Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್
Blog

ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್

Dinamaana Kannada News
Last updated: November 17, 2025 5:45 pm
Dinamaana Kannada News
Share
Davanagere
SHARE

ದಾವಣಗೆರೆ ನ.17:  ಅರವತ್ತು ವರ್ಷ ಮೇಲ್ಪಟ್ಟವರು ಹಿರಿಯ ನಾಗರಿಕರಾಗಿದ್ದು, ತಮ್ಮ ಸ್ವಂತ ಗಳಿಕೆ ಅಥವಾ ತಮ್ಮ ಒಡೆತನದ ಆಸ್ತಿಯಿಂದ ತಮ್ಮನ್ನು ಪೋಷಿಸಿಕೊಳ್ಳಲು ಸಾಧ್ಯವಾಗದ ಪಾಲಕರು ಹಿರಿಯ ನಾಗರಿಕರ ಪಾಲನೆ-ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆಯಡಿ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪಾಲಕರ ಪೋಷಕರ ಸಂರಕ್ಷಣಾ ಕಾಯ್ದೆ-2007ರ ಅರಿವು ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.

Read also : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕುಟುಂಬದಲ್ಲಿ ಹಿರಿಯ ನಾಗರಿಕರನ್ನು ಅಸಡ್ಡೆಯಿಂದ ನೋಡದೆ ಗೌರವ, ಆದರಗಳಿಂದ ಕಾಣಬೇಕು.   ತಂದೆ-ತಾಯಿ ನಮ್ಮ ದೇವರಿದ್ದಂತೆ. ಯಾರೇ ಆಗಲಿ ತಮ್ಮ ಹೆತ್ತವರನ್ನು ದೇವರಂತೆ ಕಾಣಬೇಕು. ಮಕ್ಕಳು ಅಥವಾ ಮೊಮ್ಮಕ್ಕಳು ತಮ್ಮ ಪಾಲಕರನ್ನು ಪೋಷಿಸುವ ಜವಾಬ್ದಾರಿ ಹೊಂದಿರುತ್ತಾರೆ. ಅಥವಾ ಅವರ ರಕ್ತ ಸಂಬಂಧಿಯೂ ಸಹ ಹಿರಿಯ ನಾಗರಿಕರನ್ನು ನೋಡಿಕೊಳ್ಳಲು ಬದ್ಧರಾಗಿರುತ್ತಾರೆ. ಆದರೆ ಇಂತಹ ಹೆತ್ತವರು ಅಥವಾ ಹಿರಿಯ ನಾಗರಿಕರು ಯಾರ ರಕ್ಷಣೆಗೂ ಒಳಪಡದಿದ್ದರೆ, ಈ ಕಾಯ್ದೆಯಡಿಯಲ್ಲಿ ರಚಿಸಲಾದ ನ್ಯಾಯಮಂಡಳಿಯ ಸಹಾಯ ಪಡೆದು, ಅರ್ಜಿ ಸಲ್ಲಿಸಿ ಜೀವನಾಂಶದ ಪರಿಹಾರ ಪಡೆಯಬಹುದು ಎಂದರು.

ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆಯಡಿ ಲಭ್ಯವಿರುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳು ಪಡೆಯ ಬಹುದಾಗಿದೆ. ಹಿರಿಯ ನಾಗರಿಕರು ಕುಟುಂಬದಲ್ಲಿ ತಮ್ಮ ಮಕ್ಕಳಿಗೆ ಭಾಗಾಂಶ, ದಾನಪತ್ರ, ವಿಲ್ ಇತರ ದಾಖಲೆಗಳನ್ನು ವರ್ಗಾವಣೆ ಮಾಡಿ ಬಳಿಕ ಅಂತಹ ಮಕ್ಕಳಿಂದ ಸರಿಯಾದ ಪೋಷಣೆ, ರಕ್ಷಣೆ ಸಿಗದೆ ಕಿರುಕುಳಕ್ಕೆ ಒಳಗಾದಾಗ ತಮ್ಮ ವ್ಯಾಪ್ತಿಯಲ್ಲಿ ಇರುವ ಉಪ-ವಿಭಾಗಾಧಿಕಾರಿ ಗಳನ್ನು ಭೇಟಿ ಮಾಡಿ ಸಮಸ್ಯೆ ತಿಳಿಸಿ ನಂತರ ಸೂಕ್ತ ದಾಖಲೆಗಳನ್ನು ರದ್ದು ಮಾಡುವ ಅಧಿಕಾರ ಆ ಅಧಿಕಾರಿಗಳಿಗಿದೆ. ಸಂಬಂಧಪಟ್ಟ ಆಸ್ತಿಯು ಮತ್ತೆ ವಾರಸುದಾರರ ಹೆಸರಿಗೆ ಲಭಿಸುತ್ತದೆ.

ಪ್ರತಿಯೊಬ್ಬ ಹಿರಿಯ ನಾಗರಿಕರು ಆತ್ಮಸ್ಥೆರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಜೀವನ ನಡೆಸುವಂತೆ ಮನವಿ ಮಾಡಿದ ಅವರು, ನಿಮಗೆ ಏನೇ ಸಮಸ್ಯೆಯಿದ್ದರೂ ಸಂಬಂಧಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಥವಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಭೇಟಿ ಮಾಡುವಂತೆ ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ ಪ್ರಕಾಶ, ಕಾರ್ಮಿಕ ಅಧಿಕಾರಿ ಪ್ರಸನ್ನ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ, ಡಿಡಿಪಿಐ ಕೊಟ್ರೇಶ್ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article Davanagere ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೆಹಲಿಯಲ್ಲಿ ಸ್ಫೋಟ|ದಾವಣಗೆರೆಯಲ್ಲಿ ಹೈ ಆಲರ್ಟ್: ಜನಸಂದಣಿ ಸ್ಥಳಗಳಲ್ಲಿ ತಪಾಸಣೆ

ದಾವಣಗೆರೆ : ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಾಂತ ಜನಸಂದಣಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಗಾಗಿ…

By Dinamaana Kannada News

ದಾವಣಗೆರೆ : ಯುವಕರು ಏಡ್ಸ್ ಬಗ್ಗೆ ಜಾಗೃತಿವಹಿಸುವುದು ಅತೀ ಮುಖ್ಯ

ದಾವಣಗೆರೆ ಆ.12: ಏಡ್ಸ್ ಕುರಿತಂತೆ ಯುವಜನರಲ್ಲಿ ಜಾಗೃತಿ ಹೊಂದುವುದು ಅತೀ ಮುಖ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ…

By Dinamaana Kannada News

LG Havanur | ಅರಸು ಸಂಪುಟದಲ್ಲಿ ಹಾವನೂರು

Kannada News | Dinamaana.com | 06-09-2024  ಹಾವನೂರು, ಬಸವಲಿಂಗಪ್ಪ ಮತ್ತು ಕೆ.ಎಚ್. ರಂಗನಾಥ್ ರಂತಹ ಜನಪರ ಕಾಳಜಿಯುಳ್ಳಂತವರು ದೇವರಾಜ…

By Dinamaana Kannada News

You Might Also Like

Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?