Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಷ್ಟ್ರೀಕೃತ ಬ್ಯಾಂಕ್‌ಗಳ  ಖಾಸಗೀಕರಣ ರಾಷ್ಟ್ರೀಯ ದುರಂತ : ಕೆ.ರಾಘವೇಂದ್ರ ನಾಯರಿ
ತಾಜಾ ಸುದ್ದಿ

ರಾಷ್ಟ್ರೀಕೃತ ಬ್ಯಾಂಕ್‌ಗಳ  ಖಾಸಗೀಕರಣ ರಾಷ್ಟ್ರೀಯ ದುರಂತ : ಕೆ.ರಾಘವೇಂದ್ರ ನಾಯರಿ

Dinamaana Kannada News
Last updated: July 20, 2024 1:40 am
Dinamaana Kannada News
Share
_District Bank
ಬ್ಯಾಂಕ್ ರಾಷ್ಟ್ರೀಕರಣದ 55 ನೇ ವಾರ್ಷಿಕೋತ್ಸವದ ಆಚರಣೆ
SHARE

ದಾವಣಗೆರೆ : ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) ಸುದೀರ್ಘವಾದ ಹೋರಾಟದ ಫಲವಾಗಿ 1969 ರ ಜುಲೈ 19 ರಂದು ಜಾರಿಗೆ ಬಂದ ಬ್ಯಾಂಕ್ ರಾಷ್ಟ್ರೀಕರಣವು ಜನತೆಗೆ ಆರ್ಥಿಕ ಸ್ವಾತಂತ್ರ್ಯವನ್ನು ನೀಡಿದ ದೇಶದ ಬಹುದೊಡ್ಡ ಆರ್ಥಿಕ ಕ್ರಾಂತಿಯಾಗಿದೆ. ದೇಶವನ್ನು ಆರ್ಥಿಕವಾಗಿ ಸಬಲವಾಗಿಸುವ ನಿಟ್ಟಿನಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿರುವ ಬ್ಯಾಂಕ್ ರಾಷ್ಟ್ರೀಕರಣ ದಿನವನ್ನು ಬ್ಯಾಂಕ್ ಉದ್ಯೋಗಿಗಳು ಮಾತ್ರವಲ್ಲದೆ ದೇಶದ ಜನತೆ ಆಚರಿಸಬೇಕು ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಪೆಡರೇಶನ್‌ನ ಜಂಟಿ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಕರೆ ನೀಡಿದರು.

ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಬ್ಯಾಂಕ್ ರಾಷ್ಟ್ರೀಕರಣದ 55 ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ ಮಾತಾಡಿದರು.

1969 ರ ಜುಲೈ 19 ರಂದು ಅಂದಿ‌ನ ಪ್ರಧಾನಿಗಳಾಗಿದ್ದ ದಿವಂಗತ ಇಂದಿರಾ ಗಾಂಧಿಯವರು ಖಾಸಗಿ ವಲಯದ ಒಡೆತನದಲ್ಲಿದ್ದ 14 ಪ್ರಮುಖ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವದರ ಮೂಲಕ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದರು. 1980 ರ ಎಪ್ರಿಲ್ 15 ರಂದು ಮತ್ತೆ 6 ಖಾಸಗಿ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಲಾಯಿತು. ಬ್ಯಾಂಕ್ ರಾಷ್ಟ್ರೀಕರಣದ ಫಲವಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಯಾಯಿತು. ಬ್ಯಾಂಕಿಂಗ್ ಸೌಲಭ್ಯವು ದೇಶದ ಮೂಲೆ ಮೂಲೆಗೂ ತಲುಪುವಂತಾಯಿತು. ಉದ್ಯೋಗ ಸೃಷ್ಟಿ, ಶಿಕ್ಷಣ, ಆರೋಗ್ಯ, ಬಡತನ ನಿರ್ಮೂಲನೆ, ಆರ್ಥಿಕ ಅಭಿವೃದ್ಧಿ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿಗೆ ಬ್ಯಾಂಕ್ ರಾಷ್ಟ್ರೀಕರಣವು ಗಮನಾರ್ಹವಾದ ಕೊಡುಗೆಯನ್ನು ನೀಡಿದೆ ಎಂದರು.

