Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರೈತರು ಬೆಳೆ ಸಮೀಕ್ಷೆ ಮಾಡುವಾಗ ನಿಖರ ಬೆಳೆ ನಮೂದಿಸಲು ಡಿಸಿ ಸಲಹೆ
ತಾಜಾ ಸುದ್ದಿ

Davanagere | ರೈತರು ಬೆಳೆ ಸಮೀಕ್ಷೆ ಮಾಡುವಾಗ ನಿಖರ ಬೆಳೆ ನಮೂದಿಸಲು ಡಿಸಿ ಸಲಹೆ

Dinamaana Kannada News
Last updated: March 5, 2025 1:41 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ (Davanagere) :  ರೈತರು ಬೆಳೆ ಸಮೀಕ್ಷೆ ಕೈಗೊಂಡಾಗ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ನಿಖರವಾಗಿ ದಾಖಲಿಸಬೇಕು. ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿ ಅಸಗೋಡು ಗ್ರಾಮ ವ್ಯಾಪ್ತಿಯಲ್ಲಿ 545 ಎಕರೆ ಟೊಮೆಟೊಗೆ ವಿಮೆ ಪಾವತಿಸಿದ್ದು ವಾಸ್ತವದಲ್ಲಿ 11.23 ಎಕರೆ ಟೊಮೆಟೊ ಬೆಳೆ ಬೆಳೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ  ಬಿಳಿಚೋಡು ಹೋಬಳಿಯ ಅಸಗೋಡು ಗ್ರಾಮದಲ್ಲಿ ಟೊಮೆಟೊ ಬೆಳೆಗೆ ರೈತರು ಬೆಳೆ ವಿಮಾ ಕಂತನ್ನು ಪಾವತಿಸಿದ್ದು, ಅಕ್ರಮವಾಗಿ ಬೆಳೆ ಸಮೀಕ್ಷೆ ಆಪ್‍ನಲ್ಲಿ ಟೊಮೆಟೊ ಬೆಳೆಯನ್ನು ಖಾಸಗಿ ನಿವಾಸಿಗಳ ನೆರವಿನಿಂದ ದಾಖಲಿಸಲಾಗಿದೆ. ಸಾಂಪ್ರದಾಯಿಕವಾಗಿ ಬೆಳೆಯಲ್ಪಡುವ ವಿಸ್ತೀರ್ಣಕ್ಕಿಂತಲೂ ಹೆಚ್ಚಿನ ಪ್ರದೇಶದಲ್ಲಿ ಟೊಮೆಟೊ ಬೆಳೆಯು ದಾಖಲಾಗಿದ್ದರಿಂದ, ಜಿಲ್ಲೆಯ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ಭೌತಿಕವಾಗಿ 307 ಪ್ಲಾಟ್ ಗಳನ್ನು ಪುನರ್ ಪರಿಶೀಲಿಸಿದಾಗ ಕೇವಲ 13 ಪ್ಲಾಟುಗಳಲ್ಲಿ ಟೊಮೆಟೊ ಬೆಳೆದಿರುವುದು ಕಂಡು ಬಂದಿದೆ. 545 ಎಕರೆ ಪ್ರದೇಶಕ್ಕೆ ಬೆಳೆ ವಿಮಾ ಕಂತನ್ನು ಪಾವತಿಸಲಾಗಿದ್ದು,

ಕೇವಲ 11.23 ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆ ಕಂಡುಬಂದಿರುತ್ತದೆ. ಬೆಳೆ ಸಮೀಕ್ಷೆಯನ್ನು ಮಾಡುವಾಗ ಅಥವಾ ಮಾಡಿಸುವಾಗ ಕಡ್ಡಾಯವಾಗಿ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ಪ್ರಲೋಭನೆಗೆ ಒಳಗಾಗದೇ ತಾವು ನಿಖರವಾಗಿ ಬೆಳೆದ ಬೆಳೆಯನ್ನು ದಾಖಲಿಸಬೇಕು. ಯಾರಾದರೂ ತಪ್ಪು ಮಾಹಿತಿ ನೀಡಲು ಆಮಿಷವೊಡ್ಡಿದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬಹುದೆಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

