Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ
ಅಪರಾಧ ಸುದ್ದಿತಾಜಾ ಸುದ್ದಿ

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: June 5, 2025 5:10 am
Dinamaana Kannada News
Share
judgement dvg
judgement dvg
SHARE

ದಾವಣಗೆರೆ (Davanagere) : ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 35 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಬೆಂಗಳೂರಿನ ದೊಡ್ಡಬಿದರಕಲ್ಲು ಬಡಾವಣೆಯ ಕುಮಾರ, ಕೊಟ್ಟೂರು ತಾಲೂಕಿನ ಕಳಪೂರ ಗ್ರಾಮದ ಮರಿಸ್ವಾಮಿ, ಹರಪನಹಳ್ಳಿ ತಾಲೂಕಿನ ಹಳ್ಳಿಕೆರೆ ಗ್ರಾಮದ ಪರಶುರಾಮ ಶಿಕ್ಷೆಗೆ ಗುರಿಯಾದವರು.

ತಾಲೂಕಿನ ಎಲೇಬೆತ್ತೂರು ಗ್ರಾಮದ ಗುರುಸಿದ್ದಯ್ಯ ಮತ್ತು ಸರೋಜಮ್ಮ ದಂಪತಿಯನ್ನು 2022ರ ಜನವರಿ 25ರಂದು ರಾತ್ರಿ ಕೊಲೆ ನಡೆದಿತ್ತು. ವೃದ್ಧ ದಂಪತಿ ಗ್ರಾಮದ ಮೂರು ಎಕರೆ ತೋಟದಲ್ಲಿ ವಾಸವಾಗಿದ್ದರು.

ಕೃಷಿಯಿಂದ ಬರುತ್ತಿದ್ದ ಸ್ವಲ್ಪ ಆದಾಯದಲ್ಲಿ ಗ್ರಾಮದ ಜನರಿಗೆ ಕೈಗಡವಾಗಿ ನೀಡುತ್ತಿದ್ದರು. ಮೂಲತಃ ಗ್ರಾಮದ ಕುಮಾರ ಅವರಿಗೆ 3 ಲಕ್ಷ ರೂ. ಸಾಲ ಪಡೆದಿದ್ದ. 2 ಲಕ್ಷ ರೂ. ಮರಳಿ ನೀಡಿದ್ದ. ಉಳಿದ ಹಣವನ್ನು ಹಿಂದಿರುಗಿಸುವ ಬದಲು ವೃದ್ಧ ದಂಪತಿಯ ಮನೆ ದರೋಡೆ ಮಾಡಲು ಸಂಚು ಹೂಡಿದ್ದ. ಪರಶುರಾಮ ಮತ್ತು ಮರಿಸ್ವಾಮಿ ಜೊತೆಗೆ ಸೇರಿ ವೃದ್ಧ ದಂಪತಿಯನ್ನು ಕೊಲೆ ಮಾಡಿ 7 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಎಚ್.ಎನ್.ಮಿಥುನ್ ದೋಷಾರೋಪಣೆ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Read also : ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ವಿಚಾರಣೆ ನಡೆಸಿದ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಎಚ್.ಅಣ್ಣಯ್ಯನವರ್ ಆದೇಶ ಪ್ರಕಟಿಸಿದರು. ಸರ್ಕಾರಿ ವಕೀಲ ಕೆ.ಎಸ್.ಸತೀಶ್ ಸರ್ಕಾರದ ಪರ ವಾದ ಮಂಡಿಸಿದರು.

TAGGED:Dinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್
Next Article ಮನೆಕಳ್ಳತನ ಪ್ರಕರಣ ಮನೆಕಳ್ಳತನ ಪ್ರಕರಣ | 24 ಗಂಟೆಯಲ್ಲಿ  ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.01 (Davanagere) ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ…

By Dinamaana Kannada News

ಅಂಕು, ಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರ

ಹರಿಹರ: ಲೇಖನಿಯು ಖಡ್ಗಕ್ಕಿಂತ ಹರಿತ ಎಂಬ ಗಾದೆ ಮಾತಿನಂತೆ ಚುಕುಟು ಕವನಗಳು ಸಾಹಿತ್ಯ ಕ್ಷೇತ್ರದ ಪ್ರಭಾವಿ ಪ್ರಕಾರವಾಗಿದೆ ಎಂದು ಸಾಹಿತಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-17 ಅಂತರಂಗ ಕಳೆದುಕೊಂಡ ನತದೃಷ್ಟ ಊರಿನಲ್ಲಿ…

  ಅತಿ ಹೆಚ್ಚು ಬ್ಯಾಂಕ್ ವ್ಯವಹಾರ ನಡೆದಿದ್ದು  ಸೊಂಡೂರಿನಲ್ಲಿ ಭಾರತದ ನಗರಗಳ ಪೈಕಿ ಕೊಲ್ಕತ್ತ ಸಿಟಿಯನ್ನು ಹೊರತುಪಡಿಸಿದರೆ ಅತಿ ಹೆಚ್ಚು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?