Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಖಾಸಗಿ ಆಸ್ಪತ್ರೆ ವೈದ್ಯರ ಸೇವಾ ನ್ಯೂನ್ಯತೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ರೂ.4.96 ಲಕ್ಷ ಪರಿಹಾರ ನೀಡಲು ಆದೇಶ
ತಾಜಾ ಸುದ್ದಿ

ಖಾಸಗಿ ಆಸ್ಪತ್ರೆ ವೈದ್ಯರ ಸೇವಾ ನ್ಯೂನ್ಯತೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ರೂ.4.96 ಲಕ್ಷ ಪರಿಹಾರ ನೀಡಲು ಆದೇಶ

Dinamaana Kannada News
Last updated: April 18, 2024 11:52 am
Dinamaana Kannada News
Share
District Court dvg
SHARE

 ದಾವಣಗೆರೆ; ಏ.18 : ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯರು ದೋಷ ಪೂರಿತ ವೈದ್ಯಕೀಯ ಸೇವೆಗೆ ಪರಿಹಾರವಾಗಿ ನಷ್ಟ ಅನುಭವಿಸಿದ ರೋಗಿಗೆ ರೂ.4,36,626 ಪರಿಹಾರ ಹಾಗೂ ಮಾನಸಿಕ ವೇದನೆ, ಪ್ರಕರಣದ ಖರ್ಚಾಗಿ ರೂ.60 ಸಾವಿರ ಭರಿಸುವಂತೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ದಾವಣಗೆರೆ ನಿವಾಸಿ ಟಿ. ಕುಮಾರ ಅವರು ತಮ್ಮ ಎಡಗೈ ಉಂಟಾದ ಗಾಯಕ್ಕೆ ಚಿಕಿತ್ಸೆ ಕೋರಿ 2022 ರ ಫೆಬ್ರವರಿ 2 ರಂದು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ತೋರಿಸಿದಾಗ ವೈದ್ಯರು ಎಡಕ್ಕೆ ಮೂಳೆ ಮುರಿದಿದ್ದು, ಅದಕ್ಕಾಗಿ ಶಸ್ತ್ರ ಚಿಕಿತ್ಸೆ ಮಾಡಬೇಕಾಗಬಹುದೆಂದು ನಿರ್ಧರಿಸಿ ರೋಗಿಗೆ 2022 ರ ಫೆಬ್ರವರಿ 16 ರಂದು ಶಸ್ತ್ರಚಿಕಿತ್ಸೆ ನಡೆಸಿ 2022 ರ ಫೆಬ್ರವರಿ 21 ರಂದು ಬಿಡುಗಡೆ ಮಾಡಿದ್ದರು.

ಆದರೆ ಗುಣಹೊಂದದೇ ಇರುವುದರಿಂದ, ರೋಗಿಯು ಸರ್ಕಾರಿ ಆಸ್ಪತ್ರೆಯಲ್ಲಿ ಸಮಾಲೋಚಿಸಿದಾಗ ಎಡಗೈ ಮೂಳೆ ಸರಿಯಿರುವುದು ಎಕ್ಸರೇ ವರದಿಯಿಂದ ತಿಳಿದು ಬಂದಿರುತ್ತದೆ. ಸರ್ಕಾರಿ ಆಸ್ಪತ್ರೆ ವೈದ್ಯರು ರೋಗಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ನೀಡಿದ ಸಲಹೆಗೆ ರೋಗಿಯು ಮಣಿಪಾಲ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುತ್ತಾರೆ.

