ಷಣೆ ಸರ್ಕಾರ ಮತ್ತು ಸಾಮಾಜಿಕ ಸಂಘಟನೆಗಳ ಜವಾವ್ದಾರಿಯಾಗಿದೆ. ಅವರ ಅನುಭವ ಶಕ್ತಿ , ಸಾಮಥ್ರ್ಯಗಳನ್ನು ಸಮಾಜ ಸದ್ಬಳಕೆ ಮಾಡಿಕೊಳ್ಳಬೇಕು. ಹಿರಿಯ ನಾಗರೀಕರ ಕಾಯಿದೆ 2007 ಮತ್ತು ವೃದ್ದರ ಪಾಲನೆ ಪೋಷಣೆ ಕುರಿತ ಯೋಜನೆಗಳು ಜಾರಿಯಲ್ಲಿ ಇದ್ದರೂ ಸಹ ನಿರ್ಲಕ್ಷಿತ ವೃದ್ದರ ಸಂಖ್ಯೆ ಹೆಚ್ಚಾಗುತ್ತಿರುವುದು ವಿಷಾಧನೀಯ ಎಂದರು.

ನಿವೃತ್ತ ಪೊಲೀಸ್ ಅಧೀಕ್ಷಕ ರವಿ ನಾರಾಯಣ್ ಮಾತನಾಡಿ, ಹಿರಿಯ ನಾಗರೀಕರ ಬಗ್ಗೆ ಸಮಾಜದಲ್ಲಿ ಗೌರವಾದರಗಳು ಕಡಿಮೆ ಆಗುತ್ತಿದ್ದು, ಅವರ ಅನುಭವದ ಸೇವಯನ್ನು ಪರಿಗಣಿಸುತ್ತಿಲ್ಲ. ಅಲ್ಲದೇ ಹಿರಿಯ ನಾಗರೀಕರಿಗಾಗಿ ಇರುವ ಸೌಲಭ್ಯಗಳನ್ನು ಇತ್ತೀಚೆಗೆ ಸರ್ಕಾರಗಳು ಮೊಟಕು ಮಾಡಲಾಗುತ್ತಿದೆ. ಹಿರಿಯ ನಾಗರೀಕರಿಗಾಗಿ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ ಕಡಿಮೆ, ವೃದ್ದರು ತಮ್ಮ ಜೀವನಾಸರೆಗಾಗಿ ಬ್ಯಾಂಕುಗಳಲ್ಲಿ ಇಟ್ಟಿರುವ ಠೇವಣಿ ಮೇಲಿನ ಬಡ್ಡಿಯನ್ನು ಕಡಿತ ಮಾಡಿರುವುದು ಖಂಡನೀಯ ಎಂದರು.

Read also : Davanagere news | ವಸತಿ ರಹಿತರಿಗೆ ನಿವೇಶನ ಹಂಚಿಕೆಗೆ ಒತ್ತಾಯ

ದಾವಣಗೆರೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್‍ಕುಮಾರ್ ಮಾತನಾಡಿ, ಕರ್ನಾಟಕದಲ್ಲಿ 58 ಲಕ್ಷ ಜನ ಹಿರಿಯ ನಾಗರೀಕರಿದ್ದಾರೆ. ಸಮಾಜದಲ್ಲಿನ ಅನ್ಯಾಯ, ಶೋಷಣೆ, ಭ್ರಷ್ಠಾಚಾರಗಳ ವಿರುದ್ದ ಹಿರಿಯ ನಾಗರೀಕರು ಸಂಘಟಿತರಾಗಿ ಧ್ವನಿ ಎತ್ತಬೇಕಾಗಿದೆ. ಸಮಾಜವು ಮತ್ತು ಇಂದಿನ ಯುವ ಜನತೆ ಹಿರಿಯ ನಾಗರೀಕರಿಗೆ ಗೌರವ, ರಕ್ಷಣೆ ನೀಡಬೇಕಾಗಿದ್ದು, ಅವರ ಘನತೆಯುತ ಬದುಕಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ಹಿರಿಯರು ತಮ್ಮ ಪರವಾಗಿ ಇರುವ ಕಾನೂನುಗಳನ್ನು ದುರುಪಯೋಗ ಮಾಡಿಕೊಳ್ಳಬಾರದು. ಅನಿವಾರ್ಯ ಸಂದರ್ಭದಲ್ಲಿ ಕಾನೂನಿನ ಮೊರೆ ಹೋಗಬೇಕೆಂದು ತಿಳಿಸಿದರು.

ಅಧ್ಯಕ್ಷತೆ ದಾವಣಗೆರೆ ಜಿಲ್ಲಾ ಹಿರಿಯ ನಾಗರೀಕರ ಸಂಘದ ಗೌರವ ಕಾರ್ಯದರ್ಶಿ ಎಸ್.ಗುರುಮೂರ್ತಿ, ದಾವಣಗೆರೆ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಜಿ.ಭರತ್‍ರಾಜ್, ಜಿಲ್ಲಾ ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ಕೆ.ಕೆ.ಪ್ರಕಾಶ್ ಇದ್ದರು.

 

TAGGED:Davanagere districtDinamana.comKannada NewsLatest Kannada Newsಕನ್ನಡ ಸುದ್ದಿಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ವಸತಿ ರಹಿತರಿಗೆ ನಿವೇಶನ ಹಂಚಿಕೆಗೆ ಒತ್ತಾಯ
Next Article davanagere Davanagere | ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಧಾರಾಕಾರ ಮಳೆ : ತುಂಬಿ ಹರಿಯುತ್ತಿರುವ ಜಲಾಶಯ

ಹೊನ್ನಾಳಿ :  ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅದರಲ್ಲೂ ತೀರ್ಥಹಳ್ಳಿ ಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆಯಿಂದ…

By Dinamaana Kannada News

Crime news | ಬ್ಯಾಂಕ್ ಸಿಬ್ಬಂದಿಯಿಂದಲೇ ಬಂಗಾರದ ಅಭರಣ ಕಳವು : ಆರೋಪಿ ಸೆರೆ

ದಾವಣಗೆರೆ (Davanagere): ತಾನು ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ ಬಂಗಾರದ ಆಭರಣಗಳನ್ನು ಕದ್ದು ಬೇರೆ ಬ್ಯಾಂಕ್‍ಗಳಲ್ಲಿ ಅಡವಿಟ್ಟು ಕೋಟ್ಯಾಂತರ ರೂ ಸಾಲ…

By Dinamaana Kannada News

ಜನತೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ ಬ್ಯಾಂಕ್ ರಾಷ್ಟ್ರೀಕರಣ ದಿನಕ್ಕೆ 56 ರ ಸಂಭ್ರಮ  

ದೇಶದ ಆರ್ಥಿಕತೆಯನ್ನು ಅಮೂಲಾಗ್ರವಾಗಿ ಬದಲಾಯಿಸಿ, ಜನತೆಗೆ ಆರ್ಥಿಕ ಸ್ವಾತಂತ್ರ್ಯವನ್ನು ನೀಡಿದ ಕೀರ್ತಿ 1969  ಜುಲೈ 19 ರಂದು ಕೇಂದ್ರ ಸರ್ಕಾರದಿಂದ…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?