Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಬಿ.ಪಿ.ಹರೀಶ್
ತಾಜಾ ಸುದ್ದಿ

Harihara | ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಬಿ.ಪಿ.ಹರೀಶ್

Dinamaana Kannada News
Last updated: May 16, 2025 9:21 am
Dinamaana Kannada News
Share
Harihara
Harihara
SHARE

ಹರಿಹರ (Harihara): ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಹೆಚ್ಚು ಪ್ರತಿಭಾವಂತರಿದ್ದು ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕೆಂದು ಶಾಸಕ ಬಿ.ಪಿ.ಹರೀಶ್ ಕೋರಿದರು.

ನಗರದ ಡಿಆರ್‍ಎಂ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ  ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ-2025 ಉದ್ಘಾಟಿಸಿ ಅವರು ಮಾತನಾಡಿದರು.

ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ, ಹಾಲು, ಕಡಿಮೆ ಶುಲ್ಕ, ಪುಸ್ತಕ, ಬ್ಯಾಗ್, ಶೂ ಇತರೆ ಪರಿಕರ, ಸೌಲಭ್ಯಗಳನ್ನು ಉಚಿತವಾಗಿ ನೀಡಿ ಗುಣಮಟ್ಟದ ಬೋಧಕರನ್ನು ಹೊಂದಿರುವ ಸರ್ಕಾರಿ ಶಾಲೆಗಳತ್ತ ಸಮುದಾಯವು ಗಮನ ಹರಿಸಬೇಕೆಂದರು.

ಈ ಹಿಂದೆ ರಾಜ್ಯದ ಮಹಾನಗರಗಳ ವಿದ್ಯಾರ್ಥಿಗಳಷ್ಟೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಇತರೆ ಪರೀಕ್ಷೆಗಳಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡುತ್ತಿದ್ದರೂ ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಹಾಗೂ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ರಾಜ್ಯವೆ ಬೆರಗಾಗುವಂತಹ ಶೈಕ್ಷಣಿಕ ಸಾಧನೆ ಮಾಡುತ್ತಿರುವುದು ಮೆಚ್ಚುವ ವಿಷಯ ಎಂದರು.

ಅಕ್ಷರ ದಾಸೋಹ ರಾಜ್ಯ ಜಂಟಿ ನಿರ್ದೇಶಕ ಹಸನ್ ಮೊಯಿನುದ್ದೀನ್ ಮಾತನಾಡಿ, ಅಜೀಂ ಪ್ರೇಮ್‍ಜಿ ಫೌಂಡೇಷನ್‍ನ ಸಹಕಾರದಲ್ಲಿ ರಾಜ್ಯದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ, ಇದರಿಂದಾಗಿ ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನಿವಾರಣೆಯಾಗುತ್ತಿದೆ, ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ಹೆಚ್ಚಿಸಲು ರಾಜ್ಯದ 48 ಶಾಲೆಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಕೊಟ್ರೇಶಪ್ಪ ಮಾತನಾಡಿ, ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಶಿಕ್ಷಣ ಪಡೆದವರು ಇಂದು ದೊಡ್ಡ ಸ್ಥಾನಗಳಲ್ಲಿದ್ದಾರೆ, ಸರ್ಕಾರಿ ಶಾಲೆಗಳೆಂದು ಮೂಗು ಮುರಿಯುವ ಅಗತ್ಯವಿಲ್ಲ, ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ, ಶಾಲೆಗಳು ಬದ್ಧವಾಗಿವೆ ಎಂದರು.

Read also : ಗ್ಲಾಸ್ ಹೌಸ್ ವೀಕ್ಷಣೆಗೆ ನಗರಸಾರಿಗೆ ಬಸ್ ವ್ಯವಸ್ಥೆ

ಶಾಲೆಯ ಉಪಪ್ರಾಚಾರ್ಯ ಸಿದ್ಧರಾಮೇಶ್ವರ ಮಾತನಾಡಿ, ಕನ್ನಡ, ಉರ್ದು ಮತ್ತು ಆಂಗ್ಲ ಭಾಷೆ ಮಾಧ್ಯಮಗಳಲ್ಲಿ ಈ ಶಾಲೆಯಲ್ಲಿ ಬೋಧನೆ ಇದೆ, ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾದ ಈ ಶಾಲೆಯಲ್ಲಿ ಪ್ರತಿಭಾವಂತ ಶಿಕ್ಷಕರ ತಂಡವಿದೆ, ಉತ್ತಮ ಶೈಕ್ಷಣಿಕ ವಾತಾವರಣವಿದೆ ಎಂದರು.