ರೋಗಿವು ದಾವಣಗೆರೆ ಖಾಸಗಿ ಆಸ್ಪತ್ರೆ ವೈದ್ಯರು ಸೇವಾ ನ್ಯೂನ್ಯತೆ ಮಾಡಿದ ಬಗ್ಗೆ ಸಕ್ಷಮ ಪ್ರಾಧಿಕಾರದೊಂದಿಗೆ ಪತ್ರ ವ್ಯವಹಾರ ನಡೆಸಿ, ತಪ್ಪಿತಸ್ತ ವೈದ್ಯರ ಮೇಲೆ ಸೂಕ್ತ ಕ್ರಮಕ್ಕಾಗಿ ಆಶ್ರಯಿಸಿದ್ದರು. ಆದರೆ, ಸೂಕ್ತ ಕ್ರಮ ಜರುಗಿಸಲು ಒಪ್ಪದ ಪ್ರಾಧಿಕಾರ, ವೈದ್ಯರನ್ನು ತಪ್ಪಿತಸ್ತರಲ್ಲ ಎಂದು ನಿರ್ಧರಿಸಿ ಹಿಂಬರಹ ನೀಡಿತ್ತು. ಪ್ರಾಧಿಕಾರ ಕ್ರಮ ಪ್ರಶ್ನಿಸಿ ಮತ್ತು ಸೂಕ್ತ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ವಹಿಸಿದ್ದು ವೈದ್ಯರಿಂದ ಪರಿಹಾರ ಕೋರಿ, ದೂರುದಾರ ಕುಮಾರ.ಟಿ. ಅವರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಪ್ರಕರಣದಲ್ಲಿ ಎದುರುದಾರರಾಗಿ ಹಾಜರಾದ ವೈದ್ಯರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ದೂರುದಾರರು ಹಾಜರುಪಡಿಸಿದ ಸೂಕ್ತ ದಾಖಲೆಗಳನ್ನು ಮತ್ತು ಉಭಯ ಪಕ್ಷಗಾರರ ಅಹವಾಲನ್ನು ಪರಿಶೀಲಿಸಿದ ಆಯೋಗ, ದೂರುದಾರರು ಸಲ್ಲಿಸಿದ ದೂರನ್ನು ಪುರಸ್ಕರಿಸಿ, ಎದುರುದಾರ ವೈದ್ಯರು ಸೇವೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂದು ನಿರ್ಣಯಿಸಿ, ಎದುರುದಾರ ವೈದ್ಯರು, ನೊಂದ ದೂರುದಾರ ಗ್ರಾಹಕ ರೋಗಿಗೆ ಪರಿಹಾರ ರೂಪವಾಗಿ ಒಟ್ಟು ರೂ.4,36,626 ಮತ್ತು ಮಾನಸಿಕ ವೇದನೆ ಮತ್ತು ಪ್ರಕರಣದ ಖರ್ಚು ಒಟ್ಟು ರೂ.60,000/- ನೀಡಲು ಆದೇಶಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಬಿ.ಯು. ಗೀತಾ ಇವರು ಆದೇಶಿಸಿದ್ದಾರೆ.

TAGGED:dinamaana.comdinamaana.com.davanagere newsDistrict Consumer Court.ಜಿಲ್ಲಾ ಗ್ರಾಹಕರ ನ್ಯಾಯಾಲಯ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article excise dvg ವಿವಿಧ ಅಬಕಾರಿ ನೀತಿ ಉಲ್ಲಂಘನೆ 473 ಪ್ರಕರಣ ದಾಖಲು
Next Article davanagere dc ಆರೋಗ್ಯ ಸಂರಕ್ಷಣೆಗೆ ಬಹು ಉಪಯೋಗಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಪೌರಕಾರ್ಮಿಕರ ಹುದ್ದೆಯನ್ನು ನೀಡಲು ಅಧಿಕಾರಿ, ಸಿಬ್ಬಂದಿ ಹಣ ಪಡೆದರೇ ಶಿಸ್ತು ಕ್ರಮ

ದಾವಣಗೆರೆ ಮೇ.05 (Davanagere): ಮಹಾನಗರಪಾಲಿಕೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ಪಾಲಿಕೆಯ ಯಾವುದೇ ಅಧಿಕಾರಿ, ಸಿಬ್ಬಂದಿಗಳು ಹಣ ನೀಡುವಂತೆ ಅಥವಾ ಒತ್ತಾಯ…

By Dinamaana Kannada News

ಎಸ್ಸೆಸ್ಸೆಲ್ಸಿ ಪರೀಕ್ಷೆ: ಈಶ್ವರಮ್ಮ ಶಾಲೆಗೆ ಶೇ.100 ಫಲಿತಾಂಶ

ದಾವಣಗೆರೆ:  ಈ ಬಾರಿಯ 2023-24ನೇ ಸಾಲಿನ ಎಸ್ಸೆಸ್ಸೆಲ್ಪಿ ಫಲಿತಾಂಶ ಪ್ರಕಟಗೊಂಡಿದ್ದು, ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ…

By Dinamaana Kannada News

ಮತದಾನ ಜಾಗೃತಿಗೆ ಬೈಕ್ ರ್‍ಯಾಲಿ

ದಾವಣಗೆರೆ, ಮಾ.31 :  ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಬಳಿಯಿಂದ  ಭಾನುವಾರ ಆಯೋಜಿಸಿದ್ದ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?