Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ
ತಾಜಾ ಸುದ್ದಿ

Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ

Dinamaana Kannada News
Last updated: November 13, 2024 3:43 pm
Dinamaana Kannada News
Share
Education Department Harihara
Education Department Harihara
SHARE

ಹರಿಹರ (Davanagere): ಸಮಾಜ ಸೇವಕರು, ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರಯತ್ನದ ಫಲವಾಗಿ ಅತಿಕ್ರಮಣಕ್ಕೆ ಒಳಗಾಗಿದ್ದ ಕೋಟ್ಯಾಂತರ ರೂ. ಬೆಳೆಬಾಳುವ ಜಮೀನನ್ನು ಮತ್ತೆ ಶಿಕ್ಷಣ ಇಲಾಖೆಯ ಸುಪರ್ದಿಗೆ ಒಪ್ಪಿಸುವ ಮಹತ್ವದ ಕಾರ್ಯ ಇಲ್ಲಿ ನಡೆದಿದೆ.

ನಗರದಲ್ಲಿರುವ ತಾಲ್ಲೂಕಿನ ಪ್ರಥಮ ಸರ್ಕಾರಿ ಪ್ರೌಢಶಾಲೆಗೆ ಜಮೀನ್ದಾರರಾಗಿದ್ದ ದಿ.ನರಸಿಂಹ ಮೂರ್ತಚಾರ್ ಕಟ್ಟಿರವರು ವಿನೋಬಾ ಭಾವೆರವರ ಭೂದಾನ ಚಳವಳಿಯಿಂದ ಪ್ರಭಾವಿತರಾಗಿ 1955ರಲ್ಲಿ ಈ ಪ್ರೌಢಶಾಲೆಗೆ 2 ಎಕರೆ 30 ಗುಂಟೆ ಜಮೀನನ್ನು ದಾನವಾಗಿ ನೀಡಿದ್ದರು.

ನಗರ ಹೊರವಲಯದ ಗುತ್ತೂರು ಸಮೀಪದ ಬೇಚಿರಾಗ್ ಗ್ರಾಮ ಬೈರನಹಳ್ಳಿ ರಿ.ಸರ್ವೆ ನಂ.21/3ರಲ್ಲಿ ಈ ಜಮೀನಿದೆ. ನಗರದಂದಿ 5 ಕಿ.ಮೀ. ಅಂತರದಲ್ಲಿ ಹೊಸಪೇಟೆ-ಶಿವಮೊಗ್ಗ ಹೆದ್ದಾರಿಗೆ ಅಂಟಿಕೊAಡ ಒಂದು ಜಮೀನಿನ ನಂತರ ಶಾಲೆಯ ಈ ಜಮೀನಿದೆ. ಕಾಲಾಂತರದಲ್ಲಿ ಶಾಲೆಯವರು, ಶಿಕ್ಷಣ ಇಲಾಖೆಯವರು ಜಮೀನಿನ ಬಗ್ಗೆ ಕಾಳಜಿವಹಿಸಿದ್ದಿಲ್ಲ. ಗುತ್ತೂರಿನ ವಾಸಿ ಸಾಮಾಜಿಕ ಕಾರ್ಯಕರ್ತ, ಹಿರಿಯ ಪತ್ರಕರ್ತರಾದ ಐರಣಿ ಹನುಮಂತಪ್ಪರಿಗೆ ಅಕಸ್ಮಿಕವಾಗಿ ಶಾಲೆಗೆ ಸೇರಿದ ಜಮೀನಿರುವ ದಾಖಲೆ ಸಿಕ್ಕಿದೆ.

ನಂತರ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಶಿಕ್ಷಕರು, ಶಾಲೆಯ ಹಳೆಯ ವಿದ್ಯಾರ್ಥಿಗಳಿಗೆ ವಿಷಯವನ್ನು ತಿಳಿಸಿ ಅವರೆಲ್ಲರ ಸಹಕಾರದಿಂದ ದಾಖಲಾತಿಗಳ ಸಂಗ್ರಹ ಕಾರ್ಯ ಆರಂಭಿಸಿದ್ದಾರೆ. ನಂತರ ತಹಶೀಲ್ದಾರ್ ಗುರುಬಸವರಾಜ್ ಇವರಲ್ಲಿ ಚರ್ಚಿಸಿದಾಗ ಅವರು ಜಮೀನನ್ನು ಶಾಲೆ ಸುಪರ್ದಿಗೆ ವಹಿಸಲು ಎಲ್ಲಾ ಅಗತ್ಯ ಸಹಕಾರ ನೀಡಿದ್ದಾರೆ.

