Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 
ತಾಜಾ ಸುದ್ದಿ

ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 

Dinamaana Kannada News
Last updated: May 24, 2025 4:15 am
Dinamaana Kannada News
Share
AVK College Davanagere
AVK College Davanagere
SHARE
ದಾವಣಗೆರೆ (Davanagere) : ಭಾರತ ಬಹು ಸಂಸ್ಕೃತಿಗಳ ನಾಡು. ವಿವಿಧತೆಯಲ್ಲಿ ಏಕತೆ ಕಾಣುವ ನೆಲ ನಮ್ಮದು. ಇಲ್ಲಿನ ಪಾರಂಪರಿಕ ದಿವ್ಯ ಸಂಸ್ಕೃತಿ ಆಧುನಿಕ ಜೀವನದ ಭರಾಟೆಯಲ್ಲಿ ರೂಪಾಂತರಗೊಳ್ಳುತ್ತಿದೆ. ಮೂಲ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮಹತ್ವದಾಗಿದೆ ಎಂದು ಎವಿಕೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕಮಲ ಸೊಪ್ಪಿನ್ ಹೇಳಿದರು.
ನಗರದ ಎ.ವಿ.ಕೆ ಮಹಿಳಾ ಕಾಲೇಜ್ ನಲ್ಲಿ  ಪಾರಂಪರಿಕ ಸಾಂಸ್ಕೃತಿಕ ದಿನಾಚರಣೆಯ ಪ್ರತಿರೂಪದ ಬಿಂಬವಾಗಿ ದೇಸಿ ಕಲರವ-2025 ನ್ನು ಹಮ್ಮಿಕೊಳ್ಳಲಾಗಿತ್ತು. ದೇಸಿ ಕಲರವ-2025 ರ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೊ. ಕಮಲ ಸೊಪ್ಪಿನ್ ಅವರು,  ನಮ್ಮ ನಾಡು ಹಲವಾರು ಧರ್ಮ, ಮತ, ಪಥ, ಭಾಷೆ, ಸಂಸ್ಕೃತಿ ಹೊಂದಿದೆ. ಅದರ ಪ್ರತಿರೂಪದ ಬಿಂಬವನ್ನು ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ರಂಗು – ರಂಗಿನ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಆ ಮೂಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿ ಅರಿತಿದ್ದಾರೆಂದು ಹೇಳಿದರು.
ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡ ಈ ದೇಸಿ ಕಲರವ ಕಾರ್ಯಕ್ರಮ ನೋಡಲು ಎರಡು ಕಣ್ಣು ಸಾಲದಾಗಿತ್ತು. ಸುಮಾರು ಎರಡು ಸಾವಿರ ವಿದ್ಯಾರ್ಥಿನಿಯರು ವಿವಿಧ ಸಂಸ್ಕೃತಿಗಳ ಉಡುಗೆ ತೊಡುಗೆಯಲ್ಲಿ ಕಾಣಿಸಿಕೊಂಡರು. ಕೊಡವ, ಕೂರ್ಗಿಸ್, ಲಂಬಾಣಿ, ಮರಾಠಿ, ಉತ್ತರ ಕರ್ನಾಟಕ, ಹೀಗೆ ವಿವಿಧ ವೇಷಭೂಷಣಗಳಲ್ಲಿ ಮಿಂಚಿದರು.
