Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ತಂದೆ-ತಾಯಿಗಳೇ ಮಕ್ಕಳಿಗೆ ಮಾದರಿ : ತ್ಯಾಗೀಶ್ವರಾನಂದಜೀ ಮಹಾರಾಜ್
ತಾಜಾ ಸುದ್ದಿ

Davanagere | ತಂದೆ-ತಾಯಿಗಳೇ ಮಕ್ಕಳಿಗೆ ಮಾದರಿ : ತ್ಯಾಗೀಶ್ವರಾನಂದಜೀ ಮಹಾರಾಜ್

Dinamaana Kannada News
Last updated: March 8, 2025 11:45 am
Dinamaana Kannada News
Share
Eeshwaramma Higher Primary High School Davanagere
Eeshwaramma Higher Primary High School Davanagere
SHARE

ದಾವಣಗೆರೆ (Davanagere): ‘ಅಲ್ಲಿ ತಂದೆ-ತಾಯಿಯರೇ ದೇವರಾಗಿದ್ದರು. ತಮ್ಮ ಮಕ್ಕಳೇ ಪೂಜಾರಿಗಳಾಗಿದ್ದರು. ಎಲ್ಲರ ಕಣ್ಣಂಚಿನಲ್ಲೂ ನೀರು ತುಂಬಿ ಬಂದಿತ್ತು. ಎಲ್ಲರ ಹೃದಯಗಳು ತುಂಬಿ ಬಂದಿದ್ದು, ‘ಧನ್ಯತೆಯ ಭಾವ’ ಮನೆ ಮಾಡಿತ್ತು. ಇದು, ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಪ್ರೌಢಶಾಲೆಯಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ಮಕ್ಕಳಿಂದ ನಡೆದ ಹೃದಯಸ್ಪರ್ಶಿ ‘ಮಾತೃ-ಪಿತೃ’ ವಂದನಾ ಕಾರ್ಯಕ್ರಮದಲ್ಲಿ ಕಂಡು ಬಂತು.

ತಂದೆ-ತಾಯಿಯರನ್ನು ಕುರ್ಚಿಯ ಮೇಲೆ ಕುಳ್ಳಿರಿಸಿದ ಮಕ್ಕಳು, ತಿಲಕ, ಹೂವುಗಳನ್ನು ಅರ್ಪಿಸಿ ಪೂಜೆ ಸಲ್ಲಿಸಿದರು. ಬಳಿಕ ಪ್ರಾರ್ಥನೆ ಪಠಿಸುವ ಮೂಲಕ ಅವರ ಪಾದಕ್ಕೆ ನಮಿಸಿ ‘ನಿಮ್ಮ ಆಶೀರ್ವಾದ ಸದಾ ನಮ್ಮ ಮೇಲಿರಲಿ’ ಎಂದು ಹೆತ್ತವರ ಆಶೀರ್ವಾದ ಪಡೆದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ರಾಮಕೃಷ್ಣ ಆಶ್ರಮದ ಸ್ವಾಮಿ ತ್ಯಾಗೀಶ್ವರಾನಂದಜೀ ಮಹಾರಾಜ್, ಇದೊಂದು ಹೃದಯಸ್ಪರ್ಶಿ, ಭಾವನಾತ್ಮಕ, ಭಕ್ತಿಭರಿತವಾದ ದೈವಿಕವಾದ ಕಾರ್ಯಕ್ರಮ. ವಿದ್ಯಾರ್ಥಿಗಳೊಂದಿಗೆ ನಾವು ಸಹ ನಮ್ಮ ತಂದೆ-ತಾಯಿಗಳು ಕಣ್ಣೇದುರಿಗೆ ಇಲ್ಲದಿದ್ದರೂ ಮಾನಸಿಕವಾಗಿ ಪೂಜೆ ಸಲ್ಲಿಸಿ, ಮನಃಪೂರ್ವಕವಾಗಿ ಆನಂದಿಸಿದ್ದೇವೆ ಎಂದರು.

ತಂದೆ-ತಾಯಿಗಳ ಪಾದಪೂಜೆ ನೆರವೇರಿಸುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಆದರೆ, ಈಶ್ವರಮ್ಮ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಈ ಅದೃಷ್ಟ ದೊರೆತಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇದೊಂದು ಜೀವನದ ತಿರುವಿನಂಶವಾಗಿದೆ. ಪೋಷಕರು ಮಕ್ಕಳ ಭವಿಷ್ಯಕ್ಕೆ ಸಮಯವನ್ನು ಕೊಡಬೇಕು. ಪೋಷಕರು ಆತುರತೆಯನ್ನು ಮತ್ತು ಹೋಲಿಕೆ ಮಾಡುವುದನ್ನು ಬೀಡಬೇಕು. ಪರಿವರ್ತನೆ ಕೇವಲ ಮಕ್ಕಳಲ್ಲಿ ಮಾತ್ರವಲ್ಲ, ತಂದೆ ತಾಯಿಯರಲ್ಲೂ ಆಗಬೇಕೆಂದು ಕಿವಿಮಾತು ಹೇಳಿದರು.