ಸರ್ಕಾರದ ಖಾಸಗೀಕರಣ ನೀತಿಯ ಫಲವಾಗಿ ಇದೇ 22 ರಿಂದ ಆರಂಭ ವಾಗಲಿರುವ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸರ್ಕಾರವು ಮುಂದಾಗುವ ಸಾಧ್ಯತೆ ಇದೆ ಎನ್ನುವ ಸುದ್ದಿಗಳು ಮಾಧ್ಯಮದಲ್ಲಿ ಬಿತ್ತರವಾಗುತ್ತಿದೆ. ತಿದ್ದುಪಡಿಗೆ ಸಂಸತ್ತು ಅನುಮೋದನೆ ನೀಡಿದರೆ ಅದೊಂದು ರಾಷ್ಟ್ರೀಯ ದುರಂತಕ್ಕೆ ಕಾರಣವಾಗಲಿದೆ ಎಂದು ಹೇಳಿದರು.

ಸರಕಾರವು ಖಾಸಗೀಕರಣಕ್ಕೆ ಮುಂದಾದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಜನಸಾಮಾನ್ಯರ 180 ಲಕ್ಷ ಕೋಟಿಗೂ ಹೆಚ್ಚಿನ ಠೇವಣಿ ಹಣದ ಸುರಕ್ಷತೆಗೆ ಅಪಾಯ ಎದುರಾಗಲಿದೆ. 2023-24 ರ ಸಾಲಿನಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು 1,41,203 ಕೋಟಿ ರೂಪಾಯಿಗಳ ನಿವ್ವಳ ಲಾಭ ಗಳಿಸಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರೀಕೃತ ಬ್ಯಾಂಕುಗಳು ದೇಶದ ಆಸ್ತಿ. ಅದನ್ನು ಇನ್ನಷ್ಟು ಬಲಗೊಳಿಸಲು ಸರಕಾರವು ಮುಂದಾಗಬೇಕೇ ವಿನಹ ಖಾಸಗೀಕರಣಗೊಳಿಸಬಾರದು ಎಂದು ಹೇಳಿದರು.

ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಮಾಜಿ ಅಧ್ಯಕ್ಷ ಅಜಿತ್‌ಕುಮಾರ್ ನ್ಯಾಮತಿ ಮಾತನಾಡಿ, ಸರಕಾರದ ಅನೇಕ ಯೋಜನೆಗಳು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕವೇ ಜನರನ್ನು ತಲುಪುತ್ತಿವೆ. ಖಾಸಗೀ ಬ್ಯಾಂಕುಗಳು ತಮ್ಮ ಲಾಭಕ್ಕಾಗಿ ಕಾರ್ಯ ನಿರ್ವಹಿಸುತ್ತವೆಯೇ ಸೇವಾ ಮನೋಭಾವನೆಯಿಂದ ಅಲ್ಲ ಎಂದರು.

ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ ಮಾತನಾಡಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಧ್ಯೇಯವಾಕ್ಯದಂತೆ “ಬ್ಯಾಂಕುಗಳು ಗಳಿಸುವ ಲಾಭವು ದೇಶದ ಜನರ ಕಲ್ಯಾಣಕ್ಕಾಗಿ ಬಳಕೆಯಾಗಬೇಕೇ ವಿನಹ ಖಾಸಗಿ ಕಂಪನೆಗಳ ಲೂಟಿಗಾಗಿ ಅಲ್ಲ” ಹಾಗೂ “ಬ್ಯಾಂಕಿಂಗ್ ಸೌಲಭ್ಯಗಳು ನಾಗರೀಕರ ಮೂಲಭೂತ ಹಕ್ಕಾಗಬೇಕು ಎನ್ನುವ ನಿಟ್ಟಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು.

