Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಹುಳಭರಿತ ಆಹಾರ ವಿತರಣೆ : ಶಿಸ್ತು ಕ್ರಮಕ್ಕೆ ಕದಸಂಸ ಆಗ್ರಹ
ತಾಜಾ ಸುದ್ದಿ

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಹುಳಭರಿತ ಆಹಾರ ವಿತರಣೆ : ಶಿಸ್ತು ಕ್ರಮಕ್ಕೆ ಕದಸಂಸ ಆಗ್ರಹ

Dinamaana Kannada News
Last updated: August 5, 2025 10:31 am
Dinamaana Kannada News
Share
Mahanthes p J harihar
SHARE

ಹರಿಹರ : ನಗರದ ಜೆ.ಸಿ.ಬಡಾವಣೆ ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ಪೂರ್ವ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹುಳ ಹತ್ತಿದ ಆಹಾರ ವಿತರಣೆ ಮಾಡುತ್ತಿದ್ದು ಸಂಬAಧಿತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಘಟಕ ಆಗ್ರಹಿಸಿದೆ.

ಹಾಸ್ಟೆಲ್‌ನಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗಿನ 190ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ. ಈ ಹಾಸ್ಟೆಲ್‌ನಲ್ಲಿ ಭಾನುವಾರ ಮತ್ತು ಶನಿವಾರದಂದು ಹುಳುಗಳಿರುವ ಅಕ್ಕಿಯಲ್ಲಿ ಮಾಡಿದ ಆಹಾರವನ್ನು ತಯಾರಿಸಿ ವಿತರಿಸಿದ್ದಾರೆ.

ಬಡಿಸಿದ ಆಹಾರದಲ್ಲಿ ಹುಳುಗಳನ್ನು ಕಂಡ ವಿದ್ಯಾರ್ಥಿನಿಯರಲ್ಲಿ ಹಲವರು ಊಟವನ್ನು ಮಾಡಿಲ್ಲ, ಅನಿವಾರ್ಯ ಎನಿಸಿದ ಹಲವು ಮಕ್ಕಳು ಹುಳುಗಳನ್ನು ತೆಗೆದುಆಹಾರ ಸೇವಿಸಿದ್ದಾರೆ.ಸೋಮವಾರದಂದು ಬೆಳಿಗ್ಗೆ ತಯಾರಿಸಿದ ತಿಂಡಿಯಲ್ಲೂ ಹುಳಗಳು ಕಂಡು ಬಂದಿದ್ದರಿAದ ತಿಂಡಿ ಸೇವಿಸದೆ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯರು ಅಳುತ್ತಿದ್ದನ್ನು ಗಮನಿಸಿದ ಮರುಗಿದ ವಿವಿಧ ಶಾಲೆಯ ಶಿಕ್ಷಕರು ಆ ವಿದ್ಯಾರ್ಥಿನಿಯರಿಗೆ ಬಿಸ್ಕಿಟ್ ಹಂಚಿದ್ದಾರೆ. ಇಷ್ಟೆ ಅಲ್ಲದೆ ಅರ್ಧ ಬೆಂದು ಒಂದು ಚಪಾತಿ, ಅನ್ನವನ್ನೂ ಹೊಟ್ಟೆ ತುಂಬ ನೀಡಲ್ಲ, ಬಿಸಿ ನೀರಿನ ತರಹ ಇರುವ ಚಹಾ ವಿತರಣೆ ಮಾಡುತ್ತಿದ್ದಾರೆ, ಕುಡಿಯುವ ನೀರಲ್ಲಿ ವಾಸನೆ ಇರುತ್ತದೆ, ಪ್ರಶ್ನೆ ಮಾಡಿದವರಿಗೆ ತಾರತಮ್ಯತೆ ಮಾಡುತ್ತಾರೆ, ಬಿಸಿ ನೀರು ಲಭ್ಯವಿಲ್ಲ, ಸಂಜೆಯ ಸ್ನಾಕ್ಸ್ ನಿಯತವಾಗಿ ನೀಡಲ್ಲ.

