Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂವಿಧಾನ ವಿರೋಧಿಗಳಿಗೆ ಉತ್ತೇಜನ ನೀಡುವ ಹೊಸ ಢಾಂಬಿಕತೆ ದೇಶದಲ್ಲಿ ಬೆಳೆಯುತ್ತಿದೆ : ಪಿ.ಜೆ.ಮಹಾಂತೇಶ್ ಆತಂಕ
ತಾಜಾ ಸುದ್ದಿ

ಸಂವಿಧಾನ ವಿರೋಧಿಗಳಿಗೆ ಉತ್ತೇಜನ ನೀಡುವ ಹೊಸ ಢಾಂಬಿಕತೆ ದೇಶದಲ್ಲಿ ಬೆಳೆಯುತ್ತಿದೆ : ಪಿ.ಜೆ.ಮಹಾಂತೇಶ್ ಆತಂಕ

Dinamaana Kannada News
Last updated: April 22, 2025 1:41 pm
Dinamaana Kannada News
Share
ಸಂವಿಧಾನ
ಡಾ.ಬಿ.ಆರ್.ಅಂಬೇಡ್ಕರ್‍ರವರ 134ನೇ ಜಯಂತಿ ಹಾಗೂ ಸನ್ಮಾನ ಸಮಾರಂಭದಕರಪತ್ರ ಬಿಡುಗಡೆ
SHARE

ಹರಿಹರ (Harihara): ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಪ್ರಣಾಮಗಳು ಎನ್ನುತ್ತಾ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿಗಳಿಗೆ ಉತ್ತೇಜನ ನೀಡುವ ಹೊಸ ಢಾಂಬಿಕತೆ ದೇಶದಲ್ಲಿ ಬೆಳೆಯುತ್ತಿದೆ ಎಂದು ಡಿಎಸ್‍ಎಸ್ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆತಂಕ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏ.28 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್‍ರವರ 134ನೇ ಜಯಂತಿ ಹಾಗೂ ಸನ್ಮಾನ ಸಮಾರಂಭದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನನ್ನು ಯಥಾವತ್ತಾಗಿ ಜಾರಿ ಮಾಡದೆ, ಅಂಬೇಡ್ಕರ್‍ರವರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಅಧಿಕಾರಸ್ತರು ಸಂವಿಧಾನದ ಪ್ರತಿಯನ್ನು ಸುಟ್ಟಾಗಲು ಖಂಡಿಸುವುದಿಲ್ಲ, ನಾವು ಬಂದಿರುವುದೇ ಸಂವಿಧಾನ ಬದಲಿಸಲಿಕ್ಕೆ ಎಂದಾಗಲು ಮಾತನಾಡುವುದಿಲ್ಲ, ಕೊನೆಗೆ ನಾವು ಭಾರತಕ್ಕೆ ಬೇರೊಂದು ಸಂವಿಧಾನವನ್ನು ರಚಿಸಿದ್ದೇವೆ ಎಂದಾಗಲೂ ಮೌನವಾಗಿರುತ್ತಾರೆ. ಇದು ಅಂಬೇಡ್ಕರ್ ಭಕ್ತರಿಗೆ ಅರ್ಥವಾಗುವುದಿಲ್ಲ, ಎಲ್ಲಿಯವರೆಗೆ ಅಂಬೇಡ್ಕರ್ ಭಕ್ತರು ಅನುಯಾಯಿಗಳಾಗಿ ಬದಲಾಗುವುದಿಲ್ಲವೋ ಅಲ್ಲಿಯವರೆಗೆ ಅಂಬೇಡ್ಕರ್ ವಿರೋಧಿಗಳು ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಲೇ ಇರುತ್ತಾರೆ ಎಂದರು.

ವಿಶ್ವವೇ ಮೆಚ್ಚುವಂತ ಸಂವಿಧಾನವನ್ನು ನೀಡಿ ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ಇಂತಹ ಸರ್ವ ಶ್ರೇಷ್ಠ ರಾಷ್ಟ್ರ ನಾಯಕನನ್ನ ಭಾರತೀಯರು ಕೇವಲ ದಲಿತ ನಾಯಕ ಎಂದು ಅವಮಾನಿಸಿದರು, ಈ ಮನಸ್ಥಿತಿಯನ್ನು ವಿರೋಧಿಸಬೇಕಿದ್ದ ದಲಿತರು ಸಹ ಅದನ್ನೇ ಒಪ್ಪಿಕೊಂಡು ಹೊತ್ತುಕೊಂಡು ತಿರುಗಾಡುತ್ತಿದ್ದಾರೆ, ಅಂಬೇಡ್ಕರ್ ದಲಿತರಿಗಾಗಿ ಎಷ್ಟುದುಡಿದಿದ್ದಾರೋ ಅದರ ನೂರರ ಪಟ್ಟುದೇಶಕ್ಕಾಗಿ, ಪ್ರತಿಯೊಬ್ಬ ಪ್ರಜೆಗಾಗಿತಮ್ಮಇಡೀ ಬದುಕನ್ನೆ ಗಂಧದಂತೆ ತೇಯ್ದಿದ್ದಾರೆ ಎಂದರು.

