Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಷ್ಟ್ರೀಯ ಲೋಕ್ ಅದಾಲತ್‌ : ರಾಜಿ ಮೂಲಕ  ಮತ್ತೆ ಒಂದಾದ ದಂಪತಿಗಳು
ತಾಜಾ ಸುದ್ದಿ

Davanagere | ರಾಷ್ಟ್ರೀಯ ಲೋಕ್ ಅದಾಲತ್‌ : ರಾಜಿ ಮೂಲಕ  ಮತ್ತೆ ಒಂದಾದ ದಂಪತಿಗಳು

Dinamaana Kannada News
Last updated: September 15, 2024 4:22 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) :  ವಿವಿಧ ಕಾರಣಗಳಿಂದ  ವಿವಾಹ ವಿಚ್ಚೇದನ ಮತ್ತು ಜೀವನಾಂಶಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದ 25 ಜೋಡಿಗಳು, ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜಿ ಮೂಲಕ ಮತ್ತೊಮ್ಮೆ ಜೀವನ ನಡೆಸಲು ಒಪ್ಪಿದ್ದಾರೆ.

ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ 17, ಹರಿಹರದಲ್ಲಿ 3, ಚನ್ನಗಿರಿ ಮತ್ತು ಜಗಳೂರಿನಲ್ಲಿ ತಲಾ 2 ಹಾಗೂ ಹೊನ್ನಾಳಿ ತಾಲೂಕು ನ್ಯಾಯಾಲಯದಲ್ಲಿ 1 ಜೋಡಿ ಸೇರಿ ಒಟ್ಟು 25 ಜೋಡಿಗಳು ನಾನಾ ಕಾರಣಕ್ಕೆ ತಮ್ಮ ಬಾಳಿನಲ್ಲಿ ಎದುರಾಗಿದ್ದ ಕಲಹ ಮರೆತು, ಮರಳಿ ಒಂದಾದರು.

ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ಮರಳಿ ಒಂದಾದ 17 ಜೋಡಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ, ಕೌಟುಂಬಿಕ ನ್ಯಾಯಾಲಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ಹಾಗೂ ಇತರೆ ನ್ಯಾಯಾಧೀಶರು ಅಭಿನಂದಿಸಿ, ಮುಂಬರುವ ಜೀವನ ಸುಖಕರವಾಗಲಿ ಎಂದು ಹಾರೈಸಿ, ಸಿಹಿ ಹಂಚಿ, ಜವಳಿ ವ್ಯಾಪಾರಿಯೊಬ್ಬರ ಸಹಕಾರದಿಂದ ಸೀರೆಯೊಂದಿಗೆ ಬಾಗಿನ ಇಟ್ಟು ಮನೆಗೆ ಕಳುಹಿಸಿಕೊಟ್ಟರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಮಾತನಾಡಿ, ಜಿಲ್ಲೆಯಲ್ಲಿ ಲೋಕ ಅದಾಲತ್‌ನಲ್ಲಿ ರಾಜೀ ಮೂಲಕ ಒಟ್ಟು 7,042 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, 11,48,01,784 ರೂ. ಮತ್ತು 1,46,134 ವ್ಯಾಜ್ಯಪೂರ್ವ ಪ್ರಕರಣ ಇತ್ಯರ್ಥಪಡಿಸಿ, 61,38,25,221 ರೂ. ವ್ಯವಹರಣೆ, ಸರಕಾರಿ ವಸೂಲಾತಿ ಮತ್ತು ಪರಿಹಾರ ಕೊಡಿಸಲಾಗಿದೆ  ಎಂದು ಮಾಹಿತಿ ನೀಡಿದರು.

Read also : Davanagere | ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ “ನೋಡು ಬಾ ನಮ್ಮೂರ ಮಸೀದಿ” ಕಾರ್ಯಕ್ರಮ

71 ಅಪರಾಧಿಕ, 142 ಚೆಕ್ ಅಮಾನ್ಯ, 42 ಬ್ಯಾಂಕ್ ವಸೂಲಾತಿ, 8 ಇತರೆ ಹಣ ವಸೂಲಾತಿ, 51 ಅಪಘಾತ ಪರಿಹಾರ, 112 ವಿದ್ಯುತ್ ಕಳ್ಳತನ, 6 ಅಕ್ರಮ ಮರಳು ಗಣಿಗಾರಿಕೆ ಪ್ರಕರಣ, 23 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 122 ಜಾರಿ ಅರ್ಜಿಗಳು ಅಲ್ಲದೆ ಹಲವು ಕಾರಣಕ್ಕಾಗಿ ದಾಖಲಿಸಿದ 52 ದಾವೆ ಮತ್ತು 39 ಜೀವನಾಂಶ ಕೋರಿ ದಾಖಲಿಸಿದ್ದ ದಾವೆ ಸೇರಿ ಒಟ್ಟು 7,042 ಜಾರಿಯಲ್ಲಿದ್ದ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು.

ಜಿಲ್ಲಾದ್ಯಂತ 290ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಮತ್ತು ಅವರುಗಳಿಗೆ ಸರಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರೆ ಅನುಕೂಲತೆಗಳಿಗೆ ಅನುವು ಮಾಡಿಕೊಡಲಾಗಿದೆ ಎಂದರು.

ಈ ವೇಳೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಸೇರಿ ನ್ಯಾಯಾಧೀಶರು ಇದ್ದರು.

TAGGED:Davangeredinamaana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ “ನೋಡು ಬಾ ನಮ್ಮೂರ ಮಸೀದಿ” ಕಾರ್ಯಕ್ರಮ
Next Article DAVANAGERE Davanagere | ಈಜು ಸ್ಪರ್ಧೆ: ಈಶ್ವರಮ್ಮ ಶಾಲೆಯ ಎನ್.ಎಂ.ಛವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಕ್ಷಿಣ ಕಾಂಗ್ರೆಸ್‍ನಿಂದ ಎಸ್ಸೆಸ್ ಅವರಿಗೆ ಶ್ರದ್ಧಾಂಜಲಿ

ದಾವಣಗೆರೆ: ದಾವಣಗೆರೆ ದಕ್ಷಿಣದ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಅಯೂಬ್ ಪೈಲ್ವಾನ್ ಅವರ…

By Dinamaana Kannada News

Davangere | ಆರೋಗ್ಯ ಭಾಗ್ಯವನ್ನು ಕೊಡುವವನು ಧನ್ವಂತರಿ : ವೇದಬ್ರಹ್ಮ ಗೋಪಾಲ ಆಚಾರ್ ಮಣ್ಣೂರ್

ದಾವಣಗೆರೆ  (Davangere) :  ‘ಧನ್ವಂ ತರತೀ ಇತೀ ಧನ್ವಂತರಿ’ – ಅಂದರೆ ಪಾಪವನ್ನು ಕಳೆಯುವವನು, ದೋಷವನ್ನು ದೂರ ಮಾಡುವವನು, ಅನಾರೋಗ್ಯವನ್ನು…

By Dinamaana Kannada News

ದಾವಣಗೆರೆ: ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ :  2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?