Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಮಹಾವೀರ ಮ.ಕರೆಣ್ಣವರ
ತಾಜಾ ಸುದ್ದಿ

ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಮಹಾವೀರ ಮ.ಕರೆಣ್ಣವರ

Dinamaana Kannada News
Last updated: May 22, 2025 1:45 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್  ಆಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡು ಬಂದಲ್ಲಿ   ಆಲಸ್ಯ ಮಾಡದೇ ಸಂಬಂದಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು.

Read also : ಸಿದ್ದರಾಮಯ್ಯನವರನ್ನು ಅಂಬೇಡ್ಕರಗೆ ಹೋಲಿಸಿರುವುದು ಖಂಡನೀಯ : ಆಲೂರು ನಿಂಗರಾಜ್

ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಿದ್ದರಾಮಯ್ಯನವರನ್ನು ಅಂಬೇಡ್ಕರಗೆ ಹೋಲಿಸಿರುವುದು ಖಂಡನೀಯ : ಆಲೂರು ನಿಂಗರಾಜ್
Next Article Davanagere Davanagere | ಸುಯೆಜ್‌ ಕಂಪನಿಯ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್

ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ…

By Dinamaana Kannada News

Davanagere | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ (Davanagere): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದ ಟಿ.ಎನ್.ರಂಗಸ್ವಾಮಿ, ಮೈಕಲ್…

By Dinamaana Kannada News

ಗ್ಯಾರಂಟಿ ಯೋಜನೆಯ ವಿರೋಧಿ, ಜನ ದ್ವೇಷಿ ಬಿಜೆಪಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ (Davanagere): ದಾವಣಗೆರೆಯಲ್ಲಿ  ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಜನಾಕ್ರೋಶ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷವು ಸಹ ಬಿಜೆಪಿ ವಿರುದ್ಧ ದಾವಣಗೆರೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?