Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ರಾಜೀನಾಮೆ ನೀಡಲಿ : ಕಾಂಗ್ರೆಸ್ ಆಗ್ರಹ
ತಾಜಾ ಸುದ್ದಿ

ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ರಾಜೀನಾಮೆ ನೀಡಲಿ : ಕಾಂಗ್ರೆಸ್ ಆಗ್ರಹ

Dinamaana Kannada News
Last updated: December 24, 2024 4:09 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (DAVANAGERE): ಸಂವಿಧಾನ ಶಿಲ್ಪಿ ಡಾ|| ಬಿ.ಆ‌ರ್.ಅಂಬೇಡ್ಕ‌ರ್ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ಪಕ್ಷದ ವಿರುದ್ದ ನಗರದ ಡಾ|| ಬಿ.ಆರ್.ಅಂಬೇಡ್ಕ‌ರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ  ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್‌ ನೇತೃತ್ವದಲ್ಲಿ ಹೋರಾಟ ನಡೆಸಿ ಘೋಷಣೆಗಳನ್ನು ಕೂಗಲಾಯಿತು.

ಈ ವೇಳೆ ಮಾತನಾಡಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್,  ಸಂವಿಧಾನದ ಮೂಲಕ ಶೋಷಿತರ, ಮಹಿಳೆಯರ ಹಾಗೂ ಸರ್ವರಿಗೂ ಹಕ್ಕುಗಳ ಮೂಲಕ ಧ್ವನಿಯಾಗಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ದೆಹಲಿಯ ಸದನದಲ್ಲಿ ಕೇಂದ್ರದ ಗೃಹ ಮಂತ್ರಿಗಳು ಅಪಮಾನ ಮಾಡಿದ್ದಾರೆ.

ಅಂಬೇಡ್ಕರ್ ಬದಲು ದೇವರನ್ನು ಜಪಿಸಿದರೆ ಒಳಿತಾಗುತ್ತಿತ್ತು ಎಂದು ಹೇಳುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದೇವರಂತೆ ಪೂಜಿಸುವ ಹೃದಯಗಳಿಗೆ ನೋವುಂಟು ಮಾಡಿದ್ದಾರೆ. ಸದನದಲ್ಲಿ ನಮ್ಮ ನಿಲುವುಗಳಿಗೆ, ನಮ್ಮ ಬೇಡಿಕೆಗಳಿಗೆ ಆಸ್ಪದ ನೀಡದವರು ಕೇವಲ ಅಂಬಾನಿ, ಆದಾನಿ ಅವರ ಅಭಿವೃದ್ಧಿಗೆ ನಿಂತಿದ್ದಾರೆ. ಇದನ್ನು ವಿರೋಧಿಸಿದವರ ಪ್ರಶ್ನೆಗಳನ್ನು ಕೇಳುವ ಸೌಜನ್ಯತೆಯು ಇರದವರು ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದು ಅಂಬೇಡ್ಕರ್ ಅವರಿಗೆ ಮಾಡಿದ ಮಾಹಾ ದ್ರೋಹವಾಗಿದೆ ಎಂದರು.

ಇದನ್ನು ಪ್ರಶ್ನಿಸುವ ಹಾಗೂ ಚಿಂತಿಸುವುದರ ಮೂಲಕ ಜನತೆಯು ಹೋರಾಟ ಮಾಡಬೇಕಾಗಿದೆ. ಪ್ರತಿಭಟನೆಯ ಮೂಲಕ ಕೇಂದ್ರದ ಗೃಹ ಮಂತ್ರಿಗಳ ರಾಜೀನಾಮೆಗೆ ಒತ್ತಡ ಹಾಕಬೇಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಿತ್ತೊಗೆದ್ದಿದ್ದೇವೆ. ಕೇಂದ್ರದಲ್ಲಿಯು ಬಿಜೆಪಿ ಪಕ್ಷದ ಅಧಿಕಾರದ ಬದಲಾವಣೆ ಶೀಘ್ರದಲ್ಲೇ ಮಾಡುತ್ತೇವೆ. 100 ದಿನ ಅಧಿಕಾರ ಕೊಡಿ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದವರು ಮೂರನೇ ಭಾರಿ ಅಧಿಕಾರಕ್ಕೆ ಬಂದರೂ ಸಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಬಿಜೆಪಿಯಿಂದ ದ್ವೇಷದ ರಾಜಕೀಯ ನಡೆಯುತ್ತಿದೆ. ಬಿಜೆಪಿಯವರು ಸಂವಿಧಾನದ ವಿಷಯಕ್ಕೆ ಬಂದರೇ ತೀರ್ವ ಹೋರಾಟ ನಡೆಸಲಾಗುತ್ತದೆ ಎಂದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅನಿತಾಬಾಯಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಕೆ.ಜಿ.ಶಿವಕುಮಾರ್,  ಜಿ.ಸಿ.ನಿಂಗಪ್ಪ,ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶನ ಸದಸ್ಯರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪ. ಜಾತಿ ಮತ್ತು ಪ.ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್‌ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇತರರು ಇದ್ದರು.

Read also : ಜನವರಿ 4, 5 ರಂದು ಯುವಜನೋತ್ಸವ, ಸಚಿವರಿಂದ ಲೋಗೋ ಬಿಡುಗಡೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article State level youth festival logo release ಜನವರಿ 4, 5 ರಂದು ಯುವಜನೋತ್ಸವ, ಸಚಿವರಿಂದ ಲೋಗೋ ಬಿಡುಗಡೆ
Next Article DAVANAGERE ಗ್ರಾಪಂ ಅಧ್ಯಕ್ಷರಾಗಿ ಲಕ್ಷ್ಮೀ ಮಂಜಪ್ಪ ಎ.ಕೆ ಅವಿರೋಧವಾಗಿ ಆಯ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಪಘಾತ ಮೂವರ ಸಾವು

ದಾವಣಗೆರೆ : ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಓಮಿನಿ‌ ವ್ಯಾನ್ ಗೆ ksrtc ಬಸ್ ಡಿಕ್ಕಿ…

By Dinamaana Kannada News

Davanagere : ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಆ.17 (Davanagere)   :  ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ  ಹೊಯ್ಸಳ ಮತ್ತು ಕೆಳದಿ…

By Dinamaana Kannada News

DAVANAGERE NEWS : ತಾಯಿಯ ಎದೆಹಾಲು ಮಕ್ಕಳಿಗೆ ದಿವ್ಯೌಷಧ : ನ್ಯಾ. ವೀಣಾ ಕೊಳೇಕರ್

ಹರಿಹರ  (Davangere Distric) : ತಾಯಿಯ ಎದೆಹಾಲು ಅತ್ಯುತ್ತಮವಾದ ಆಹಾರವಷ್ಟೇ ಅಲ್ಲ. ಇದು ಒಂದು ಔಷಧ ಎಂದು ನ್ಯಾಯಾಧೀಶರು ಶ್ರೀಮತಿ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?