ಶಾಲೆಯ ಹಳೆ ವಿದ್ಯಾರ್ಥಿಯಾದ ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಮಾತನಾಡಿ, ಈ ಶಾಲೆಗೆ ಸೇರಿದ ಕೋಟ್ಯಾಂತರ ರೂ. ಮೌಲ್ಯದ 2 ಎಕರೆ 30 ಗುಂಟೆ ಜಮೀನನ್ನು ಗುರುತಿಸಿ ಶಾಲೆಗೆ ಹಸ್ತಾಂತರಿಸುವ ಮಹತ್ವದ ಕೆಲಸವನ್ನು ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಕಂದಾಯ, ಭೂಮಾಪನಾ ಇಲಾಖೆಗಳ ಸಹಕಾರದಲ್ಲಿ ಸಾಕಾರಗೊಂಡಿದೆ ಎಂದರು.

ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಮಂಜುನಾಥ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ದುರುಗಪ್ಪ, ಡಿಆರ್‍ಎಂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾಜಶೇಖರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಜಬಿಉಲ್ಲಾ, ಸಿಆರ್‍ಪಿ ಶ್ರೀಲಲಿತಾ ಹಾಗೂ ಶಿಕ್ಷಕರಿದ್ದರು.

TAGGED:HariharaMLA BP Harishಶಾಸಕ ಬಿ.ಪಿ. ಹರೀಶ್ಸರ್ಕಾರಿ ಶಾಲೆಹರಿಹರ
Share This Article
Twitter Email Copy Link Print
Previous Article glass house Davanagere ಗ್ಲಾಸ್ ಹೌಸ್ ವೀಕ್ಷಣೆಗೆ ನಗರಸಾರಿಗೆ ಬಸ್ ವ್ಯವಸ್ಥೆ
Next Article Applications invited ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

lokayukta | ನಿವೇಶನ ಖಾತೆ ವರ್ಗಾವಣೆಗೆ ಲಂಚ : ಲೋಕಾ ಬಲೆಗೆ ಪಾಲಿಕೆ ನೌಕರ

ದಾವಣಗೆರೆ.ಮಾ.14 (Davanagere): ನಿವೇಶನ ಖಾತೆ ವರ್ಗಾವಣೆಗೆ ಲಂಚ ಪಡೆಯುತ್ತಿದ್ದ ಪಾಲಿಕೆ ವಲಯ ಕಚೇರಿ -2 ರ ಪ್ರಥಮ ದರ್ಜೆ ಸಹಾಯಕರೊಬ್ಬರು…

By Dinamaana Kannada News

ಪ್ರೊ.ಬಿ.ಕೃಷ್ಣಪ್ಪ ಅವರು ದಲಿತರಲ್ಲಿ ಜಾಗೃತಿಯ ದೀಪ ಹಚ್ಚಿದರು : ನಾಗರಾಜ್

ಹರಿಹರ  (Harihara) : ರಾಜ್ಯದ ದಲಿತ ಸಮುದಾಯಗಳಲ್ಲಿ ಜಾಗೃತಿಯ ದೀಪ ಹಚ್ಚಿದ ಕೀರ್ತಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕ…

By Dinamaana Kannada News

ಲಲಿತಕಲಾ ಅಕಾಡೆಮಿ ಲಿಪಿಗಾರಿಕೆ ಪ್ರೋತ್ಸಾಹಿಸಲಿದೆ : ಪ.ಸ.ಕುಮಾರ

ದಾವಣಗೆರೆ- ಕಲಾ ವಿದ್ಯಾರ್ಥಿಗಳು ಎಲ್ಲಾ ಪ್ರಕಾರದ ಕಲೆಗಳಿಗೂ ಮುಕ್ತವಾಗಿ ತೆರೆದುಕೊಂಡು, ಆಸಕ್ತಿ ವಹಿಸಿ ಅಭ್ಯಸಿಸಬೇಕು, ಅವಲೋಕಿಸಬೇಕು ಎಂದು ಕರ್ನಾಟಕ ಲಲಿತಕಲಾ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?