ಈ ಸಡಗರದ ಜೊತೆಗೆ ಹಳ್ಳಿಯ ಜನಜೀವನದ ಬಿಂಬಿಸುವ ಗುಡಿಸಲು, ಎತ್ತಿನ ಬಂಡಿ, ಜೋಕಾಲಿ, ದನದ ಕೊಟ್ಟಿಗೆ ಹೀಗೆ ವಿಧವಿಧವಾದ ಪ್ರತಿಕೃತಿಗಳನ್ನು ಅನಾವರಣಗೊಳಿಸಲಾಗಿತ್ತು.
ವೇದಿಕೆ ಕಾರ್ಯಕ್ರಮದಲ್ಲಿ ದೇಸಿ ಸೊಗಡಿನ ಸುಮಾರು ಇಪ್ಪತ್ತಕ್ಕೂ ಹೆಚ್ಚು ನೃತ್ಯಗಳನ್ನು ವಿದ್ಯಾರ್ಥಿನಿಯರು ಮಾಡಿ ನೋಡುಗರನ್ನು ಸೂರೆಗೊಂಡರು. ಅವರಿಗೆ ಕೈ ಜೋಡಿಸಿದ ಬೋಧಕ ಮತ್ತು ಬೋಧಕೇತರ ವರ್ಗದವರು ಜಾನಪದ ಗೀತೆ, ಜನಪದ ನೃತ್ಯ ಮಾಡಿ ವಿದ್ಯಾರ್ಥಿನಿಯರಿಗೆ ಮನರಂಜನೆ ನೀಡಿದರು.
Read als0 : Davanagere | ಪ.ಜಾತಿಗಳ ಒಳಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ : ಡಿಸಿ
 ಎವಿಕೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ  ರವಿ ಬಣಕಾರ ಅವರು, ನಿಮ್ಮಲ್ಲರ ಸಡಗರ ಸಂಭ್ರಮದಿಂದ ನಮ್ಮ ಸಂಸ್ಕೃತಿ ನಾಶ ಹೊಂದಿಲ್ಲ ಮತ್ತಷ್ಟು ಎತ್ತರಕ್ಕೆ ಬೆಳೆದಿದೆ ಎಂದರು.
ಮುಖ್ಯ ಅತಿಥಿಗಳಾಗಿ  ಡಾ. ಪೂಜಿತಾ ಬಿ.ಎಸ್ ಡಾ. ದೀಪಾ ಕೆ.ಎನ್.  ಆಗಮಿಸಿದ್ದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು IQAC ಕೋ ಆರ್ಡಿನೇಟರ್ ಆದ ಡಾ. ರುದ್ರೇಶ್ ಬಿ.ಜೆ, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ಆರ್.ಸಿ. ಗೌಡ, ಸಸ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಪ್ರಭಾವತಿ ಎಸ್ ಹೊರಡಿ, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ಸುರೇಶ್ ಈ., ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಅಂಕಿತಾ,(ಕಲಾ ವಿಭಾಗ) ಪೂಜಾ ಪಾಟೀಲ್ (ವಿಜ್ಞಾನ ವಿಭಾಗ), ನಂದಿತಾ (ವಾಣಿಜ್ಯ ವಿಭಾಗ) ಉಪಸ್ಥಿತರಿದ್ದರು.