ಪೋಷಕರಿಗೆ ನಿಸ್ವಾರ್ಥತೆ, ಶಾಂತಿ, ಸಹನೆ ಇರಬೇಕಾಗುತ್ತದೆ. ತಂದೆ-ತಾಯಿಗಳೇ ಮಕ್ಕಳಿಗೆ ಮಾದರಿಯಾಗಿರಬೇಕು. ಮಕ್ಕಳ ಮೇಲೆ ಒತ್ತಡ ಹೇರದೇ, ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆಯೋ, ಅದೇ ಕ್ಷೇತ್ರದಲ್ಲಿ ಮುಂದುವರೆದು ಸಾಧಿಸಲು ಪ್ರೋತ್ಸಾಹಿಸಬೇಕು. ಮಕ್ಕಳು ಎಷ್ಟೇ ಹಣ ಗಳಿಸಿದರೂ, ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಪ್ರೀತಿಯ ಆಸರೆಯಾಗಿರಬೇಕು. ಅವರಿಗೆ ಊರುಗೋಲಿನ ಅವಶ್ಯಕತೆ ಬೀಳದಂತೆ, ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಎ.ಆರ್.ಉಷಾರಂಗನಾಥ್, ಶಾಲೆಯ ಸಂಸ್ಥಾಪಕರಾದ ಮಾತೃಸ್ವರೂಪಿ ಬಿ.ಆರ್.ಶಾಂತಕುಮಾರಿ ಅವರು, ಕಾರ್ಯಕ್ರಮದ ಮೂಲ ಕಾರಣಕರ್ತರು. ಅವರು ನಮ್ಮನ್ನಗಲಿದರೂ, ಅವರ ಆದರ್ಶಗಳು ಮಾತ್ರ ನಮ್ಮೆಲ್ಲಿ ಮೇಳೈಸಿವೆ. ಯಾರು ತಂದೆ-ತಾಯಿಗಳನ್ನು ಗೌರವಿಸುತ್ತಾರೋ, ಅವರನ್ನು ಎಲ್ಲರು ಗೌರವಿಸುತ್ತಾರೆ. ತಂದೆ-ತಾಯಿಗಳ ಋಣವನ್ನು ಏನೂ ಮಾಡಿದರೂ ತೀರಿಸಲಾಗುವುದಿಲ್ಲ ಎಂದರು.

Read also : Davanagere | ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ

ತಾಯಿಯ ಜೋಗುಳ ಎಷ್ಟು ಮುಖ್ಯವೋ, ತಂದೆಯ ಬೈಗುಳ ಅಷ್ಟೇ ಮುಖ್ಯ. ತಾಯಿಯ ಮುದ್ದು ಮಾತು ಎಷ್ಟು ಮುಖ್ಯವೋ, ತಂದೆಯ ಬುದ್ಧಿಮಾತು ಅಷ್ಟೇ ಮುಖ್ಯ. ನಮ್ಮ ಶಾಲೆಯಲ್ಲಿ ಕಲಿತ ಮೌಲ್ಯ ಶಿಕ್ಷಣದಿಂದ ಮುಂದಿನ ಜೀವನದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಿರಿ. ನಿಸ್ವಾರ್ಥ ಪ್ರೇಮವನ್ನು ತಂದೆ-ತಾಯಿಗಳಲ್ಲಿ ಮಾತ್ರ ನೋಡಲು ಸಾಧ್ಯ. ತಂದೆ-ತಾಯಿ ಗುರುಗಳನ್ನು ಗೌರವಿಸಿ ಎಂದು ಸಲಹೆ ನೀಡಿದರು.

ಶಾಲಾ ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ವಂದಿಸಿದರು. ಶಿಕ್ಷಕಿ ಸವಿತಾ ಎನ್.ಸ್ವಾಮಿ ನಿರೂಪಿಸಿದರು. ಬಿ.ಶ್ರೀದೇವಿ ಮಾತಾ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಶಾಸ್ತ್ರೋಕ್ತವಾಗಿ ಪೂಜಾ ವಿಧಿ-ವಿಧಾನ ನೆರವೇರಿಸಿದರು. ಶಾಲೆಯ ಸಂಗೀತ ಶಿಕ್ಷಕಿ ವಿದ್ಯಾ ಹೆಗಡೆ ಭಾವಗೀತೆ ಹಾಡಿದರು.

ತಾಯಿಯ ಮಡಿಲು ಎಷ್ಟು ಮುದ ನೀಡುತ್ತದೆಯೋ, ತಂದೆಯ ಹೆಗಲು ಅಷ್ಟೇ ಮುದ ನೀಡುವುದು. ಮಕ್ಕಳು ಎಂದೂ ತಂದೆ-ತಾಯಿ ಕಣ್ಣಲ್ಲಿ ನೀರು ತರಿಸುವ ಕೆಲಸ ಮಾಡಬಾರದು.
-ಎ.ಆರ್.ಉಷಾ ರಂಗನಾಥ್, ಶಾಲಾಡಳಿತ ಮಂಡಳಿ ಕಾರ್ಯದರ್ಶಿ.

TAGGED:Davanagere districtDavanagere NewsDinamana.comಈಶ್ವರಮ್ಮ ಹಿರಿಯ ಪ್ರಾಥಮಿಕ ಪ್ರೌಢಶಾಲೆಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ
Next Article basavanthappa k s Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕ್ರೀಡಾಪಟುಗಳ ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ

ದಾವಣಗೆರೆ ಜು.15  :  ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ…

By Dinamaana Kannada News

Davanagere | ನಕಲಿ ಪತ್ರಕರ್ತರ ಹಾವಳಿ ತಡೆಗೆ ಆಗ್ರಹ

ದಾವಣಗೆರೆ (Davanagere): ಮಾಧ್ಯಮಗಳ ಹೆಸರೇಳಿಕೊಂಡು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ನಕಲಿ ಪತ್ರಕರ್ತರ ಹಾವಳಿಯನ್ನು ತಡೆಗಟ್ಟುವಂತೆ ಕೋರಿ ಬುಧವಾರ ಜಿಲ್ಲಾ…

By Dinamaana Kannada News

JOB NEWS | ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಡಿ.12 : (Davanagere) :  ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?