ದಾವಣಗೆರೆ ಚಿತ್ರದುರ್ಗ ಜಿಲ್ಲಾ ನಿವೃತ್ತ ಬ್ಯಾಂಕ್ ನೌಕರರ ಒಕ್ಕೂಟದ ಉಪ ಪ್ರಧಾನ ಕಾರ್ಯದರ್ಶಿ ಹೆಚ್.ಸುಗುರಪ್ಪ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಖಜಾಂಚಿ ಕೆ.ವಿಶ್ವನಾಥ್ ಬಿಲ್ಲವ, ಉಪಾಧ್ಯಕ್ಷರುಗಳಾದ ಎಂ.ಎಂ.ಸಿದ್ದಲಿಂಗಯ್ಯ, ಆರ್.ಆಂಜನೇಯ, ಜಂಟಿ ಕಾರ್ಯದರ್ಶಿಗಳಾದ ಸಿ.ಪರಶುರಾಮ, ಎಂ.ಡಿ.ವಿದ್ಯಾಸಾಗರ್, ಶ್ರೀನಿವಾಸ  ಎನ್‌.ವಿ, ಡಿ.ಎನ್‌.ಅಣ್ಣಪ್ಪ ನಂದಾ ಹಾಗೂ ಇತರ ಪದಾಧಿಕಾರಿಗಳಾದ ಎಂ.ರಮೇಶ್, ಪ್ರಶಾಂತ್ ಶ್ರೀನಿವಾಸ್, ಡಿ.ಹರ್ಷದ್,  ನಾಗಭೂಷಣ ಎನ್.ಪಿ., ಗಜೇಂದ್ರ ಎಸ್,  ಮತ್ತಿತರರು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಓದಿನ ಜೊತೆಗೆ ಶಿಸ್ತು ಸಮಯಪ್ರಜ್ಞೆ ಅಳವಡಿಸಿಕೊಳ್ಳಿ : ದಿನೇಶ ಶೆಟ್ಟಿ ಕರೆ
Next Article Badhra dam Shivamogga ಭದ್ರಾ ಜಲಾಶಯ: ಒಳಹರಿವು ತುಸು ಇಳಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿ ರಚಿಸಿ  ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಿ ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ

ಬೆಂಗಳೂರು : ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ…

By Dinamaana Kannada News

Davanagere | ಬಿರುಕು ಬಿಟ್ಟ ಜಿಲ್ಲಾಸ್ಪತ್ರೆ ಕಟ್ಟಡ : ರೋಗಿಗಳಿಗೆ ಜೀವ ಭಯ!

ದಾವಣಗೆರೆ (Davanagere): ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯ ಸರ್ಕಾರಿ ಚಿಗಟೇರಿ ಜಿಲ್ಲಾಸ್ಪತ್ರೆಯ ಕಟ್ಟಡ ಬಹುತೇಕ ಬಿರುಕು ಬಿಟ್ಟಿದ್ದು, ಆಸ್ಪತ್ರೆಗಳಿಗೆ…

By Dinamaana Kannada News

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ದಾವಣಗೆರೆ: ಮಾಯಕೊಂಡ ಕ್ಷೇತ್ರದಲ್ಲಿ ಯೂರಿಯಾ ಗೊಬ್ಬರ ಸಿಗದೆ ರೈತರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ ಸೋಮವಾರ ಕೃಷಿ ಅಧಿಕಾರಿಗಳೊಂದಿಗೆ…

By Dinamaana Kannada News

You Might Also Like

baby girl
ತಾಜಾ ಸುದ್ದಿ

ದಾವಣಗೆರೆ|ಹೆಣ್ಣು ಮಗುವಿಗೆ ಜನ್ಮ ನೀಡಿ ಬಕೆಟ್‌ನಲ್ಲಿಟ್ಟು ಪರಾರಿಯಾದ ತಾಯಿ!

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ : ಜೈನ್ ತಾಂತ್ರಿಕ ಮಹಾವಿದ್ಯಾಲಯ ಇಂಜಿನಿಯರ್ಸ್ ಡೇ ಆಚರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?