Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಈ ವರ್ಷ 20 ಪಂಚಾಯಿತಿ ಗ್ರಂಥಾಲಯಗಳ ಡಿಜಿಟಲೀಕರಣ : ಸಿಇಓ ಸುರೇಶ್ ಬಿ.ಇಟ್ನಾಳ್
ತಾಜಾ ಸುದ್ದಿ

ಈ ವರ್ಷ 20 ಪಂಚಾಯಿತಿ ಗ್ರಂಥಾಲಯಗಳ ಡಿಜಿಟಲೀಕರಣ : ಸಿಇಓ ಸುರೇಶ್ ಬಿ.ಇಟ್ನಾಳ್

Dinamaana Kannada News
Last updated: May 21, 2024 4:06 pm
Dinamaana Kannada News
Share
Libraries Davanagere
ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ
SHARE

Kannada News | Dinamaana.com | 21-05-2024

ದಾವಣಗೆರೆ, ಮೇ.21  : ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಈ ವರ್ಷ ಜಿಲ್ಲೆಯಲ್ಲಿನ 20 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಫೌಂಡೇಷನ್  ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಸುನಿಲ್.ಎನ್ ರವರು  ಮತ್ತು ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಬಗ್ಗೆ  ವಿವರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 6000 ಸಾವಿರ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ 4000 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಡಿಜಿಟಲೀಕರಣ ಮಾಡುವ ಕಾರ್ಯ ಮುಂದುವರೆದಿದೆ. ಈ ವರ್ಷ ರಾಜ್ಯದ 1000 ಗ್ರಂಥಾಲಯಗಳಿಗೆ ಡಿಜಿಟಲೀಕರಣ ಅಳವಡಿಕೆ ಹಾಗೂ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವರ್ಷ 61 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲಿಕರಣದ ಮೂಲಕ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಜೊತೆಗೆ ಈ ವರ್ಷ 20 ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಈ ಕಾರ್ಯಕ್ರಮವನ್ನುಅನುಷ್ಠಾನ ಮಾಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿನ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲಗಳನ್ನು ಅಭಿವೃದ್ಧಿಪಡಿಸುವುದು, ಈ ಯೋಜನೆಯ ಉದ್ದೇಶವಾಗಿದೆ. ಇದಕ್ಕೆ ಪೂರಕವಾಗಿ ಲ್ಯಾಪ್‍ಟಾಪ್, ಆಂಡ್ರಾಯ್ಡ್ ಮೊಬೈಲ್. ಮಾನಿಟರ್, ಟಿವಿ, ಇಂಟರ್‍ನೆಟ್ ಸಂಪರ್ಕ ಸೇರಿ ಮೂಲ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಶಿಕ್ಷಣ ಫೌಂಡೇಷನ್  ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಸುನಿಲ್.ಎನ್ ಮಾತನಾಡಿ,  ಶಿಕ್ಷಣ ಪೀಡಿಯಾ ಆಪ್ ಮೂಲಕ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ,  ನೋಟ್ಸ್, ಸಂಬಂಧಿಸಿದ ವಿಡಿಯೋ, ಚಿತ್ರಗಳನ್ನು ಒದಗಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಿವೆ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಣ್ಣ ಕಥೆಗಳಿವೆ. ಅಲ್ಲದೇ ಯುವಕರು ಡಿಜಿಟಲ್ ಕೌಶಲಗಳನ್ನು ಬೆಳೆಸಿಕೊಳ್ಳಲು ಬೇಕಾದ ವ್ಯವಸ್ಥೆಯಿದೆ.