ಭೂ ಮಾಪಕರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಕಾರ್ಯಕರ್ತರೆಲ್ಲರು ಸೇರಿ ಪೊಲೀಸ್ ಉಪಸ್ಥಿತಿಯಲ್ಲಿ ಜಮೀನಿನ ಮಾಪನ ಕಾರ್ಯ ಕೈಗೊಂಡು, ಗಡಿಯನ್ನು ಗುರುತಿಸುವ ಮಹತ್ವದ ಕಾರ್ಯ ಮಾಡಿದರು.

ತಹಶೀಲ್ದಾರರ ಸೂಚನೆ ಮೇರೆಗೆ ಅತಿಕ್ರಮಣ ತೆರವುಗೊಳಿಸಿದ ಹಾಗೂ ಜಮೀನನ್ನು ಹಸ್ತಾಂತರಿಸುವ ವರದಿಯನ್ನು ಗ್ರಾಮ ಆಡಳಿತಾಧಿಕಾರಿ ಪ್ರಭುಸ್ವಾಮಿಯವರು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪರಿಗೆ ಅಧಿಕೃತವಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಉಪಪ್ರಾಚಾರ್ಯ ಬಿ.ಸಿದ್ಧರಾಮೇಶ್ವರ, ಹಳೆಯ ವಿದ್ಯಾರ್ಥಿಗಳಾದ ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ, ಪತ್ರಕರ್ತರಾದ ಮಂಜನಾಯ್ಕ್, ಅಣ್ಣಪ್ಪ ಅಜ್ಜೇರ್, ಗುತ್ತೂರು ಸರ್ಕಾರಿ ಪ್ರೌಢಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್ ಜೆ., ಮಾಜಿ ಅಧ್ಯಕ್ಷ ಕರಿಬಸಪ್ಪ ಎನ್., ಗುತ್ತೂರು ಗ್ರಾಮಸ್ಥರಾದ ಬಿ.ಎನ್.ಜಿ.ನಾಗರಾಜ್, ಪಕ್ಕೀರಪ್ಪ ಬಿ.ಎಂ.ಪಿ., ಅಬ್ಬಾಸ್ ಅಲಿ ಹುರಕಡ್ಲಿ, ತಾಲ್ಲೂಕು ಭೂ ಮಾಪಕ ಜಿ.ಆರ್.ವಿಶ್ವನಾಥ, ಎಎಸ್‌ಐ ನಾಗರಾಜ್, ಭೂದಾನ ಮಾಡಿದ ಕುಟುಂಬದವರ ಗೋಪಾಲ್‌ರಾವ್ ಕಟ್ಟಿ, ಶಿಕ್ಷಕರಾದ ಪ್ರಶಾಂತ್ ಡಿ., ಮಹೇಶ್, ಜಿ., ಕಿರಣ್ ಕುಮಾರ್, ಸಚಿನ್ ಹಿರೇಮಠ್ ಹಾಗೂ ಸುತ್ತಲಿನ ಜಮೀನುಗಳ ರೈತರಿದ್ದರು.

Read also : Davanagere | ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ ಕಾರಾಗೃಹ ಶಿಕ್ಷೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere | ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ ಕಾರಾಗೃಹ ಶಿಕ್ಷೆ
Next Article Davangere University Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!

ಕನಕಗಿರಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಇವತ್ತು ಒಂದು ವಿಶಿಷ್ಟ ಘಟನೆ ನಡೆಯಿತು. ಹತ್ತು ವರ್ಷಗಳಿಂದ ಹುಡುಕಿದರೂ ಕನ್ಯೆ ಸಿಗುತ್ತಿಲ್ಲ ಆದಷ್ಟು…

By Dinamaana Kannada News

Davanagere | ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಜಗಳೂರು: ಹೊಲಕ್ಕೆ ಹೋಗಿ ಮೋಟಾರ್ ಆನ್ ಮಾಡಿ ಮನೆಗೆ ವಾಪಾಸ್ಸಾಗುವ ಸಂದರ್ಭದಲ್ಲಿ ಕರಡಿ ದಾಳಿ ನಡೆಸಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ…

By Dinamaana Kannada News

ಬಲಿಷ್ಠ ಭಾರತ ಕಟ್ಟುವಲ್ಲಿ ಯುವ ಮತದಾರರು ಮುಂದಾಗಿ

ದಾವಣಗೆರೆ  :   ಯುವ ಜನರು ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಲಿಷ್ಠ ಭಾರತ ಕಟ್ಟುವಲ್ಲಿ ತಮ್ಮ ಸುತ್ತ-ಮುತ್ತಲಿನ ಜನರಿಗೂ ಮತದಾನದ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?