Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere pocso act | ಮಕ್ಕಳಿಗೆ ಮೂಲಭೂತ ಹಕ್ಕು,ಕರ್ತವ್ಯಗಳ ಜಾಗೃತಿಗೆ ಅಸ್ತು : ನ್ಯಾ.ರಾಜೇಶ್ವರಿ ಎನ್.ಹೆಗಡೆ
ತಾಜಾ ಸುದ್ದಿ

Davangere pocso act | ಮಕ್ಕಳಿಗೆ ಮೂಲಭೂತ ಹಕ್ಕು,ಕರ್ತವ್ಯಗಳ ಜಾಗೃತಿಗೆ ಅಸ್ತು : ನ್ಯಾ.ರಾಜೇಶ್ವರಿ ಎನ್.ಹೆಗಡೆ

Dinamaana Kannada News
Last updated: August 21, 2024 4:45 pm
Dinamaana Kannada News
Share
Davanagere District Court
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈ ಮಾಸಿಕ ಸಭೆ
SHARE

ದಾವಣಗೆರೆ ಆ.21 (Davangere District) :  ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಸಂತ್ರಸ್ಥರಿಗೆ ತುರ್ತು ಮತ್ತು ಮಧ್ಯಂತರ ಪರಿಹಾರ ಸೇರಿದಂತೆ ಅವರಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳು ಗರಿಷ್ಠ ಪ್ರಮಾಣದಲ್ಲಿ ಸಿಗಬೇಕು ಮತ್ತು ಅವರಿಗಿರುವ ಕಾನೂನಿನ ಅವಕಾಶಗಳ ಮಾಹಿತಿ ದೊರಕಿಸಲು ಇಲಾಖೆ ಮುಂದಾಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.

ಬುಧವಾರ ಜಿಲ್ಲಾ ನ್ಯಾಯಾಲಯ (District Court) ದ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ (District Legal Services Authority) ದ ವಿವಿಧ ಇಲಾಖೆ ಅಧಿಕಾರಿಗಳ ದ್ವೈ ಮಾಸಿಕ ಸಭೆ, ಪೋಕ್ಸೋ, ಜಿಲ್ಲಾ ವಿಶೇಷ ಕಾರ್ಯಪಡೆ, ಬಾಲ ನ್ಯಾಯ ಸಮಿತಿ, ಮಾನವ ಕಳ್ಳಸಾಗಣೆ (Human trafficking) ತಡೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೋಕ್ಸೋ ಕಾಯಿದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ಥರಿಗೆ ತ್ವರಿತ ನ್ಯಾಯದ ಜೊತೆಗೆ ಎಲ್ಲಾ ಸೌಲಭ್ಯಗಳು ದೊರಕುವಂತಾಗಬೇಕು.‌ ಮತ್ತು ಮಕ್ಕಳಿಗೆ ತಮ್ಮ ರಕ್ಷಣಾ ಕಾಯ್ದೆಗಳು ಸೇರಿದಂತೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಅರಿವು ಮೂಡಿಸಲು ನುರಿತ ವಕೀಲರ ತಂಡಗಳನ್ನು ರಚಿಸಿ ಶಾಲೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸಲಹೆ ನೀಡಿದರು.

ಬಾಲ ನ್ಯಾಯ ಮಂಡಳಿಗೆ ಸಭೆಗಳನ್ನು ನಡೆಸಲು ಸುಸಜ್ಜಿತವಾದ ಸಭಾಂಗಣದ ಕೊರತೆ ನೀಗಿಸಲು ಜಿಲ್ಲಾಡಳಿತ ಮುಂದಾಗಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ. ಜಿಲ್ಲೆಗೆ ಇತರೆ ರಾಜ್ಯಗಳಿಂದ ಉದ್ಯೋಗ ಹರಸಿ ಇಲ್ಲಿಗೆ ಚಿಕ್ಕ ಮಕ್ಕಳೊಂದಿಗೆ ವಲಸೆ ಬಂದಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಇದಕ್ಕಾಗಿ ಮಕ್ಕಳು ಕಲಿಕೆಯಿಂದ ಹೊರಗುಳಿಯ ಬಾರದೆಂದು ವಾಹನದ ಮೂಲಕ ಮೊಬೈಲ್ ಶಾಲೆ ಆರಂಭಿಸಲು  ಮುಂದಾಗಿದೆ. ಇದರಿಂದ ವಲಸಿಗರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸುವ ರಚನಾತ್ಮಕ ಕಾರ್ಯಕ್ರಮವಾಗಿದೆ ಎಂದರು.