ವಿದ್ಯಾರ್ಥಿಗಳು ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸುವ ಮೂಲಕ ಈ ಆಪ್‍ನ ಪ್ರಯೋಜನ ಪಡೆಯಬಹುದಾಗಿದೆ. ಜತೆಗೆ ಆನ್‍ಲೈನ್ ಸೇವೆಗಳು, ಅರ್ಜಿ ಸಲ್ಲಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿ ಇಲ್ಲಿ ಲಭ್ಯ ಹಾಗೂ ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ಡಿಜಿಟಲ್ ಸ್ಕಿಲ್ಸ್ ಗೆ ಸಂಬಂಧಿಸಿದ ಮಾಹಿತಿ ಅಧಿವೇಶನವನ್ನು ನಡೆಸಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಯುವಕರಿಗೆ ಕೃತಕ ಬುದ್ದಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಕುರಿತು ಈ ವರ್ಷ ಮಾಹಿತಿ ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಶಿಕ್ಷಣ ಫೌಂಡೇಶನ್ ಆಯ್ಕೆಮಾಡಿಕೊಂಡ ಎಲ್ಲಾ ಗ್ರಾಮ ಪಂಚಾಯತ್‍ನ ಗ್ರಂಥಾಲಯಗಳಲ್ಲಿ ಡಿಜಿಟಲ್ ಸ್ಕಿಲ್ಸ್, ಶೈಕ್ಷಣಿಕ ವರ್ಷದ ಪಠ್ಯಪುಸ್ತಕದ ತರಗತಿಗಳು ಹಾಗೂ ಪಠ್ಯಾಂಶಗಳು, ವೃತ್ತಿ ಮಾರ್ಗದರ್ಶನ ವಿಷಯಗಳ ಕುರಿತು ಆನ್‍ಲೈನ್, ಆಫ್‍ಲೈನ್ ತರಬೇತಿಗಳ ಅಧಿವೇಶನಗಳನ್ನು ನಡೆಸುತ್ತಿದೆ. ಈ ತರಬೇತಿ ಅವಧಿಗಳು ಆಫ್‍ಲೈನ್ ಅಪ್ಲಿಕೇಶನ್ ಮೂಲಕ ಲಭ್ಯವಿರುತ್ತವೆ, ಇದನ್ನು ಯುವಕರು ಮತ್ತು ಮಕ್ಕಳು ಯಾವುದೇ ಸ್ಮಾರ್ಟ್ ಪೋನ್‌ನಲ್ಲಿ  ನೋಡಬಹುದಾಗಿದೆ.

ಫೌಂಡೇಶನ್ ಹೆಚ್ಚುವರಿಯಾಗಿ ಆಂಡ್ರಾಯ್ಡ್ ಆಧಾರಿತ ಸಾಪ್ಟ್‍ವೇರ್ ಅನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಪ್ರತಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಕೆಲಸವನ್ನು ಪ್ರದರ್ಶಿಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಶಿಕ್ಷಣ ಫೌಂಡೇಷನ್ ಸಂಸ್ಥೆಯ  ಶಂಭುಲಿಂಗ, ಗುರುಪಾದಪ್ಪ, ಸುರೇಶ್ ನಾಯ್ಕ ಹಾಗೂ ಇನ್ನಿತರರು ಭಾವಹಿಸಿದ್ದರು.

TAGGED:Digitization of libraries.dinamaana.comLatest Kannada Newsಕನ್ನಡ ಸುದ್ದಿಗ್ರಂಥಾಲಯಗಳ ಡಿಜಿಟಲೀಕರಣ.ದಿನಮಾನ.ಕಾಂ
Share This Article
Twitter Email Copy Link Print
Previous Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-30 ಅಂತಿಮವಾಗಿ…..ಸೊಂಡೂರು!
Next Article Anti terrorism day Davanagere ಭಯೋತ್ಪಾದಕ ವಿರೋಧಿ ದಿನಾಚರಣೆ ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕರಾಟೆ ಸ್ಪರ್ಧೆ : ನಿಧಿ ಬೇತೂರ್, ಸಮರ್ಥ್ ಬೇತೂರ್‌ಗೆ ಚಿನ್ನದ ಪದಕಗಳು

ದಾವಣಗೆರೆ  (Davanagere) : ಹುಬ್ಬಳ್ಳಿಯಲ್ಲಿ ನಡೆದ ಅಂತರ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಫ್  2024 ಸ್ಪರ್ಧೆಯ 10-11 ವರ್ಷದ…

By Dinamaana Kannada News

Davangere Viraktamatha : ಎಸ್ .ಜೆ .ಎಂ ಶಾಲೆಯಲ್ಲಿ ಮಕ್ಕಳಿಗಾಗಿ ಎಸ್. ಜೆ.ಎಂ. ಸಂತೆ ವಿಶೇಷ ಕಾರ್ಯಕ್ರಮ

ದಾವಣಗೆರೆ (Davangere District) : ವಿರಕ್ತಮಠದ ಎಸ್ ಜೆ ಎಂ ಶಾಲೆಯಲ್ಲಿ ಮಕ್ಕಳಿಗಾಗಿ ಎಸ್. ಜೆ.ಎಂ. ಸಂತೆ ಎಂಬ ವಿಶೇಷ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 50 : ಸಂತೈಸುವವರಿಲ್ಲ..

Kannada News | Sanduru Stories | Dinamaana.com | 10-06-2024 ಸಿಟ್ಟು ಮೌನಕ್ಕೆ (Sanduru Stories) ಹೌದು, ಯಾವ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?