ಶೌಚಾಲಯಗಳಲ್ಲಿ ತ್ಯಾಜ್ಯ ನೀರು ಸರಾಗವಾಗಿ ಹರಿದು ಹೋಗದೆಕಟ್ಟಿಕೊಂಡಿದ್ದು ಮೂಗು ಮುಚ್ಚಿಕೊಂಡು ಬಳಸಬೇಕಿದೆ ಎಂದು ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಮೌಖಿಕವಾಗಿ ದೂರಿದ್ದಾರೆ. ಈ ಹಾಸ್ಟೆಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ವಾರ್ಡನ್ ಹಾಸ್ಟೆಲ್‌ನಲ್ಲಿ ನಿಯಮಿತವಾಗಿಇರುವುದಿಲ್ಲ, ಈ ಹಿಂದೆಇವರು ಬೇರೆ ಹಾಸ್ಟೆಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವಾಗಲೂ ಇವರ ವಿರುದ್ಧ ಆರೋಪಗಳು ಕೇಳಿ ಬಂದಿದ್ದವು.

Read also : ಉದ್ಯೋಗಾಧಾರಿತ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಅರ್ಜಿ ಅಹ್ವಾನ

ಸರ್ಕಾರದಿAದ ಸಾಕಷ್ಟು ಅನುದಾನ ಬರುತ್ತಿದ್ದರೂ ಕೂಡ ಶುಚಿ, ರುಚಿಯಾದ ಆಹಾರ ನೀಡದೆ ವಿದ್ಯಾರ್ಥಿನಿಯರ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿರುವ ಇಲಾಖೆಯ ಸಂಬAಧಿತ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಸಂಘಟನೆಯು ಆಗ್ರಹಿಸುತ್ತದೆ.

ಹುಳುಭರಿತ ಆಹಾರ ವಿತರಣೆ ಬಗ್ಗೆ ಸಂಘಟನೆಯವರಿಗೆ ಮಾಹಿತಿ ನೀಡಿದ್ದಾರೆಂದು ಹಾಸ್ಟೆಲ್‌ನ ವಿದ್ಯಾರ್ಥಿನಿಯರಿಗೆ ಹಾಗೂ ಅವರ ಪೋಷಕರಿಗೆ ಇಲಾಖೆಯವರು ಕಿರುಕುಳ ಕೊಟ್ಟಲ್ಲಿ ಸಂಘಟನೆಯಿAದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯುವುದರ ಜೊತೆಗೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಕದಸಂಸಯ ತಾಲ್ಲೂಕು ಘಟಕದ ಸಂಚಾಲಕ ಪಿ.ಜೆ.ಮಹಾಂತೇಶ್ ಎಚ್ಚರಿಸಿದ್ದಾರೆ.

TAGGED:Davanagere districtShimoga districtಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಉದ್ಯೋಗಾಧಾರಿತ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಅರ್ಜಿ ಅಹ್ವಾನ
Next Article SDPI ಆಡಳಿತ ನಿರ್ಲಕ್ಷ್ಯ : ಮಲೇಬೆನ್ನೂರು ರಸ್ತೆಗೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಾತ್ಕಾಲಿಕ ಪರಿಹಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ

ದಾವಣಗೆರೆ (Davanagere): ಸ್ಟಾರ್ ಕ್ರಿಯೇಶನ್ಸ್ ಲಾಂಛನದಲ್ಲಿ ಚಂದ್ರಕಾಂತ ಪೂಜಾರಿ, ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರ ರಾನಿ ಸೆ.12ರಂದು ರಾಜ್ಯಾದ್ಯಂತ 200ಕ್ಕೂ…

By Dinamaana Kannada News

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ

ದಾವಣಗೆರೆ : ಪ್ರತಿದಿನ ನಾಲ್ಕು ಗೋಡೆಗಳ ಮಧ್ಯೆ ಪಾಠ ಪ್ರವಚನದಲ್ಲಿ ಕಾಲಕಳೆಯುತ್ತಿದ್ದ ವಿದ್ಯಾರ್ಥಿಗಳು ಚಂದದ ದಿರಸು, ಪೇಟತೊಟ್ಟು ಸಾಂಸ್ಕøತಿಕಕಾರ್ಯಕ್ರಮದಲ್ಲಿ ಸಂಗೀತಕ್ಕೆತಕ್ಕಂತೆ…

By Dinamaana Kannada News

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?