‘ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿದಂತೆ ರೈತರು ಪಾವತಿಸಿರುವ ಬೆಳೆ ವಿಮಾ ಕಂತು ಹಾಗೂ ಬೆಳೆದಿರುವ ಬೆಳೆ ಮತ್ತು ವಿಸ್ತೀರ್ಣ ಬಹಳ ಮುಖ್ಯವಾಗಿರುತ್ತದೆ. ರೈತರು ತಾವು ಬೆಳೆದಿರುವ ಬೆಳೆಯನ್ನು “ಬೆಳೆ ಸಮೀಕ್ಷೆ” ಆಪ್ ನಲ್ಲಿ ದಾಖಲಿಸಲು  ಅವಕಾಶವಿರುತ್ತದೆ.

ರೈತರು ತಾವು ಬೆಳೆದಿರುವ ಬೆಳೆಯನ್ನು ಬೆಳೆ ಸಮೀಕ್ಷೆ ಆಪ್ ನಲ್ಲಿ ದಾಖಲಿಸಲು ಕಷ್ಟವಾದಲ್ಲಿ ಸಂಬಂಧಿಸಿದ ಗ್ರಾಮದಲ್ಲಿನ ಖಾಸಗಿ ನಿವಾಸಿಗಳಿಂದ ಬೆಳೆ ದಾಖಲೀಕರಣವನ್ನು ಕೈಗೊಳ್ಳಲಾಗುತ್ತಿದ್ದು,. ಜಿಲ್ಲಾಡಳಿತದಿಂದ ಈ ಚಟುವಟಿಕೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಬೆಳೆ ನಷ್ಟ ಹೊಂದಿರುವ ರೈತರಿಗೆ ವಿಮೆ ಪರಿಹಾರ ದೊರಕಿಸಿಕೊಡಲು ನಿಯಮಾನುಸಾರ ಕ್ರಮ ಜರುಗಿಸಲಾಗುತ್ತಿದೆ. ಕಳೆದ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ರೂ.140 ಕೋಟಿಗಳಿಗಿಂತಲೂ ಹೆಚ್ಚು ವಿಮಾ ಪರಿಹಾರವಾಗಿ ನೀಡಿದ್ದು ಹಣ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

Read also : Davanagere | ಮಾ.8ಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article District Court DAVANAGERE Davanagere | ಮಾ.8ಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್
Next Article Davanagere Harihara | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪಾದಾಯಾತ್ರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಭಿಜಿತ್ ಅಭಿನಯದ “ಅಡವಿಕಟ್ಟೆ” ಈ ವಾರ ತೆರೆಗೆ

ಬೆಂಗಳೂರು :  ಹಿರಿಯ ನಟ ಅಭಿಜಿತ್‌ ಹಾಗೂ ನಾಗರಾಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಅಡವಿಕಟ್ಟೆ" ಚಿತ್ರ ಈ ವಾರ ರಾಜ್ಯಾದ್ಯಂತ…

By Dinamaana Kannada News

ಶೋಷಿತರಿಗೆ “ಜಾತಿಗಣತಿ” ಜಾರಿಯಾಗಬೇಕು: ಜಿ. ಬಿ. ವಿನಯ್ ಕುಮಾರ್ ಅಭಿಮತ

ದಾವಣಗೆರೆ (Davanagere): ಕರ್ನಾಟಕದಲ್ಲಿ ಬಹುಮುಖ್ಯವಾಗಿ ಚರ್ಚಿತವಾಗುತ್ತಿರುವುದು ಜಾತಿಗಣತಿ ವಿಚಾರ. ಇದು ಜಾತಿಗಣತಿ ಅಲ್ಲ. ಎಲ್ಲಾ ಜಾತಿ, ಧರ್ಮದವರ ಆರ್ಥಿಕ, ಶೈಕ್ಷಣಿಕ,…

By Dinamaana Kannada News

Pure Silk Sarees: ಇಂದಿನಿಂದ ರೇಷ್ಮೆ ಸೀರೆಗಳ‌ ಪ್ರದರ್ಶನ ಮತ್ತು ಮಾರಾಟ ಮೇಳ‌‌ ಆರಂಭ

ದಾವಣಗೆರೆ: ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಿಲ್ಕ್ ಇಂಡಿಯಾ-2024 ರೇಷ್ಮೆ ಸೀರೆಗಳ (pure…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?