ಅಂಬೇಡ್ಕರ್‍ರವರ ನಿಜವಾದ ಸಿದ್ಧಾಂತವನ್ನು ಪರಿಚಯಿಸಲು ಸಂಘಟನೆಯಿಂದ ಅವರ 134ನೇ ಜಯಂತಿ ನಿಮಿತ್ತ 134 ಸಾಧಕರಿಗೆ ಸನ್ಮಾನಮಾಡುವ ವಿಶಿಷ್ಠ ಸಮಾರಂಭವನ್ನು ಏ.28 ರಂದು ಬೆಳಿಗ್ಗೆ 10ಕ್ಕೆ, ನಗರದ ಬಸ್ ನಿಲ್ದಾಣ ಸಮೀಪದ ಗುರುಭವನದಲ್ಲಿ ಆಯೋಜಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದರು.

Read also : Davanagere : ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ಆದಿಜಾಂಬವ ಕೋಡಿಹಳ್ಳಿ ಮಠದ ಷಡಕ್ಷರಮುನಿ ದೇಶೀಕೇಂದ್ರ ಶ್ರೀ ಸಾನಿಧ್ಯವಹಿಸುವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಶೋತ್ತಮ ಬಿಳಿಮಲೆ ಉದ್ಘಾಟಿಸುವರು, ಕದಸಂಸರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಅಧ್ಯಕ್ಷತೆ ವಹಿಸುವರು. ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ರಾಮಪ್ಪ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಪ್ರಶಸ್ತಿ ಪ್ರಧಾನ ಮಾಡುವರು, ಇನ್ಸೈಟ್ ಐಎಎಸ್ ಸಂಸ್ಥೆ ಸಂಸ್ಥಾಪಕ ವಿನಯ್‍ಕುಮಾರ್ ಜಿ.ಬಿ. ಡಾ.ಬಿ.ಆರ್.ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಕದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ, ಅಕ್ಷಯ ಆಸ್ಪತ್ರೆ ಮುಖ್ಯಸ್ಥ ಡಾ.ವಿ.ಟಿ.ನಾಗರಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಹರಳಹಳ್ಳಿ ಗ್ರಾಪಂ ಸದಸ್ಯ ಎಚ್.ಎಂ.ಹನುಮಂತಪ್ಪ, ಭಾನುವಳ್ಳಿ ಗ್ರಾಪಂ ಸದಸ್ಯ ಮಂಜಪ್ಪ ಎಂ., ಕಡ್ಲೆಗೊಂದಿ ತಿಮ್ಮಣ್ಣ, ಚೌಡಪ್ಪ ಸಿ.ಭಾನುವಳ್ಳಿ, ಮಂಜಪ್ಪ ಗುಳದಹಳ್ಳಿ, ಹನುಮಂತ ಎಚ್.ಯಲವಟ್ಟಿ, ಬೆಣ್ಣೆ ರಾಜಪ್ಪ, ಆಂಜನೇಯ, ಕೀರ್ತಿ ಟಿ., ಎಳೆಹೊಳೆ ಹನುಮಂತಪ್ಪ, ಜಿಗಳಿ ಚೌಡಪ್ಪ, ಸ್ವಾಮಿ ಲಿಂಗಪ್ಪ, ಪರಶುರಾಮ, ರಾಜಪ್ಪ, ಮಹಾಂತೇಶ, ರಾಜು, ಮಹೇಶ್, ಸೋಮಶೇಖರ್, ಯುವರಾಜ ಹೊಸಪಾಳ್ಯ ಹಾಗೂ ಇತರರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere : ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
Next Article KTJ Nagar Police Station Davangere Crime News | ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕಳ್ಳತನ : ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಸಾವಿರಾರು ಕಾರ್ಯಕರ್ತರ, ಅಭಿಮಾನಿಗಳ, ಮುಖಂಡರ…

By Dinamaana Kannada News

Davanagere | ಉಚಿತ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ,ಜ.04(Davanagere): ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ (ಸಿಪೆಟ್), ಮೈಸೂರಿನಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ವೃತಿಪರ ಯೋಜನೆಗಳಿಗೆ ತರಬೇತಿ ನೀಡಲು…

By Dinamaana Kannada News

Davanagere | ಪಾಲಿಕೆಯಿಂದ ನ. 13 ರಿಂದ ಡಿಸೆಂಬರ್ 31 ರ ವರೆಗೆ ಇ-ಆಸ್ತಿ ವಿಶೇಷ ಆಂದೋಲನ

ದಾವಣಗೆರೆ (Davanagere):  ಮಹಾನಗರಪಾಲಿಕೆ ವತಿಯಿಂದ ಏಕಗವಾಕ್ಷಿಯಡಿ ಇ-ಆಸ್ತಿ ವಿಶೇಷ ಆಂದೋಲನವನ್ನು ನ. 13 ರಿಂದ ಡಿಸೆಂಬರ್ 31 ರವರೆಗೆ ಮಹಾನಗರಪಾಲಿಕೆಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?