ಸೆ. 14 ರಂದು ರಾಷ್ಟ್ರೀಯ ಲೋಕಾದಾಲತ್ (Rashtriya Lokadalat) ನಡೆಯಲಿದ್ದು ವಿವಿಧ ಇಲಾಖೆಯಲ್ಲಿ ಇತ್ಯಾರ್ಥಪಡಿಸಬಹುದಾದ ಪ್ರಕರಣಗಳನ್ನು ಇದರಲ್ಲಿ ಸೇರಿಸಿ ಗರಿಷ್ಠ ಪ್ರಕರಣಗಳನ್ನು ಬಗೆಹರಿಸಿ ತ್ವರಿತ ನ್ಯಾಯದಾನಕ್ಕೆ ಮುಂದಾಗಿ ಎಂದು ತಿಳಿಸಿದರು.

ಜನನ ಮತ್ತು ಮರಣ ನೊಂದಣಿಯಲ್ಲಿ ಜನರಿಗೆ ಸಮಸ್ಯೆಯಾಗುತ್ತಿದೆ. ತಿದ್ದುಪಡಿ, ಸೇರ್ಪಡೆಗಾಗಿ ನ್ಯಾಯಾಲಯದಲ್ಲಿ ‌ಸಾಕಷ್ಟು ಪ್ರಕರಣಗಳು ಬರುತ್ತಿರುವುದರಿಂದ ಸಕ್ಷಮ ಪ್ರಾಧಿಕಾರದಲ್ಲಿ ಸರಿಯಾದ ದಾಖಲೆಗಳ ನಿರ್ವಹಣೆ ಮಾಡಲು ಮೇಲಾಧಿಕಾರಿಗಳು ಹೆಚ್ಚು ಗಮನಿಸಲು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ,  ಜಿಲ್ಲೆಯಲ್ಲಿನ ಅಂಗನವಾಡಿ, ಹಾಸ್ಟೆಲ್ ಸುಧಾರಣೆ ಗಾಗಿ ನಾನು ಮತ್ತು ಜಿಪಂ ಸಿಇಒ ಜೊತೆ  ಸೇರಿ ಜಂಟಿ ಸುತ್ತೋಲೆಗಳ ಮೂಲಕ ನಿರ್ದೇಶನ ನೀಡಲಾಗಿದೆ.  ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಿಸಲು ಮತ್ತು ಔಷಧ ಪೂರೈಕೆಗೆ ಸರ್ಕಾರದ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುತ್ತದೆ. ಜನನ ಮತ್ತು ಮರಣ ನೋಂದಣಿಯಲ್ಲಾಗುತ್ತಿರುವ ಲೋಪಗಳನ್ನು ಸರಿಪಡಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇದ್ದ ಗೌರವಧನ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದ್ದು ಹಲವು ಸುಧಾರಣಾ ಕ್ರಮ ಕೈಗೊಳ್ಳಲಾಗಿದ್ದು ಸಾರ್ವಜನಿಕ ದೃಷ್ಟಿಯ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

Read also :  Davanagere news | ಶ್ರಾವಣ ಮಾಸ : ಧೂಳೇಹೊಳೆ ಗ್ರಾಮದಲ್ಲಿ ವಿಶೇಷ ಪೂಜೆ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ ಮಾತನಾಡಿ,  ಪೋಕ್ಸೋ ಪರಿಹಾರ, ಬಾಲ ನ್ಯಾಯದಾನ, ಮಕ್ಕಳಿಗೆ ಕಾನೂನು ಅರಿವು, ಹಾಸ್ಟೆಲ್, ಅಂಗನವಾಡಿಗಳ ಸುಧಾರಣೆ, ಡೆಂಗ್ಯು ಚಿಕಿತ್ಸೆ ಸಕಾಲದಲ್ಲಿ ಸಿಗಬೇಕೆಂದು ತಿಳಿಸಿ, ಜನನ ಮತ್ತು ಮರಣ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಬಂದಾಗ ಇಲ್ಲಿ ನಡೆಯುವ ಪ್ರಕ್ರಿಯೆಗಳ ಕುರಿತು ಗಮನ ಸೆಳೆದರು.

ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ್, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸರ್ಕಾರಿ ಅಭಿಯೋಜಕರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಶ್ರಾವಣ ಮಾಸ : ಧೂಳೇಹೊಳೆ ಗ್ರಾಮದಲ್ಲಿ ವಿಶೇಷ ಪೂಜೆ
Next Article DAVANAGERE Davanagere | ವೈದ್ಯೆ ಮೇಲಿನ ದೌರ್ಜನ್ಯ ಖಂಡಿಸಿ ಮೌನ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಾವಣಗೆರೆ ಮಾ.16 ಕ್ಕೆ ರಾಷ್ಟ್ರೀಯ ಲೋಕಾದಾಲತ್

ದಾವಣಗೆರೆ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ…

By Dinamaana Kannada News

Davanagere | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ನ. 11 (Davanagere); ಹರಿಹರ ತಾಲ್ಲೂಕಿನ, ತೋಟಗಾರಿಕೆ  ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ…

By Dinamaana Kannada News

ಯೋಗ್ಯರಿಗೆ ಮತ ಚಲಾಯಿಸಿ

ಹರಿಹರ : ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ನೀಡುವ ಮೂಲಕ ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?