ಪ್ರಾರ್ಥನಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಗುರುರಾಜ ಕೆ. ಸ್ವಾಗತಿಸಿದರು. ಅನ್ವರ್ ಅಹಮ್ಮದ್ ಬೆಟಗೇರಿ ಪ್ರಾಸ್ತಾವಿಕ ನುಡಿಗಳಾಡಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಕವಿತಾ ಆರ್ ಜಿ ವಂದಿಸಿದರು. ಕು|| ಅಂಕಿತಾ ಮತ್ತು ಪೂಜಾ ಪಾಟೀಲ್. ನಿರೂಪಿಸಿದರು.

ಎಲ್ಲಾ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಬೋಧಕೇತರ ವರ್ಗದವರು ಪಾಲ್ಗೊಂಡಿದ್ದರು.
TAGGED:AVK Collegedavanagereಎ.ವಿ.ಕೆ ಕಾಲೇಜ್ದಾವಣಗೆರೆ
Share This Article
Twitter Email Copy Link Print
Previous Article Davanagere Davanagere | ಪ.ಜಾತಿಗಳ ಒಳಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ : ಡಿಸಿ
Next Article Davanagere ಮುಂಗಾರು ಪೂರ್ವ ಮಳೆ | ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

ದಾವಣಗೆರೆ (Davanagere) : ನಿತ್ಯ ಸೈಕಲ್ ಬಳಸುವುದರಿಂದ ಉತ್ತಮ ಪರಿಸರ, ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಯ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಆಯೋಜಿಸಿದ ತಿರಂಗ್ ಸೈಕಲ್ ರ‍್ಯಾಲಿಯ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗ ಒಂದೊAದು ಮನೆಯಲ್ಲಿ 2 ರಿಂದ 3 ದ್ವಿಚಕ್ರ ವಾಹನಗಳಿರುತ್ತವೆ. ವಾಹನಗಳ ಹೊಗೆಯಿಂದ ಪರಿಸರ ಹಾಳಾಗುತ್ತದೆ. ಆದ್ದರಿಂದ ವಾರದಲ್ಲಿ ಒಂದು ದಿನವಾದರೂ ಸಹಾ ಸೈಕಲ್ ಬಳಸಿರಿ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸೈಕಲ್ ಕಲಿಸಬೇಕು. ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ಅತೀ ಕಡಿಮೆ ಅವಧಿಯಲ್ಲಿ ಇಂತಹ ಸೈಕಲ್ ರ‍್ಯಾಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸೈಕಲ್ ರ‍್ಯಾಲಿ ಮೂಲಕ ಜಾಗೃತಿ ಕಾರ್ಯಕ್ರಮಗಳು ನಡೆಯಲಿ ಎಂದರು. ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಿಪಿಐ ನಲವಾಗಲು ಮಂಜುನಾಥ ಹೈಸ್ಕೂಲ್ ಮೈದಾನದಲ್ಲಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ  ಶ್ರೀಹರ್ಷ, ಪೊಲೀಸ್ ಇಲಾಖೆಯ ಅಧಿಕಾರಿ ಎಚ್.ಬಿ.ಸೋಮಶೇಖರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ, ಸಂಚಾರಿ ಪೊಲೀಸ್ ಮಹೇಂದ್ರ, ದಾವಣಗೆರೆ ಬೈಸಿಕಲ್ ಕ್ಲಬ್ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಕೆ.ಎಸ್.ಮಹೇಶ, ಡಾ.ಸುರೇಶ, ಡಾ.ರಾಘವೇಂದ್ರ, ಡಾ.ಮಾಲತೇಶ, ಡಾ.ಸಂತೋಷ, ಕಿರಣ್, ನಾಗರಾಜ, ಹೇಮಂತ್ ಆರಾಧ್ಯ, ಹಿಮಾಲಯನ್ ಅಡ್ವೆಂಚರ್ ಅಕಾಡೆಮಿಯ ಎನ್.ಕೆ.ಕೊಟ್ರೇಶ, ಹಾಗೂ ಪದಾಧಿಕಾರಿಗಳು ಇದ್ದರು.

By Dinamaana Kannada News

Political analysis|ಕಂಪ್ಲೇಂಟು ಪಟ್ಟಿ ರೆಡಿ ಮಾಡಿದ್ರು ರಾಜಣ್ಣ

ಮಾಜಿ ಸಚಿವ, ಹಿರಿಯ ನಾಯಕ ಕೆ.ಎನ್.ರಾಜಣ್ಣ ದಿಲ್ಲಿ ದಂಡಯಾತ್ರೆಗೆ ಸಜ್ಜಾಗಿದ್ದಾರೆ.  ಮಂತ್ರಿಗಿರಿ ಕಳೆದುಕೊಂಡ ನಂತರ ಮೌನವಾಗಿದ್ದ ಅವರೀಗ ಕಂಪ್ಲೇಂಟುಗಳ ಪಟ್ಟಿಯೊಂದಿಗೆ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು  : ಪಶು ಸಂಗೋಪನೆಯನ್ನೆ ನಂಬಿ ಬದುಕಿದವರು -4

ಒಂದು ಜಿಲ್ಲೆಯೆಂದರೆ  ಕೃಷಿಗೆ, ನೀರಾವರಿಗೆ, ಗೋಮಾಳಕ್ಕಿಷ್ಟೆಂದು ಹಸಿರು ವಲಯ (ಗ್ರೀನ್ ಝೋನ್)ದ ಭೂಮಿಯನ್ನು, ಉದ್ಯೋಗ ಕೊಡುವ ಕೈಗಾರಿಕೆಗಳ ಸ್ಥಾಪನೆಗೆಂದು ಒಂದಿಷ್ಟು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರಿಯಾಯ್ತಿ ದರದಲ್ಲಿ ಬಡ ಪತ್ರಕರ್ತರಿಗೆ ನಿವೇಶನಕ್ಕೆ ಸಿಎಂ ಜೊತೆ ಚರ್ಚಿಸುವೆ: ಕೆ.ವಿ.ಪಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?